Breaking News

cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

ಸೇತುವೆಯ ಮೇಲೆ ಮಳೆಯ ನೀರು,ಯುವಕರು ಸೇತುವೆ ದಾಟುವ ದುಸ್ಸಾಹಸ

ದಾವಣಗೆರೆ: ರಾಜ್ಯದ ವಿವಿಧೆಡೆ ಕಳೆದ ಕೆಲವು ದಿನಗಳಿಂದ ಭಾರೀ ಮಳೆ ಸುರಿಯುತ್ತಿದೆ. ಶನಿವಾರ ರಾತ್ರಿ ಸುರಿದ ಭಾರೀ ಮಳೆಯಿಂದ ದಾವಣಗೆರೆ ಸಮೀಪದ ಮಾಗಾನಹಳ್ಳಿ ಬಳಿಯ ಸೇತುವೆ ಮೇಲೆ ನೀರು ಹರಿಯುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ. ದಾವಣಗೆರೆ- ಹರಪನಹಳ್ಳಿ ಪ್ರಮುಖ ಸಂಪರ್ಕ ಸೇತುವೆ ಇದಾಗಿದ್ದು, ಮಳೆ ಮುಂದುವರಿದರೆ ಈ ಭಾಗದ ಸಂಪರ್ಕ ಸ್ಥಗಿತವಾಗುವ ಭೀತಿ ಎದುರಾಗಿದೆ. ಸೇತುವೆಯ ಮೇಲೆ ಮಳೆಯ ನೀರು ಹರಿಯುತ್ತಿದ್ದರೂ ಕೆಲವೊಂದು ವಾಹನ ಸವಾರರು ಸಂಚರಿಸುತ್ತಿದ್ದಾರೆ. ಕೆಲವು ಯುವಕರು ಸೇತುವೆ …

Read More »

2018 ರಲ್ಲಿ ಗೋಕಾಕ ನಿಪ್ಪಾಣಿಗಳ ಜೊತೆ ಮಂಜೂರಾಗಿದ್ದ ಚಿಕ್ಕೋಡಿ ಆಸ್ಪತ್ರೆಯ ಕಟ್ಟಡ ಕಾಮಗಾರಿ ಇನ್ನೂ ಮುಗಿದಿಲ್ಲ.!

ಚಿಕ್ಕೋಡಿ: ಚಿಕ್ಕ ಮಕ್ಕಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಚಿಕ್ಕೋಡಿಯಲ್ಲಿ ಆರಂಭವಾದ 20 ಕೋಟಿ ರೂ ವೆಚ್ಚದ ತಾಯಿ-ಮಗು ಆಸ್ಪತ್ರೆಯ ಕಟ್ಟಡ ಕಾಮಗಾರಿ ಕುಂಟುತ್ತಾ ಸಾಗಿರುವುದು ಗಡಿ ಜನರಲ್ಲಿ ಅಸಮಾಧಾನ ಮೂಡಿಸಿದೆ. ಮೂರನೆ ಅಲೆ ಬರುವುದರೊಳಗೆ ಆಸ್ಪತ್ರೆ ಕಟ್ಟಡ ಕಾಮಗಾರಿ ಮುಕ್ತಾಯಗೊಳಿಸಿ ಮಕ್ಕಳ ಚಿಕಿತ್ಸೆಗೆ ಬೇಕಾಗುವ ಮೂಲಭೂತ ಸೌಲಭ್ಯ ಒದಗಿಸಲು ಆರೋಗ್ಯ ಇಲಾಖೆ ಮುಂದಾಗಬೇಕು ಎನ್ನುವುದು ನಿಯೋಜಿತ ಚಿಕ್ಕೋಡಿ ಜಿಲ್ಲೆಯ ಜನರ ಒತ್ತಾಯವಾಗಿದೆ. ನಗರದ ಹೊರವಲಯದ ಬಾಣಂತಿಕೋಡಿ ಬಳಿ 100 ಹಾಸಿಗೆಯ ತಾಯಿ-ಮಗು …

Read More »

BREAKING NEWS : ನಾಳೆಯಿಂದ ‘ಥಿಯೇಟರ್’, ಜುಲೈ.26ರಿಂದ ‘ಪದವಿ ಕಾಲೇಜು’ಗಳ ಆರಂಭ!

ಬೆಂಗಳೂರು : ಇಂದು ಮುಖ್ಯಮಂತ್ರಿಗಳು ತಮ್ಮ ನಿವಾಸದಲ್ಲಿ ಸಚಿವರು ಹಾಗು ಅಧಿಕಾರಿಗಳ ಜೊತೆ ಕೋವಿಡ್ -19 ರ ಕುರಿತು ಚರ್ಚೆ ನಡೆಸಿದರು. ಈ ಸಭೆಯಲ್ಲಿ ನಾಳೆಯಿಂದ ಶೇ.50ರಷ್ಟು ಸೀಟುಗಳ ಭರ್ತಿಯೊಂದಿಗೆ ಚಿತ್ರಮಂದಿರ ಹಾಗೂ ಜುಲೈ.26ರಿಂದ ಪದವಿ ಕಾಲೇಜುಗಳನ್ನು ತೆರೆಯೋದಕ್ಕೆ ಅನುಮತಿಸುವಂತ ನಿರ್ಣಯವನ್ನು ಕೈಗೊಂಡಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಮಾಹಿತಿ ಬಿಡುಗಡೆ ಮಾಡಿದ್ದು, ನಾಳೆಯಿಂದ ರಾಜ್ಯದಲ್ಲಿ ಅನ್ ಲಾಕ್ 4.0 ಜಾರಿಗೊಳಿಸಲಾಗುತ್ತಿದೆ. ಈ ಮಾರ್ಗಸೂಚಿಯಂತೆ ನೈಟ್ ಕರ್ಪ್ಯುನ್ನು ರಾತ್ರಿ 10 …

Read More »

ಗೋಕಾಕದಲ್ಲಿ ಮಾರಕಾಸ್ತ್ರದಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ !

ಗೋಕಾಕ: ಹೊರವಲಯ ಮಹಾಂತೇಶ ನಗರದಲ್ಲಿ ಘಟನೆ ನಡೆದಿದ್ದು ,ಮಂಜು ಮುರಕಿಭಾವಿ(22) ಕೊಲೆಯಾದ ಯುವಕನಾಗಿದ್ದು,ತಡರಾತ್ರಿ ಯುವಕನ ಹತ್ಯೆಗೈದು ಪರಾರಿಯಾಗಿರುವ ದುಷ್ಕರ್ಮಿಗಳು,ಇಂದು ಬೆಳಿಗ್ಗೆ ಪ್ರಕರಣ ಬೆಳಕಿಗೆ ಬಂದಿದೆ. ಗ್ಯಾರೇಜ್‌ನಲ್ಲಿ ಕೆಲಸ ಮಾಡುತ್ತಿದ್ದ ಮಂಜು ಮುರಕಿಭಾವಿ,ಎಂಬಾತನನ್ನು ಮಾರಕಾಸ್ತ್ರ ಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.ಯುವಕನ ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಗೋಕಾಕ್ ಗ್ರಾಮೀಣ ಠಾಣೆ ಪೊಲೀಸರ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.ಗೋಕಾಕ್ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಈ ಘಟ‌ನೆ ನಡೆದಿದೆ.

Read More »

ಹಳ್ಳೂರ : ಗಾಂಧಿನಗರ-ಬಸವನಗರ ರಸ್ತೆ ನಿರ್ಮಾಣಕ್ಕೆ 75 ಲಕ್ಷ ರೂ.- ಶಾಸಕ ಬಾಲಚಂದ್ರ ಜಾರಕಿಹೊಳಿ*

ಹಳ್ಳೂರ ಗ್ರಾಮದಲ್ಲಿ 1.76 ಕೋಟಿ ರೂ. ವೆಚ್ಚದ ಜೆಜೆಎಂ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ. ಮೂಡಲಗಿ : ದೇಶದ ಪ್ರತಿ ಮನೆ ಮನೆಗೆ ನಳಗಳ ಮೂಲಕ ಕುಡಿಯುವ ನೀರಿನ ಯೋಜನೆಯನ್ನು ರೂಪಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು, ಕುಡಿಯುವ ನೀರಿನ ಯೋಜನೆಯನ್ನು ಎಲ್ಲರೂ ಸದ್ಬಳಕೆ ಮಾಡಿಕೊಳ್ಳುವಂತೆ ಕೋರಿಕೊಂಡರು. ಶನಿವಾರದ0ದು ತಾಲೂಕಿನ ಹಳ್ಳೂರ ಗ್ರಾಮದಲ್ಲಿ ಜರುಗಿದ 1.76 ಕೋಟಿ ರೂ. ವೆಚ್ಚದ …

Read More »

ಮಾಜಿ ಸಂಸದ ಜಿ. ಮಾದೇಗೌಡ(92) ವಿಧಿವಶ!

ಮಂಡ್ಯ: ಮಾಜಿ ಸಂಸದ ಜಿ. ಮಾದೇಗೌಡ(92) ವಿಧಿವಶರಾಗಿದ್ದಾರೆ. ಕೆಎಂ ದೊಡ್ಡಿಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅವರು ನಿಧನರಾಗಿದ್ದಾರೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕೆಎಂ ದೊಡ್ಡಿಯಲ್ಲಿ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾದೇಗೌಡರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಿಸದೇ ಇಹಲೋಕ ತ್ಯಜಿಸಿದ್ದಾರೆ. ಕಾವೇರಿ ಹಿತರಕ್ಷಣಾ ಸಮಿತಿ ಅಧ್ಯಕ್ಷರಾಗಿದ್ದ ಮಾದೇಗೌಡರು ಶಾಸಕರಾಗಿ, ಸಂಸದರಾಗಿಯೂ ಕಾರ್ಯನಿರ್ವಹಿಸಿದ್ದರು. ಕಾವೇರಿ ನದಿ ನೀರಿನ ಹೋರಾಟಗಳ ರೂವಾರಿಯಾಗಿದ್ದ ಅವರು, ನೀರು ಬಿಡುವ ವಿಚಾರದಲ್ಲಿ ಸರ್ಕಾರದ ನಿಲುವು ವಿರೋಧಿಸಿ ಸಂಸದ ಸ್ಥಾನಕ್ಕೆ …

Read More »

ಮನೆ ಕಳವು ಮಾಡಿದ್ದ ಯುವಕನ ಬಂಧನ!

  ಕಲಬುರ್ಗಿ: ಇಲ್ಲಿನ ಅನ್ನಪೂರ್ಣೇಶ್ವರಿ, ಭಾಗ್ಯ ನಗರ ಕಾಲೊನಿಗಳಲ್ಲಿ ಮನೆ ಕಳವು ಮಾಡಿದ್ದ ಮಹಾರಾಷ್ಟ್ರದ ಯುವಕನನ್ನು ವಿಶ್ವವಿದ್ಯಾಲಯ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ ಪರಬಾನಿ ಜಿಲ್ಲೆಯ ತುರುತ್ತರಿ ಖಯ್ಯುಮ ಅಲಿಯಾಸ್ ನಯ್ಯುಮ್ ಬೇಗ್ ಬಂಧಿತ ಆರೋಪಿ. ಆತನಿಂದ ₹ 3.10 ಲಕ್ಷ ಮೌಲ್ಯದ 80 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿ ಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಗರದ ನೃಪತುಂಗ ಕಾಲೊನಿಯಲ್ಲಿ ಸಂಶಯಾಸ್ಪದವಾಗಿ ಕೈಯಲ್ಲಿ ರಾಡು ಹಿಡಿದು ತಿರುಗಾಡುತ್ತಿದ್ದಾಗ ವಿಶ್ವವಿದ್ಯಾಲಯ ಠಾಣೆ ಪೊಲೀಸರು ಬಂಧಿಸಿದ್ದಾರೆ. …

Read More »

ಪೋಷಕರೆ ಮಕ್ಕಳ ಕೈಗೆ‌ ಮೊಬೈಲ್ ಕೊಡುವ ಮುನ್ನ ಎಚ್ಚರ! ಈ ಘಟನೆ ನೋಡಿ.

ಹಾವೇರಿ: ಪೋಷಕರೆ ಮಕ್ಕಳ ಕೈಗೆ‌ ಮೊಬೈಲ್ ಕೊಡುವ ಮುನ್ನ ಎಚ್ಚರ ವಹಿಸಿ. ಯಾವಾಗಲೂ ಮೊಬೈಲ್ ನಲ್ಲಿ ಗೇಮ್ ಆಡುವ ಹುಚ್ಚಿಗೆ ಬಿದ್ದ ಬಾಲಕನೊಬ್ಬ ಮೂರು ಬೆರಳನ್ನೇ ಕಳೆದುಕೊಂಡಿದ್ದಾನೆ. ಮೊಬೈಲ್ ಬ್ಲಾಸ್ಟ್ ಆಗಿದ್ದರಿಂದ ಬಾಲಕನ ಬಲಗೈಯಲ್ಲಿನ ಮೂರು ಬೆರಳುಗಳೇ ಕಟ್ ಆಗಿವೆ. ಬ್ಲಾಸ್ಟ್ ಆಗಿದ್ದ ಹೊಡೆತಕ್ಕೆ ಬಾಲಕನ ಮೈಮೇಲೆ ಗಾಯಗಳಾಗಿದ್ದು, ಕಣ್ಣಿಗೆ ಗಂಭೀರ ಸ್ವರೂಪದ ಗಾಯವಾಗಿದೆ. ಮನೆಯಲ್ಲಿ ಚಾರ್ಜ್ ಹಾಕಿದ್ದ ಮೊಬೈಲ್ ನಲ್ಲಿ ಆಟವಾಡುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಕಾರ್ತಿಕ …

Read More »

ನೀವು ಗಂಡಸೇ ಆಗಿದ್ದರೇ ಆಡಿಯೋ ಬಿಡುಗಡೆ ಮಾಡಿ ಲಂಕೇಶಗೆ ನಟ ದರ್ಶನ್ ಸವಾಲ್

ಮೈಸೂರು : ಇಲ್ಲಿಂದಲೇ ಆರಂಭವಾದಂತ ಪ್ರಕರಣ, ಇದೀಗ ದೊಡ್ಮನೆವರೆಗೆ ಬಂದಿದೆ. ನನ್ನ ಬಗ್ಗೆ ಅನ್ ಎಜುಕೇಟೆಡ್ ಅಂತ ಹೇಳ್ತಾರೆ. ಸಂದೇಶ್ ಹಾಗೂ ಇಂದ್ರಜಿತ್ ಲಂಕೇಶ್ ಮಾಡಿರೋ ಆಡಿಯೋ ನನ್ನದಲ್ಲ ಅಂತ ಸಂದೇಶ್ ಹೇಳಿದ್ದಾರೆ. ಆದ್ರೇ ನಾನು ಬಹಿರಂಗವಾಗೇ ಸವಾಲ್ ಹಾಕುವೆ. ನನ್ನದೂ ಒಂದು ಆಡಿಯೋ ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರ ಬಳಿ ಇದೆ. ನೀವು ಗಂಡಸೇ ಆಗಿದ್ದರೇ, ನಿಮ್ಮ ಅಪ್ಪನಿಗೇ ಹುಟ್ಟಿದ್ದರೇ ನನ್ನದು ಒಂದು ಆಡಿಯೋ ಇದೆ. ಅದನ್ನು ಇಂದು …

Read More »

ವಾಯುಭಾರ ಕುಸಿತ, ಇಂದು ನಾಳೆ ಕರ್ನಾಟಕದಲ್ಲಿ ಹಲವೆಡೆ ಬಾರಿ ಮಳೆ. ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ ನೋಡಿ?

ಬೆಂಗಳೂರು: ಪೂರ್ವ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಇಂದು (ಜುಲೈ 17) ಮತ್ತು ನಾಳೆ (ಜುಲೈ 18) ಸಹ ರಾಜ್ಯಾದ್ಯಂತ ಭಾರೀ ಪ್ರಮಾಣದಲ್ಲಿ ಮಳೆಯಾಗಲಿದೆ. ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿಯಲ್ಲಿ ಭಾರೀ ಮಳೆಯನ್ನು ನಿರೀಕ್ಷಿಸಲಾಗಿದೆ (Monsoon 2021). ಕಾವೇರಿ ನದಿಯ ಹರಿವು ಗಣನೀಯ ಪ್ರಮಾಣದಲ್ಲಿ ಏರಿಕೆ ಕಂಡಿದ್ದು, ನದಿ ತೀರದ ಜನರಿಗೆ ಪ್ರವಾಹ ಭೀತಿ ಎದುರಾಗಿದೆ. ಭಾರೀ ಮಳೆಯ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವು …

Read More »