ಗೋಕಾಕ: ನಗರದ ನಾಯಕ ಗಲ್ಲಿಯಲ್ಲಿ ಶ್ರೀ ಗಜಾನನ ಯುವಕ ಮಂಡಳಿ ವತಿಯಿಂದ ಸರಳವಾಗಿ ಗಣೇಶೋತ್ಸವ ಆಚರಿಸಿ, ರಂಗೋಲಿ ಸ್ಪರ್ಧೆ ಸಹ ಏರ್ಪಡಿಸಲಾಗಿತ್ತು. ನಂತರ ಗಜಾನನ ಯುವಕ ಮಂಡಳಿಯಿಂದ ರಂಗೋಲಿ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಎಸ್ಟಿ ಮೋರ್ಚಾ ಅಧ್ಯಕ್ಷ ರವಿ ಲಕ್ಕಪ್ಪ ಮುಡ್ಡಪ್ಪಗೋಳ ,ಎಸ್ಪಿ ಉಪಾಧ್ಯಕ್ಷರಾದ ಪುಂಡಲಿಕ ಪೂಜಾರಿ, ಪರಶುರಾಮ್ ಪೂಜಾರಿ, ಆನಂದ್ ಪೂಜೇರಿ ಲಕ್ಷ್ಮಣ್ ಮುಡ್ಡಪ್ಪಗೋಳ, ಭೀಮರಾಯ ಪೂಜೇರಿ, ಪ್ರದೀಪ್ ತಳವಾರ, ಜಿಲ್ಲಾ ರೈತ …
Read More »ಇಂದಿನ ಯುವಕರು ಸರ್ ಎಂ ವಿಶ್ವೇಶ್ವರಯ್ಯ ಅವರ ಹಾದಿಯಲ್ಲಿ ಸಾಗಿ: ಶಿವನಗೌಡ ಪಾಟೀಲ್
ಗೋಕಾಕ :ಸರ್ ಎಂ.ವಿಶ್ವೇಶ್ವರಯ್ಯ ಅವರ ಜನ್ಮ ದಿನದ ಪ್ರಯುಕ್ತ 1968ರಿಂದ ಪ್ರತಿ ವರ್ಷ ಸೆಪ್ಟೆಂಬರ್ 15ನೇ ತಾರೀಖನ್ನು ಭಾರತದಲ್ಲಿ ಇಂಜಿನಯರ್ಗಳ ದಿನಾಚರಣೆ ಎಂದು ಆಚರಿಸಲಾಗುತ್ತಿದ್ದು, ಆ ಮೂಲಕ ವಿಶ್ವೇಶ್ವರಯ್ಯ ಅವರ ಜೀವನವನ್ನು, ಅವರು ಮಾಡಿದ ಸಾಧನೆಯನ್ನು ಸ್ಮರಿಸಿಕೊಳ್ಳುವ ಕೆಲಸ ಆಗುತ್ತಿದೆ. ನಗರದ ಲಕ್ಷ್ಮೀ ದೇವಸ್ಥಾನ ಹತ್ತಿರವಿರುವ ಸರ್ ಎಂ ವಿಶ್ವೇಶ್ವರಯ್ಯ ಅವರ ವೃತ್ತದಲ್ಲಿ ಸರ್ ಎಂ ವಿಶ್ವೇಶ್ವರಯ್ಯ ಅವರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ವಿಶ್ವೇಶ್ವರಯ್ಯ ಸೊಸೈಟಿಯ ಅಧ್ಯಕ್ಷರಾದ ಶಿವನಗೌಡ ಪಾಟೀಲ್ …
Read More »ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಅಡಿಪಾಯವನ್ನು ಹಾಕಿಕೊಂಡಿದೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ
ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ನಿರೀಕ್ಷಿತ ಸ್ಥಾನಗಳನ್ನು ಗಳಿಸಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಇಲ್ಲಿನ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಇಂದು ನಡೆದ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆಯ್ಕೆಯಾದ ಕಾಂಗ್ರೆಸ್ ಸದಸ್ಯರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ಹೊರಗಿನವರಿಗೆ ಕಾಂಗ್ರೆಸ್ ಪಕ್ಷ ಹಿನ್ನಡೆ ಅನುಭವಿಸಿದೆ ಎಂಬಂತೆ ಬಿಂಬಿತವಾಗಿದೆ. ಆದರೆ, ನಮ್ಮ ನಿರೀಕ್ಷೆಗೆ ತಕ್ಕಷ್ಟೇ ಸ್ಥಾನಗಳನ್ನು ನಾವು ಚುನಾವಣೆಯಲ್ಲಿ ಗಳಿಸಿದ್ದೇವೆ ಎಂದರು. ದಕ್ಷಿಣ ವಿಧಾನಸಭಾ …
Read More »ರಾಜಾಪೂರದಲ್ಲಿ ಗಜಾನನ ಉತ್ಸವಕ್ಕೆ ಚಾಲನೆ ನೀಡಿದ ರಾಹುಲ್ ಜಾರಕಿಹೊಳಿ, ಸರ್ವೋತ್ತಮ ಜಾರಕಿಹೊಳಿ
ಅರಭಾವಿ: ಸಮೀಪದ ರಾಜಾಪೂರ ಗ್ರಾಮದಲ್ಲಿ ಗಣೇಶ ಚತುರ್ಥಿ ಅಂಗವಾಗಿ ಬೀರಸಿದ್ದೇಶ್ವರ ಗಜಾನನ ಯುವಕ ಮಂಡಳದ ವತಿಯಿಂದ ಇಂದು ಹಮ್ಮಿಕೊಂಡಿದ್ದ ಗಜಾನನ ಉತ್ಸವಕ್ಕೆ ಯುವ ಮುಖಂಡರಾದ ರಾಹುಲ್ ಜಾರಕಿಹೊಳಿ ಹಾಗೂ ಸರ್ವೋತ್ತಮ ಜಾರಕಿಹೊಳಿ ಅವರು ಚಾಲನೆ ನೀಡಿದರು. ನಂತರ ಮಾತನಾಡಿದ ರಾಹುಲ್ ಜಾರಕಿಹೊಳಿ ಅವರು, ಯುವಕ ಮಂಡಳದಿಂದ ಗ್ರಾಮದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಕ್ರೀಡಾಕೂಟಗಳನ್ನು ಆಯೋಜಿಸಬೇಕು. ಜೊತೆಗೆ ಗ್ರಾಮದಲ್ಲಿನ ಎಲ್ಲ ಮಕ್ಕಳು ಶಿಕ್ಷಣ ಪಡೆಯುವಂತೆ ಸಂಘದಿಂದ ಮಕ್ಕಳನ್ನು ಪ್ರೋತ್ಸಾಹಿಸಬೇಕೆಂದು ಸಲಹೆ ನೀಡಿದರು. …
Read More »ಸೆ.27 ಕ್ಕೆ ಕರ್ನಾಟಕ ಬಂದ್! ಸರ್ಕಾರದ ವಿರುದ್ಧ ಮತ್ತೆ ಹೋರಾಟಕ್ಕೆ ಮುಂದಾದ ಅನ್ನದಾತರು
ಮೈಸೂರು: ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಕರ್ನಾಟಕ ಬಂದ್ ಗೆ ರಾಜ್ಯ ರೈತ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದ್ದು, ಸೆಪ್ಟೆಂಬರ್ 27ಕ್ಕೆ ಕರ್ನಾಟಕ ಬಂದ್ ನಡೆಸಲಾಗುವುದು ಎಂದು ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರಬೂರು ಶಾಂತಕುಮಾರ್ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ 3 ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಸೆ.27ರಂದು ಸಂಯುಕ್ತ ಕಿಸಾನ್ ಮೋರ್ಚಾ ಬಂದ್ ಗೆ ಕರೆ ನೀಡಿದ್ದು, ರೈತ ಸಂಘಟನೆ ಸೇರಿದಂತೆ ವಿವಿಧ ಸಂಘಟನೆಗಳು ಪ್ರತಿಭಟನೆಗೆ ಬೆಂಬಲ ಸೂಚಿವೆ ಎಂದರು. …
Read More »ಬಡಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾಗಿ: ಕೆಪಿಸಿಸಿ ಕಾರ್ಯಾಧಕ್ಷ ಸತೀಶ್ ಜಾರಕಿಹೊಳಿ
ಚಿಕ್ಕೋಡಿ: ರಾಯಬಾಗ ಮತಕ್ಷೇತ್ರದ ನಾಗರಮುನ್ನೋಳಿಯಲ್ಲಿ ಹೊಸದಾಗಿ ನಿರ್ಮಿಸಲಾಗಿರುವ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯವನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಇಂದು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಭೀಮ ವಸತಿ ನಿಲಯದ ಹೊಸ ಕಟ್ಟಡದ ಉದ್ಘಾಟನೆಯನ್ನೂ ಮಾಡಿದರು. ನಂತರ ಮಾತನಾಡಿದ ಅವರು, ಪಕ್ಷ ಸಂಘಟನೆಯಲ್ಲಿ ಎಲ್ಲ ಕಾರ್ಯಕರ್ತರು ಒಗ್ಗಟ್ಟಾಗಿ ಶ್ರಮಿಸಬೇಕು. ಪಕ್ಷದ ನಂತರದ ಬ್ಲಾಕ್ ವ್ಯಾಪ್ತಿಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಸಲಹೆ ನೀಡಲಾಗಿದೆ. ಬಡಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾಗಿ: ಸಮಾಜದಿಂದ ವಿವಿಧ ಸೌಲಭ್ಯಗಳನ್ನು …
Read More »ಸಿಡಿಲು ಬಡಿದು ಮೃತಪಟ್ಟ ಕುಟುಂಬಗಳಿಗೆ ಶಾಸಕ ರಮೇಶ್ ಜಾರಕಿಹೊಳಿ ಚೆಕ್ ವಿತರಣೆ!
ಗೋಕಾಕ: ದಿ.23-4-2021ರಂದು ಸಿಡಿಲು ಬಡಿದು ಮೃತಪಟ್ಟ ಕುಟುಂಬಗಳಾದ ರಾಜನಕಟ್ಟಿ ಗ್ರಾಮದ ಅನುಸೂಯಾ ಬಾದರವಾಡಿ ಹಾಗೂ ಅಕ್ಕತಂಗೇರಹಾಳ ಗ್ರಾಮದ ಬಸವ್ವ ವ್ಯಾಪಾರಗಿ ಅವರಿಗೆ ಮಾಜಿ ಸಚಿವರು ಹಾಗೂ ಶಾಸಕರಾದ ರಮೇಶ್ ಜಾರಕಿಹೊಳಿ* ಅವರು ಜಿಲ್ಲಾಧಿಕಾರಿಗಳ ನಿಧಿ ನಾಲ್ಕು ಲಕ್ಷ ಹಾಗೂ ಮುಖ್ಯಮಂತ್ರಿ ಪರಿಹಾರ ನಿಧಿ ಒಂದು ಲಕ್ಷ ಸೇರಿ ಒಟ್ಟು 5 ಲಕ್ಷ ರೂಗಳ ಚೇಕನ್ನು ಶುಕ್ರವಾರ ವಿತರಿಸಿದರು. ಈ ಸಂದರ್ಭದಲ್ಲಿ ಮಾಜಿ ಜಿಪಂ ಸದಸ್ಯ ಟಿ ಆರ್ ಕಾಗಲ, ಗ್ರೇಡ್ …
Read More »ಕರ್ತವ್ಯ ನಿರತ ವೈದ್ಯರ ಮೇಲೆ ಗೋಕಾಕ ಪಿಎಸ್ಐ ದರ್ಪ : ಕಾನೂನು ಕ್ರಮಕ್ಕೆ ಆಗ್ರಹ !
ಗೋಕಾಕ ನಗರದ ಸರಕಾರಿ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವೈದ್ಯರು ಹಾಗೂ ಸಿಬ್ಬಂದಿಗಳ ಮೇಲೆ ಅಸಭ್ಯ ವರ್ತನೆ ಹಾಗೂ ಹಲ್ಲೆ ಮಾಡಲು ಯತ್ನಿಸಿದ ಗೋಕಾಕ ಶಹರ್ ಪೋಲಿಸ್ ಠಾಣೆಯ ಪಿಎಸ್ಐ ಅಮ್ಮಿನಬಾವಿ ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಕರ್ನಾಟಕ ರಾಜ್ಯ ಸರಕಾರಿ ವೈದ್ಯಾಧಿಕಾರಿಗಳ ಸಂಘ ಬೆಳಗಾವಿ ಜಿಲ್ಲಾ ಘಟಕದಿಂದ ಮನವಿ ಸಲ್ಲಿಸಿದರು. ಗೋಕಾಕ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಕರ್ತವ್ಯ ನಿರತರಾದ ಡಾ.ವಿಶ್ವನಾಥ …
Read More »ಪ್ರಶಸ್ತಿಗಾಗಿ ಬಿಜೆಪಿ ಕಂಡಲೆಲ್ಲ ಶೌಚಾಲಯ ನಿರ್ಮಾಣ: ಸತೀಶ ಜಾರಕಿಹೊಳಿ ವಾಗ್ದಾಳಿ
ಬೆಳಗಾವಿ: ” ಪ್ರಶಸ್ತಿಗಾಗಿ ಬಿಜೆಪಿ ಕಂಡಲೆಲ್ಲ ಶೌಚಾಲಯ ನಿರ್ಮಾಣ ಮಾಡಿ, ಮಾರ್ಕ್ಸ್ ತೆಗೆದುಕೊಂಡಿದೆ. ಸದ್ಯ ಶೌಚಾಲಯಗಳು ನಿರ್ವಹಣೆ, ನೀರಿನ ವ್ಯವಸ್ಥೆ ಇಲ್ಲದೆ ಹಾಳಾಗಿವೆ. ಲೆಕ್ಕ ಮಾತ್ರ ಪಕ್ಕಾ ಆಗಿದೆ ” ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ವಾಗ್ದಾಳಿ ನಡೆಸಿದರು. ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಬುಧವಾರ ರಾಜೀವ್ ಗಾಂಧಿ ಪಂಚಾಯತ್ ಸಂಘಟನೆ ವತಿಯಿಂದ ಆಯೋಜಿಸಿದ್ದ, ಜಿಲ್ಲಾ ಮಟ್ಟದ ಕಾಂಗ್ರೆಸ್ ಸಮಾವೇಶಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಚಾಲನೆ …
Read More »ಹೆಬ್ಬಾಳದಲ್ಲಿ ವಚನ ಪಲ್ಲಕ್ಕಿ ಉತ್ಸವ; ನೂತನ ಗೃಂಥಾಲಯ ಉದ್ಘಾಟಿಸಿದ ಯುವ ನಾಯಕ ರಾಹುಲ್ ಜಾರಕಿಹೊಳಿ
ಹುಕ್ಕೇರಿ: ತಾಲೂಕಿನ ಹೆಬ್ಬಾಳ ಗ್ರಾಮದ ಬಸವೇಶ್ವರ ಮಂದಿರದಲ್ಲಿ ಬಸವ ಬಳಗದ ವತಿಯಿಂದ ಶ್ರಾವಣ ಮಾಸದ ನಿಮಿತ್ಯ ಇಂದು ಹಮ್ಮಿಕೊಂಡಿದ್ದ ಶರಣರ ಚರಿತಾಮೃತ ಮಹಾಮಂಗಲೋತ್ಸವ ಹಾಗೂ ವಚನ ಪಲ್ಲಕ್ಕಿ ಉತ್ಸವ ಶೃದ್ಧಾಭಕ್ತಿಯಿಂದ ನೆರವೇರಿತು. ಕಾಂಗ್ರೆಸ್ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಬಸವೇಶ್ವರ ಮಂದಿರದಲ್ಲಿ ನೂತನ ಗೃಂಥಾಲಯವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ರಾಹುಲ್ ಅವರನ್ನು ಬಸವ ಬಳಗದಿಂದ ಸತ್ಕರಿಸಲಾಯಿತು. ಇದಕ್ಕೂ ಮೊದಲು ಗ್ರಾಮದಲ್ಲಿ ವಚನ ಪಲ್ಲಕ್ಕಿ ಉತ್ಸವ …
Read More »
CKNEWSKANNADA / BRASTACHARDARSHAN CK NEWS KANNADA