Breaking News

Daily Archives: ಡಿಸೆಂಬರ್ 15, 2020

ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಎಲ್ಲ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಗೆಲುವು: ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿಯಲ್ಲಿ ಅರಭಾವಿ ಮಂಡಲದ ನೂತನ ಬಿಜೆಪಿ ಕಾರ್ಯಾಲಯವನ್ನು ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ಡಿ.22 ರಂದು ನಡೆಯುವ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಅರಭಾವಿ ಮತ ಕ್ಷೇತ್ರದಲ್ಲಿ ಬಿಜೆಪಿ ಬೆಂಬಲಿತ ಎಲ್ಲ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ. ಇದರಿಂದ ಎಲ್ಲ 33 ಗ್ರಾಮ ಪಂಚಾಯತಿಗಳಲ್ಲಿಯೂ ನಮ್ಮ ಗುಂಪು ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು  ಕೆ.ಎಮ್.ಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ವಿಶ್ವಾಸ ವ್ಯಕ್ತಪಡಿಸಿದರು.  ಮಂಗಳವಾರದಂದು ಪಟ್ಟಣದ ಕರೆಮ್ಮಾದೇವಿ ವೃತ್ತದಲ್ಲಿ ಅರಭಾಂವಿ ಮಂಡಲ …

Read More »

ಕಳ್ಳನ ಬಂಧನ: ನಾಲ್ಕು ಬೈಕ್, ಎರಡು ಸೈಕಲ್, ನಾಲ್ಕು ಮೊಬೈಲ್ ವಶ

ಗೋಕಾಕ :ಗೋಕಾಕ ಶಹರ ನಗರದಲ್ಲಿ ಜರುಗುತ್ತಿದ್ದ ಬೈಕ್‌ ಕಳ್ಳತನಗಳ ಪ್ರಕರಣದ ತನಿಖೆಯನ್ನು ಬೆಳಗಾವಿ ಎಸ್,ಪಿ, ಲಕ್ಷ್ಮಣ ನಿಂಬರಗಿ ಮತ್ತು ಹೆಚ್ಚುವರಿ ಎಸ್,ಪಿ, ಅಮರನಾಥ ರೆಡ್ಡಿ, ಗೋಕಾಕ ಡಿ,ಎಸ್,ಪಿ, ಜಾವೇದ ಇನಾಮದಾರ,ಸಿ,ಪಿ,ಆಯ್,ಗೋಪಾಲ ರಾಠೋಡ,ಇವರ ಮಾರ್ಗದರ್ಶನದಲ್ಲಿ ಪಿ,ಎಸ್,ಆಯ್,ಶ್ರೀ ಕೆ,ಬಿ,ವಾಲಿಕಾರ (ಕಾಸು) ,ಪಿ,ಎಸ್,ಆಯ್,ಶ್ರೀ ಅಮಿನಬಾಂವಿ,(ಸಿಬಿ)ಗೋಕಾಕ. ಶಹರ ಠಾಣೆಯ ಸಿಬ್ಬಂದಿಗಳಾದ ಬಿ,ಎಸ್,ಸಿದ್ನಾಳ,ಎಲ್,ಎಸ್ನಾಡಗೌಡರ,ಕೆ,ಬಿ,ಹಕ್ಯಾಗೋಳ,ಸಿ,ಎಸ್,ಬೀರಾದರ,ಆರ್,ಆರ್,ಮುರನಾಳ,ಎಸ್,ವಾಯ್,ಕುರಿ,ಎಂ,ಆರ್,ಅಂಬಿ,ಇವರು ಕಾರ್ಯಾಚರಣೆ ನಡೆಸಿ ಒರ್ವನನ್ನು ವಿಚಾರಣಗೆ ಒಳಪಡಿಸಿದಾಗ ಅವನಿಂದ ಕಳ್ಳತನ ಮಾಡಿದ 4 ಮೋಟಾರ್‌ ಬೈಕ್‌, 2 ಸೈಕಲ್ ಹಾಗೂ 4 ಮೊಬೈಲಗಳನ್ನು ವಶಪಡಿಸಿಕೊಳ್ಳುವಲ್ಲಿ …

Read More »

ತಿರುಮಲ ತಿಮ್ಮಪ್ಪನ ದರ್ಶನ ಪಡೆದ ಸಚಿವ ರಮೇಶ ಜಾರಕಿಹೊಳಿ.

ಆಂಧ್ರಪ್ರದೇಶ : ರಾಜ್ಯ ಜಲಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಅವರು ಮಂಗಳವಾರ  ತಿರುಮಲ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ಚಿತ್ತೂರು ಜಿಲ್ಲೆಯ ತಿರುಮಲ ಬೆಟ್ಟದ ಪಟ್ಟಣದಲ್ಲಿನ ವೆಂಕಟೇಶ್ವರ ದೇವಸ್ಥಾನಕ್ಕೆ ತೆರಳಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆದುಕೊಂಡಿದ್ದಾರೆ. ಸಚಿವರ ಜತೆಗೆ ಶಾಸಕ, ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಮಹೇಶ್ ಕುಮಠಳ್ಳಿ, ಬಿಜೆಪಿ ಮುಖಂಡರು ಇದ್ದಾರೆ.

Read More »

ವಿಧಾನಪರಿಷತ್ತಿನ ಮಾನ-ಮರ್ಯಾದೆ ಹರಾಜು ಮಾಡಿದ ಮಾನ್ಯ ವಿಧಾನ ಪರಿಷತ ಶಾಸಕರುಗಳು!

ಬೆಂಗಳೂರು, ಡಿ.15- ವಿಧಾನ ಪರಿಷತ್ ಸಭಾಪತಿ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸಂಬಂಧಪಟ್ಟಂತೆ ಆಡಳಿತ ಪಕ್ಷವಾದ ಬಿಜೆಪಿ, ಪ್ರತಿಪಕ್ಷವಾದ ಕಾಂಗ್ರೆಸ್ ನಡುವೆ ಸಂಘರ್ಷಮಯ ವಾತಾವರಣ ನಿರ್ಮಾಣವಾಗಿ ವಿಧಾನ ಪರಿಷತ್‍ನಲ್ಲಿಂದು ಕೋಲಾಹಲ ಉಂಟಾಯಿತು. ಕಲಾಪ ಆರಂಭಕ್ಕೂ ಮುನ್ನ ಉಪಸಭಾಪತಿ ಧರ್ಮೇಗೌಡ ಅವರು ಸಭಾಪತಿ ಪೀಠದ ಮೇಲೆ ಕುಳಿತುಕೊಂಡಿದ್ದರು. ಇದನ್ನು ಕಾಂಗ್ರೆಸ್‍ನ ಹಿರಿಯ ಸದಸ್ಯ ಬಿ.ಕೆ.ಹರಿಪ್ರಸಾದ್ ಪ್ರಶ್ನಿಸಿ ಆಕ್ಷೇಪ ವ್ಯಕ್ತಪಡಿಸಿದರು. ಪೀಠದ ಹಿಂದೆ ಇರುವ ಬಾಗಿಲ ಮೂಲಕ ಸಭಾಪತಿ ಅವರು ಸದನದ ಸಭಾಂಗಣ ಪ್ರವೇಶಿಸದಂತೆ …

Read More »

ಕಾಂಗ್ರೆಸ್ ಕಾರ್ಯಕರ್ತರು ಪಕ್ಷ ಸಂಘಟನೆಗೆ ಶ್ರಮ ವಹಿಸಿ, ಕೆಲಸಕ್ಕೆ ಪ್ರತಿಫಲ ದೊರೆಯುತ್ತದೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

ರಾಯಬಾಗ: ‘ ಪ್ರಧಾನಿ ಮೋದಿಯ ಬಣ್ಣದ ಮಾತಿಗೆ ಈಗಾಗಲೇ ದೇಶ ಮರುಳಾಗಿದೆ. ಇದೇನು ಹೊಸದೆನಲ್ಲ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವ್ಯಂಗ್ಯವಾಡಿದರು. ಪಟ್ಟಣದಲ್ಲಿ ನಡೆದ ಗ್ರಾಮ ಪಂಚಾಯಿತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು,  ಗೋ ಹತ್ಯೆ ನಿಷೇಧ ಕಾಯ್ದೆ ಏನು ಹೊಸದಲ್ಲ. 1965ರಲ್ಲಿಯೇ ನೆಹರು ಅವರು ಜಾರಿಗೆ ತಂದಿದ್ದರು. ಆದರೆ ಈಗ ಬಿಜೆಪಿ ಸರ್ಕಾರ ಅದಕ್ಕೆ ಸುಣ್ಣ ಬಣ್ಣ ಬಳೆದು, ಅಲಂಕರಿಸಿ ಹೊರಟ್ಟಿದ್ದಾರೆ. ದೇಶದ ಜನರು ಬಣ್ಣದ ಮಾತಿಗೆ ಮರುಳಾಗದೆ. …

Read More »