Breaking News

Daily Archives: ಆಗಷ್ಟ್ 28, 2020

ಲಂಚ ಸ್ವೀಕರಿಸುವಾಗ ತಹಶೀಲ್ದಾರ್‌ ಕಚೇರಿಯ ಸರ್ವೇ ಇಲಾಖೆ ಮೇಲ್ವಿಚಾರಕ ಎಸಿಬಿ ಬಲೆಗೆ….!

ಕೊಪ್ಪಳ: ಗಂಗಾವತಿ ಸರ್ವೇ ಮೇಲ್ವಿಚಾರಕ ಗಂಗಾಧರ ತೇಜಪ್ಪ ಎಸಿಬಿ ಬಲೆಗೆ ಬಿದ್ದಿದ್ದಾರೆ. ಗಂಗಾವತಿ ತಾಲೂಕು ಹೆಬ್ಬಾಳ ಕ್ಯಾಂಪ್‌ನ ರಾಜು.ಪಿ. ಅವರಿಂದ 4 ಸಾವಿರ ಲಂಚ ಪಡೆಯುತ್ತಿದ್ದಾಗ ದಾಳಿ ಮಾಡಿದ ಎಸಿಬಿ ಅವರನ್ನು ಹಣದ ಸಮೇತ ಬಂದಿಸಿದೆ. ತಾಯಿಯ ಆಸ್ತಿಯ 11ಬಿ/ಇ ನಕ್ಷೆ ನೀಡಲು ಗಂಗಾವತಿ ತಾಲೂಕಿನ ಹೆಬ್ಬಾಳ ಕ್ಯಾಂಪ್‌ನ ರಾಜು.ಪಿ. ಅವರಿಂದ 4 ಸಾವಿರ ಲಂಚ ಪಡೆಯುತ್ತಿದ್ದ ಗಂಗಾವತಿ ತಹಶೀಲ್ದಾರ್‌ ಕಚೇರಿಯ ಸರ್ವೇ ಮೇಲ್ವಿಚಾರಕ ಗಂಗಾಧರ ತೇಜಪ್ಪ ಅವರನ್ನು ಎಸಿಬಿ …

Read More »

ರೈತರ ಸಮಸ್ಯೆ ಪರಿಹಾರಕ್ಕೆ ಚಕ್ಕಡಿ ಏರಿ ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ್ ಜಾರಕಿಹೊಳಿ ಪ್ರತಿಭಟನೆ

ಧಾರವಾಡ: ಅತಿವೃಷ್ಟಿಯಿಂದ ರೈತರು ಸಮಸ್ಯೆ ಅನುಭವಿಸುತ್ತಿದ್ದಾರೆ. ಸರ್ಕಾರ ರೈತರ ಸಮಸ್ಯೆಗಳನ್ನು ಬಗೆಹರಿಸಬೇಕೆಂದು ಆಗ್ರಹಿಸಿ ಯಮಕನಮರಡಿ ಕ್ಷೇತ್ರ ಶಾಸಕ ಸತೀಶ್ ಜಾರಕಿಹೊಳಿ ನಗರದಲ್ಲಿ ಚಕ್ಕಡಿ ಏರಿ ಶುಕ್ರವಾರ ಪ್ರತಿಭಟನೆ ನಡೆಸಿದರು. ಇಲ್ಲಿನ ಗಾಂಧಿನಗರದಿಂದ ನವಲೂರು ಸೇತುವೆವರೆಗೂ ಚಕ್ಕಡಿ ಏರಿ ಪ್ರತಿಭಟನಾ ಮೆರವಣಿಗೆ ಕೈಗೊಂಡರು.  ಖಾನಾಪುರ ಕ್ಷೇತ್ರದ ಶಾಸಕಿ ಅಂಜಲಿ ನಿಂಬಾಳ್ಕರ್ ಕೂಡ ಪಾಲ್ಗೊಂಡಿದ್ದರು. ರಾಜ್ಯದ ರೈತರು  ಅತಿವೃಷ್ಟಿಯಿಂದ ಸಾಕಷ್ಟು ನಷ್ಟ ಅನುಭವಿಸಿದ್ದಾರೆ. ಬೆಳೆ ಹಾನಿಗೊಳಗಾದ ರೈತರಿಗೆ ಸರ್ಕಾರ ಕೂಡಲೇ ಪರಿಹಾರ ನೀಡಬೇಕು ಎಂದು …

Read More »

ಮಧ್ಯರಾತ್ರಿ ಪೀರನವಾಡಿಯಲ್ಲಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ…!

ಬೆಳಗಾವಿ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಅಭಿಮಾನಿಗಳು ಇಂದು ಮದ್ಯರಾತ್ರಿ ಪೀರನವಾಡಿ ಗ್ರಾಮದಲ್ಲಿ ತಾವು ಗುರುತಿಸಿದ ಸ್ಥಳದಲ್ಲೇ ರಾಯಣ್ಣನ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡುವ ಮೂಲಕ  ಕ್ರಾಂತಿಯ ಕಹಳೆ ಊದಿದ್ದಾರೆ. ಹಲವಾರು ವರ್ಷಗಳಿಂದ ಪೀರನವಾಡಿ ಗ್ರಾಮದ ಮುಖ್ಯ ಸರ್ಕಲ್ ನಲ್ಲಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ ಮಾಡುವಂತೆ ಹೋರಾಟ ಮಾಡುತ್ತ ಬಂದಿದ್ದ ರಾಯಣ್ಣನ ಪರಮ ಭಕ್ತರು ಇಂದು ಮೂರ್ತಿ ಪ್ರತಿಷ್ಠಾಪನೆ ಮಾಡಿ,ರಾಯಣ್ಣನ ಮೂರ್ತಿಗೆ ದೊಡ್ಡ ಹೂಮಾಲೆ ಹಾಕಿ,ಕ್ರಾಂತಿವೀರ,ಶೂರ,ಧೀರ ಸಂಗೊಳ್ಳಿ ರಾಯಣ್ಣನ ಪರ ಘೋಷಣೆಗಳನ್ನು ಕೂಗುವ …

Read More »