ನವದೆಹಲಿ: ಆಸ್ಪತ್ರೆಗಳು ದೊಡ್ಡ ಉದ್ಯಮಗಳಾಗಿ ಮಾರ್ಪಟ್ಟಿವೆ ಮತ್ತು ಇವೆಲ್ಲವೂ ಮಾನವ ಜೀವಕ್ಕೆ ಅಪಾಯವನ್ನುಂಟು ಮಾಡುವ ಮೂಲಕ ನಡೆಯುತ್ತಿವೆ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ. ಖಾಸಗಿ ಆಸ್ಪತ್ರೆಗಳು ಸಣ್ಣ ವಸತಿ ಕಟ್ಟಡಗಳಿಂದ ಕಾರ್ಯನಿರ್ವಹಿಸಲು ಅನುಮತಿಸುವ ಬದಲು, ರಾಜ್ಯ ಸರ್ಕಾರಗಳು ಉತ್ತಮ ಆಸ್ಪತ್ರೆಗಳನ್ನು ಒದಗಿಸಬಹುದು. ‘ಅಂತಹ ಆಸ್ಪತ್ರೆಗಳನ್ನು ಮುಚ್ಚಬೇಕು’ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಎಂ.ಆರ್. ಶಾ ಅವರ ಪೀಠ, ‘ಆಸ್ಪತ್ರೆಗಳು ದೊಡ್ಡ ಉದ್ಯಮಗಳಾಗಿ ಮಾರ್ಪಟ್ಟಿವೆ. ಜೀವನ ವೆಚ್ಚದಲ್ಲಿ ಅವರು …
Read More »ವಿದ್ಯಾಭ್ಯಾಸಕ್ಕಾಗಿ ಹುಟ್ಟುರು ಬಿಟ್ಟು ಬಂದಿದ ಅಣ್ಣ ತಂಗಿ, ರಾತ್ರೊ ರಾತ್ರಿ ಶವವಾದರು.
ನೆಲಮಂಗಲ: ಧಾರಾಕಾರ ಮಳೆಯಿಂದಾಗಿ ಮನೆ ಮೇಲೆ ಪಕ್ಕದ ಗೋಡೆ ಕುಸಿದು ಬಿದ್ದು, ಸ್ಥಳದಲ್ಲೇ ಅಣ್ಣ-ತಂಗಿ ಇಬ್ಬರೂ ಮೃತಪಟ್ಟ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ನಗರದ ಬಿನ್ನಮಂಗಲ ಗ್ರಾಮದಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ. ವೇಣುಗೋಪಾಲ(22) ಮತ್ತು ಕಾವ್ಯ(20) ಮೃತ ದುರ್ದೈವಿಗಳು. ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಸಿ.ಎಸ್.ಪುರ ಮೂಲದ ಅಣ್ಣ-ತಂಗಿ ಇಬ್ಬರೂ ವಿದ್ಯಾಭ್ಯಾಸದ ಸಲುವಾಗಿ ನೆಲಮಂಗಲದಲ್ಲಿ ಹನುಮಂತರಾಯಪ್ಪ ಎಂಬುವರಿಗೆ ಸೇರಿದ ಸೀಟಿನ ಮನೆಯಲ್ಲಿ ಬಾಡಿಗೆಗೆ ವಾಸವಿದ್ದರು. ಸೋಮವಾರ ರಾತ್ರಿ ಎಂದಿನಂತೆ ಊಟ …
Read More »ಅಸೆಂಬ್ಲಿಯನ್ನು ವಿಸರ್ಜಿಸಲು ಶಿಫಾರಸು ಮಾಡ್ತಾರಾ ಸಿಎಂ!
ಬೆಂಗಳೂರು, ಜು.20- ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನವದೆಹಲಿಯಿಂದ ವಾಪಸಾದ ಎರಡು ದಿನಗಳ ನಂತರವೂ ನಾಯಕತ್ವ ಬದಲಾವಣೆಯ ಚರ್ಚೆ ಮುಂದುವರಿಯುತ್ತಲೇ ಇದೆ. ದೆಹಲಿಯಲ್ಲಿ ನಡೆದ ಚರ್ಚೆಗಳು ಮತ್ತು ನಂತರದ ಬೆಳವಣಿಗೆಗಳ ಬಗ್ಗೆ ಯಾವುದೇ ಸ್ಪಷ್ಟತೆ ಸಿಗುತ್ತಿಲ್ಲ. ಯಡಿಯೂರಪ್ಪ ಅವರೇ ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಕೆಲ ಸಚಿವರು ಹೇಳುತ್ತಿದ್ದಾರೆ. ಆದರೆ, ಈ ತಿಂಗಳ ಅಂತ್ಯದಲ್ಲಿ ಅಥವಾ ಆಗಸ್ಟ್ ತಿಂಗಳಿನಲ್ಲಿ ಏನು ಬೇಕಾದರೂ ಬದಲಾವಣೆಯಾಗಬಹುದು ಎಂದು ಪಕ್ಷದೊಳಗಿನ ಕೆಲವರು ಹೇಳುತ್ತಿದ್ದಾರೆ. ಜುಲೈ 26ರಂದು …
Read More »ಕೆಸರು ಗದ್ದೆಯಂತಿದ್ದ ರಸ್ತೆ ದಾಟಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು!
ಮೈಸೂರು: ಜುಲೈ 19ರಂದು ರಾಜ್ಯಾದ್ಯಂತ ಎಸ್ಎಸ್ಎಲ್ ಸಿ ಪರೀಕ್ಷೆಗಳು ಯಶಸ್ವಿಯಾಗಿ ನಡೆದಿವೆ. ಗಣಿತ, ಸಮಾಜ ವಿಜ್ಞಾನ ಮತ್ತು ವಿಜ್ಞಾನ ಪರೀಕ್ಷೆ ಮುಗಿದಿದ್ದು, ಜುಲೈ 22 ರಂದು ಕನ್ನಡ, ಹಿಂದಿ, ಇಂಗ್ಲಿಷ್ ಸೇರಿದಂತೆ ಭಾಷಾ ವಿಷಯಗಳ ಪರೀಕ್ಷೆ ನಡೆಯಲಿದೆ. ಸದ್ಯ ನಿನ್ನೆ ನಡೆದ ಪರೀಕ್ಷೆ ವೇಳೆ ಆದ ಘಟನೆಯೊಂದು ಭಾರಿ ಸುದ್ದಿಯಾಗಿದೆ. ಶಿಕ್ಷಣ ಸಚಿವರು, ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದಾರೆ. ನಿನ್ನೆ ಎಸ್ಎಸ್ಎಲ್ಸಿ ಪರೀಕ್ಷೆ ಯಶಸ್ವಿಯಾಗಿ ಮುಗಿದಿದೆ. ಆದರೆ …
Read More »ಸಿಎಂ ಹುದ್ದೆಗೆ ಏರೋದಕ್ಕೆ ಲಾಭಿ ಆರಂಭ! ಈ ರೇಸ್ ನಲ್ಲಿ ಯಾರ ಇದ್ದಾರೆ ನೋಡಿ.
ಬೆಂಗಳೂರು : ರಾಜ್ಯದಲ್ಲಿ ಜುಲೈ.26ರ ಲೆಕ್ಕಾಚಾರ ಗರಿಗೆದರಿದೆ. ಸಿಎಂ ಬದಲಾವಣೆ ಬಹುತೇಕ ಫಿಕ್ಸ್ ಎಂದೇ ಹೇಳಲಾಗುತ್ತಿದೆ. ಈ ಹಿನ್ನಲೆಯಲ್ಲಿ ಸಿಎಂ ಹುದ್ದೆಗೆ ಏರೋದಕ್ಕೆ ಲಾಭಿ ಆರಂಭಗೊಂಡಿದ್ದು, ಈ ರೇಸ್ ನಲ್ಲಿ ಬಿಜೆಪಿಯ ಹಾಲಿ ಸಚಿವರು, ಶಾಸಕರು ತೆರೆ ಮರೆಯಲ್ಲಿ ಲಾಭಿ ನಡೆಸುತ್ತಿದ್ದಾರೆ. ಅದರಲ್ಲೂ ಲಿಂಗಾಯತ ಸಮುದಾಯದ ಅನೇಕ ಹೆಸರುಗಳು ಸಿಎಂ ಪಟ್ಟದ ರೇಸ್ ನಲ್ಲಿ ಮುಂಚೂಣಿಯಲ್ಲಿ ಕೇಳಿ ಬರುತ್ತಿದೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ದೆಹಲಿಯ ಪ್ರವಾಸದಲ್ಲಿ ಅನಾರೋಗ್ಯದ ನೆಪದಿಂದಾಗಿ ತಮ್ಮ …
Read More »ವಿರೋಧಿಗಳಿಗೆ ಮುಖ್ಯಮಂತ್ರಿ ಟಕ್ಕರ್! ಬಿಎಸ್ವೈಗೆ ಎರಡು ಟಾಸ್ಕ್ ಕೊಟ್ಟ ಹೈಕಮಾಂಡ್.
ಯಾವಾಗ ಸಿಎಂ ಬಿ. ಎಸ್. ಯಡಿಯೂರಪ್ಪ ದೆಹಲಿಗೆ ಹೋದರೋ, ಆಗಿನಿಂದಲೂ ರಾಜ್ಯದಲ್ಲಿ ಎದ್ದ ಗಾಳಿ ಸುದ್ದಿ ಅಂದರೆ, ಬಿಎಸ್ವೈ ರಾಜೀನಾಮೆ ನೀಡಲಿದ್ದಾರೆ ಎಂಬುದು. ಮೊದಲೇ ಕೆಲವು ತಿಂಗಳಿಂದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಬದಲಾವಣೆ ಬಗ್ಗೆ ವಿರೋಧಿಗಳು ಪದೇಪದೆ ಹೇಳಿಕೆ ಕೊಡುತ್ತಿರುವುದಕ್ಕೂ, ಬಿಎಸ್ವೈ ದೆಹಲಿಗೆ ಹಾರಿದ್ದಕ್ಕೂ ತಾಳೆ ಆಗುವಂತೆ ಅಂತೆ-ಕಂತೆ ಜೋರಾಗಿದ್ದ ಬೆನ್ನಲ್ಲೇ ಸಿಎಂ ಇದೀಗ ಸ್ಪಷ್ಟೀಕರಣ ಕೊಟ್ಟಿದ್ದಾರೆ. ಇದಲ್ಲದೆ, ದೆಹಲಿಯಲ್ಲಿ ಬಿ.ಎಸ್. ಯಡಿಯೂರಪ್ಪ ತಮ್ಮ ವಿರೋಧಿಗಳಿಗೆ ಠಕ್ಕರ್ ಕೂಡ ಕೊಟ್ಟಿದ್ದಾರೆ. ದೆಹಲಿಗೆ …
Read More »ರಸ್ತೆ ದಿಢೀರ ಕುಸಿತ, ಹೊಂಡ ಸೇರಿದ ಕಾರು!
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಳೆಯಾರ್ಭಟ ಜೋರಾಗಿದ್ದು, ದ್ವಾರಕಾ ಸೆಕ್ಟರ್ನಲ್ಲಿ ಕಾರ್ವೊಂದು ದಿಢೀರ್ ಆಗಿ ಕುಸಿದು ಬಿದ್ದಿರುವ ಘಟನೆ ನಡೆಯಿತು. ದ್ವಾರಕಾ ಸೆಕ್ಟರ್-18ರಲ್ಲಿ ರಸ್ತೆ ಮೇಲೆ ಚಲಿಸುತ್ತಿದ್ದ ವಾಹನವೊಂದು ರಸ್ತೆ ಕುಸಿತದಿಂದ ದಿಢೀರ್ ಆಗಿ ಭೂಮಿಯೊಳಗೆ ಸಿಲುಕಿಕೊಂಡಿತು. ತಕ್ಷಣವೇ ರಕ್ಷಣಾ ಕಾರ್ಯಾಚರಣೆ ನಡೆಸಿ, ಕಾರು ಮೇಲೆತ್ತಲಾಗಿದೆ. ಹೀಗಾಗಿ ಯಾವುದೇ ರೀತಿಯ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಪೊಲೀಸ್ ಕಾನ್ಸ್ಸ್ಟೇಬಲ್ ವಾಹನ ಚಲಾವಣೆ ಮಾಡಿಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಈ ಘಟನೆ …
Read More »ಬೆಳಗಾವಿಯ ಬಿಜೆಪಿ ಗೌಪ್ಯ ಸಭೆಯಲ್ಲಿ ನಡಿತಾ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಚರ್ಚೆ?
ಬೆಳಗಾವಿ: ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಚರ್ಚೆಗಳು ನಡೆಯುತ್ತಿರುವ ಸಂದರ್ಭದಲ್ಲೇ ಆಡಳಿತಾರೂಢ ಬಿಜೆಪಿ ಪ್ರಮುಖರ ಸಭೆ ಇಲ್ಲಿ ಸೋಮವಾರ ಜರುಗಿದೆ. ಬೆಳಗಾವಿ ಹಾಗೂ ಚಿಕ್ಕೋಡಿ ಸಂಘಟನಾತ್ಮಕ ಜಿಲ್ಲೆಗಳ ಪಕ್ಷದ ಪ್ರಮುಖರ ಸಭೆ ಗೌಪ್ಯವಾಗಿ ನಡೆದಿರುವುದು ಹಲವು ವಿಶ್ಲೇಷಣೆಗೆ ಮತ್ತು ಚರ್ಚೆಗಳಿಗೆ ಗ್ರಾಸವಾಗಿದೆ. ಪಕ್ಷದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಅರುಣ್ಕುಮಾರ್ ನೇತೃತ್ವದಲ್ಲಿ ನಡೆದ ಚರ್ಚೆಯಲ್ಲಿ ಸಚಿವ ಉಮೇಶ ಕತ್ತಿ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಶಾಸಕರಾದ ಮಹೇಶ ಕುಮಠಳ್ಳಿ, ದುರ್ಯೋಧನ ಐಹೊಳೆ, …
Read More »ಶೀಘ್ರವೇ ಗೋಕಾಕ-ಮೂಡಲಗಿಯಲ್ಲಿ ಹಾಲು ಶಿಥಿಲೀಕರಣ ಘಟಕಗಳು ಆರಂಭ : ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಜಿಲ್ಲಾ ಹಾಲು ಒಕ್ಕೂಟಕ್ಕೆ ಹಾಲು ಪೂರೈಸುತ್ತಿರುವ ರೈತ ಕಲ್ಯಾಣ ಸಂಘದ ಸದಸ್ಯರುಗಳ ೧೬ ವಾರಸುದಾರರಿಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಇತ್ತೀಚೆಗೆ ತಲಾ ೧೦ ಸಾವಿರ ರೂ.ಗಳ ಸಹಾಯಧನದ ಚೆಕ್ಗಳನ್ನು ವಿತರಿಸಿದರು. ಹಾಲು ಒಕ್ಕೂಟಕ್ಕೆ ಹಾಲು ಪೂರೈಕೆ ಮಾಡುತ್ತಿರುವ ೧೬ ಜನರು ಮೃತಪಟ್ಟಿದ್ದರಿಂದ ಅವರ ಕುಟುಂಬಗಳ ವಾರಸುದಾರರಿಗೆ ಜಿಲ್ಲಾ ಹಾಲು ಒಕ್ಕೂಟದಿಂದ ಚೆಕ್ಗಳನ್ನು ವಿತರಿಸಿದರು. ಜೊತೆಗೆ ಗುರ್ಲಾಪೂರ ಹಾಲು ಉತ್ಪಾದಕರ ಸಹಕಾರಿ ಸಂಘದ ಸಿಬ್ಬಂದಿಯೋರ್ವ ನಿವೃತ್ತಿಯಾದ …
Read More »ಎಟಿಎಂನಿಂದ ಹಣ ದೋಚಲು ಬಂದ ಖದೀಮರ ಗ್ಯಾಂಗ್!
ಶಿವಮೊಗ್ಗ:ಖದೀಮರ ಗ್ಯಾಂಗ್ ಎಟಿಎಂನಿಂದ ಹಣ ದೋಚಲು ಯತ್ನಿಸಿರುವ ಘಟನೆ ಜಿಲ್ಲೆಯ ಬಿ.ಹೆಚ್ ರಸ್ತೆಯಲ್ಲಿ ನಡೆದಿದೆ. ಶನಿವಾರ ತಡರಾತ್ರಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬಿ.ಹೆಚ್ ರಸ್ತೆಯಲ್ಲಿರುವ ಯೂನಿಯನ್ ಬ್ಯಾಂಕ್ಗೆ ಸಂಬಂಧಪಟ್ಟ ಎಟಿಎಂಗೆ ನುಗ್ಗಿದ ಖದೀಮರು, ಮಿಷನ್ನ್ನ ಸಂಪೂರ್ಣವಾಗಿ ಮುರಿದು ಹಾಕಿದ್ದಾರೆ. ಬಳಿಕ ಹಣ ಬಾರದೇ ಕೃತ್ಯ ಅರ್ಧಕ್ಕೆ ಕೈ ಬಿಟ್ಟು ಪರಾರಿಯಾಗಿದ್ದಾರೆ. ನಗರದ ದೊಡ್ಡಪೇಟೆ ಠಾಣೆ ಪೊಲಿಸರಿಂದ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಬೆರಳಚ್ಚು ತಜ್ಞರು ಹಾಗೂ ಶ್ವಾನ …
Read More »
CKNEWSKANNADA / BRASTACHARDARSHAN CK NEWS KANNADA