Breaking News

Daily Archives: ಏಪ್ರಿಲ್ 26, 2021

ಜನರ ಜೀವ ಅಮೂಲ್ಯವಾದದ್ದು ಅದನ್ನು ರಕ್ಷಿಸಿಕೊಳ್ಳುವತ್ತ ಗಮನಹರಿಸಿ : ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಜನರ ಜೀವ ಅಮೂಲ್ಯವಾದದ್ದು. ಅದನ್ನು ರಕ್ಷಿಸಿಕೊಳ್ಳುವತ್ತ ಸಾರ್ವಜನಿಕರು ಗಮನಹರಿಸಬೇಕು. ರೋಗದ ಲಕ್ಷಣಗಳು ಕಂಡುಬಂದಲ್ಲಿ ವಿಳಂಬಕ್ಕೆ ಅವಕಾಶವಿಲ್ಲದಂತೆ ಕೋವಿಡ್ ಪರೀಕ್ಷೆಗೆ ಒಳಪಟ್ಟು ಸೂಕ್ತ ಚಿಕಿತ್ಸೆ ಪಡೆಯಬೇಕು ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ನಗರದ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಗೋಕಾಕ ಮತ್ತು ಮೂಡಲಗಿ ತಾಲೂಕಾ ಟಾಸ್ಕಪೋರ್ಸ್ ಕಮೀಟಿ 3ನೇ ಸಭೆಯನ್ನು ಉದ್ಧೇಶಿಸಿ ಮಾತನಾಡಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಗೋಕಾಕ ಹಾಗೂ …

Read More »

“ಕೋವಿಡ್ ಕರ್ಫ್ಯೂ” ವಿಟಿಯು ಪರೀಕ್ಷೆಗಳು ಮುಂದೂಡಿಕೆ .

ಕೆಲವು ಗಂಟೆಗಳ ಹಿಂದೆಯೆ ಹಲವು ಮಾಧ್ಯಮಗಳು ವಿಟಿಯು ವಿದ್ಯಾರ್ಥಿಗಳ ಬೆನ್ನಿಗೆ ನಿಂತು ಪರೀಕ್ಷೆ ಗಳ ಕುರಿತು ಸುದ್ದಿ ಮಾಡಿದ್ದೇವು. ಅದರಂತೆ ಎಲ್ಲ ವಿಟಿಯು ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಅವರು ತಿಳಿಸಿದ್ದಾರೆ. “‘ಕೋವಿಡ್ ಕರ್ಫ್ಯೂ’ ಜಾರಿ ಹಿನ್ನೆಲೆಯಲ್ಲಿ ಎಂಜಿನಿಯರಿಂಗ್, ಪಾಲಿಟೆಕ್ನಿಕ್‌ನ ಎಲ್ಲಾ ಪರೀಕ್ಷೆಗಳನ್ನು ಹಾಗೂ ಡಿಪ್ಲೋಮಾ ಪ್ರಾಕ್ಟಿಕಲ್ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಪರಿಷ್ಕೃತ ಪರೀಕ್ಷಾ ವೇಳಾಪಟ್ಟಿಯನ್ನು ಕೊರೋನಾ ಕರ್ಫ್ಯೂ ಮುಗಿದ ನಂತರ ತಿಳಿಸಲಾಗುವುದು. ವಿದ್ಯಾರ್ಥಿ ಮಿತ್ರರು …

Read More »

ಕೋವಿಡ್ ನಿಗ್ರಹಕ್ಕಾಗಿ ಮಗದುಮ್ ಆಸ್ಪತ್ರೆ ಟೊಂಕ ಕಟ್ಟಿ ನಿಂತಿದೆ: ಸತೀಶ್ ಜಾರಕಿಹೊಳಿ

ಚಿಕ್ಕೋಡಿ: ಸಮೀಪದ ಅಂಕಲಿ ಪಟ್ಟಣದ ಡಾ.ಎನ್.ಎ. ಮಗದುಮ್ ಆಯುರ್ವೇದಿಕ ಮೆಡಿಕಲ್ ಆಸ್ಪತ್ರೆ ಮತ್ತು ಸಂಶೋದನಾ ಕೇಂದ್ರದಲ್ಲಿ 120 ಬೆಡ್ ಗಳನ್ನು ಕೋವಿಡ್ ರೋಗಿಗಳಿಗಾಗಿ ಮೀಸಲಿಡಲಾಗಿದ್ದು, ಈ ಯೋಜನೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹಾಗೂ ಮಾಜಿ ಸಂಸದ ಪ್ರಕಾಶ ಹುಕ್ಕೇರಿ ಅವರು ಇಂದು ಚಾಲನೆ ನೀಡಿದರು. “ಆಸ್ಪತ್ರೆಯೊಂದಿಗೆ ಸತೀಶ ಜಾರಕಿಹೊಳಿ ಅವರ ಸತೀಶ ಜಾರಕಿಹೊಳಿ ಫೌಂಡೇಶನ್ ಹಾಗೂ ಪ್ರಕಾಶ ಹುಕ್ಕೇರಿ ಮತ್ತು ಶಾಸಕ ಗಣೇಶ ಹುಕ್ಕೇರಿ ಅವರ ಅನ್ನಪೂರ್ಣೇಶ್ವರಿ ಫೌಂಡೇಶನ್ …

Read More »

ವಿದ್ಯಾರ್ಥಿಗಳ ಜೀವದ ಜೊತೆಗೆ ಚೆಲ್ಲಾಟವಾಡುತ್ತಿರುವ ವಿಟಿಯು ಆಡಳಿತ!

ರಾಜ್ಯಾದ್ಯಂತ ವಿವಿಧ ಪರೀಕ್ಷೆಗಳು ಮುಂದುಡಿಕೆ ಮಾಡಿದ್ದಾರೆ, ಆದರೆ VTU ಆಡಳಿತ ಮಂಡಳಿ ಮಾತ್ರ ಪರೀಕ್ಷೆ ಮುಂದೂಡಿಲ್ಲ, ಪರೀಕ್ಷೆ ಮಾಡಲೇಬೇಕೆಂಬ ಹಠಮಾರಿ ಧೋರಣೆ ತೋರುತ್ತಿದೆ.ಎಲ್ಲರಿಗೂ ಒಂದು ರೂಲ್ಸ್ ಆದರೆ VTU ಗೆ ಇನ್ನೊಂದು ರೂಲ್ಸ್ ಅಂತ ಪ್ರತಿಭಾವಂತ ನಾಗರಿಕರ ಮಾತಾಗಿದೆ. ಮಹಾಮಾರಿ ಕೊರೋನಾ ಹೊಡೆತಕ್ಕೆ ರಾಜ್ಯವೇ ಬೆಚ್ಚಿಬೀಳ್ತಿದೆ. ಇತ್ತ ಕೊರೋನಾ ಕರಿನೆರಳು ಶಿಕ್ಷಣ ಕ್ಷೇತ್ರವನ್ನು ಬಿಟ್ಟಿಲ್ಲ. ಒಂದೆಡೆ ಪೋಷಕರಿಗೆ ಮಕ್ಕಳ ಚಿಂತೆಯಾದ್ರೆ, ಮತ್ತೊಂದೆಡೆ ವಿದ್ಯಾರ್ಥಿಗಳಿಗೆ ಪರೀಕ್ಷೆ ಚಿಂತೆ. ಈ ನಡುವೆ ಇದನ್ನು …

Read More »

ಕೊರೊನಾ ಲಾಕ್‍ಡೌನ್ ಹಿನ್ನೆಲೆ: ನಾಳೆಯಿಂದ ನಡಿಬೇಕಿದ್ದ RCU ಎಲ್ಲಾ ಪರೀಕ್ಷೆಗಳು ಮುಂದೂಡಿಕೆ

ಬೆಳಗಾವಿ: ರಾಜ್ಯದಲ್ಲಿ ಕೋವಿಡ್ 2ನೇ ಅಲೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯದ ವಿದ್ಯಾರ್ಥಿಗಳಿಗೆ ನಾಳೆಯಿಂದ ನಡೆಯಬೇಕಿದ್ದ ಪದವಿ, ಸ್ನಾತಕ, ಸ್ನಾತಕೋತ್ತರ ಹಾಗೂ ಎಂಬಿಎ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಏ.27ರಿಂದ ಪರೀಕ್ಷೆಗಳು ನಿಗದಿಯಾಗಿದ್ದವು. ಆದರೆ ದಿನದಿಂದ ದಿನಕ್ಕೆ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಅಲ್ಲದೇ ಮತ್ತೆ ನಾಳೆಯಿಂದ 14 ದಿನ ಲಾಕ್‍ಡೌನ್ ಹೇರಿ ರಾಜ್ಯ ಸರ್ಕಾರ ಆದೇಶ ಹೊರಡಿಸಿರುವುದರಿಂದ ಸರ್ಕಾರದ ಆದೇಶದ ಮೇರೆಗೆ ವಿಶ್ವವಿದ್ಯಾಲಯದ ಎಲ್ಲಾ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು …

Read More »

ನಾಳೆ ರಾತ್ರಿಯಿಂದ ಕರ್ನಾಟಕ 14 ದಿನ ಲಾಕ್- ಮುಖ್ಯಮಂತ್ರಿ ಯಡಿಯೂರಪ್ಪ ಘೋಷಣೆ

ಬೆಂಗಳೂರು : ನಾಳೆ ರಾತ್ರಿಯಿಂದ 14 ದಿನಗಳವರೆಗೆ ರಾಜ್ಯಾಧ್ಯಂತ ಬಿಗಿ ಕ್ರಮ ಕೈಗೊಳ್ಳಲಾಗುತ್ತಿದೆ. 14 ದಿನಗಳವರೆಗೆ ಕರ್ನಾಟಕದಲ್ಲಿ ಸಂಪೂರ್ಣ ಲಾಕ್ ಡೌನ್ ಮಾಡಲಾಗುತ್ತಿದೆ. ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ಮಾತ್ರವೇ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲಾಗುತ್ತದೆ ಎಂಬುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಸಿದ್ದಾರೆ. ಇಂದಿನ ಕೊರೋನಾ ನಿಯಂತ್ರಣ ಸಂಬಂಧ ನಡೆದಂತ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದಂತ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು, ಮಂತ್ರಿ …

Read More »