Breaking News

Monthly Archives: ನವೆಂಬರ್ 2020

ಸಾಲಗಾರರಿಗೆ ಬಿಗ್ ರಿಲೀಫ್: ಸುಪ್ರೀಂ ಸೂಚನೆ

ನವದೆಹಲಿ: ಸಾಲ ಮನ್ನಾ ಅವಧಿಯಲ್ಲಿ ಬಡ್ಡಿಮನ್ನಾ ಮಾಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆಯನ್ನ ಸುಪ್ರೀಂ ಕೋರ್ಟ್ ಶುಕ್ರವಾರ ನಡೆಸಿದೆ. ಕೋವಿಡ್-19 ಸಾಂಕ್ರಾಮಿಕ ರೋಗವು ಜನರ ಆರೋಗ್ಯಕ್ಕೆ ಮಾರಕವಾಗಿದ್ದು, ವಿಶ್ವದ ಇತರ ದೇಶಗಳ ಆರ್ಥಿಕ ಬೆಳವಣಿಗೆಯ ಮೇಲೆ ತನ್ನ ಕರಿನೆರಳು ಆವರಿಸಿದೆ ಎಂದು ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ಪೀಠ ಹೇಳಿದೆ. ವಿಚಾರಣೆಯ ನಂತರ, ಕೊರೊನಾ ವೈರಸ್ ರೋಗವುಂಟಾಗಿರುವ ಹಿನ್ನೆಲೆಯಲ್ಲಿ ಎರಡು ಕೋಟಿ ರೂಪಾಯಿವರೆಗಿನ ಎಂಟು ನಿರ್ದಿಷ್ಟ ವರ್ಗದ ಸಾಲಗಳ ಮೇಲೆ …

Read More »

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎನ್​​.ಆರ್​ ಸಂತೋಷ್ ನಿನ್ನೆ​ ಆತ್ಮಹತ್ಯೆಗೆ ಯತ್ನ

ಬೆಂಗಳೂರು: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎನ್​​.ಆರ್​ ಸಂತೋಷ್ ನಿನ್ನೆ​ ಆತ್ಮಹತ್ಯೆಗೆ ಯತ್ನಿಸಿದ ಬಗ್ಗೆ ಅವರ ಪತ್ನಿ ಜಾಹ್ನವಿ ಪ್ರತಿಕ್ರಿಯಿಸಿದ್ದಾರೆ. ಸಂತೋಷ್​ರ ಈ ನಿರ್ಧಾರಕ್ಕೆ ಅವರ ರಾಜಕೀಯ ವೃತ್ತಿಜೀವನದಲ್ಲಾಗ್ತಿರೋ ಬದಲಾವಣೆಗಳೇ ಕಾರಣ ಎಂದಿದ್ದಾರೆ. ನಿನ್ನೆ ರಾತ್ರಿ ಮಾಧ್ಯಮಗಳೊಂದಿಗೆ ಮಾತನಾಡಿದ ಜಾಹ್ನವಿ, ಅವರು ಬೆಳಗ್ಗೆಯಿಂದ ಸ್ವಲ್ಪ ಬೇಜಾರಲ್ಲಿದ್ರು. ಸಂಜೆ ಹೊರಗಡೆ ಹೋಗಿ 7 ಗಂಟೆಗೆ ಮನೆಗೆ ಬಂದ್ರು. ಊಟಕ್ಕೆ ಏನ್ಮಾಡಲಿ ಅಂತ ಕೇಳಲಿಕ್ಕೆ ಹೋದಾಗ ಪ್ರಜ್ಞೆ ತಪ್ಪಿದ್ರು. ಕೂಡಲೇ ಎಂ.ಎಸ್ ರಾಮಯ್ಯ ಆಸ್ಪತ್ರೆಗೆ …

Read More »

ವಿಜಯನಗರ 31ನೇ ಜಿಲ್ಲೆಯೆಂದು ಘೋಷಣೆ

ಬೆಂಗಳೂರು, ನ. 27: ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ಹೊಸದಾಗಿ ವಿಜಯನಗರ ಜಿಲ್ಲೆ ಸ್ಥಾಪನೆಗೆ ರಾಜ್ಯ ಸಚಿವ ಸಂಪುಟ ಅಸ್ತು ಎಂದಿದೆ. ಸಚಿವ ಸಂಪುಟ ಸಭೆಯಲ್ಲಿಂದು ಅಧಿಕೃತವಾಗಿ ಅನುಮೋದನೆ ಪಡೆದುಕೊಂಡ ಬಳಿಕ ವಿಜಯನಗರ 31ನೇ ಜಿಲ್ಲೆ ಎಂದು ಸಚಿವ ಮಾಧುಸ್ವಾಮಿ ಅವರು ಘೋಷಣೆ ಮಾಡಿದರು. ಈ ಮೂಲಕ ಸಚಿವ ಆನಂದ್ ಸಿಂಗ್ ಅವರ ಬಹುಕಾಲದ ಬೇಡಿಕೆ ಕೊನೆಗೂ ಈಡೇರಿದೆ. ಈ ಹಿಂದಿನ ಸಚಿವ ಸಂಪುಟ ಸಭೆಯಲ್ಲಿ ವಿಜಯನಗರ ಜಿಲ್ಲೆ ರಚನೆ, ರೂಪುರೇಷೆಗಳ …

Read More »

ರಮೇಶ್ ಜಾರಕಿಹೊಳಿ ಅವರ ಸತತ ಪ್ರಯತ್ನ 750 ಕೋಟಿ ರೂ.ಅನುದಾನ ನೀಡಲು ಒಪ್ಪಿಗೆ ನೀಡಿದ ಕೇಂದ್ರ ಸರ್ಕಾರ

ಹೊಸದಿಲ್ಲಿ: ಅಣೆಕಟ್ಟೆಗಳ ಪುನಶ್ಚೇತನ ಹಾಗೂ ಸುಧಾರಣಾ ಯೋಜನೆಗಳ ಅನುದಾನದಲ್ಲಿ ಕರ್ನಾಟಕ ಹಲವು ಅಣೆಕಟ್ಟೆಗಳ ಸಬಲೀಕರಣಕ್ಕೆ ಕೇಂದ್ರ ಸರ್ಕಾರ 750 ಕೋಟಿ ರೂ.ಅನುದಾನ ನೀಡಲು ಒಪ್ಪಿಗೆ ನೀಡಿದೆ. ರಾಜ್ಯ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ಸತತ ಪ್ರಯತ್ನದ ಹಿನ್ನೆಲೆಯಲ್ಲಿ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಈ ಅನುದಾನ ಬಿಡುಗಡೆ ಮಾಡಲು ಒಪ್ಪಿಕೊಂಡಿದ್ದಾರೆ. ಕೇಂದ್ರ ಜಲಶಕ್ತಿ ಆಯೋಗವು ದೇಶದ ಪ್ರಮುಖ ಅಣೆಕಟ್ಟೆಗಳ ಸಬಲೀಕರಣಕ್ಕಾಗಿ ವಿಶ್ವಬ್ಯಾಂಕ್ ನೆರವಿನ ಡ್ರಿಪ್ …

Read More »

ಕರ್ನಾಟಕ ನೀರಾವರಿ ನಿಗಮದಿಂದ ಸಮುದಾಯ ಭವನಕ್ಕೆ ಅನುದಾನ ಬಿಡುಗಡೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಈ ಭಾಗದಲ್ಲಿ ಮನ್ನಿಕೇರಿ ಮಹಾಂತಲಿಂಗೇಶ್ವರ ದೇವಸ್ಥಾನವು ಇತಿಹಾಸದಿಂದ ಕೂಡಿದ್ದು, ಅಪಾರ ಭಕ್ತ ಸಮೂಹವನ್ನು ಆಕರ್ಷಿಸುತ್ತಿರುವ ಮಠವಾಗಿದೆ. ಸಮುದಾಯ ಭವನ ನಿರ್ಮಾಣದಿಂದಾಗಿ ಮದುವೆ, ಮುಂಜೆ ಮುಂತಾದ ಧಾರ್ಮಿಕ ಕಾರ್ಯಕ್ರಮಗಳಿಗೆ ಅನುಕೂಲವಾಗಲಿದೆ ಎಂದು ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಮನ್ನಿಕೇರಿ ಗ್ರಾಮದ ಹೊರವಲಯದಲ್ಲಿರುವ ಮಹಾಂತಲಿಂಗೇಶ್ವರ ದೇವಸ್ಥಾನದ ಬಳಿ ಬುಧವಾರ ದಂದು ಕರ್ನಾಟಕ ನೀರಾವರಿ ನಿಗಮದ 50 ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಿರುವ ಸಮುದಾಯ …

Read More »

ನಿವಾರ್ ಚಂಡಮಾರುತದ ಪರಿಣಾಮ: 8 ಜಿಲ್ಲೆ ಯೆಲ್ಲೋ ಅಲರ್ಟ್

ಬೆಂಗಳೂರು : ನಿವಾರ್ ಚಂಡಮಾರುತದ ಪರಿಣಾಮ ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಿವಾರ್ ಚಂಡಮಾರುತ ಸದ್ಯ ವಾಯುವ್ಯ ದಿಕ್ಕಿನೆಡೆಗೆ ಸಾಗಿದ್ದು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬಳ್ಳಾರಿ ಮತ್ತು ಕರ್ನಾಟಕದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಇಂದು ಮತ್ತೆ ನಾಳೆ ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, 8 ಜಿಲ್ಲೆಗಳಲ್ಲಿ ಯೆಲ್ಲೋ …

Read More »

ಚಾಲಕನಿಗೆ ಲೋ ಬಿಪಿ ; ನಿಯಂತ್ರಣ ತಪ್ಪಿ ಮನೆಗೆ ಡಿಕ್ಕಿ .

ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಲೈನ್​ ಮನೆಗೆ ಡಿಕ್ಕಿಯಾಗಿರುವ ಘಟನೆ ಕೊಡಗಿನ ಸೋಮವಾರಪೇಟೆಯಲ್ಲಿ ನಡೆದಿದೆ. ಇಂದು ಬೆಳಗ್ಗೆ ತಾಕೇರಿಯಿಂದ ಸೋಮವಾರಪೇಟೆ ಹೋಗುವಾಗ ಮಾರ್ಗ ಮಧ್ಯೆ ದುರ್ಘಟನೆ ನಡೆದಿದ್ದು, ಪ್ರಾಣಪಾಯದಿಂದ ಚಾಲಕ ಬೋಪಯ್ಯ (47) ಪಾರಾಗಿದ್ದಾರೆ. ಚಾಲಕನಿಗೆ ಲೋ ಬಿಪಿ ಹಿನ್ನಲೆಯಲ್ಲಿ ಮಾರುತಿ ಬ್ರಿಝಾ ಕಾರು ನಿಯಂತ್ರಣ ತಪ್ಪಿ ಮನೆಗೆ ಡಿಕ್ಕಿಯಾಗಿದೆ.

Read More »

ಆತ್ಮ ನಿರ್ಭರ ಭಾರತವಾಗಲು ನಾವೆಲ್ಲರೂ ಪಣ ತೊಡಬೇಕಿದೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಗೋಕಾಕ :  ‘ನಮ್ಮ ಭಾರತದ ಸಂವಿಧಾನವು ಜಗತ್ತಿನ ಅತೀ ದೊಡ್ಡ ಹಾಗೂ ಯಶಸ್ವಿ ಪ್ರಜಾಪ್ರಭುತ್ವವನ್ನು ಹೊಂದಿರುವ ಹೆಗ್ಗಳಿಕೆಗೆ ಪಾತ್ರವಾಗಿದೆ. ಇದರ ಶ್ರೇಯಸ್ಸು ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ ಅಂಬೇಡ್ಕರ ಅವರಿಗೆ ಸಲ್ಲುತ್ತದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಅರಭಾವಿ ಮಂಡಲ ಭಾರತೀಯ ಜನತಾ ಪಾರ್ಟಿ ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಗುರುವಾರ ಹಮ್ಮಿಕೊಂಡಿದ್ದ ‘ಸಂವಿಧಾನ ದಿನ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ದೇಶದ ಪ್ರತಿಯೊಬ್ಬ …

Read More »

ಸಂವಿಧಾನ ಪಾಲನೆ, ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

ಬೆಳಗಾವಿ : ‘ ಸಂವಿಧಾನ ಪಾಲನೆ ಹಾಗೂ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಈಗಾಗಲೇ ಸಂವಿಧಾನದ ಬಗ್ಗೆ ಸಂಪೂರ್ಣ ಅರಿವು ಮೂಡಿಸುವ ಕಾರ್ಯ ನಡೆದಿದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. ನಗರದ ಕಾಂಗ್ರೆಸ್ ಭವನದಲ್ಲಿ ಗುರುವಾರ 71ನೇ ಸಂವಿಧಾನದ ಸಮರ್ಪಣಾ ದಿನಾಚರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಸಂವಿಧಾನದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಈಗಾಗಲೇ ಘಟಪ್ರಭಾ ಸೇವಾದಳ ಕೇಂದ್ರದಲ್ಲಿ ಹಾಗೂ ಕಾಂಗ್ರೆಸ್ ಭವನದಲ್ಲಿ ನಿರಂತರ ತರಬೇತಿಗಳನ್ನು ನಡೆಸಲಾಗುತ್ತಿದೆ.  ಜನರು …

Read More »

ಶುಲ್ಕ ಪಾವತಿಸದಿದ್ದರೆ ವಿದ್ಯಾರ್ಥಿಗಳಿಗೆ ಡಿಸೆಂಬರ್ 1 ರಿಂದ ಆನ್ ಲೈನ್ ಆಗುತ್ತೆ ಆಪ್

ಬೆಂಗಳೂರು : ಖಾಸಗಿ ಶಾಲೆಗಳು ಪೋಷಕರಿಗೆ ಬಿಗ್ ಶಾಕ್ ನೀಡಿದ್ದು, ನವೆಂಬರ್ 30 ರೊಳಗೆ ಶುಲ್ಕ ಪಾವತಿಸದಿದ್ದರೆ ಡಿಸೆಂಬರ್ 1 ರಿಂದ ಆನ್ ಲೈನ್ ತರಗತಿಗಳನ್ನು ಸ್ಥಗಿತಗೊಳಿಸುವುದಾಗಿ ಘೋಷಿಸಿವೆ. ಈ ಕುರಿತು ಮಾಹಿತಿ ನೀಡಿರುವ ಖಾಸಗಿ ಶಾಲೆಗಳ ಆಡಳಿತ ಮಂಡಳಿ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಡಿ.ಶಶಿಕುಮಾರ್, ಶಾಲಾ ಬೋಧಕ-ಬೋಧಕೇತರ ಸಿಬ್ಬಂದಿ, ಶಾಲಾ ಕಟ್ಟಡಗಳ ಬಾಡಿಗೆ, ವಿದ್ಯುತ್ ಬಿಲ್ ಸೇರಿದಂತೆ ಶಾಲಾ ನಿರ್ವಹಣೆ ಖರ್ಚು ವೆಚ್ಚಗಳನ್ನು ಆಡಳಿತ ಮಂಡಳಿಗಳು ಪಾವತಿಸಬೇಕಾಗಿದ್ದು, ಪೋಷಕರು …

Read More »