Breaking News

ಸತೀಶ ಜಾರಕಿಹೊಳಿ ಹೆಗಲಿಗೆ ʻಜಿಲ್ಲಾ ಉಸ್ತುವಾರಿʼಹೊಣೆ ?


ಬೆಳಗಾವಿ : 18 ಸ್ಥಾನಗಳಲ್ಲಿ 11 ಸ್ಥಾನಗಳನ್ನು ಕಾಂಗ್ರೆಸ್ ಪಡೆದುಕೊಂಡಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಮಹಾಂತೇಶ ಕೌಜಲಗಿ, ಮೂರು ಬಾರಿ ಗೆದ್ದಿರುವ ಗಣೇಶ ಹುಕ್ಕೇರಿ ಅಥವಾ ಅವರ ತಂದೆ ವಿಧಾನ ಪರಿಷತ್‌ ಸದಸ್ಯ ಪ್ರಕಾಶ ಹುಕ್ಕೇರಿ, ಮಾಜಿ ಸಚಿವ ಲಕ್ಷ್ಮಣ ಸವದಿ, ಮಹಿಳಾ ಕೋಟಾದಲ್ಲಿ ಲಕ್ಷ್ಮೀ ಹೆಬ್ಬಾಳಕರ್, ಕೂಡ ಆಕಾಂಕ್ಷಿಗಳ ಪಟ್ಟಿಯಲ್ಲಿದ್ದಾರೆ.

ಶನಿವಾರ ಸಂಜೆ ಕುವೆಂಪು ನಗರದ ಸತೀಶ ಜಾರಕಿಹೊಳಿ ಅವರ ನಿವಾಸದಲ್ಲಿ ಲಕ್ಷ್ಮಣ ಸವದಿ ಸೇರಿದಂತೆ ಗೆದ್ದ ಶಾಸಕರು ಸಭೆ ನಡೆಸಿದ್ದಾರೆ. ಇದೇ ಮೊದಲ ಬಾರಿಗೆ ಲಿಂಗಾಯತ ಸಮುದಾಯದ 7 ಜನ ಲಿಂಗಾಯತ ಶಾಸಕರು ಗೆದ್ದು ಬಂದಿದ್ದು, ಇದರಲ್ಲಿ 6 ಜನರು ಹೊಸಬರು ಇದ್ದಾರೆ. ಕಾಂಗ್ರೆಸ್‌ ಪಕ್ಷದ ಉನ್ನತ ಮೂಲಗಳ ಪ್ರಕಾರ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರಿಗೆ ಜಿಲ್ಲಾ ಉಸ್ತುವಾರಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್‌ ಅವರಿಗೆ ಸಚಿವ ಸಂಪುಟದಲ್ಲಿ ಉತ್ತಮ ಸ್ಥಾನಮಾನ ದೊರೆಯುವ ಸಾಧ್ಯತೆಗಳಿವೆ. ಬಿಜೆಪಿ ಸರ್ಕಾರದ ಅವಧಿಯ ಒಂದು ಕಾಲದಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ನಾಲ್ಕು ಜನ ಸಚಿವರಿದ್ದರು. ಶ್ರೀಮಂತ ಪಾಟೀಲ, ಲಕ್ಷ್ಮಣ ಸವದಿ, ರಮೇಶ ಜಾರಕಿಹೊಳಿ, ಶಶಿಕಲಾ ಜೊಲ್ಲೆ. ಆದರೆ ಈಗ ಕಾಂಗ್ರೆಸ್‌ ಸರ್ಕಾರದಲ್ಲಿ ಎಷ್ಟು ಜನರಿಗೆ ಸಚಿವ ಸ್ಥಾನಗಳು ದೊರೆಯಲಿವೆ ಎಂಬುದನ್ನು ಕಾದು ನೋಡಬೇಕಿದೆ


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ಜನರೇ ನನ್ನಾಸ್ತಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ :ಎಲ್ಲ ಜಾತಿ- ಜನಾಂಗಗಳ ಮಹಾನ್ ಪುರುಷರ ಜಯಂತಿ ಆಚರಣೆಗಳು ಒಂದೇ ವೇದಿಕೆಯಲ್ಲಿ ಅದೂ ಸರ್ವ ಸಮಾಜಗಳ ಬಂಧುಗಳ ಉಪಸ್ಥಿತಿಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ