ಹುಕ್ಕೇರಿ: ನಿರಂತರ ಜ್ಯೋತಿ ಯೋಜನೆಯಡಿ ನಿರಂತರ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ವಿವಿಧ ಗ್ರಾಮಸ್ಥರು ಹುಕ್ಕೇರಿ ಪಟ್ಟಣದ ಹುಕ್ಕೇರಿ ವಿದ್ಯುತ್ ಸಹಕಾರಿ ಸಂಘದ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ನಿರಂತರ ವಿದ್ಯುತ್ ಪೂರೈಕೆ ಮಾಡುವಂತೆ ನೂರಾರು ಜನರಿಂದ ಪ್ರತಿಭಟನಾ ರ್ಯಾಲಿ ನಡೆಸಲಾಯಿತು. ಪ್ರತಿಭಟನೆಗೆ ರೈತ ಹಾಗೂ ದಲಿತ ಸಂಘಗಳು ಬೆಂಬಲ ನೀಡಿದ್ದವು. ಸರಿಯಾಗಿ ವಿದ್ಯುತ್ ಪೂರೈಕೆ ಮಾಡದ ಕಾರಣ ಸಾರ್ವಜನಿಕರಿಗೆ ಸಮಸ್ಯೆ ಆಗುತ್ತಿದೆ. ತಕ್ಷಣ ನಿರಂತರ ವಿದ್ಯುತ್ ಪೂರೈಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.
ಸಮಸ್ಯೆ ಬಗೆಹರಿಸುವ ಭರವಸೆ ಬಳಿಕ ಪ್ರತಿಭಟನೆ ವಾಪಸ್ಸ ಪಡೆಯಲಾಯಿತು.
ಪ್ರತಿಭಟನೆಯಲ್ಲಿ ಮಾಜಿ ಸಂಸದ ರಮೇಶ ಕತ್ತಿ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಈ ಸಂಧರ್ಭದಲ್ಲಿ ನೂರಾರು ಜನ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.
CKNEWSKANNADA / BRASTACHARDARSHAN CK NEWS KANNADA