Breaking News

cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

ಹಾನಗಲ್ ಉಪಚುನಾವಣಾ ಅಖಾಡಕ್ಕಿಳಿದ ಯುವ ನಾಯಕ ರಾಹುಲ್ ಜಾರಕಿಹೊಳಿ;ತಂದೆ ಸತೀಶ ಜಾರಕಿಹೊಳಿಯವರಿಗೆ ಸಾಥ್

ಹಾನಗಲ್: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿಯವರ ಪುತ್ರ ಹಾಗೂ ಕಾಂಗ್ರೆಸ್ ಯುವ ನಾಯಕ ರಾಹುಲ್ ಜಾರಕಿಹೊಳಿಯವರು ಇಂದಿನಿಂದ ಹಾನಗಲ್ ಉಪಚುನಾವಣಾ ಅಖಾಡಕ್ಕಿಳಿದಿದ್ದಾರೆ. ಹಾನಗಲ್ ಮತಕ್ಷೇತ್ರದಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿರುವ ತಂದೆ ಸತೀಶ ಜಾರಕಿಹೊಳಿಯವರಿಗೆ ಪುತ್ರ ರಾಹುಲ್ ನೆರವಾಗುತ್ತಿದ್ದಾರೆ. ತಂದೆಯೊಂದಿಗೆ ಎಲ್ಲೆಡೆಯೂ ಪ್ರಚಾರದಲ್ಲಿ ತೊಡಗಿದ್ದಾರೆ. ಯುವ ಮತಗಳನ್ನು ಸೆಳೆಯುತ್ತಿರುವ ರಾಹುಲ್: ರಾಹುಲ್ ಅವರು ಇಂದು ಮತಕ್ಷೇತ್ರದ ಬೊಮ್ಮನಹಳ್ಳಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಬಾದಾಮಗಟ್ಟ, ಅಕ್ಕಿಆಲೂರು ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಅಕ್ಕಿವಳ್ಳಿ ಗ್ರಾಮ …

Read More »

ಹಾನಗಲ್ ಉಪಚುನಾವಣೆಯಲ್ಲಿ ಸತೀಶ ಜಾರಕಿಹೊಳಿ ಭರ್ಜರಿ ಪ್ರಚಾರ!

ಹಾನಗಲ್: ಹಾನಗಲ್ ಹಾಗೂ ಸಿಂದಗಿ ಉಪಚುನಾವಣೆಯಲ್ಲಿ ಬಿಜೆಪಿಯವರು ರಾಮಜಪವನ್ನು ಬಿಟ್ಟು, ಜನರಿಗೆ ಹಣ ಹಂಚಲು ಶುರು ಮಾಡಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಆರೋಪಿಸಿದರು. ಮತಕ್ಷೇತ್ರದ ಬೊಮ್ಮನಹಳ್ಳಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಬಾದಾಮಗಟ್ಟ ಗ್ರಾಮದಲ್ಲಿ ಪಕ್ಷದ ಅಭ್ಯರ್ಥಿ ಶ್ರೀನಿವಾಸ್ ಮಾನೆ ಅವರ ಪರ ನಡೆದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. “ಬಿಜೆಪಿಯವರಿಗೆ ಅಭಿವೃದ್ಧಿಯ ಬಗ್ಗೆ ಮಾತನಾಡುವ ಧೈರ್ಯವಿಲ್ಲ. ಹೀಗಾಗಿ, ಹಣ ಹಂಚುವ ಮೂಲಕ ಮತ ಪಡೆಯುವ ಸಂಚು ನಡೆಸಿದ್ದಾರೆ. …

Read More »

ಜಗತ್ತಿನ ಮನುಕುಲದ ಮನಸ್ಸನ್ನೇ ಪರಿವರ್ತಿಸಿದ ಮಹಾನ್ ಸಾಧಕ ಮಹರ್ಷಿ ವಾಲ್ಮೀಕಿ : ರಾಹುಲ್ ಜಾರಕಿಹೊಳಿ

ಮೂಡಲಗಿ:”  ಮಹರ್ಷಿ ವಾಲ್ಮೀಕಿಯವರು ಬರೆದ ರಾಮಾಯಣ ಗ್ರಂಥವು ಜೀವನ ಸಂಘರ್ಷ ಹಾಗೂ ಮಾನವೀಯ ಮೌಲ್ಯಗಳ ಕನ್ನಡಿಯಾಗಿದೆ” ಎಂದು ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಹೇಳಿದರು. ತಾಲ್ಲೂಕಿನ ವಡೆರಹಟ್ಟಿ ಗ್ರಾಮದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ವಾಲ್ಮೀಕಿಯವರು ಈ ಗ್ರಂಥದ ಮೂಲಕ ಜಗತ್ತಿಗೆ ಅತ್ಯುತ್ತಮ ಮೌಲ್ಯಗಳ ಸಂದೇಶವನ್ನು ನೀಡಿದ್ದಾರೆ.  ಮಕ್ಕಳಿಗೆ ಬಾಲ ರಾಮಾಯಣ ಹಾಗೂ ಬಾಲ ಮಹಾಭಾರತ ಗ್ರಂಥಗಳನ್ನು ಪರಿಚಯಿಸುವುದರ ಮೂಲಕ …

Read More »

ಶಾರ್ಟ್ ಸರ್ಕ್ಯೂಟ್ ನಿಂದ ಮನೆಗಳಿಗೆ ಹಾನಿ; ಸತೀಶ ಜಾರಕಿಹೊಳಿಯವರಿಂದ ಕುಟುಂಬಸ್ಥರಿಗೆ ಸಾಂತ್ವನ

ಯಮಕನಮರಡಿ: ಯಮಕನಮರಡಿ ಮತಕ್ಷೇತ್ರದ ಪಾಶ್ಚಾಪುರ ಗ್ರಾಮದಲ್ಲಿ ಕೆಲ ದಿನಗಳ ಹಿಂದೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿ ಎರಡು ಮನೆಗಳಿಗೆ ಹಾನಿಯಾಗಿತ್ತು. ವಿಷಯ ತಿಳಿದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿಯವರು ಗ್ರಾಮಕ್ಕೆ ಇಂದು ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಶಾರ್ಟ್ ಸರ್ಕ್ಯೂಟ್ ನಿಂದ ಗ್ರಾಮದ ಕಲ್ಲಪ್ಪ ಮಡಿವಾಳರ ಹಾಗೂ ಸುರೇಶ ಮಡಿವಾಳರ ಎಂಬುವರ ಮನೆಗೆ ಹಾನಿಯಾಗಿತ್ತು. ಮನೆಯಲ್ಲಿನ ವಸ್ತುಗಳು ಕೂಡ ಹಾನಿಗೀಡಾಗಿದ್ದವು. ಎರಡೂ ಮನೆಗಳು ಅಕ್ಕಪಕ್ಕದಲ್ಲೇ ಇದ್ದು, ಈ …

Read More »

ವಾಲ್ಮೀಕಿ ಕ್ರೀಡಾಂಗಣಕ್ಕೆ ಭೇಟಿ ನೀಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

ಗೋಕಾಕ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಇಂದು ನಗರದ ವಾಲ್ಮೀಕಿ ಕ್ರೀಡಾಂಗಣಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಕ್ರೀಡಾಪಟುಗಳೊಂದಿಗೆ ಕೆಲಕಾಲ ಸತೀಶ ಅವರು ಚರ್ಚೆ ನಡೆಸಿದರು. “ಮಳೆ, ಚರಂಡಿಯಿಂದ ಕ್ರೀಡಾಂಗಣ ಜೌಗು ಹಿಡಿಯುತ್ತಿದೆ. ಇದಕ್ಕೆ ಏನಾದರು ವ್ಯವಸ್ಥೆ ಮಾಡಿ. ಕ್ರೀಡಾಂಗಣದಲ್ಲಿ ಹೈಮಾಸ್ಟ್ ಲೈಟ್ ಗಳನ್ನು ಅಳವಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿ” ಎಂದು ಕ್ರೀಡಾಪಟುಗಳು ಸತೀಶ ಜಾರಕಿಹೊಳಿಯವರಿಗೆ ಮನವಿ ಮಾಡಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸತೀಶ ಅವರು, ಈ …

Read More »

ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಮನದ ಮಾತು ಎಂಬ ಪುಸ್ತಕ ಬಿಡುಗಡೆ!

ಗೋಕಾಕ: ನಗರದ ಹಿಲ್ ಗಾರ್ಡನ್ ಕಛೇರಿಯಲ್ಲಿ ಕೆಪಿಸಿಸಿ ಕಾರ್ಯಾಧಕ್ಷ ಸತೀಶ್ ಜಾರಕಿಹೊಳಿ ಅವರ ನೇತೃತ್ವದಲ್ಲಿ ಮನದ ಮಾತು ಎಂಬ ಪುಸ್ತಕ ಬಿಡುಗಡೆ ಮಾಡಿದರು. ರಾ.ಹ.ಕೊಂಡಕೇರ ಅವರ ಸಾಹಿತ್ಯದಲ್ಲಿ ಮೂಡಿಬಂದಂತಹ ಮನದಂಗಳದಲ್ಲಿ ಅರಳಿದ ಹನಿ ರಂಗೋಲಿ ಮನದ ಮಾತು ಎಂಬ ಪುಸ್ತಕವನ್ನು ಕೆಪಿಸಿಸಿ ಕಾರ್ಯಾಧಕ್ಷ ಸತೀಶ್ ಜಾರಕಿಹೊಳಿ ಅವರ ನೇತೃತ್ವದಲ್ಲಿ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಮುಖಂಡರಾದ ಪಾಂಡು ಮನ್ನಿಕೇರಿ, ಬಾಳಗೌಡ ಪಾಟೀಲ್, ಕಿರಣ್ ಜೀಣಗುಂಡ, ಪೌಲ್ ವೇಗಸ್, ಸುನೀಲ ಕರಡಿಗುದ್ದಿ, …

Read More »

ಹಜರತ್‌ ಮಹಮ್ಮದ ಪೈಗಂಬರ ಆದರ್ಶ ಮೌಲ್ಯಗಳನ್ನು ಜೀವನದಲ್ಲಿ ಅನುಸರಿಸಿ: ಜಾವೇದ್ ಗೋಕಾಕ

ಗೋಕಾಕ: ಹಜರತ್‌ ಮಹಮ್ಮದ ಪೈಗಂಬರ ಆದರ್ಶ ಮೌಲ್ಯಗಳನ್ನು ಜೀವನದಲ್ಲಿ ಅನುಸರಿಸುವುದ ರೊಂದಿಗೆ ಬದುಕು ಸಾರ್ಥಕತೆ ಪಡಿಸಿಕೊಳ್ಳಿ ಎಂದು ಅಂಜುಮನ್ ಏ ಇಸ್ಲಾಂ ಕಮೀಟಿಯ ಚೇರಮನ ಜಾವೇದ್ ಗೋಕಾಕ ಹೇಳಿದರು ಮಂಗಳವಾರದಂದು ನಗರದಲ್ಲಿ ಹಮ್ಮಿಕೊಂಡ ಹಜರತ ಮಹಮ್ಮದ ಪೈಗಂಬರ ಜಯಂತಿ ಅಂಗವಾಗಿ ಸಿಹಿ ವಿತರಿಸಿ,ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಮುಖಂಡರುಗಳಾದ ಇಸ್ಮಾಯಿಲ್ ಜಮಾದಾರ, ಮಹಾಂತೇಶ ಗವಿಮಠ, ಸಲ್ಲಿಂ ಮುಲ್ಲಾ ಇಮ್ರಾಹಿಮ ಮುಲ್ಲಾ, ರಿಯಾಜ ಗೋಕಾಕ, ಖಲೀಲ್ ಗೋಕಾಕ,ಕಯ್ಯೂಮ ಖೈರದಿ, ದಾದಾಪೀರ ಗೋಕಾಕ, …

Read More »

ವಾಲ್ಮೀಕಿ ರಾಮಾಯಣ ಇಡೀ ಮನುಕುಲಕ್ಕೆ ಮಾರ್ಗದರ್ಶನ ನೀಡುವ ಗ್ರಂಥ: ರಾಹುಲ್ ಜಾರಕಿಹೊಳಿ

ನಿಪ್ಪಾಣಿ ತಾಲೂಕಿನ ಲಖನಾಪೂರದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ; ಚಿಕ್ಕೋಡಿ ತಾಲೂಕಿನ ವಾಳಕಿಯಲ್ಲಿ ಕಬಡ್ಡಿ ಪಂದ್ಯಾವಳಿಗೆ ಚಾಲನೆ ನಿಪ್ಪಾಣಿ: ತಾಲೂಕಿನ ಲಖನಾಪೂರ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಯುವಕ ಮಂಡಳ ಹಾಗೂ ಮಹರ್ಷಿ ವಾಲ್ಮೀಕಿ ಮಹಿಳಾ ಸ್ವಸಹಾಯ ಸಂಘದ ವತಿಯಿಂದ ಇಂದು ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಮಹರ್ಷಿ ವಾಲ್ಮೀಕಿ ಅವರು ರಚಿಸಿದ ರಾಮಾಯಣ ಮಹಾಕಾವ್ಯ ಇಡೀ …

Read More »

ಸೌಭಾಗ್ಯಲಕ್ಷ್ಮಿ ಶುಗರ್ಸ್ ನಲ್ಲಿ ಸಕ್ಕರೆ ಉತ್ಪಾದನೆ; ಅಂಬಿಕಾ ಸಂತೋಷ ಜಾರಕಿಹೊಳಿ ಹಾಗೂ ಸುಪುತ್ರ ಸೂರ್ಯ ಶ್ರೇಷ್ಠ ಅವರಿಂದ ಪೂಜೆ

ಗೋಕಾಕ: ಯುವ ನಾಯಕ ಸಂತೋಷ ಜಾರಕಿಹೊಳಿಯವರ ನೇತೃತ್ವದ ಸೌಭಾಗ್ಯಲಕ್ಷ್ಮಿ ಶುಗರ್ಸ್ ನಲ್ಲಿ ಕೆಲ ದಿನಗಳ ಹಿಂದೆ ಕಬ್ಬು ನುರಿಸಲು ಪ್ರಾರಂಭ ಮಾಡಲಾಗಿತ್ತು. ಇಂದು ಈ ವರ್ಷದ ಮೊದಲನೇ ಸಕ್ಕರೆ ಉತ್ಪಾದನೆಯಾಗಿದ್ದು, ಇದಕ್ಕೆ ಶ್ರೀಮತಿ ಅಂಬಿಕಾ ಸಂತೋಷ ಜಾರಕಿಹೊಳಿ ಹಾಗೂ ಸುಪುತ್ರ ಸೂರ್ಯ ಶ್ರೇಷ್ಠ ಜಾರಕಿಹೊಳಿ ಅವರು ಪೂಜೆ ನೆರವೇರಿಸಿದರು. ಕಡಿಮೆ ಅವಧಿಯಲ್ಲಿ ಗರಿಷ್ಠಮಟ್ಟದ ಸಕ್ಕರೆ ಉತ್ಪಾದನೆ ಮಾಡಿದ್ದಕ್ಕೆ ಶ್ರೀಮತಿ ಅಂಬಿಕಾ ಸಂತೋಷ ಜಾರಕಿಹೊಳಿಯವರು ಮೆಚ್ಚುಗೆ ವ್ಯಕ್ತಪಡಿಸಿದರು. ಮಾಲೀಕರು ಕುಟುಂಬ ಸಮೇತ …

Read More »

ಸಿಂದಗಿ ವಿಧಾನಸಭಾ ಉಪಚುನಾವಣೆಯಲ್ಲಿ ಸತೀಶ ಜಾರಕಿಹೊಳಿ ಭರ್ಜರಿ ಪ್ರಚಾರ

ಸಿಂದಗಿ: ನಿಮ್ಮ ಕ್ಷೇತ್ರದ ಅಭಿವೃದ್ಧಿಗಾಗಿ ಸೂಕ್ತ ಅಭ್ಯರ್ಥಿಯನ್ನು ಕಾಂಗ್ರೆಸ್  ಕಣಕ್ಕೆ ಇಳಿಸಿದೆ. ಮತದಾರರು ಬಹುಮತದಿಂದ  ಅಶೋಕ ಮನಗೂಳಿರನ್ನು ಆಯ್ಕೆ ಮಾಡಿ, ವಿಧಾನಸಭಾ ಪ್ರವೇಶಿಸುವಂತೆ ಆಶೀರ್ವಾದ ಮಾಡಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಹೇಳಿದರು. ಸಿಂದಗಿ ವಿಧಾನಸಭಾ ಉಪಚುನಾವಣೆ ಅಂಗವಾಗಿ ಪಕ್ಷದ ಅಭ್ಯರ್ಥಿ ಅಶೋಕ ಮನಗೂಳಿ ಪರ ಕಣೋಳ್ಳಿ ಗ್ರಾಮದಲ್ಲಿ ಇಂದು ನಡೆದ ಪ್ರಚಾರ ಸಭೆಯಲ್ಲಿ ಸನ್ಮಾನ ಸ್ವೀಕರಿಸಿ  ಅವರು ಮಾತನಾಡಿದರು.  ಈ ಕ್ಷೇತ್ರದ ಬದಲಾವಣೆಗಾಗಿ ಅಶೋಕ ಅವರ ತಂದೆ  …

Read More »