ಗೋಕಾಕದಲ್ಲಿಂದು ಜರುಗಿದ ವೈದ್ಯರ ದಿನಾಚರಣೆ ಕಾರ್ಯಕ್ರಮದಲ್ಲಿ ವೈದ್ಯರ ಸೇವೆ ಗುಣಗಾನ ಮಾಡಿ ಹೃದಯಸ್ಪರ್ಶಿಯಾಗಿ ಅಭಿನಂದಿಸಿದ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಕೋವಿಡ್-೧೯ ಎರಡನೇ ಅಲೆ ಸಂದರ್ಭದಲ್ಲಿ ತಮ್ಮ ಜೀವದ ಹಂಗು ತೊರೆದು ಹಗಲಿರುಳು ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರ ಕಾರ್ಯ ಪ್ರಶಂಸನೀಯ. ಇಡೀ ಆರೋಗ್ಯ ಇಲಾಖೆಯ ಎಲ್ಲ ಸಿಬ್ಬಂದಿಗಳು ಮತ್ತು ಕೊರೋನಾ ವಾರಿರ್ಸ್ಗಳಿಗೆ ಕೋಟಿ ನಮನಗಳನ್ನು ಸಲ್ಲಿಸುತ್ತೇನೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ನಗರದ …
Read More »ಉದ್ಯೋಗ ಸೃಷ್ಟಿ ಮಾಡುವುದೇ ಮುಂದಿನ ಸರ್ಕಾರದ ಎದುರಿರುವ ದೊಡ್ಡ ಸವಾಲು: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ
ಬೆಳಗಾವಿ: “ಪ್ರಸ್ತುತ ಕೇಂದ್ರ ಸರ್ಕಾರದ ನಿರ್ಲಕ್ಷದಿಂದ ಈಗಾಗಲೇ ದೇಶಾದ್ಯಂತ 10 ಕೋಟಿ ಉದ್ಯೋಗವನ್ನು ನಾವು ಕಳೆದುಕೊಂಡಿದ್ದೇವೆ. ಅದನ್ನು ಮರಳಿ ಸೃಷ್ಟಿ ಮಾಡುವುದೇ ದೊಡ್ಡ ಸಾಹಸ. ಮೊದಲು ಇದ್ದಿದ್ದನ್ನೆ ಪುನರ್ ಸೃಷ್ಟಿಸುವುದೇ ಮುಂದಿನ ಸರ್ಕಾರಕ್ಕೆ ದೊಡ್ಡ ಸವಾಲಾಗಲಿದೆ” ಎಂದು ನಿರುದ್ಯೋಗದ ಬಗ್ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅಭಿಪ್ರಾಯ ವ್ಯಕ್ತಪಡಿಸಿದರು. ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕೇಂದ್ರ ಸರ್ಕಾರದವರು 8 ಸಾವಿರ ಕೋಟಿ ಖರ್ಚು ಮಾಡಿ ಪಾರ್ಲಿಮೆಂಟ್ …
Read More »ತಾ. ಪಂ ಪ್ರಗತಿ ಪರಿಶೀಲನಾ ಸಭೆ; ಬಾಕಿ ಉಳಿದ ಕಾಮಗಾರಿಯನ್ನು ಚುರುಕುಗೊಳಿಸಿ: ಶಾಸಕ ಸತೀಶ ಜಾರಕಿಹೊಳಿ
ಬೆಳಗಾವಿ: ” ಕ್ಷೇತ್ರದಲ್ಲಿ ಬಾಕಿ ಉಳಿದ ಕಾಮಗಾರಿಯನ್ನು ಚುರುಕುಗೊಳಿಸಿ, ಅನುದಾನವನ್ನು ಪೂರ್ಣ ಪ್ರಮಾಣದಲ್ಲಿ ಬಳಕೆ ಮಾಡಿಕೊಳ್ಳಿ” ಎಂದು ಅಧಿಕಾರಿಗಳಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಶಾಸಕ ಸತೀಶ ಜಾರಕಿಹೊಳಿ ಸೂಚನೆ ನೀಡಿದರು. ಇಲ್ಲಿನ ತಾ.ಪಂ ಕಚೇರಿಯಲ್ಲಿ ಬುಧವಾರ ಆಯೋಜಿಸಿದ್ದ, 14 ಗ್ರಾ.ಪಂ ವ್ಯಾಪ್ತಿಯ ನರೇಗಾ ಯೋಜನೆಯ ವಿವಿಧ ಅಭಿವೃದ್ಧಿ ಕಾಮಗಾರಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಫಲಾನುಭವಿಗಳಿಗೆ ಅನುಕೂಲವಾಗುವ ಸರ್ಕಾರ ಯೋಜನೆಗಳು ಶೀಘ್ರವೇ ಅನುಮತಿ ನೀಡಿ, ಕ್ಷೇತ್ರದಲ್ಲಿ ಬಾಕಿ ಉಳಿದ 23 ಕೋಟಿ …
Read More »ಮಾಡಿರುವ ಸಾಧನೆ ಮಾತನಾಡ್ಬೇಕು, ಮಾತನಾಡುವದೇ ಸಾಧನೆಯಾಗಬಾರದು : ರಾಹುಲ್ ಜಾರಕಿಹೊಳಿ
ಹುಕ್ಕೇರಿ : ‘ ಮಾಡಿರುವ ಸಾಧನೆ ಮಾತನಾಡಬೇಕೇ ಹೊರತು ಮಾತನಾಡುವುದೇ ಸಾಧನೆಯಾಗಬಾರದು ಎಂಬ ನಿಟ್ಟಿನಲ್ಲಿ ಸತೀಶ್ ಜಾರಕಿಹೊಳಿಯವರು ನಡೆದು ಬಂದಿದ್ದಾರೆ. ಅವರ ಮಾರ್ಗದರ್ಶನದಲ್ಲಿಯೇ ನಾವು ಸಹ ನಡೆಯೋಣ’ ಎಂದು ಯುವ ಕಾಂಗ್ರೆಸ್ ನಾಯಕ ರಾಹುಲ್ ಜಾರಕಿಹೊಳಿ ಹೇಳಿದರು. ತಾಲ್ಲೂಕಿನ ಗುಟಗುದ್ದಿ ಗ್ರಾಮದಲ್ಲಿ ನೂತನವಾಗಿ ಸಂಘಟನೆಗೊಂಡ ರಾಹುಲ್ ಜಾರಕಿಹೊಳಿ ಅಭಿಮಾನಿಗಳ ಸಂಘವನ್ನು ಇಂದು ಉದ್ಘಾಟಿಸಿ ಮಾತನಾಡಿದ ಅವರು , ಕಳೆದ 20 ವರ್ಷಗಳಿಂದ ಸತೀಶ್ ಜಾರಕಿಹೊಳಿ ಸಮಾಜ ಸೇವೆಗಳನ್ನು ಮಾಡುತ್ತಾ ಬಂದಿದ್ದಾರೆ. …
Read More »ರಮೇಶ್ ಜಾರಕಿಹೊಳಿ ದಿಢೀರ ದೆಹಲಿಯತ್ತ!
ದೆಹಲಿ : ರಮೇಶ್ ಜಾರಕಿಹೊಳಿ ಇದೀಗ ದಿನಕ್ಕೊಂದು ಟ್ವಿಸ್ಟ್ ನೀಡುತ್ತಿದ್ದಾರೆ. ತಡರಾತ್ರಿಯೇ ಬೆಳಗಾವಿಯಿಂದ ಬೆಂಗಳೂರಿಗೆ ಆಗಮಿಸಿದ್ದ ರಮೇಶ್ ಇದೀಗ ದಿಢೀರ್ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಈಗಾಗಲೇ ವಿವಿಧ ಮಠಾಧೀಶರು ಹಾಗೂ ದೇವೇಂದ್ರ ಫಡ್ನವಿಸ್ರಂತಹ ಹಿರಿಯ ನಾಯಕರನ್ನ ಭೇಟಿ ಮಾಡಿದ್ದ ರಮೇಶ್ ಜಾರಕಿಹೊಳಿ ಇಂದು ಸಿಎಂ ಯಡಿಯೂರಪ್ಪರನ್ನ ಭೇಟಿಯಾಗೋದಾಗಿ ಹೇಳಿದ್ದರು. ಇದಕ್ಕಾಗಿ 2 ದಿನಗಳ ಬೆಂಗಳೂರು ಪ್ರವಾಸವನ್ನೂ ಕೈಗೊಂಡಿದ್ದರು. ಆದರೆ ಇದೀಗ ನೇರವಾಗಿ ಏರ್ ಪೋರ್ಟ್ಗೆ ತೆರಳಿದ ರಮೇಶ್ ಜಾರಕಿಹೊಳಿ ಅಲ್ಲಿಂದ …
Read More »*ಒಂದು ಕೋಟಿ ರೂ. ಸೋಲಾರ ಬೀದಿ ದೀಪ ಕಾಮಗಾರಿಗೆ ಕೆಎಂಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಅವರಿಂದ ಚಾಲನೆ*
ಗೋಕಾಕ: ನಗರದ ಮಾರ್ಕಂಡೇಯ ನದಿ ಸೇತುವೆಯಿಂದ ಗೋಕಾಕ ಫಾಲ್ಸ್ ಮಾರ್ಗವಾಗಿ ಮೇಲ್ಮಟ್ಟಿ ಗ್ರಾಮದವರೆಗೆ ಲೋಕೋಪಯೋಗಿ ಇಲಾಖೆ ವತಿಯಿಂದ ಸೋಲಾರ್ ಬೀದಿ ದೀಪ ಅಳವಡಿಕೆ ಕಾಮಗಾರಿಗೆ ಕೆಎಂಎಫ್ ನಿರ್ದೇಶಕರಾದ ಅಮರನಾಥ ಜಾರಕಿಹೊಳಿ ಅವರು ಗುದ್ದಲಿ ಪೂಜೆ ಸಲ್ಲಿಸುವ ಮೂಲಕ ಕಾಮಗಾರಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಶಾಸಕರ ಆಪ್ತ ಸಹಾಯಕ ಸುರೇಶ ಸನದಿ, ನಗರ ಸಭೆ ಅಧ್ಯಕ್ಷ ಜಯಾನಂದ ಹುಣಶ್ಯಾಳ, ಉಪಾಧ್ಯಕ್ಷ ಬಸವರಾಜ ಆರೆನ್ನವರ, ಬಿಜೆಪಿ ನಗರ ಘಟಕದ ಅಧ್ಯಕ್ಷ ಭೀಮಶಿ …
Read More »ಮರಳಿ ಪಡೆದುಕೊಂಡ ಅತಿಕ್ರಮಣ ಮಾಡಿದ್ದ ಸ್ಮಶಾನ ಭೂಮಿ.
ಗೋಕಾಕ: ಒಗ್ಗಟ್ಟಿನಿಂದ ಅಸಾದ್ಯವಾದ ಕೆಲಸವನ್ನ ಸಾದ್ಯಮಾಡುಬಹುದು ಅನ್ನುವುದಕ್ಕೆ ಈ ಘಟನೆಯೆ ಸಾಕ್ಷಿ, ಸುಮಾರು ಐವತ್ತು ವರ್ಷಗಳಿಂದ ಗೋಕಾಕ ತಾಲೂಕಿನ ಕೊಣ್ಣೂರಿನ ಪರಿಶಿಷ್ಟ ಮತ್ತು ಹಿಂದೂಳಿದ ಸಮಾಜದವರ ಸ್ಮಶಾನ ಭೂಮಿ ಹತ್ತಿರದಲ್ಲಿರುವ ರೈತರಿಂದ ಅತಿಕ್ರಮವಾಗಿದ್ದರಿಂದ ಅಭಿವೃದ್ಧಿಯಿಂದ ಮರಿಚಿಕೆಯಾಗಿತ್ತು. ಆದರೆ ಇವತ್ತು ಮಾಜಿ ಸಚಿವ ರಮೇಶ ಜಾರಕಿಹೋಳಿಯವರು ಅಬಿವೃದ್ದಿಗಾಗಿ ಹೆಚ್ಚಿನ ಕಾಳಜಿ ವಹಿಸುತ್ತಿರುವದರಿಂದ ಅವರು ನೀಡಿದ ಸಲಹೆಯಂತೆ ಪರಿಶಿಷ್ಟ ಜಾತಿಯ ಸಮಾಜದವರೆಲ್ಲರೂ ಒಂದಾಗಿ ಹೋರಾಟ ಮಾಡಿದ್ದರಿಂದ ಅತಿಕ್ರಮವಾದ ಸ್ಮಶಾನ ಭೂಮಿಯು ಮತ್ತೆ ಮರಳಿ …
Read More »ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಬದಲಾವಣೆ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ
ಬೆಂಗಳೂರು : ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನು ಬದಲಾಯಿಸಲಾಗುತ್ತದೆ. ವಾರದೊಳಗೆ ಪ್ರಕ್ರಿಯೆ ಮುಗಿಸಲು ಕೆಪಿಸಿಸಿ ಅಧ್ಯಕ್ಷರು ಸೂಚನೆ ನೀಡಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಿಳಿಸಿದರು. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕೆಲವು ಜಿಲ್ಲೆಗಳಲ್ಲಿ ಜಿಲ್ಲಾಧ್ಯಕ್ಷರ ಮೂರು ವರ್ಷ ಅವಧಿ ಪೂರ್ಣಗೊಂಡಿದೆ. ಇನ್ನು ಕೆಲವೆಡೆ ಬದಲಾವಣೆ ಮಾಡುವಂತೆ ಬೇಡಿಕೆಯೂ ಸಹ ಇದೆ. ಕೆಲವರು ಸ್ವಯಂ ಪ್ರೇರಿತವಾಗಿ ಸ್ಥಾನ ಬಿಟ್ಟು ಕೊಡಲು ನಿರ್ಧರಿಸಿದ್ದಾರೆ. ಅಲ್ಲಿ ಜಿಲ್ಲಾಧ್ಯಕ್ಷರ ಬದಲಾವಣೆ …
Read More »” ನೆರೆ ರಾಜ್ಯದ ಪ್ರಯಾಣಿಕರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ “
ಬೆಳಗಾವಿ : ಸಂಭವನೀಯ ಕೋವಿಡ್ 3ನೇ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿರುವ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ರಾಜ್ಯದ ಗಡಿಭಾಗದಲ್ಲಿ ಇರುವ ಕೊಗನೊಳ್ಳಿ ರಾಷ್ಟ್ರೀಯ ಹೆದ್ದಾರಿ ಚೆಕ್ ಪೋಸ್ಟ್ ಗೆ ಶನಿವಾರ ಭೇಟಿ ನೀಡಿ, ಕೋವಿಡ್ ನಿಯಂತ್ರಣ ಕ್ರಮಗಳನ್ನು ಪರಿಶೀಲಿಸಿದರು. ನೆರೆಯ ಮಹಾರಾಷ್ಟ್ರದಿಂದ ರಾಜ್ಯಕ್ಕೆ ಆಗಮಿಸುವ ಪ್ರಯಾಣಿಕರು ಆರ್.ಟಿ.ಪಿ.ಸಿ.ಆರ್. ನೆಗೆಟಿವ್ ವರದಿಯನ್ನು ಕಡ್ಡಾಯವಾಗಿ ಹೊಂದಿರಬೇಕು. ವರದಿಯನ್ನು ಹೊಂದಿರುವವರಿಗೆ ಮಾತ್ರ ಪ್ರಯಾಣಿಸಲು ಅವಕಾಶ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು. ಒಂದು ವೇಳೆ …
Read More »ನಿಮ್ಮ ಜೀವ ನಿಮ್ಮ ಕೈಯಲ್ಲಿ
ಜನತೆ ಯಲ್ಲಿ ನಮ್ಮ ಒಂದು ವಿನಂತಿ ದಯವಿಟ್ಟು ನೀವು ಮಾಸ್ಕ್ ಧರಿಸಿ ಲಸಿಕೆ ಹಾಕಿಸಿಕೊಳ್ಳಿ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳಿ . ನಿಮ್ಮ ಜೀವ ನಿಮ್ಮ ಕೈಯಲ್ಲಿ
Read More »
CKNEWSKANNADA / BRASTACHARDARSHAN CK NEWS KANNADA