ಬೆಳಗಾವಿ: 2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ಖಚಿತ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ 12ರಿಂದ 13 ಜನ ಕಾಂಗ್ರೆಸ್ ಶಾಸಕರು ಗೆಲ್ಲಲು ತಯಾರಿ ನಡೆಸಿದ್ದೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ನಗರದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಚುನಾವಣೆಗೆ ನಾವು ತಯಾರಿ ನಡೆಸಿದ್ದು, ನಮ್ಮ ಗೆಲುವು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ತಿಳಿಸಿದರು. ಗೋವಾದಲ್ಲಿ ಕಳೆದ ಸಲ 17 …
Read More »ಶಾಲಾ ಕಟ್ಟಡ ಉದ್ಘಾಟನೆ, ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಯಮಕನಮರಡಿ: ಮತಕ್ಷೇತ್ರದ ಎಲ್ಲಾ ಗ್ರಾಮಗಳಲ್ಲಿ ಸಮುದಾಯ ಭವನ ಕಟ್ಟಡಗಳನ್ನು ನಿರ್ಮಿಸಿದ್ದು, ಅವುಗಳ ಸದ್ಬಳಕೆಯಾಗಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಕರೆ ನೀಡಿದರು. ಯಮಕನಮರಡಿ ಕ್ಷೇತ್ರದ ದಡ್ಡಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ನರಶಿಂಗಾಪುರ, ನಾಗನೂರು, ಅತ್ತಿಹಾಳ ಗ್ರಾಮಗಳಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಕೆಲವು ಗ್ರಾಮಗಳಿಗೆ ಕುರ್ಚಿಗಳನ್ನು ನೀಡುತ್ತಿದ್ದು, ಅವು ವೈಯಕ್ತಿಕ, ಧಾರ್ಮಿಕ ಸಮಾರಂಭಕ್ಕೆ ಸರಿಯಾಗಿ ಬಳಸಿ, ಮತ್ತೆ ಅವುಗಳನ್ನು ಒಂದೇ ಸ್ಥಳದಲ್ಲಿ ಇಡಬೇಕೆಂದು ಸಲಹೆ ನೀಡಿದರು. …
Read More »*ಅರಭಾವಿ ಕ್ಷೇತ್ರದ ರಸ್ತೆಗಳು ಹಾಗೂ ದೇವಸ್ಥಾನಗಳ ಅಭಿವೃದ್ಧಿಗೆ 52 ಕೋಟಿ ರೂ. ಅನುದಾನ ಬಿಡುಗಡೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ*
ಗೋಕಾಕ : ಅರಭಾವಿ ಮತಕ್ಷೇತ್ರದ ರಸ್ತೆಗಳ ಅಭಿವೃದ್ಧಿಗಾಗಿ 50 ಕೋಟಿ ರೂ. ಹಾಗೂ ದೇವಸ್ಥಾನಗಳ ಜೀರ್ಣೋದ್ಧಾರಕ್ಕಾಗಿ 2 ಕೋಟಿ ರೂ.ಗಳು ಸೇರಿ ಒಟ್ಟು 52 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಕ್ಷೇತ್ರದಲ್ಲಿರುವ ರಸ್ತೆಗಳ ಸುಧಾರಣೆಗಾಗಿ ಲೋಕೋಪಯೋಗಿ ಇಲಾಖೆಯ ಒಟ್ಟು 34.53 ಕಿ.ಮೀ ರಸ್ತೆಗಳ ಸುಧಾರಣೆಗಾಗಿ 32 ಕೋಟಿ ರೂ. ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯ 35.30 …
Read More »ಕನ್ನಡದಲ್ಲಿ ಪಥಸಂಚಲನ ಮಾಡಿದ ಪಿಎಸ್ಐ ಕೆ ವಾಲಿಕಾರ ಅವರಿಗೆ ಹರಿದು ಬಂತು ಅಭಿಮಾನ ಮಹಾಪುರ.
ಗೋಕಾಕ : ಗಣರಾಜ್ಯೋತ್ಸವ ಪೊಲೀಸ ಪಥ ಸಂಚಲನಕ್ಕೆ ಕನ್ನಡದಲ್ಲಿ ನಿರ್ದೇಶನ ನೀಡಿ ಎಲ್ಲರ ಗಮನ ಸೆಳೆದಿರುವ ಗೋಕಾಕ ಶಹರ ಠಾಣೆ ಪಿಎಸ್ಐ ಕೆ.ವಾಲಿಕರ ಅವರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ಅಭಿನಂದನೆ ಸಲ್ಲಿಸಿದ್ದಾರೆ. ಈ ಕುರಿತು ಅಭಿನಂದನಾ ಪತ್ರ ಕಳುಹಿಸಿರುವ ಅವರು ಪೊಲೀಸ ಇಲಾಖೆಯಲ್ಲಿ ಕವಾಯತ್ತು ಪ್ರದರ್ಶನದಲ್ಲಿ ಕೆಲವ ಹಿಂದಿ ಮತ್ತು ಇಂಗ್ಲಿಷನಲ್ಲಿಯೆ ನಿರ್ದೇಶನ ನೀಡುತ್ತಿರುವ ಸಂದರ್ಭದಲ್ಲಿ 73ನೇ ಗಣರಾಜ್ಯೋತ್ಸವ ಪಥ ಸಂಚಲನಕ್ಕೆ ಗೋಕಾಕ ಶಹರ ಪೋಲಿಸ್ ಠಾಣೆಯ …
Read More »ವೀರಶೈವ ಲಿಂಗಾಯತ ಸಮಾಜದ ರುದ್ರ ಭೂಮಿ ಸ್ವಚ್ಛತಾ ಕಾರ್ಯ
ಗೋಕಾಕ: ಶಾಸಕರಾದ ರಮೇಶ ಜಾರಕಿಹೊಳಿ ಅವರ ಆದೇಶದಂತೆ ಗೋಕಾಕ ನಗರದಲ್ಲಿರುವ ವೀರಶೈವ ಲಿಂಗಾಯತ ಸಮಾಜದ ರುದ್ರ ಭೂಮಿಯಲ್ಲಿ ಗೋಕಾಕ ನಗರಸಭೆ ವತಿಯಿಂದ ಸ್ವಚ್ಛತಾ ಕಾರ್ಯ ನಡೆಯಿತು. ಕಳೆದ ಬಾರಿ ಅತೀಯಾದ ಮಳೆಯಿಂದ ಅಪಾರ ಪ್ರಮಾಣದಲ್ಲಿ ಪ್ರವಾಹ ಬಂದ ಹಿನ್ನೆಲೆಯಲ್ಲಿ ರುದ್ರ ಭೂಮಿಯಲ್ಲಿ ನೀರು ನಿಂತಿದ್ದರಿಂದ ಇಡೀ ರುದ್ರಭೂಮಿಯು ಹದಗೆಟ್ಟು ಅಪಾರ ಪ್ರಮಾಣದಲ್ಲಿ ಮುಳ್ಳಿನ ಕಂಟಿಯು ಬೆಳೆದು ಶವ ಸಂಸ್ಕಾರಕ್ಕೆ ತುಂಬಾ ತೊಂದರೆಯಾಗುತ್ತಿತ್ತು. ಕಾರಣ ಇಂದು ಶಾಸಕರಾದ ರಮೇಶ ಜಾರಕಿಹೊಳಿ ಅವರ …
Read More »ಗೋವಾ ಕನ್ನಡಿಗರ ಜತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸಭೆ
ಪಣಜಿ: ಫೆ. 14 ರಂದು ಗೋವಾ ವಿಧಾನಸಭೆ ಚುನಾವಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಗೋವಾದಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಪಣಜಿ ಕಾಂಗ್ರೆಸ್ ಕಚೇರಿಯಲ್ಲಿ ನಾಯಕರ ಜೊತೆ ಸಭೆ ನಡೆಸಿದ್ದಾರೆ. ನಂತರ ಇಲ್ಲಿನ ಮಡಗಾವನ ಅಕಿಮ್ ಪ್ರದೇಶದ ಎಸ್ಸಿ,ಎಸ್ಟಿ ಮತ್ತು ಗೋಂಧಳಿ ಸಮಾಜ ಕನ್ನಡಿಗರ ಜತೆ ಸಭೆ ನಡೆಸಿ, ಗೋವಾದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಕನ್ನಡಿಗರಿಗೆ ಎಲ್ಲಾ ರೀತಿಯ ಸೌಕರ್ಯಗಳನ್ನು ಒದಗಿಸಲಾಗುವುದು ಎಂದು ಭರವಸೆ …
Read More »ಬೆಳಗಾಂ ಶುಗರ್ಸ ಪ್ರೈ ಲಿ, ಕಾರ್ಖಾನೆಯ ಆವರಣದಲ್ಲಿ “73 ನೇ ಗಣರಾಜ್ಯೋತ್ಸವ ದಿನಾಚರಣೆ”
ಬೆಳಗಾವಿ: ಶಾಸಕ ಸತೀಶ ಜಾರಕಿಹೊಳಿ ಒಡೆತನದ ಬೆಳಗಾಂ ಶುಗರ್ಸ ಪ್ರೈ ಲಿ, ಹುದಲಿ, ಕಾರ್ಖಾನೆಯ ಆವರಣದಲ್ಲಿ “73 ನೇ ಗಣರಾಜ್ಯೋತ್ಸವ ದಿನಾಚರಣೆಯ ದ್ವಜಾರೋಹಣ” ಕಾರ್ಯಕ್ರಮವನ್ನು ಆಚರಿಸಿಲಾಯಿತು. ಪ್ರಸಕ್ತ 2021-22 ಕಬ್ಬು ನುರಿಸುವ ಹಂಗಾಮಿನಲ್ಲಿ ಕಾರ್ಖಾನೆಗೆ ಹೆಚ್ಚು ಕಬ್ಬನ್ನು ಸಾರಿಗೆ ಮಾಡಿದ ಮುಕ್ತೆದಾರರಾದ ನಿಂಗಪ್ಪಾ ಚಿ. ರಾಮಾಪೂರ ಸಾ: ವಿರಪನಕೊಪ್ಪ, ತಾ: ಬೆಳಗಾವಿ ಹಾಗೂ ಸಿದ್ದಪ್ಪಾ ಲ. ಖನಗಾರ ಸಾ: ಕೈತನಾಳ, ತಾ: ಗೋಕಾಕ ಇವರಿಂದ ನೇರವೇರಿಸಲಾಯಿತು. ಈ ಕಾರ್ಯಕ್ರಮದ ಅದ್ಯಕ್ಷತೆಯನ್ನು …
Read More »ಗೋಕಾಕ ಹಿಲ್ ಗಾರ್ಡನ್ ಕಚೇರಿಯಲ್ಲಿ 73ನೇ ಗಣರಾಜ್ಯೋತ್ಸವ ಆಚರಣೆ
ಗೋಕಾಕ: ಭಾರತದ ಸಂವಿಧಾನ ರಚನೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರು ನೀಡಿದ ಕೊಡುಗೆ ಅಮೂಲ್ಯವಾದದ್ದು ಎಂದು ಯುವ ನಾಯಕಿ ಪ್ರಿಯಾಂಕ ಜಾರಕಿಹೊಳಿ ಹೇಳಿದರು. ನಗರದ ಹಿಲ್ಲ್ ಗಾರ್ಡನ್ ಕಚೇರಿ ಎದುರು 73ನೇ ಗಣರಾಜ್ಯೋತ್ಸವ ಪ್ರಯುಕ್ತ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಸಾಮಾಜಿಕ ಸುಧಾರಕ, ಶಿಕ್ಷಣ ತಜ್ಞ, ನ್ಯಾಯಶಾಸ್ತ್ರಜ್ಞ, ರಾಜಕಾರಣಿ ಮತ್ತು ಕಾನೂನು ತಜ್ಞರಾಗಿ ದೇಶದ ಸಂವಿಧಾನಕ್ಕೆ ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿರುವ ಕೊಡುಗೆ ಅಪಾರ. ಸಮಾಜ, ಜಾತಿ ಮತ್ತು ಸಮುದಾಯಗಳ ಬಗೆಗಿನ …
Read More »ಶೀಘ್ರವೇ ಮೂಡಲಗಿಯಲ್ಲಿ ಸಬ್ ರಜಿಸ್ಟ್ರರ್ ಕಛೇರಿ ಆರಂಭ: ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಮೂಡಲಗಿ ತಾಲೂಕಿನ ಸಾರ್ವಜನಿಕರ ಬಹು ನಿರೀಕ್ಷೆಯ ಉಪ ನೋಂದಣಾಧಿಕಾರಿಗಳ ಕಛೇರಿ ಆರಂಭಕ್ಕೆ ಹಣಕಾಸು ಇಲಾಖೆಯಿಂದ ಅನುಮೋದನೆ ದೊರೆತಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಮೂಡಲಗಿಯಲ್ಲಿ ಹೊಸದಾಗಿ ಉಪನೋಂದಣಾಧಿಕಾರಿಗಳ ಕಛೇರಿಯನ್ನು ಫೆಬ್ರುವರಿ ತಿಂಗಳೊಳಗೆ ಆರಂಭಿಸಲಾಗುವುದು ಎಂದು ಅವರು ಹೇಳಿದರು. ಸತತವಾಗಿ ಎರಡು ವರ್ಷಗಳಿಂದ ಕೋವಿಡ್ ಹಿನ್ನೆಲೆಯಲ್ಲಿ ಕಛೇರಿ ಆರಂಭಕ್ಕೆ ಹಣಕಾಸು ಇಲಾಖೆಯು ನಮ್ಮ ಪ್ರಸ್ತಾವಣೆಯನ್ನು ವಿಳಂಬ ಮಾಡಿತ್ತು. ಆದರೂ ಹಲವು ಬಾರಿ ಮುಖ್ಯಮಂತ್ರಿಗಳನ್ನು …
Read More »ಗೋವಾದಲ್ಲಿ ಕಾಂಗ್ರೆಸ್ ಗೆ ಜಯ ನಿಶ್ಚತ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಪಣಜಿ: ಗೋವಾ ಚುವಾವಣೆಯಲ್ಲಿ ಈ ಬಾರಿಯ ಕಾಂಗ್ರೆಸ್ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಜಯ ಸಾಧಿಸಲಿದ್ದಾರೆ, ಕಾಂಗ್ರೆಸ್ಗೆ ಅಧಿಕಾರ ಹಿಡಿಯುವುದು ಖಚಿತ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಚುನಾವಣಾ ವೀಕ್ಷಕ ಸತೀಶ್ ಜಾರಕಿಹೊಳಿ ವಿಶ್ವಾಸ ಹೊಂದಿದ್ದಾರೆ. ಗೋವಾ ರಾಜ್ಯದ ಮಡಗಾವಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಗೋವಾದಲ್ಲಿ 40 ವಿಧಾನಸಭಾ ಕ್ಷೇತ್ರಗಳಲ್ಲಿದ್ದು, 37 ಕ್ಷೇತ್ರಗಳಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿದೆ. ಗೋವಾ ಮತ್ತು ಬೆಳಗಾವಿಗೆ ಉತ್ತಮ ನಂಟು ಹೊಂದಿದ್ದು, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ …
Read More »
CKNEWSKANNADA / BRASTACHARDARSHAN CK NEWS KANNADA