Breaking News

Daily Archives: ಆಗಷ್ಟ್ 8, 2022

ಶತಾಯಷಿ ಭೀಮವ್ವ ರಂಗಪ್ಪ ಬಿ.ಪಾಟೀಲ್ ನಿಧನ; ಬಾಲಚಂದ್ರ ಜಾರಕಿಹೊಳಿ ಸಂತಾಪ!

ಮೂಡಲಗಿ :* ತಾಲ್ಲೂಕಿನ ತಿಗಡಿ ಗ್ರಾಮದ ಉಪ್ಪಾರ ಸಮಾಜದ ಹಿರಿಯ ಜೀವ, ಶತಾಯುಷಿ ಭೀಮವ್ವ‌ ರಂಗಪ್ಪ. ಬಿ.ಪಾಟೀಲ್ (೧೦೧) ಅವರು ಸೋಮವಾರದಂದು ನಿಧನರಾದರು. ಮೃತರಿಗೆ ಗುತ್ತಿಗೆದಾರ ವಾಯ್. ಆರ್. ಬಿ.ಪಾಟೀಲ್ ಸೇರಿ ಐದು ಜನ ಮಕ್ಕಳು, ಮೂವರು ಪುತ್ರಿಯರು, ೭೬ ಜನ ಮೊಮ್ಮಕ್ಕಳು, ಮರಿ ಮಕ್ಕಳು, ಗಿರಿ ಮಕ್ಕಳು ಸೇರಿದಂತೆ ಅಪಾರ ಬಂಧು- ಬಳಗವಿದೆ. ಮೃತರ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಸೇರಿದಂತೆ ಅನೇಕ ಗಣ್ಯರು …

Read More »

ಅತಿವೃಷ್ಟಿ ಹಾನಿ ಪರಿಶೀಲನೆ- 24 ಗಂಟೆಗಳಲ್ಲಿ ಪರಿಹಾರ ವಿತರಣೆಗೆ ಕ್ರಮ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ

ಬೆಳಗಾವಿ: ಕಳೆದ ಮೂರು ದಿನಗಳಿಂದ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಮಳೆಯ ನಡುವೆಯೂ ನಗರದ ವಿವಿಧ ಪ್ರದೇಶಗಳಲ್ಲಿ ಮಿಂಚಿನ ಸಂಚಾರ ಕೈಗೊಂಡು ಹಾನಿಯನ್ನು ಪರಿಶೀಲಿಸಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು, ನೀರು ನುಗ್ಗಿದ ಮನೆಗಳಿಗೆ 24 ಗಂಟೆಗಳಲ್ಲಿ ತಲಾ ಹತ್ತು ಸಾವಿರ ರೂಪಾಯಿ ಪರಿಹಾರವನ್ನು ನೀಡಲಾಗುವುದು ಎಂದು ತಿಳಿಸಿದರು. ಯಳ್ಳೂರ ರಸ್ತೆಯ ಕೇಶವ ನಗರ, ಭಾರತ ನಗರ, ಅನಗೋಳದ ರಘುನಾಥ ಪೇಟ ಮತ್ತಿತರ ಕಡೆಗಳಲ್ಲಿ ಸಂಚರಿಸಿದ ಅವರು, ಯಾವುದೇ ಕಾರಕ್ಕೂ …

Read More »

*ಗೋಕಾಕ ಆರ್ ಟಿಓ ಕಛೇರಿ ಹತ್ತಿರ ಭೀಕರ ಅಪಘಾತ, ವೃದ್ಧ ಮಹಿಳೆ ಸ್ಥಳದಲ್ಲೇ ಸಾವು*

ಗೋಕಾಕ: ಆರ್ ಟಿಓ ಕಚೇರಿ ಎದುರಿನ ರಸ್ತೆಯ ಬಳಿ ಅಪಘಾತ ಸಂಭವಿಸಿದ್ದು 65 ವರ್ಷದ ವೃದ್ಧ ಮಹಿಳೆ ಮೃತಪಟ್ಟ ಘಟನೆ ನಡೆದಿದೆ .ಮೃತಪಟ್ಟ ಮಹಿಳೆಯ ಬಗ್ಗೆ ಮಾಹಿತಿ ಸಿಕ್ಕಿಲ್ಲ . ವೃದ್ಧ ಮಹಿಳೆಯ ಬಗ್ಗೆ ಮಾಹಿತಿ ಸಿಕ್ಕರೆ ಗೋಕಾಕ ಶಹರ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಗೋಕಾಕ ಪೊಲೀಸರು ಕೋರಿದ್ದಾರೆ .

Read More »