Breaking News

cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ನಿರೀಕ್ಷಿತ ಸಾಧನೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

ಬೆಂಗಳೂರು: ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ನಿರೀಕ್ಷಿತ ಸಾಧನೆ ಮಾಡಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಥಮ ಬಾರಿಗೆ ಪಕ್ಷದ ಚಿಹ್ನೆಯ ಮೇಲೆ ಚುನಾವಣೆ ಎದುರಿಸಿದ್ದೇವೆ. ಸ್ಥಳೀಯವಾಗಿ ಶಾಸಕರು ಹಾಗೂ ಸಂಸದರು ಬಿಜೆಯವರೇ ಆಗಿದ್ದಾರೆ. ಆಡಳಿತ ಸರ್ಕಾರವು ಅವರದ್ದೇ ಇದೆ. ಹೀಗಾಗಿ, ಸಹಜವಾಗಿ ಬಿಜೆಪಿ ಹೆಚ್ಚು ಸ್ಥಾನಗಳಲ್ಲಿ ಜಯಗಳಿಸಿದೆ. ಇದರ ಹೊರತಾಗಿಯೂ ಕಾಂಗ್ರೆಸ್ ಉತ್ತಮ ಸಂಖ್ಯೆಯ ಸ್ಥಾನಗಳನ್ನು ಗಳಿಸಿದೆ …

Read More »

ಶಿಕ್ಷಕರು ಈ ರಾಷ್ಟ್ರದ ಶಿಲ್ಪಿಗಳು : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ

ಮೂಡಲಗಿ : ಶಿಕ್ಷಕರಿಂದ ಮಾತ್ರ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯ.  ಶಿಕ್ಷಕರು ಈ ರಾಷ್ಟ್ರದ ಶಿಲ್ಪಿಗಳು ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಭಾರತ ರತ್ನ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಜಯಂತಿ ನಿಮಿತ್ಯ ಇಲ್ಲಿಯ ಈರಣ್ಣ ದೇವಸ್ಥಾನದ ಕೆ.ಎಚ್.ಸೋನವಾಲಕರ ಕಲ್ಯಾಣ ಮಂಟಪದಲ್ಲಿ ರವಿವಾರದಂದು ಜರುಗಿದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಳೆದ ಒಂದೂವರೆ ದಶಕದಿಂದ ಅರಭಾವಿ ಮತಕ್ಷೇತ್ರದಲ್ಲಿ ಶಿಕ್ಷಣದ ಸರ್ವತೋಮುಖ ಏಳ್ಗೆಗಾಗಿ ಪ್ರಥಮ ಪ್ರಾಶಸ್ತ್ಯ ನೀಡಲಾಗಿದೆ. …

Read More »

ಸಾರ್ವಜನಿಕ ಗಣೇಶೋತ್ಸವಕ್ಕೆ ಷರತ್ತುಬದ್ಧ ಅನುಮತಿ!

ಬೆಂಗಳೂರು : ರಾಜ್ಯದಲ್ಲಿ ಸಾರ್ವಜನಿಕ ಗಣೇಶೋತ್ಸವದ ಕುರಿತಂತೆ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದ್ದು, ಸಾರ್ವಜನಿಕ ಗಣೇಶ ಹಬ್ಬ ಆಚರಣೆಗೆ ಷರತ್ತುಬದ್ಧ ಅನುಮತಿ ನೀಡಲಾಗಿದೆ. ಇಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಮಹತ್ವದ ಸಭೆಯಲ್ಲಿ ರ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಲಾಗಿದ್ದು, ಸಾರ್ವಜನಿಕ ಗಣೇಶೋತ್ಸವ ಕೇವಲ ಮೂರು ದಿನ ಮಾತ್ರ ಅವಕಾಶ ನೀಡಲಾಗಿದೆ. ಸರ್ಕಾರಕ್ಕೆ ತಾಂತ್ರಿಕ ಸಲಹಾ ಸಮಿತಿ ವರದಿ ಆಧರಿಸಿ ಸಿಎಂ ಬಸವರಾಜ …

Read More »

ಡಾ.ಸರ್ವಪಲ್ಲಿ ರಾಧಾಕೃಷ್ಣನ್  ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಶಿಕ್ಷಕರ ದಿನಾಚರಣೆ ಆಚರಿಸಿದ ರಾಹುಲ್, ಪ್ರೀಯಾಂಕ ಜಾರಕಿಹೊಳಿ.

ಗೋಕಾಕ : ಇಲ್ಲಿನ ಹಿಲ್ ಗಾರ್ಡನ್ ಕಚೇರಿಯಲ್ಲಿ ಕಾಂಗ್ರೆಸ್ ಯುವ ನಾಯಕ ರಾಹುಲ್ ಹಾಗೂ ಪ್ರಿಯಾಂಕಾ ಜಾರಕಿಹೊಳಿ ಅವರು ಡಾ.ಸರ್ವಪಲ್ಲಿ ರಾಧಾಕೃಷ್ಣನ್  ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಶಿಕ್ಷಕರ ದಿನಾಚರಣೆಯನ್ನು ಭಾನುವಾರ ಆಚರಿಸಿದರು. ಬಳಿಕ ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಮಾತನಾಡಿ ‘ ಶಿಕ್ಷಕ ‘ ಹೆಸರೇ ಸೂಚಿಸುವಂತೆ ಶಿ-ಶಿಸ್ತು, ಕ್ಷ-ಕ್ಷಮೆ, ಕ-ಕರುಣೆ ಅಥವಾ ಶಿಸ್ತುಗಾರನಾಗಿ ವಿದ್ಯಾರ್ಥಿಗಳ ಜ್ನಾನದಾಹಕ್ಕೆ ತಕ್ಕಂತೆ, ಕ್ಷಣ ಕ್ಷಣಕ್ಕು ಉಲ್ಲಾಸ ಬರಿತನಾಗಿ , ಕಠಿಣವಾದದ್ದನ್ನು …

Read More »

ಸೂಫಿಗಳು, ಶರಣರು ಒಂದು ನಾಣ್ಯದ ಎರಡು ಮುಖಗಳಿದ್ದಂತೆ : ಮುರುಘರಾಜೇಂದ್ರ ಶ್ರೀಗಳು

ಗೋಕಾಕ: ಸೂಫಿಗಳು, ಶರಣರು ಒಂದು ನಾಣ್ಯದ ಎರಡು ಮುಖಗಳಿದ್ದಂತೆ ಎಂದು ಶೂನ್ಯ ಸಂಪಾದನ ಮಠದ ಪೀಠಾಧಿಪತಿ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಗಳು ಹೇಳಿದರು. ಶುಕ್ರವಾರದಂದು ಸಾಯಂಕಾಲ ಇಲ್ಲಿನ ವಿವೇಕಾನಂದ ನಗರದ ಮುಸ್ಲಿಂ ಸಮಾಜದ ಯುವಕ ಶಕೀಲ ಧಾರವಾಡಕರ ಅವರ ಮನೆಯಲ್ಲಿ ಶೂನ್ಯ ಸಂಪಾದನ ಮಠದ ವತಿಯಿಂದ ಹಮ್ಮಿಕೊಂಡ ಶ್ರೀಗಳ ನಡಿಗೆ ಭಕ್ತರ ಮನೆಗಳ ಕಡೆಗೆ ಕಾರ್ಯಕ್ರಮದ ನೇತೃತ್ವ ವಹಿಸಿ ಅವರು ಮಾತನಾಡಿದರು. ಸೂಫಿ ಸಂತರು ದೇಶಾದ್ಯಂತ ಪ್ರವಾಸ ಮಾಡಿ ಮಾನವ ಧರ್ಮವನ್ನು …

Read More »

2 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಕೆಎಂಎಫ್ ಆಡಳಿತ ಮಂಡಳಿ ಹಾಗೂ ಅಧಿಕಾರಿಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ

ಬೆಂಗಳೂರು : ಕಳೆದ ಎರಡು ವರ್ಷಗಳಿಂದ ಕೆಎಂಎಫ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ತೃಪ್ತಿ ತಮಗಿದೆ. ನಂದಿನಿ ಉತ್ಪನ್ನಗಳನ್ನು ದೇಶಾಧ್ಯಂತ ವಿಸ್ತರಿಸಿ ಕೆಎಂಎಫ್‍ನ್ನು ನಂ.1 ಸಂಸ್ಥೆಯನ್ನಾಗಿ ಪರಿವರ್ತಿಸುವ ಇರಾದೆ ಹೊಂದಿರುವುದಾಗಿ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶುಕ್ರವಾರ ಸಂಜೆ ಖಾಸಗಿ ಹೊಟೇಲ್‍ನಲ್ಲಿ ಕೆಎಂಎಫ್ ಅಧ್ಯಕ್ಷರಾಗಿ ಎರಡು ವರ್ಷ ಪೂರೈಸಿದ ನಿಮಿತ್ಯ ಜರುಗಿದ ಆಡಳಿತ ಮಂಡಳಿ ಮತ್ತು ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಹಿರಿಯರ ಆಶಯದಂತೆ ಕೆಎಂಎಫ್‍ನ ಸಮಗ್ರ …

Read More »

ಬೆಳಗಾವಿ ಜಿಲ್ಲೆಯ ಎಲ್ಲ ಶಿಕ್ಷಕರಿಗೆ ಶಿಕ್ಷಕರ ದಿನಾಚರಣೆಯ ಸಂದೇಶ ಕಳುಹಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

ಗೋಕಾಕ: ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕರಾದ ಸತೀಶ ಜಾರಕಿಹೊಳಿ ಅವರು ಬೆಳಗಾವಿ ಜಿಲ್ಲೆಯ ಎಲ್ಲ ಶಿಕ್ಷಕರು, ಎಲ್ಲ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಬೆಳಗಾವಿ ಮತ್ತು ಚಿಕ್ಕೋಡಿ ಡಿಡಿಪಿಐ ಗಳಿಗೆ ಶಿಕ್ಷಕರ ದಿನಾಚರಣೆಯ ಶುಭಾಶಯಗಳನ್ನು ಕೋರಿದ್ದಾರೆ. ಜೊತೆಗೆ ಎಲ್ಲರಿಗೂ ವಿಶೇಷ ಸಂದೇಶ ಒಳಗೊಂಡಿರುವ ಶುಭಾಶಯ ಪತ್ರಗಳನ್ನು ವಿತರಿಸಿದ್ದಾರೆ. ನಗರದ ಹಿಲ್ ಗಾರ್ಡನ್ ಕಚೇರಿಯಲ್ಲಿ ಇಂದು ಗೋಕಾಕ ಹಾಗೂ ಮೂಡಲಗಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೂಲಕ ಸತೀಶ ಅವರು ಎಲ್ಲ ತಾಲೂಕಿನ …

Read More »

ಲೋಳಸೂರ ಸೇತುವೆಗೆ ಚಾಲನೆ; ಸಂಚಾರ ಪುನರಾರಂಭ ಶಾಸಕರಾದ ಸತೀಶ ಜಾರಕಿಹೊಳಿ ಮತ್ತು ಬಾಲಚಂದ್ರ ಜಾರಕಿಹೊಳಿಯವರ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ

ಗೋಕಾಕ: ಕಳೆದ ಎರಡು ತಿಂಗಳ ಹಿಂದೆ ಘಟಪ್ರಭಾ ನದಿ ಪ್ರವಾಹದಿಂದ ಜಲಾವೃತಗೊಂಡು ಸಂಪೂರ್ಣ ಕೊಚ್ಚಿ ಹೋಗಿದ್ದ ಜತ್ತ-ಜಾಂಬೋಟಿ ರಾಜ್ಯ ಹೆದ್ದಾರಿಯಲ್ಲಿರುವ ಲೋಳಸೂರ ಸೇತುವೆಯ ದುರಸ್ತಿ ಕಾಮಗಾರಿ ಮುಕ್ತಾಯಗೊಂಡಿದ್ದು, ಸೇತುವೆಗೆ ಇಂದು ಚಾಲನೆ ನೀಡಲಾಗಿದೆ. ಇಂದಿನಿಂದ ಮತ್ತೆ ವಾಹನಗಳ ಸಂಚಾರ ಆರಂಭವಾಗಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹಾಗೂ ಕೆಎಂಎಫ್ ಅಧ್ಯಕ್ಷರು, ಶಾಸಕರಾದ ಬಾಲಚಂದ್ರ ಜಾರಕಿಹೊಳಿ ಅವರ ಸೂಚನೆಯ ಮೇರೆಗೆ ಸೇತುವೆಯನ್ನು ಇಂದು ಉದ್ಘಾಟಿಸಲಾಗಿದೆ. ಈ ಸಂದರ್ಭದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರ …

Read More »

ಉನ್ನತ ಶಿಕ್ಷಣದಿಂದ ಜೀವನದಲ್ಲಿ ಯಶಸ್ಸು ಪಡೆಯಲು ಸಾಧ್ಯ: ಆರೋಗ್ಯಸ್ವಾಮಿ ಎ.ಕೆ

ಗೋಕಾಕ ಸೆ 4 :ವಿದ್ಯಾರ್ಥಿಗಳು ಉತ್ತಮ ಸಂಸ್ಕಾರವನ್ನು ರೂಢಿಸಿಕೊಂಡಿರುವುದರಿಂದ ಉನ್ನತ ಶಿಕ್ಷಣ ಅಥವಾ ಉದ್ಯೋಗದೊಂದಿಗೆ ತಮ್ಮ ಜೀವನದಲ್ಲಿ ಯಶಸ್ಸು ಪಡೆಯಲು ಸಾಧ್ಯವಿದೆ ಎಂದು ಬಿಸಿಇ ,ಸಿಸಿಎ ಕಾಲೇಜ ಧಾರವಾಡದ ಪ್ರಾಚಾರ್ಯ ಆರೋಗ್ಯಸ್ವಾಮಿ ಎ.ಕೆ ಹೇಳಿದರು. ಶನಿವಾರದಂದು ನಗರದ ಶ್ರೀ ಚನ್ನಬಸವೇಶ್ವರ ವಿದ್ಯಾಪೀಠದ ಸಭಾಂಗಣದಲ್ಲಿ ನಡೆದ ಶ್ರೀ ಸಿದ್ದಲಿಂಗೇಶ್ವರ ಬಿಸಿಎ ಕಾಲೇಜ ಗೋಕಾಕ ಕೊನೆಯ ವರ್ಷದ ವಿದ್ಯಾರ್ಥಿಗಳ ಬಿಳ್ಕೋಡುಗೆ ಮತ್ತು ಪಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. …

Read More »

ಲೋಳಸೂರ ಸೇತುವೆ ಪರಿಶೀಲಿಸಿದ ಶಾಸಕ ಸತೀಶ ಜಾರಕಿಹೊಳಿ; ಸಂಚಾರಕ್ಕೆ ಮುಕ್ತಗೊಳಿಸುವಂತೆ ಸೂಚನೆ

ಗೋಕಾಕ: ಕಳೆದೆರಡು ತಿಂಗಳ ಹಿಂದೆ ಘಟಪ್ರಭಾ ನದಿ ಪ್ರವಾಹದಿಂದ ಜಲಾವೃತಗೊಂಡು ಸಂಪೂರ್ಣ ಕೊಚ್ಚಿ ಹೋಗಿದ್ದ ಜತ್ತ-ಜಾಂಬೋಟಿ ರಾಜ್ಯ ಹೆದ್ದಾರಿಯಲ್ಲಿರುವ ಲೋಳಸೂರ ಸೇತುವೆಯ ಕಾಮಗಾರಿ ಸದ್ಯ ಮುಕ್ತಾಯಗೊಂಡಿದ್ದು, ಸೇತುವೆಗೆ ಇಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ ಜಾರಕಿಹೊಳಿ ಅವರು ಭೇಟಿ ನೀಡಿ ಪರಿಶೀಲಿಸಿದರು. ಸತೀಶ ಜಾರಕಿಹೊಳಿ ಅವರು ಖುದ್ದಾಗಿ ಸೇತುವೆಯನ್ನು ಪರಿಶೀಲನೆ ಮಾಡಿ, ಕಾಮಗಾರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ನಾಳೆಯಿಂದ ಸೇತುವೆಯನ್ನು ಸಂಚಾರಕ್ಕೆ ಮುಕ್ತಗೊಳಿಸುವಂತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು. …

Read More »