Breaking News

ಶಾಂತಿ ಸಭೆ ; ಗೋಕಾಕದಲ್ಲಿ ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ : PSI ಕೆ ವಾಲಿಕಾರ


ಗೋಕಾಕ : ನಗರದ ಶಹರ ಪೋಲಿಸ್ ಠಾಣೆ ಆವರಣದಲ್ಲಿ ಪಿಎಸ್ಐ ಕೆ ವಾಲಿಕಾರ ಅವರು ಶಾಂತಿ ಸಭೆ ಹಮ್ಮಿಕೊಂಡಿದ್ದರು.

ಈ ಸಭೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆಗುವಂತಹ ಪ್ರಚೋದನಕಾರಿ ಅಥವಾ ವಿವಾದಾತ್ಮಕ ಪೋಸ್ಟ್‌ಗಳನ್ನು ಹಾಕುವುದು, ಲೈಕ್ ಮಾಡುವುದು ಮತ್ತು ಶೇರ್ ಮಾಡುವುದು ಕಂಡು ಬಂದಲ್ಲಿ ಅಂಥವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು‌ ಎಂದು ಪಿಎಸ್ಐ ಕೆ ವಾಲಿಕಾರ ತಿಳಿಸಿದ್ದಾರೆ.

ಜಾತಿ, ಮತ, ಧರ್ಮದ ಹೆಸರಿನಲ್ಲಿ ಯಾವುದೇ ಕಾರಣಕ್ಕೂ ಜಗಳ ನಡೆಯಬಾರದು ಮತ್ತು ಹಿಂಸಾಚಾರಕ್ಕೆ ಆಸ್ಪದ ಆಗಬಾರದು ಎಂಬ ಕಾರಣಕ್ಕೆ ಮುಂಜಾಗ್ರತಾ ಕ್ರಮ ವಹಿಸಲಾಗಿದೆ. ಸಂಶಯಾಸ್ಪದ ನಡವಳಿಕೆ ಕಂಡು ಬಂದಲ್ಲಿ, ಪರಿಶೀಲಿಸಿ ಕಠಿಣ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ. ತಪ್ಪಿಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಅವರು ತಿಳಿಹೇಳಿದ್ದಾರೆ.

ಈ ಸಂದರ್ಭದಲ್ಲಿ ನಗರದ ಹಿರಿಯ ಮುಖಂಡರು ಯುವಕರು ಉಪಸ್ಥಿತರಿದ್ದರು 


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ಜನರೇ ನನ್ನಾಸ್ತಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ :ಎಲ್ಲ ಜಾತಿ- ಜನಾಂಗಗಳ ಮಹಾನ್ ಪುರುಷರ ಜಯಂತಿ ಆಚರಣೆಗಳು ಒಂದೇ ವೇದಿಕೆಯಲ್ಲಿ ಅದೂ ಸರ್ವ ಸಮಾಜಗಳ ಬಂಧುಗಳ ಉಪಸ್ಥಿತಿಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ