Breaking News

Daily Archives: ಆಗಷ್ಟ್ 14, 2020

ಸ್ವಾತಂತ್ರ್ಯ ದಿನಾಚರಣೆ ಪ್ರಶಸ್ತಿ: ರಾಜ್ಯದ 19 ಪೊಲೀಸರಿಗೆ ಗೌರವ

ಹೊಸದಿಲ್ಲಿ: ಸ್ವಾತಂತ್ರ ದಿನಾಚರಣೆ ಅಂಗವಾಗಿ ರಾಷ್ಟ್ರಪತಿಗಳು ನೀಡುವ ಶೌರ್ಯ ಪ್ರಶಸ್ತಿಗೆ ಈ ಬಾರಿ ರಾಜ್ಯದ 19 ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು ಭಾಗಿಯಾಗಿದ್ದಾರೆ. ಕೇಂದ್ರ ಗೃಹ ಇಲಾಖೆ  ಪಟ್ಟಿಯನ್ನ ಬಿಡುಗಡೆ ಮಾಡಿದ್ದು, ಕರ್ನಾಟಕ ಪೊಲೀಸ್ ಸಿಐಡಿ ಎಎಸ್‌ಐ ಪ್ರಸನ್ನ ಕುಮಾರ್‌ ಅವರಿಗೆ ರಾಷ್ಟ್ರಪತಿ ಪದಕ ನೀಡಲಾಗಿದೆ. ಇನ್ನು ರಾಜ್ಯದ 18 ಪೊಲೀಸರಿಗೆ ಪ್ರಶಂಸನೀಯ ಸೇವಾ ಪದಕ ನೀಡಿ ಗೌರವಿಸಲಾಗಿದೆ. 1. ಹೇಮಂತ್‌ಕುಮಾರ್ ರಂಗಪ್ಪ-DSP, ಲೋಕಾಯುಕ್ತ 2. ಪರಮೇಶ್ವರ್ ಹೆಗ್ಡೆ-DSP, ಆರ್ಥಿಕ ಅಪರಾಧ ಇಲಾಖೆ …

Read More »

ಲಂಚ ಪ್ರಕರಣ: ಮುಂಡರಗಿ ತಾಲೂಕಿನ ಮುರಡಿ ಗ್ರಾಮ ಪಂಚಾಯತಿ ಪಿಡಿಓ ಎಸಿಬಿ ಬಲೆಗೆ.

ಗದಗ: ಗದಗ ಜಿಲ್ಲೆಯ ಮುಂಡರಗಿ ಪಟ್ಟಣದಲ್ಲಿ ಬೆಳಗ್ಗೆ ಎಸಿಬಿ ಅಧಿಕಾರಿಗಳ ದಾಳಿಯಲ್ಲಿ ಲಂಚ ಪಡೆಯುವಾಗ ಪಿಡಿಓ ಮತ್ತು ಅಕೌಂಟೆಂಟ್ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿರುವ ಘಟನೆ ನಡೆದಿದೆ. ಮುಂಡರಗಿ ತಾಲೂಕಿನ ಮುರಡಿ ಗ್ರಾಮ ಪಂಚಾಯತಿ ಪಿಡಿಓ ಸಿದ್ದಪ್ಪ ಡಂಬಳ, ಅಕೌಂಟೆಂಟ್ ಪ್ರದೀಪ್ ಕದಮ್‌ ಎಂಬವವರು 41 ಕಂಪ್ಯೂಟರ್ ಉತಾರ ನೀಡಲು 41 ಸಾವಿರ ಬೇಡಿಕೆ ಇಟ್ಟಿದ್ದಾರೆ. 41 ಸಾವಿರ ಹಣ ಪಡೆಯುವಾಗ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮುಂಡರಗಿ ಪಟ್ಟಣದ ಅಕೌಂಟೆಂಟ್ …

Read More »

ಸ್ವಾತಂತ್ರ್ಯ ದಿನದ ಶುಭಾಶಯ ಕೋರಿದ ಸಚಿವ ರಮೇಶ್ ಜಾರಕಿಹೊಳಿ‌

ಬೆಳಗಾವಿ: ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು  ಸ್ವಾತಂತ್ರ್ಯೋತ್ಸವ ದಿನಾಚರಣೆ ಶುಭ ಕೋರಿದ್ದಾರೆ. ನಾಳೆ ದೇಶದಾದ್ಯಂತ ಸ್ವಾತಂತ್ರ್ಯ ದಿನೋತ್ಸವವನ್ನು ಆಚರಿಸುತ್ತಿದ್ದು, ಬ್ರಿಟಿಷ್ ರ ದಾಸ್ಯದ ಸಂಕೋಲೆಯಿಂದ ಭಾರತ ಮುಕ್ತಗೊಂಡ ಈ ದಿನದಂದು ಸ್ವಾತಂತ್ರ್ಯ ಪಡೆಯಲು ಹೋರಾಡಿದ ಎಲ್ಲ ಮಹಾನುಭಾವರ ತ್ಯಾಗ, ಬಲಿದಾನವನ್ನು ಸ್ಮರಿಸೋಣ; ಕೋವಿಡ್ ಯೋಧರನ್ನು ಗೌರವಿಸೋಣ. ನಾಡಿನ ಜನತೆಗೆ 74ನೇ ಸ್ವಾತಂತ್ರ್ಯ ದಿನೋತ್ಸವದ ಶುಭಾಶಯಗಳು-ರಮೇಶ್ ಜಾರಕಿಹೊಳಿ‌, ಜಲಸಂಪನ್ಮೂಲ ಸಚಿವರು.

Read More »

ಸರಕಾರದ ಆದೇಶದಂತೆ ಶ್ರೀ ಗಣೇಶೋತ್ಸವ ಹಬ್ಬವನ್ನು ಆಚರಿಸಿ : PSI ಖಿಲಾರೆ ಹೇಳಿಕೆ.

ಗೋಕಾಕ: ಕರೋನಾ ವೈರಸ್ ತೀವೃತೆಯಿಂದ ಈ ವರ್ಷದ ಶ್ರೀ ಗಣೇಶೋತ್ಸವ ಹಬ್ಬವನ್ನು ಸಾರ್ವಜನಿಕ ಶ್ರೀ ಗಣೇಶ್ ಮೂರ್ತಿಯನ್ನು ಪ್ರತಿಷ್ಠಾಪಿಸದೇ, ಸರಳ ರೀತಿಯಲ್ಲಿ ಭಕ್ತಿಪೂರ್ವಕವಾಗಿ ಸಮೀಪದ ದೇವಸ್ಥಾನಗಳಲ್ಲಿ ಪ್ರತಿಷ್ಠಾಪಿಸಬೇಕು. ಸರಕಾರದ ನಿಯಮ ಪಾಲನೆ ಮಾಡದೆ ಇದ್ದಲ್ಲಿ ಅಂತವರ ವಿರುದ್ಧ ಕಠೀಣ ಕಾನೂನು ಕ್ರಮ ಜರುಗಿಸಲಾಗುವದು ಎಂದು ಗೋಕಾಕ ಗ್ರಾಮೀಣ ಠಾಣೆಯ ಪಿಎಸ್‌ಐ ನಾಗರಾಜ ಖಿಲಾರೆ ಹೇಳಿದರು.ಶುಕ್ರವಾರದಂದು ನಗರದ ಗೋಕಾಕ ಗ್ರಾಮೀಣ ಠಾಣೆಯ ಆವರಣದಲ್ಲಿ ಗಣೇಶ ಚತುರ್ಥಿಯ ನಿಮಿತ್ಯವಾಗಿ ಕರೆದ ಶಾಂತಿ ಸಭೆಯನ್ನುದ್ದೇಶಿಸಿ …

Read More »

ಹಿರಿಯರು ಹಾಕಿಕೊಟ್ಟ ಹಾದಿಯಲ್ಲಿ ಸಾಗಲು ಪ್ರಯತ್ನ ಮಾಡೊಣ: ಸ್ವಾತಂತ್ರ್ಯ ದಿನಾಚರಣೆಯ ಶುಭ ಹಾರೈಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

ಬೆಳಗಾವಿ: ದೇಶದ ಸಮಸ್ತ ನಾಗರೀಕರಿಗೆ  ನಾಳೆ ದೇಶ್ಯಾದ್ಯಂತ ಆಚರಿಸಲಿರುವ ಸ್ವಾತಂತ್ರ್ಯ ದಿನಾಚರಣೆಯ  ಶುಭಾಶಯಗಳನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಕೋರಿದ್ದಾರೆ. ನಮ್ಮ ದೇಶದ ಜನರು ಸ್ವಾತಂತ್ರ್ಯವಾಗಿ  ಸಮಾನತೆಯಿಂದ ಮತ್ತು ಸಹ ಬಾಳ್ವೆಯಿಂದ ಬದುಕಬೇಕು ಎಂದು ಬಯಸಿದ್ದ ಹಿರಿಯರು ನಮ್ಮ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಟ್ಟಿದ್ದಾರೆ. ಅವರ ಹಾಕಿಕೊಟ್ಟ ಹಾದಿಯಲ್ಲಿ ನಾವು  ಸಾಗಲು ಪ್ರಯತ್ನ ಮಾಡೋಣ ಎಂದ ಸತೀಶ ಜಾರಕಿಹೊಳಿ ಅವರು ಮಹಾನ ನಾಯಕರು ಕಂಡ ಕನಸನ್ನು ನಾವು ನನಸಾಗಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದರು.  ನಾಳಿನ ಸ್ವಾತಂತ್ರ್ಯ ದಿನಾಚರಣೆಯೂ …

Read More »

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಮತ್ತೊಂದು ದಾಖಲೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತೊಂದು ಮೈಲಿಗಲ್ಲು ನಿರ್ಮಿಸಿದ್ದಾರೆ. ಸುದೀರ್ಘ ಅವಧಿ ಪೂರೈಸಿದ ಕಾಂಗ್ರೇಸೇತರ ಪ್ರಧಾನಿ ಎಂಬ ಹೆಗ್ಗಳಿಕೆಗೆ ನರೇಂದ್ರ ಮೋದಿ ಪಾತ್ರರಾಗಿದ್ದಾರೆ.  ಇದೀಗ ಮಾಜಿ ಪ್ರಧಾನಿ, ಬಿಜೆಪಿ ನಾಯಕ ಅಟಲ್ ಬಿಹಾರಿ ವಾಜಪೇಯಿ ಅವರ ದಾಖಲೆ ಮುರಿದಿದ್ದಾರೆ. ಇಷ್ಟೇ ಅಲ್ಲ ಸುದೀರ್ಘ ಅವಧಿಗೆ ಪ್ರಧಾನಿಯಾದ ಭಾರತದ ನಾಲ್ಕನೇ ಪ್ರಧಾನಿ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಬಿಜೆಪಿಯಿಂದ ಪ್ರಧಾನಿ ಪಟ್ಟ ಅಲಂಕರಿಸಿದ ಅಟಲ್ ಬಿಹಾರಿ ವಾಜಪೇಯಿ 2,268 ದಿನ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದರು. …

Read More »