Breaking News

ಸಂಕಷ್ಟದಲ್ಲಿರುವ ನೇಕಾರ ಕುಟುಂಬಕ್ಕೆ ನೆರೆವಾದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ


 

ಯಮಕನಮರಡಿ: ಗ್ರಾಮದಲ್ಲಿ ಆತ್ಮಹತ್ಯೆ ಮಾಡಿಕೊಂಡ ನೇಕಾರ ಶಿವಾನಂದ ಸಿದ್ದಪ್ಪ ಜಮನಾಳಿ ಕುಟುಂಬಕ್ಕೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಶಾಸಕ‌, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು 2 ಲಕ್ಷ ರೂ. ಪರಿಹಾರ ಧನವನ್ನು ಶುಕ್ರವಾರ ವಿತರಿಸಿದರು.

ಈ ಹಿಂದೆ ಗ್ರಾಮದ ಸ್ಥಳೀಯ ನೇಕಾರ ಶಿವಾನಂದ ಸಿದ್ದಪ್ಪ ಜಮನಾಳಿ ಲಾಕ್ ಡೌನ್‌ ವೇಳೆ ಕುಟುಂಬ ನಿರ್ವಹಣೆಗೆ ಹಣಹಾಸಿನ ತೊಂದರೆ ಅನುಭವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದನ್ನರಿತ ಶಾಸಕ ಸತೀಶ್ ಜಾರಕಿಹೊಳಿ ಅವರು ಹೆಚ್ಚಿನ ಮುತುವರ್ಜಿ ವಹಿಸಿ ಆತ್ಮಹತ್ಯೆ ಮಾಡಿಕೊಂಡ ಶಿವಾನಂದ ಕುಟುಂಬಕ್ಕೆ ಪರಿಹಾರ ನೀಡುವಂತೆ ಕೈಮಗ್ಗ ಮತ್ತು ಜವಳಿ ಇಲಾಖೆಗೆ ಒತ್ತಾಯಸಿದರು.

ಇಂದು ಶಾಸಕ ಸತೀಶ ಜಾರಕಿಹೊಳಿ ಒತ್ತಾಯದ ಮೇರೆಗೆ ಆತ್ಮಹತ್ಯೆ ಮಾಡಿಕೊಂಡ ನೇಕಾರ ಕುಟುಂಬಕ್ಕೆ ಪರಿಹಾರ ನೀಡುವ ಕಾರ್ಯ ನಡೆದಿದೆ. ನೇಕಾರ ಶಿವಾನಂದ ತಾಯಿ ತಾರಮತಿ ಸಿದ್ಧಪ್ಪ ಜಮನಾಳಿ ಅವರಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಶಾಸಕ ಸತೀಶ್ ಜಾರಕಿಹೊಳಿ ಅವರು 2 ಲಕ್ಷ ರೂ. ಪರಿಹಾರ ಧನ ವಿತರಿಸಿದರು.

ಈ ವೇಳೆ ಕೈಮಗ್ಗ ಮತ್ತು ಜವಳಿ ಇಲಾಖೆ ನಿರ್ದೇಶಕ ವಿ.ಡಿ. ದೊಡಮನಿ, ಅಧಿಕಾರಿ ಸತೀಶ್‌ ಕಾಪಶಿ, ಕಿರಣ ರಜಪೂತ, ಪಪ್ಪುಗೌಡ ಪಾಟೀಲ ಸೇರಿದಂತೆ ಇತರರು ಇದ್ದರು.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ಅರಭಾವಿ ಕ್ಷೇತ್ರದಲ್ಲಿ ಶಿಕ್ಷಣಕ್ಕೆ ಪ್ರಥಮ ಪ್ರಾಶಸ್ತ್ಯ: ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ- ಅರಭಾವಿ ಕ್ಷೇತ್ರದಲ್ಲಿ ಶಿಕ್ಷಣಕ್ಕೆ ಪ್ರಥಮ ಪ್ರಾಶಸ್ತ್ಯ ನೀಡಿದ್ದು, ಅದರಲ್ಲೂ ಬಡ ವಿದ್ಯಾರ್ಥಿಗಳಿಗೆ ಅನುಕೂಲವಾಗಲು ವಸತಿ ಶಾಲೆಗಳನ್ನು ಆರಂಭಿಸಿದ್ದು, ಇದರಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ