೮ನೇ ಬಾರಿಗೆ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ, ನೇಗಿಲಯೋಗಿ ಬಿ.ಎಸ್. ಯಡಿಯೂರಪ್ಪ ಅವರು ರಾಜ್ಯದ ಸರ್ವತೋಮುಖ ಏಳ್ಗೆ ಸೇರಿದಂತೆ ಎಲ್ಲ ಕ್ಷೇತ್ರಗಳಿಗೂ ವಿಶೇಷ ಆದ್ಯತೆ ನೀಡುವ ಮೂಲಕ ಸರ್ವರಿಗೂ ಸಮಪಾಲು ನೀಡಿದ್ದಾರೆಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹರ್ಷ ವ್ಯಕ್ತಪಡಿಸಿದರು. ಸೋಮವಾರದಂದು ೨೦೨೧-೨೨ ನೇ ಸಾಲಿನ ರಾಜ್ಯ ಸರ್ಕಾರದ ಆಯವ್ಯಯ ಪತ್ರವನ್ನು ಮಾರ್ಚ್ ೮ ರ ವಿಶ್ವ ಮಹಿಳಾ ದಿನಾಚರಣೆಯಂದು ಮಂಡಿಸಿರುವ ಮುಖ್ಯಮಂತ್ರಿಗಳು ಮಹಿಳೆಯರಿಗೆ ಹಲವಾರು ಬಂಪರ್ …
Read More »Monthly Archives: ಮಾರ್ಚ್ 2021
*ರಮೇಶ್ ಜಾರಕಿಹೊಳಿ ಅವರನ್ನು ಅಧಿಕಾರದಿಂದ ತೆಗೆಯಲು ಷಡ್ಯಂತ್ರ ನಡೆದಿದೆ: ಬಾಲಚಂದ್ರ ಜಾರಕಿಹೊಳಿ*
ಬೆಂಗಳೂರು: ರಾಸಲೀಲೆ ಸಿಡಿ ಪ್ರಕರಣದಲ್ಲಿ ಸಚಿವ ಹುದ್ದೆಗೆ ರಾಜೀನಾಮೆ ನೀಡಿದ್ದ ರಮೇಶ್ ಜಾರಕಿಹೋಳಿ ಅವರ ವಿರುದ್ದ ಷಟ್ಯಂತ್ರ ಮಾಡಲಾಗಿದೆ ಎಂದು ಅವರ ಸಹೋದರ, ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೋಳಿ ಹೇಳಿದರು. ಭಾನುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಈ ಷಡ್ಯಂತ್ರದಲ್ಲಿ ನಾಲ್ಕು ಮಂದಿ ಭಾಗಿಯಾಗಿದ್ದಾರೆ. ಹಾಗೂ ಸಂತ್ರಸ್ಥ ಯುವತಿಗೆ 50 ಲಕ್ಷದ ಆಮಿಷವೊಡ್ಡಿದ್ದಾರೆ ಎಂದು ಆರೋಪಿಸಿದರು. ಆದರೆ ನಾಲ್ವರ ಹೆಸರನ್ನು ಈಗಲೇ ಬಹಿರಂಗಪಡಿಸಲ್ಲ. ಷಡ್ಯಂತ್ರದ ಹಿಂದೆ ಕಾಣದ ಕೈಗಳ ಕೈವಾಡ ಇದೆ. …
Read More »ಸಾಹುಕಾರ್ ವಿರುದ್ಧ ನೀಡಿದ ದೂರು ವಾಪಸ್ ॥ ಸತ್ಯ ಮೇವ ಜಯತೆ ಎಂದ ಅಭಿಮಾನಿಗಳು.
ಗೋಕಾಕ : ಗೋಕಾಕ ಸಾಹುಕಾರ ರಮೇಶ್ ಜಾರಕಿಹೊಳಿ ಅವರ CD ಕೇಸ್ಗೆ ಸಂಬಂಧಿಸಿದಂತೆ ನೀಡಿದ್ದ ದೂರನ್ನು ದಿನೇಶ್ ಕಲ್ಲಹಳ್ಳಿ ವಾಪಸ್ ಪಡೆದಿದ್ದಾರೆ. ಇಂದು ಈ ಪ್ರಕರಣಕ್ಕೆ ಹೊಸ ಟ್ವೀಸ್ಟ ಸಿಕ್ಕಿದ್ದು ರಮೇಶ್ ಜಾರಕಿಹೊಳಿ ವಿರುದ್ಧ ದಾಖಲಾಗಿದ್ದ ದೂರಿನ ಕೇಸ್ ವಕೀಲರ ಮೂಲಕ ವಾಪಸ್ ಪಡೆಯಲು ಮುಂದಾಗಿದ್ದಾರೆ. ರಮೇಶ್ ಜಾರಕಿಹೊಳಿ ವಿರುದ್ಧ ನೀಡಿದ್ದ ದೂರಿನ ವಿಚಾರದಲ್ಲಿ ದಿನೇಶ್ ಕಲ್ಲಹಳ್ಳಿ ಬಹುದೊಡ್ಡ ಯೂ-ಟರ್ನ್ ಹೊಡೆದಿದ್ದು, ನೀಡಿದ್ದ ದೂರು ವಾಪಸ್ ಪಡೆದಿದ್ದಾರೆ. ಇನ್ನು ಮಾರ್ಚ್ …
Read More »ಶರಣ ಸಂಸ್ಕೃತಿ ಉತ್ಸವ ಗೋಕಾಕ ಭಾಗದ ಸಾಂಸ್ಕೃತಿಕ , ಧಾರ್ಮಿಕ ಹಬ್ಬವಾಗಿದೆ : ಶಾಸಕ ಸತೀಶ ಜಾರಕಿಹೊಳಿ
ಗೋಕಾಕ: ಶರಣ ಸಂಸ್ಕೃತಿ ಉತ್ಸವ ಗೋಕಾಕ ಭಾಗದ ಸಾಂಸ್ಕೃತಿಕ , ಧಾರ್ಮಿಕ ಹಬ್ಬವಾಗಿ ಜಿಲ್ಲೆಯಲ್ಲಿ ತನ್ನದೇ ಆದ ಛಾಪು ಮೂಡಿಸಿದೆ ಎಂದು ಯಮಕನಮರಡಿ ಶಾಸಕ ಹಾಗೂ ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಶುಕ್ರವಾರದಂದು ನಗರದ ಶೂನ್ಯ ಸಂಪಾದನ ಮಠಕ್ಕೆ ಭೇಟಿ ನೀಡಿ ಶ್ರೀಮಠದ ಸತ್ಕಾರ ಸ್ವೀಕರಿಸಿ ಅವರು ಮಾತನಾಡಿದರು ನಿಗದಿತ ಕಾರ್ಯಕ್ರಮಗಳು ಇರುವುದರಿಂದ ಶರಣ ಸಂಸ್ಕೃತಿ ಉತ್ಸವದಲ್ಲಿ ಭಾಗವಹಿಸಲು ಆಗಲಿಲ್ಲ, ಖ್ಯಾತ ವಿದ್ವಾಂಸರು , ಚಿಂತಕರನ್ನು ಕರೆಯಿಸಿ ಜನರಲ್ಲಿ …
Read More »ಗುಡ್ಡಗಾಡು ಪ್ರದೇಶದ ಗ್ರಾಮಗಳಲ್ಲಿನ ಮೂಲಸೌಕರ್ಯ ಪರಿಶೀಲಿಸಿದ ರಾಹುಲ್ ಜಾರಕಿಹೊಳಿ,
ಬೆಳಗಾವಿ: ಯಮಕನಮರಡಿ ಮತಕ್ಷೇತ್ರ ವ್ಯಾಪ್ತಿಯ ಕರಿಕಟ್ಟಿ ಮತ್ತು ಯಲ್ಲಾಪುರ ಗ್ರಾಮಗಳಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ ಜಾರಕಿಹೊಳಿ ಅವರ ಪುತ್ರ, ಯುವ ಮುಖಂಡ ರಾಹುಲ್ ಜಾರಕಿಹೊಳಿ ಅವರು ಗುರುವಾರ ಭೇಟಿ ನೀಡಿ ಮೂಲಸೌಕರ್ಯಗಳನ್ನು ಪರಿಶೀಲಿಸಿದರು. ಕರಿಕಟ್ಟಿ ಹಾಗೂ ಯಲ್ಲಾಪುರ ಗ್ರಾಮಗಳು ಮತಕ್ಷೇತ್ರದ ಗುಡ್ಡಗಾಡು ಪ್ರದೇಶದಲ್ಲಿದ್ದು, ಇಲ್ಲಿ ಕಳೆದ 40 ವರ್ಷಗಳಿಂದ 10 ಮನೆಗಳಲ್ಲಿ 4 ಕುಟುಂಬಗಳು ವಾಸಿಸುತ್ತಿವೆ. ಅಭಿವೃದ್ಧಿಯಿಂದ ವಂಚಿತವಾಗಿದ್ದ ಈ ಗ್ರಾಮಗಳಲ್ಲಿ ಕಳೆದ ಕೆಲ ತಿಂಗಳ ಹಿಂದೆ …
Read More »ಸಾಧನೆಗೆ ಬಡತನ ಹಾಗೂ ಗ್ರಾಮೀಣ ಭಾಗ ತೊಡಕಾಗದು. ಸಾಧನೆಯ ಛಲ ಬೇಕು : ಐಪಿಎಸ್ ಅಧಿಕಾರಿ ಡಿ.ರೂಪಾ
ಗೋಕಾಕ: ಮೌಲ್ಯಗಳನ್ನುವರ್ದಿಸಿ, ವಚನಗಳ ಆಚರಣೆಯಿಂದ ಮೌಲ್ಯಾಧಾರಿತ ಸಮಾಜ ನಿರ್ಮಾಣ ಎಲ್ಲರ ಜವಾಬ್ದಾರಿಯಾಗಿದೆ ಎಂದು ಕರ್ನಾಟಕದ ಮೊದಲ ಐಪಿಎಸ್ ಅಧಿಕಾರಿ ಹೇಳಿದರು ಬುಧವಾರದಂದು ನಗರದ ಶ್ರೀ ಚನ್ನಬಸವೇಶ್ವರ ವಿದ್ಯಾಪೀಠ ಆವರಣದಲ್ಲಿ ಇಲ್ಲಿನ ಶ್ರೀ ಶೂನ್ಯ ಸಂಪಾದನ ಮಠದ 16 ನೇ ಶರಣ ಸಂಸ್ಕøತಿ ಉತ್ಸವದ ಮಹಿಳಾ ಸಮಾವೇಶವನ್ನು ಉದ್ದೇಶಿಸಿ ಅವರು ಮಾತನಾಡಿದರು. ಮಹಿಳೆಯರು ಇಂದು ಎಲ್ಲ ಕ್ಷೇತ್ರಗಳಲ್ಲಿ ಮಾದರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಲಿಂಗ ಬೇದ ಮಾಡದೆ ಮಹಿಳೆಯರಲ್ಲಿ ಪ್ರತಿಭೆಯನ್ನು ಪ್ರೋತ್ಸಾಹಿಸಿದರೆ ಸಮಾಜದ …
Read More »ಆಧ್ಯಾತ್ಮಿಕ ಮನೋಭಾವವನ್ನು ಬೆಳಿಸಿಕೊಳ್ಳಬೇಕು : ಆರ್ಟ ಆಫ್ ಲಿವಿಂಗ್ ನ ಸಂಸ್ಥಾಪಕ ಶ್ರೀ ರವಿ ಶಂಕರ ಗುರುಜೀ
ಗೋಕಾಕ : ಎಲ್ಲ ಸಮಸ್ಯೆಗಳಿಗೆ ಆಧ್ಯಾತ್ಮಿಕದಲ್ಲಿ ಪರಿಹಾರ ವಿದ್ದು, ಆಧ್ಯಾತ್ಮಿಕ ಮನೋಭಾವವನ್ನು ಬೆಳಿಸಿಕೊಳ್ಳುವಂತೆ ಆರ್ಟ ಆಫ್ ಲಿವಿಂಗ್ ನ ಸಂಸ್ಥಾಪಕ ಶ್ರೀ ರವಿ ಶಂಕರ ಗುರುಜೀ ಹೇಳಿದರು ಮಂಗಳವಾರದಂದು ನಗರದ ಶೂನ್ಯ ಸಂಪಾದನ ಮಠದ ಚನ್ನಬಸವೇಶ್ವರ ವಿದ್ಯಾಪೀಠದ ಆವರಣದಲ್ಲಿ 16 ನೇ ಶರಣ ಸಂಸ್ಕೃತಿ ಉತ್ಸವದ ಕಾಯಕಶ್ರೀ ಪ್ರಶಸ್ತಿ ಸಮಾರಂಭದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂದೇಶವನ್ನು ನೀಡುತ್ತಾ ಅವರು ಮಾತನಾಡುತ್ತಾ ಇಂದಿನ ಒತ್ತಡದ ಜೀವನದಲ್ಲಿ ಆಧ್ಯಾತ್ಮಿಕ ಹಾಗೂ ಯೋಗದ ಮೂಲಕ …
Read More »ನವೀಕರಣಗೊಂಡ ಅಂಬೇಡ್ಕರ್ ಮೂರ್ತಿ ಪರಿಶೀಲಿಸಿದ ಶಾಸಕ ಸತೀಶ ಜಾರಕಿಹೊಳಿ
ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ ಜಾರಕಿಹೊಳಿ ಅವರು ಮಂಗಳವಾರ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಸಾರ್ವಜನಿಕ ಸಭೆ ನಡೆಸಿ, ಕುಂದುಕೊರತೆ ಆಲಿಸಿದರು. ಸಭೆಯ ನಂತರ ಪಾಲಿಕೆಯ ಆವರಣದಲ್ಲಿರುವ ನವೀಕರಿಸಲಾಗಿರುವ ಡಾ.ಬಿ.ಆರ್. ಅಂಬೇಡ್ಕರ್ ಅವರ ಮೂರ್ತಿಯನ್ನು ಪರಿಶೀಲಿಸಿದರು. ಮೂರ್ತಿಯ ಸುತ್ತ ಉದ್ಯಾನ ಹಾಗೂ ದೀಪಾಲಂಕಾರ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷ ಅರುಣ ಕಟಾಂಬಳೆ, ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಎಸ್ಟಿ ಘಟಕದ ಅಧ್ಯಕ್ಷ ಬಾಳೇಶ ದಾಸನಟ್ಟಿ, ಪಾಲಿಕೆಯ …
Read More »15 ದಿನದಲ್ಲಿ ಹುಲಿ, ಚಿರತೆ ಸಾಫಾರಿಗೂ ಅವಕಾಶ: ಶಾಸಕ ಸತೀಶ ಜಾರಕಿಹೊಳಿ
ಬೆಳಗಾವಿ: ಮೂರು ರಾಜ್ಯಗಳ ಸಂಪರ್ಕ ಕೊಂಡಿಯಾಗಿರುವ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಬೆಳಗಾವಿಯ ರಾಣಿ ಚನ್ನಮ್ಮ ಮೃಗಾಲಯದಿಂದ ಪ್ರವಾಸೋದ್ಯಮ ಇಲಾಖೆ ಮಹತ್ವ ಬರಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಭೂತರಾಮನಹಟ್ಟಿ ರಾಣಿ ಚನ್ನಮ್ಮ ಮೃಗಾಲಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಮೈಸೂರು ಮಾದರಿಯಲ್ಲಿ ಬೆಳಗಾವಿಯ ಮೃಗಾಲಯಕ್ಕೆ ಒತ್ತು ನೀಡಲಾಗುವುದು. ಇದರಿಂದ ಕರ್ನಾಟಕ, ಮಹಾರಾಷ್ಟ್ರ, ಗೋವಾ ಮೂರು ರಾಜ್ಯಗಳ ಸಂಪರ್ಕಕೊಂಡಿಯಾಗಲಿದೆ. ಅದರಲ್ಲಿಯೂ ಉತ್ತರ ಕರ್ನಾಟಕ ಜನತೆ ಮೈಸೂರಿಗೆ ಪ್ರಾಣಿ …
Read More »ಬಡ ವಿದ್ಯಾರ್ಥಿಗೆ ಲ್ಯಾಪ್ ಟಾಪ್ ಕೊಡಿಸಿದ ರಾಹುಲ್, ಪ್ರಿಯಾಂಕಾ ಜಾರಕಿಹೊಳಿ
ಗೋಕಾಕ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಪುತ್ರರು ಹಾಗೂ ಯುವ ಮುಖಂಡರಾದ ಪ್ರಿಯಾಂಕಾ ಹಾಗೂ ರಾಹುಲ್ ಜಾರಕಿಹೊಳಿ ಅವರು ಬಡ, ಪ್ರತಿಭಾವಂತ ವಿದ್ಯಾರ್ಥಿಯ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಡುವ ಮೂಲಕ ಸಾಮಾಜಿಕ ಕಳಕಳಿ ಮೆರೆದಿದ್ದಾರೆ. ಸ್ಥಳೀಯ ವಿದ್ಯಾರ್ಥಿ ಸುರೇಶ ಪೂಜೇರಿ ಪಿಯುಸಿಯಲ್ಲಿ ಉತ್ತಮ ಅಂಕಗಳನ್ನು ಪಡೆದು ಇಂಜಿನಿಯರಿಂಗ್ ವಿದ್ಯಾಭ್ಯಾಸ ಕೈಗೊಂಡಿದ್ದಾನೆ. ಆತನಿಗೆ ವಿದ್ಯಾಭ್ಯಾಸಕ್ಕೆ ಲ್ಯಾಪ್ ಟಾಪ್ ನ ಅಗತ್ಯವಿತ್ತು. ಈ ವಿಷಯ ಅರಿತ ಪ್ರಿಯಾಂಕಾ ಹಾಗೂ ರಾಹುಲ್ ಅವರು ಸೋಮವಾರ …
Read More »
CKNEWSKANNADA / BRASTACHARDARSHAN CK NEWS KANNADA