ಬೆಳಗಾವಿ: ಕಾಂಗ್ರೆಸ್ ನಿಂದ ಬಿಜೆಪಿ ಸೇರಿದ ಕೆಲವು ಶಾಸಕರು ಕಾಂಗ್ರೆಸ್ ಗೆ ಮರು ಸೇರ್ಪಡೆಯಾಗಲು ಆಸಕ್ತಿ ತೊರಿದ್ದಾರೆ ಎಂದು ಹೇಳಿಕೆ ನೀಡಿದ್ದೇನೆ. ವಿನಹಃ ಎಲ್ಲಾ ಶಾಸಕರು ಅಲ್ಲಾ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಸ್ಪಷ್ಟಿಕರಣ ನೀಡಿದ್ದಾರೆ. ಬಿಜೆಪಿ ಸೇರಿರುವ ಎಲ್ಲಾ ಕಾಂಗ್ರೆಸ್ ಶಾಸಕರು ಮತ್ತೆ ಕಾಂಗ್ರೆಸ್ ಗೆ ವಾಪಸ್ ಬರುತ್ತಾರೆ ಎಂದು ಕೆಲವು ಸುದ್ದಿ ವಾಹಿನಿ ಮತ್ತು ಪತ್ರಿಕೆಗಳಲ್ಲಿ ಸುದ್ದಿ ಪ್ರಕಟವಾಗಿದೆ. ಆದರೆ ಭಾನುವಾರ ದಾವಣಗೆರೆಯಲ್ಲಿ ಈ …
Read More »ವಾಲ್ಮೀಕಿ ಸಮುದಾಯದ ಮೀಸಲಾತಿ ಹೋರಾಟ ಬೆಂಗಳೂರಿಗಷ್ಟೇ ಸೀಮಿತವಲ್ಲ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಫ್ರೀಡಂ ಪಾರ್ಕ್ನಲ್ಲಿ ವಾಲ್ಮೀಕಿ ಪೀಠದ ಪ್ರಸನ್ನಾನಂದ ಪುರಿ ಸ್ವಾಮೀಜಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಸ್ಥಳಕ್ಕೆ ಭೇಟಿ, ಶ್ರೀಗಳ ಜತೆ ಚರ್ಚೆ ಬೆಂಗಳೂರು: ವಾಲ್ಮೀಕಿ ಸಮುದಾಯಕ್ಕೆ ಶೇ.7.5ರಷ್ಟು ಮೀಸಲಾತಿ ನೀಡುವಂತೆ ಒತ್ತಾಯಿಸಿ ನಡೆಸುತ್ತಿರುವ ಹೋರಾಟಕ್ಕೆ ನನ್ನ ಬೆಂಬಲವೂ ಇದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ವಾಲ್ಮೀಕಿ ಸಮುದಾಯಕ್ಕೆ ಶೇ.7.5ರಷ್ಟು ಮೀಸಲಾತಿ ನೀಡುವಂತೆ ಒತ್ತಾಯಿಸಿ ಹರಿಹರ ವಾಲ್ಮೀಕಿ ಪೀಠದ ಪ್ರಸನ್ನಾನಂದ ಪುರಿ ಸ್ವಾಮೀಜಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ …
Read More »ಸಿಬಿಐ ಇಲಾಖೆ ವರಿಷ್ಠಾಧಿಕಾರಿ ನಟರಾಜ್ ರಾಜಾಪುರೆ ಅವರಿಗೆ ಕನ್ನಡ ಪರ ಸಂಘಟನೆಗಳ ಒಕ್ಕೂಟದಿಂದ ಸನ್ಮಾನ
ಘಟಪ್ರಭಾ ನಗರದ ನಿವಾಸಿ ಹಾಗೂ ದೆಹಲಿಯಲ್ಲಿ ಕೇಂದ್ರ ಸರ್ಕಾರದ ಸಂಸ್ಥೆಯಾದ ಸಿ.ಬಿ.ಐ ಇಲಾಖೆಯಲ್ಲಿ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ನಟರಾಜ ರಾಜಾಪೂರೆ ಇವರಿಗೆ ಇವರ ಸೇವೆಯನ್ನು ಗುರುತಿಸಿ ಕೇಂದ್ರ ಸರ್ಕಾರ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ಪ್ರಧಾನಿ ನರೇಂದ್ರ ಮೋದಿಯವರು ನೀಡಿ ಗೌರವಿಸಿದ್ದಾರೆ. ಈ ಅತ್ಯುನ್ನತ ಪ್ರಶಸ್ತಿಯನ್ನು ಪಡೆದುಕೊಂಡು ಇವರು ಮೊದಲ ಬಾರಿ ಘಟಪ್ರಭಾ ನಗರಕ್ಕೆ ಆಗಮಿಸಿದ ಇವರನ್ನು ರವಿವಾರ ರಂದು ನಗರದ ಮೃತ್ಯುಂಜಯ ಸಭಾ ಭವನದಲ್ಲಿ ಕನ್ನಡ ಪರ ಸಂಘಟನೆಗಳ ಒಕ್ಕೂಟದ …
Read More »ಕರ್ನಾಟಕ ಕಾರ್ಯನಿರತ ಪ್ರತಕರ್ತರ ಸಂಘದ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ದಿಲೀಪ್ ಕುರಂದವಾಡೆ ನಾಮಪತ್ರ ಸಲ್ಲಿಕೆ
ಫೆ 27 ಕ್ಕೆ ನಡೆಯಲಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬೆಳಗಾವಿ ಜಿಲ್ಲಾಧ್ಯಕ್ಷ ಸ್ಥಾನದ ಚುನಾವಣೆಗೆ ಪಬ್ಲಿಕ್ ಟಿವಿ ವರದಿಗಾರ ದಿಲೀಪ್ ಕುರಂದವಾಡೆ ಅವರು ರವಿವಾರದಂದು ನಗರದ ಸಂಘದ ಕಛೇರಿಯಲ್ಲಿ ಚುನಾವಣಾಧಿಕಾರಿ ಗುರುಸಿದಪ್ಪ ಪೂಜೇರಿ ಅವರಿಗೆ ತಮ್ಮ ಉಮೇದುವಾರಿಕೆ ಸಲ್ಲಿಸಿದರು. ಉಪಾಧ್ಯಕ್ಷ ಸ್ಥಾನಕ್ಕೆ ರಾಜಶೇಖರ ಪಾಟೀಲ್, ಯಲಪ್ಪ ತಳವಾರ , ಶ್ರೀಶೈಲ ಮಠದ, ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಅರುಣ್ ಪಾಟೀಲ, ಕಾರ್ಯದರ್ಶಿ ಸ್ಥಾನಕ್ಕೆ ಶ್ರಿಕಾಂತ ಕುಬಕಡ್ಡಿ, ಈಶ್ವರ ಹೋಟಿ, …
Read More »*ಅರಸಿನ ಪುಡಿ ಉತ್ಪಾದನಾ ಘಟಕ ನಿರ್ಮಿಸಿದ ಐಸಿಐಸಿಐ ಫೌಂಡೇಶನ್*
ಬೆಳಗಾವಿ ಜಿಲ್ಲೆಯ ಗೋಕಾಕ ಹಾಗೂ ಮೂಡಲಗಿ ತಾಲೂಕಿನ ದುರದುಂಡಿ ನಾಗನೂರ ಹಾಗೂ ರಾಜಾಪೂರ ಗ್ರಾಮದಲ್ಲಿ ಐಸಿಐಸಿಐ ಪೌಂಡೇಶನ ವತಿಯಿಂದ ಅರಸಿನ ಪುಡಿ ತಯಾರಿಕಾ ಘಟಕಗಳನ್ನು ರಾಜ್ಯದ ಯೋಜನಾ ವ್ಯವಸ್ಥಾಪಕರಾದ ಮಧು .ಎನ್ ರವರು ಹಾಗೂ ಕಿತ್ತೂರ ರಾಣಿ ಚೆನ್ನಮ್ಮ ತೋಟಗಾರಿಕೆ ಮಹಾವಿದ್ಯಾಲಯ ಅರಭಾವಿಯ ಡೀನ ಡಾ: ಎಮ್.ಜಿ.ಕೇರುತಗಿ ರವರು ಉದ್ಘಾಟಿಸಿದರು . ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ತೋಟಗಾರಿಕೆ ಹಿರಿಯ ಸಹಾಯಕ ನಿರ್ದೇಶಕರು ಮಲ್ಲಿಕಾರ್ಜುನ ಜನ್ಮಟ್ಟಿ ರವರು ಐಸಿಐಸಿಐ ಫೌಂಡೇಶನ್ ರವರು …
Read More »ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಿ: ಯುವ ನಾಯಕ ರಾಹುಲ್ ಜಾರಕಿಹೊಳಿ
ರಂಗದೊಳಿ ಗ್ರಾಮದಲ್ಲಿ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಚಾಲನೆ ಬೆಳಗಾವಿ: ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಬೇಕೆಂದು ಯುವ ನಾಯಕ ರಾಹುಲ್ ಜಾರಕಿಹೊಳಿ ಹೇಳಿದರು. ಯಮಕನಮರಡಿ ಮತಕ್ಷೇತ್ರದ ರಂಗದೊಳಿ ಗ್ರಾಮದಲ್ಲಿ ಶಾಸಕ ಸತೀಶ್ ಜಾರಕಿಹೊಳಿಯವರ ಶಾಸಕರ ಅನುದಾನದಲ್ಲಿ 30 ಲಕ್ಷ ರೂ. ವೆಚ್ಚದ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿರು. ಪ್ರತಿಯೊಂದು ಯೋಜನೆಗಳು ಜನತೆಗೆ ಅನುಕೂಲವಾಗಬೇಕು. ಕಾಮಗಾರಿ ನಿರ್ಮಾಣದ ಬಗ್ಗೆ ಅಧಿಕಾರಿಗಳು, ಸಾರ್ವಜನಿಕರು …
Read More »ಪುರುಷರಷ್ಟೇ ಕೆಲಸ ಮಾಡುವ ಛಲ ಮಹಿಳೆಯರಿಗಿದೆ: ಯುವ ನಾಯಕಿ ಪ್ರಿಯಾಂಕ ಜಾರಕಿಹೊಳಿ
ಸತೀಶ್ ಜಾರಕಿಹೊಳಿ ಫೌಂಡೇಶನ್ ನಿಂದ ಉಚಿತ ಉದ್ಯಮಶೀಲತಾ ತರಬೇತಿ ಘಟಪ್ರಭಾ: ಹೆಣ್ಣು ಮಕ್ಕಳು ಮನೆ ಕೆಲಸಕಷ್ಟೇ ಸೀಮಿತವಾಗದೇ ಪುರುಷರಷ್ಟೇ ಎಲ್ಲಾ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತೇವೆ ಎಂಬ ಛಲ ಹೊಂದಬೇಕೆಂದು ಯುವ ನಾಯಕಿ ಪ್ರಿಯಾಂಕ ಸತೀಶ್ ಜಾರಕಿಹೊಳಿ ಹೇಳಿದರು. ಇಲ್ಲಿನ ಡಾ. ಎನ್. ಎಸ್. ಹರ್ಡೇಕರ್ ಮಂಜಪ್ಪ ತರಬೇತಿ ಕೇಂದ್ರದಲ್ಲಿ ಸತೀಶ್ ಜಾರಕಿಹೊಳಿ ಫೌಂಡೇಶನ್ ಹಮ್ಮಿಕೊಂಡಿದ್ದ ಉಚಿತ ಉದ್ಯಮಶೀಲತಾ ತರಬೇತಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಪುರುಷರಷ್ಟೇ ಕೆಲಸ ಮಾಡುವ ಛಲ ಮಹಿಳೆಯರಿಗಿದೆ …
Read More »ಶಾಂಭವಿಶ್ರೀ ಅವಾಡ್ರ್ಸ 2022; ಶ್ರೀ ವೇದಮೂರ್ತಿ ಡಾ. ಮಹಾಂತಯ್ಯ ಶಾಸ್ತ್ರೀಜಿಯವರ ಕಾರ್ಯ ಮಾದರಿ: ಸರ್ವೋತ್ತಮ ಜಾರಕಿಹೊಳಿ
ಗೋಕಾಕ ಫೆ, 9 ;- ಉತ್ತರ ಕರ್ನಾಟಕದ ಪ್ರತಿಭೆಗಳನ್ನು ಗುರುತಿಸಿ ನಾಡಿನಾದ್ಯಂತ ಪರಿಚಯಿಸುತ್ತಿರುವ ಕೆಲಸವನ್ನು ಕಾರ್ಯಕ್ರಮದ ರೂವಾರಿಗಳಾದ ಬೈಲಹೊಂಗಲದ ಶ್ರೀ ವೇದಮೂರ್ತಿ ಡಾ. ಮಹಾಂತಯ್ಯ ಶಾಸ್ತ್ರೀಜಿಯವರು ಮಾಡುತ್ತಿರುವ ಕಾರ್ಯ ಶ್ಲಾಘನೀಯ ಎಂದು ನಗರಸಭೆ ಪೌರಾಯುಕ್ತ ಎಸ್.ಎಮ್.ಹಿರೇಮಠ ಅವರು ಹೇಳಿದರು. ಬುಧವಾರದಂದು ನಗರದ ನಗರಸಭೆ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಉತ್ತರ ಕರ್ನಾಟಕದ ಅತೀ ದೊಡ್ಡ ಸಿಂಗಿಂಗ್ ಕಾಂಪಟೇಶನ್ ಶಾಂಭವಿಶ್ರೀ ಅವಾಡ್ರ್ಸ 2022 ರ ಗೋಕಾಕನ ಪ್ರಥಮ ಹಂತದ ಆಡಿಶನ್ ಕಾರ್ಯಕ್ರಮಕ್ಕೆ ಜ್ಯೋತಿ …
Read More »ಬಣಜಿಗ ಸಮಾಜಕ್ಕೆ ಶೀಘ್ರವೇ ಮೀಸಲಾತಿ ಪ್ರಮಾಣ ಪತ್ರ ನೀಡುವಂತೆ ಆಗ್ರಹಿಸಿ ತಹಶೀಲ್ದಾರರಿಗೆ ಮನವಿ
ಗೋಕಾಕ: ಬಣಜಿಗ ಸಮಾಜದ ಶಿಕ್ಷಣಕ್ಕಾಗಿ(2ಎ) ಹಾಗೂ ಉದ್ಯೋಗಕ್ಕಾಗಿ (3ಎ) ಸರ್ಕಾರದಿಂದ ಮೀಸಲಾತಿ ಪ್ರಮಾಣ ಪತ್ರ ಶೀಘ್ರವೇ ನೀಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಬಳಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದಿಂದ ಬುಧವಾರ ತಹಶೀಲ್ದಾರರ ಮನವಿ ಸಲಿಸಲಾಯಿತು. ಬಣಜಿಗ ಸಮುದಾಯದ ಮುಂಖಡರಾದ ಬಸವನಗೌಡ ಎಸ್ ಪಾಟೀಲ ನೇತೃತ್ವದಲ್ಲಿ ತಹಶೀಲ್ದಾರರ ಕಚೇರಿಗೆ ಭೇಟಿ ನೀಡಿ, ಮನವಿ ಸಲ್ಲಿಸಲಾಗಿದೆ. ಸರ್ಕಾರ ಆದೇಶ ಹೊರಡಿಸಿದರು ಸ್ಥಳೀಯ ತಹಶೀಲ್ದಾರ ಕಚೇರಿಯಲ್ಲಿ ಯುವಕರಿಗೆ ಮೀಸಲಾತಿ ಪ್ರಮಾಣ ಪತ್ರ ನೀಡುತ್ತಿಲ್ಲ. ಅಧಿಕಾರಿಗಳ …
Read More »*ಜಿಲ್ಲಾ ಕಾರ್ಯಾಧ್ಯಕ್ಷರಾಗಿ ವೈಶಾಲಿ ಭರಭರಿ ನೇಮಕ
ಗೋಕಾಕ ಫೆ, 7 :- ರಾಷ್ಟ್ರೀಯ ಮಾನವ ಹಕ್ಕುಗಳ ಮತ್ತು ಸಾಮಾಜಿಕ ನ್ಯಾಯ ಆಯೋಗದ ಬೆಳಗಾವಿ ಜಿಲ್ಲಾ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಕರದಂಟು ನಾಡು ಗೋಕಾಕದ ವೈಶಾಲಿ ಭರಭರಿ ಅವರು ನೇಮಕಗೊಂಡಿದ್ದಾರೆ. ಕಳೆದ ಐದು ವರ್ಷಗಳಿಂದ ಗೋಕಾಕ ತಾಲೂಕಿನಲ್ಲಿ ಮಾಡುತ್ತಿರುವ ಸಾಮಾಜಿಕ ಸೇವೆಯನ್ನು ಗುರುತಿಸಿ ಬೆಳಗಾವಿ ಜಿಲ್ಲಾಧ್ಯಕ್ಷ ಅಶೋಕ ಕೆಂಗಣ್ಣವರ ಮತ್ತು ರಾಜ್ಯಾಧ್ಯಕ್ಷ ಡಿ.ಶೇಖರರೆಡ್ಡಿ ಅವರ ಶಿಫಾರಸಿನ ಮೇರೆಗೆ ರಾಷ್ಟ್ರೀಯ ಅಧ್ಯಕ್ಷ ಮೆಹತಾಬ ರಾಯ ಆದೇಶ ಹೊರಡಿಸಿದ್ದಾರೆ.*
Read More »
CKNEWSKANNADA / BRASTACHARDARSHAN CK NEWS KANNADA