Breaking News

ಸರ್ಕಾರದ ಅಧಿಕಾರಿಶಾಹಿ ಧೋರಣೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಸ್ಪೀಕರ್ ಕಾಗೇರಿ.


ಬೆಂಗಳೂರು: ವಿಧಾನಸಭಾ ಸ್ಪೀಕರ್ ಆಗಿ 2 ವರ್ಷಗಳಲ್ಲಿ ಅನೇಕ ಕಠಿಣ ನಿಲುವುಗಳನ್ನು ತೆಗೆದುಕೊಂಡಿದ್ದೇನೆ. ಸಭಾಧ್ಯಕ್ಷನಾಗಿ ನಿಸ್ಪಕ್ಷಪಾತ ಧೋರಣೆ ಅನುಸರಿಸಿದ್ದೇನೆ. ಸದಸ್ಯರನ್ನು ಜವಾಬ್ದಾರಿಯಿಂದ ನಿಭಾಯಿಸಿದ್ದೇನೆ. ಕನಿಷ್ಠ 60 ದಿನ ಅಧಿವೇಶನ ನಡೆಸಲು ಸೂಚಿಸಿದ್ದೇನೆ. ಆದರೆ ಒಂದು ಕೆಲಸ ಸಾಧ್ಯವಾಗಿಲ್ಲ ಎಂಬ ಬೇಸರವಿದೆ ಎಂದು ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸ್ಪೀಕರ್ ಕಾಗೇರಿ, ವಿಧಾನಸಭೆಯಲ್ಲಿ ಇ-ವಿಧಾನ್ ಜಾರಿ ಸಾಧ್ಯವಾಗಿಲ್ಲ. ಇದಕ್ಕೆ ರಾಜ್ಯ ಸರ್ಕಾರದ ಧೋರಣೆ ಹಾಗೂ ನಿಲುವುಗಳೇ ಕಾರಣ. ಅನುದಾನದ ನೆರವಿಗೆ ಸರ್ಕಾರವನ್ನೇ ಅವಲಂಬಿಸಿದ್ದೇವೆ. ಸರ್ಕಾರ ಸ್ಪಂದಿಸಿಲ್ಲ. ಅಧಿಕಾರಶಾಹಿ ಧೋರಣೆ ಅನುಸರಿಸಿದೆ ಎಂದು ಕಿಡಿಕಾರಿದ್ದಾರೆ.

ರಾಜ್ಯದಲ್ಲಿ ಇ-ವಿಧಾನ್ ಜಾರಿಗೆ ಹಿಂದಿನ ಎಲ್ಲಾ ಸ್ಪೀಕರ್ ಗಳೂ ಈ ಪ್ರಯತ್ನ ಮಾಡಿದ್ದರು.

ಆದರೂ ಸರ್ಕಾರದ ಅಧಿಕಾರಶಾಹಿಯಿಂದಾಗಿ ಸಾಧ್ಯವಾಗಿಲ್ಲ. ಐಟಿ ಕ್ಯಾಪಿಟಲ್ ಖ್ಯಾತಿಯ ರಾಜ್ಯದಲ್ಲಿ ಇ-ವಿಧಾನ್ ಇಲ್ಲ ಎಂಬುದು ಬೇಸರದ ಸಂಗತಿ. ಸಣ್ಣಪುಟ್ಟ ರಾಜ್ಯಗಳಾದ ಕೇರಳ, ಹಿಮಾಚಲಪ್ರದೇಶಗಳಲ್ಲಿ ಇ-ವಿಧಾನ್ ಜಾರಿಯಲ್ಲಿದೆ. ಆದರೆ ನಮ್ಮ ರಾಜ್ಯದಲ್ಲಿ ಇಲ್ಲ. ಇ-ವಿಧಾನ್ ಜಾರಿಗೆ ನಾನು ಯತ್ನಿಸಿದರೂ ಸಾಧ್ಯವಾಗಿಲ್ಲ ಎಂಬುದು ನೋವಿನ ಸಂಗತಿ. ಸರ್ಕಾರದ ಅಧಿಕಾರಶಾಹಿ ಧೋರಣೆ ಬದಲಾಗಬೇಕು ಎಂದು ಹೇಳಿದರು.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

*ಅಜೀತ ಮನ್ನಿಕೇರಿ ಅವರ ಅವಿರತ ಪ್ರಯತ್ನದಿಂದ ಮೂಡಲಗಿ ಶೈಕ್ಷಣಿಕ ವಲಯವು ರಾಜ್ಯ- ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸುವಂತಾಗಿದೆ- ಶಾಸಕ ಬಾಲಚಂದ್ರ ಜಾರಕಿಹೊಳಿ*

*ತಿಗಡಿ ಗ್ರಾಮದಲ್ಲಿ ಶಿಕ್ಷಕರ ದಿನಾಚರಣೆ ನಿಮಿತ್ತ ಅದ್ದೂರಿಯಾಗಿ ನಡೆದ ತಾಲ್ಲೂಕು ಮಟ್ಟದ ಗುರು ಸ್ಮರಣೆ ಕಾರ್ಯಕ್ರಮ* *ಡಿಡಿಪಿಐ ಆಗಿ ಪದೋನ್ನತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ