Breaking News

ನೈತಿಕ ಶಿಕ್ಷಣ, ವ್ಯಕ್ತಿತ್ವ ರೂಪುಗೊಳ್ಳಲು ಶಿಕ್ಷಕರ ಮಾರ್ಗದರ್ಶನ ಬಹುಮುಖ್ಯ: ಸಂಸದೆ ಪ್ರಿಯಾಂಕಾ ಜಾರಕಿಹೊಳಿ


ಹುಕ್ಕೇರಿ: ಡಾ.‌ ಸರ್ವಪಲ್ಲಿ ರಾಧಾಕೃಷ್ಣನ್ ಅವರ 136 ನೇ ಜನ್ಮದಿನದ ಅಂಗವಾಗಿ ಹುಕ್ಕೇರಿ ನಗರದಲ್ಲಿ ಇಂದು ತಾಲೂಕಾ ಆಡಳಿತ ವತಿಯಿಂದ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ, ಕ್ರೀಡಾಕೂಟ ಹಾಗೂ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಉದ್ಘಾಟಿಸಿದರು.

ಶಿಕ್ಷಕರು ನಮಗೆ ನೀಡಿದ ಮಾರ್ಗದರ್ಶನ, ಶಿಕ್ಷಣ, ಕಲಿಸಿದ ನೈತಿಕ ಶಿಕ್ಷಣ, ಸಹಕಾರ, ವ್ಯಕ್ತಿತ್ವ ರೂಪುಗೊಳ್ಳಲು ನೀಡಿದ ಹಿತನುಡಿ ಎಲ್ಲವನ್ನು ಸ್ಮರಿಸಿ ಅವರಿಗೆ ಗೌರವ ಸಮರ್ಪಣೆ ನೀಡುವ ದಿನ‌ವಾದ ಇಂದು ಎಲ್ಲ ಶಿಕ್ಷಕರಿಗೆ ಶಿಕ್ಷಕರ ದಿನಾಚರಣೆಯ ಶುಭಾಶಯಗಳನ್ನು ತಿಳಿಸಿದರು.

ಕಾರ್ಯಕ್ರಮದ ದಿವ್ಯ ಸಾನ್ನಿದ್ಯವನ್ನು ಹುಕ್ಕೇರಿ ಹಿರೇಮಠದ ಪೂಜ್ಯ ಶ್ರೀ ಚಂದ್ರಶೇಖರ್ ಶಿವಾಚಾರ್ಯ ಮಹಾಸ್ವಾಮಿಗಳು ಹಾಗೂ ಪೂಜ್ಯ ಶ್ರೀ ಅಭಿನವ ಮಂಜುನಾಥ್ ಮಹಾರಾಜರು ವಹಿಸಿದ್ದರು.

ಈ ವೇಳೆ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ರಮೇಶ್ ಕತ್ತಿ, ಚಿಕ್ಕೋಡಿ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಎಂ.ಎಲ್. ಹಂಜಾಟಿ, ಹುಕ್ಕೇರಿ ತಹಶೀಲ್ದಾರರಾದ ಶ್ರೀಮತಿ ಮಂಜುಳಾ ನಾಯಿಕ, ಗಜಾನನ ಮನ್ನಿಕೇರಿ ಸೇರಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ಶ್ರೀ ಹನುಮಾನ ಮತ್ತು ಶ್ರೀ ಬಸವೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ಆರಂಭ ; ಎಪಿಎಂಸಿ ಸದಸ್ಯ ಬಸವರಾಜ ಸಾಯನ್ನವರ ಅವರಿಂದ ಭೂಮಿ ಪೂಜೆ

ಗೋಕಾಕ : ಮಾರ್ಕಂಡೇಯ ನಗರದ ಶ್ರೀ ಹನುಮಾನ ಮತ್ತು ಶ್ರೀ ಬಸವೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಸಭಾ ಭವನ ಕಟ್ಟಡದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ