Breaking News

Daily Archives: ಸೆಪ್ಟೆಂಬರ್ 25, 2020

ಮರೆಯಾದ ಸಂಗೀತದ ಮೇರು ಪರ್ವತ ಎಸ್‍ಪಿಬಿ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಶೋಕ

ಗೋಕಾಕ : ಭಾರತ ಕಂಡ ಸಂಗೀತ ಸಾರ್ವಭೌಮ, ಗಾನ ಗಾರುಡಿಗ, ಹಿನ್ನೆಲೆ ಗಾಯಕ, ಪದ್ಮಭೂಷಣ ಡಾ.ಎಸ್.ಪಿ. ಬಾಲಸುಬ್ರಮಣ್ಯಂ(74) ಅವರ ಅಗಲಿಕೆಗೆ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಭಾರತೀಯ ಚಿತ್ರರಂಗದ ಇತಿಹಾಸದಲ್ಲಿಯೇ ಸಂಗೀತ ಕ್ಷೇತ್ರದಲ್ಲಿ ಡಾ. ಎಸ್.ಪಿ.ಬಾಲಸುಬ್ರಮಣ್ಯಂ ಅವರು ಅನನ್ಯ ಕೊಡುಗೆ ನೀಡಿದ್ದಾರೆ. ಕಳೆದ 50 ವರ್ಷಗಳಿಂದ ದೇಶದ ವಿವಿಧ ಭಾಷೆಗಳಲ್ಲಿ ಸುಮಾರು 45 ಸಾವಿರಕ್ಕೂ ಅಧಿಕ ಹಾಡುಗಳನ್ನು ಹಾಡುವ ಮೂಲಕ …

Read More »

ಗಾಯಕ ಎಸ್‍ಪಿಬಿ ನಿಧನಕ್ಕೆ ಶಾಸಕ ಸತೀಶ್ ಜಾರಕಿಹೊಳಿ ಸಂತಾಪ

ಬೆಳಗಾವಿ: ಖ್ಯಾತ ಗಾಯಕ ಡಾ.ಎಸ್.ಪಿ.ಬಾಲಸುಬ್ರಮಣ್ಯಂ ಅವರ ನಿಧನದಿಂದ ಸಂಗೀತ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸಂತಾಪ ಸೂಚಿಸಿದ್ದಾರೆ. ಬಹುಭಾಷಾ ಗಾಯಕ ಎಸ್‍ಪಿಬಿ ಅವರು ಇತ್ತೀಚೆಗೆ ಕೋವಿಡ್ ಸೋಂಕಿಗೆ ಗುರಿಯಾಗಿ ಚೆನ್ನೈ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟಿದ್ದಾರೆ. ಸರಸ್ವತಿ ಪುತ್ರರಾಗಿದ್ದ ಎಸ್ ಪಿ ಬಿ ಸಂಗೀತ ಮಾಂತ್ರಿಕರಾಗಿದ್ದರು. ಅವರು ಹಾಡಿದ ಹಾಡುಗಳನ್ನು ಕೇಳುತ್ತಾ ಬೆಳೆದ ನಾವು ಅವರ ಅಗಲಿಕೆಯನ್ನೂ ನೋಡಬೇಕಾದ …

Read More »

ಗಾನ ಗಂಧರ್ವ ಡಾ. ಎಸ್​.ಪಿ. ಬಾಲಸುಬ್ರಹ್ಮಣ್ಯಂ ಅವರ ನಿಧನಕ್ಕೆ ಸಚಿವ ರಮೇಶ ಜಾರಕಿಹೊಳಿ ಸಂತಾಪ.

ಗಾನ ಗಂಧರ್ವ *ಡಾ. ಎಸ್​.ಪಿ. ಬಾಲಸುಬ್ರಹ್ಮಣ್ಯಂ* ಇನ್ನಿಲ್ಲ ಎಂಬುದನ್ನು ಕಲ್ಪಿಸಿಕೊಳ್ಳಲೂ ಆಗುತ್ತಿಲ್ಲ. ಇತ್ತೀಚೆಗಷ್ಟೇ ಕೋವಿಡ್ ಸೋಂಕಿಗೆ ಗುರಿಯಾಗಿ ಚಿಕಿತ್ಸೆ  ಪಡೆದಿದ್ದ *ಎಸ್ ಪಿ ಬಿ* ಅವರನ್ನು ಕಳೆದುಕೊಂಡ ಸಂಗೀತ ಕ್ಷೇತ್ರ ತುಂಬಾ ಬಡವಾಗಿದೆ. ಬಹುಭಾಷಾ ಗಾಯಕರಾಗಿದ್ದ ಕಂಚಿನ ಕಂಠದ *ಎಸ್‌.ಪಿ. ಬಾಲಸುಬ್ರಹ್ಮಣ್ಯಂ* ಅವರು 16 ಭಾರತೀಯ ಭಾಷೆಗಳಲ್ಲಿ 4೦,೦೦೦ ಕ್ಕೂ ಹೆಚ್ಚು ಹಾಡುಗಳನ್ನು ಹಾಡಿ ದಾಖಲೆ‌ ಬರೆದ ಗಾಯಕ ಎಂಬುದು ಇತಿಹಾಸದಲ್ಲಿ ದಾಖಲಾಗಿದೆ. ಸರಸ್ವತಿ ಪುತ್ರರಾಗಿದ್ದ ಎಸ್ ಪಿ ಬಿ …

Read More »