Breaking News

*ಗೋಕಾಕ ವಾರ್ಡ್ ವೈಸ್ ಕ್ರಿಕೆಟ್ ಪಂದ್ಯಾವಳಿ; ವಿಜೇತ ತಂಡಕ್ಕೆ ಬಹುಮಾನ ವಿತರಿಸಿದ ಕೆಎಂಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ*


ಗೋಕಾಕ: ಕಳೆದ ಒಂದು ವಾರದಿಂದ ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ವಾರ್ಡ್ ವೈಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ವಿಜೇತರಾದ ತಂಡಗಳಿಗೆ ಕೆಎಂಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಅವರು ಬಹುಮಾನ ವಿತರಿಸಿದರು.

ಪ್ರಥಮ ಸ್ಥಾನವನ್ನು 25 ವಾರ್ಡಿನ ತಂಡ ವಿಜೇತರಾಗಿ 50 ಸಾವಿರ ನಗದು ಹಾಗೂ ಆಕರ್ಷಕ ಟ್ರೋಫಿ ಪಡೆದಿದ್ದಾರೆ.ಅದೇ ರೀತಿಯಲ್ಲಿ ದ್ವಿತೀಯ ಸ್ಥಾನವನ್ನ 06 ವಾರ್ಡಿನ ತಂಡ ವಿಜೇತರಾಗಿ 30 ಸಾವಿರ ನಗದು ಬಹುಮಾನ ಜೊತೆಗೆ ಆಕರ್ಷಕ ಟ್ರೋಫಿ ಪಡೆದಿದ್ದಾರೆ.

ಪಂದ್ಯಾವಳಿ ವಿಕ್ಷೀಸಿ ಮಾತನಾಡಿದ ಅಮರನಾಥ ಜಾರಕಿಹೊಳಿ ಅವರು ಕ್ರಿಕೆಟ್‌ನಲ್ಲಿ ಎಲ್ಲಾ ಯುವಕರನ್ನು ಒಗ್ಗೂಡಿಸಿಕೊಂಡಿರುವುದು ಒಳ್ಳೆಯ ವಿಚಾರ, ಕ್ರಿಕೆಟ್‌ ಆಟ ದೈಹಿಕವಾಗಿ ಸದೃಢವಾಗಲು ಸಹಾಯವಾಗುತ್ತದೆ.ಸ್ನೇಹತ್ವಕ್ಕಾಗಿ ಕ್ರಿಕೆಟ್‌ ಟೂರ್ನಿ ನಡೆಸುತ್ತಿರುವುದು ನಿಜಕ್ಕೂ ಖುಷಿಯ ವಿಚಾರ, ಹೀಗೆ ಯುವ ಜನತೆ ದುಶ್ಚಟಗಳಿಂದ ದೂರವಿದ್ದು ಕ್ರೀಡೆಗಳಿಗೆ ಹೆಚ್ಚಿನ ಒತ್ತು ನೀಡಿ, ನಾವು ಸದಾ ಕ್ರೀಡೆಗಳಿಗೆ ಪ್ರೋತ್ಸಾಹ ನೀಡುತ್ತೇವೆ ಎಂದರು.

ಈ ಸಂದರ್ಭದಲ್ಲಿ ಉದ್ಯಮಿ ಕಿಶೋರ್ ಭಟ್, ಜಾವಿದ ಗೋಕಾಕ, ನಗರ ಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳ, ಉಪಾಧ್ಯಕ್ಷ ಬಸವರಾಜ ಅರೆನ್ನವರ, ಮುಖಂಡರಾದ ದುರ್ಗಪ್ಪಾ ಶಾಸ್ತ್ರೀಗೊಲ್ಲ, ಬಸವರಾಜ ದೇಸನೂರ, ಸಂತೋಷ ಮಂತ್ರನ್ನವರ, ಸಂತೋಷ ಭಟ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

*ಅಜೀತ ಮನ್ನಿಕೇರಿ ಅವರ ಅವಿರತ ಪ್ರಯತ್ನದಿಂದ ಮೂಡಲಗಿ ಶೈಕ್ಷಣಿಕ ವಲಯವು ರಾಜ್ಯ- ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸುವಂತಾಗಿದೆ- ಶಾಸಕ ಬಾಲಚಂದ್ರ ಜಾರಕಿಹೊಳಿ*

*ತಿಗಡಿ ಗ್ರಾಮದಲ್ಲಿ ಶಿಕ್ಷಕರ ದಿನಾಚರಣೆ ನಿಮಿತ್ತ ಅದ್ದೂರಿಯಾಗಿ ನಡೆದ ತಾಲ್ಲೂಕು ಮಟ್ಟದ ಗುರು ಸ್ಮರಣೆ ಕಾರ್ಯಕ್ರಮ* *ಡಿಡಿಪಿಐ ಆಗಿ ಪದೋನ್ನತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ