Breaking News

cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

ಗೋಕಾಕ ಮಾರ್ಕಂಡೇಯ ನಗರದಲ್ಲಿ ದಿನೆ ದಿನೇ ಹೆಚ್ಚಾಗುತ್ತಿದೆ ಬೀದಿ ನಾಯಿಗಳ ಕಾಟ! ನಾಯಿಗಳ ಕಾಟಕ್ಕೆ ಹೈರಾಣಾದ ಮಕ್ಕಳು ವೃದ್ಧರು!

ಗೋಕಾಕ : ನಾಯಿಗಳ ಹಾವಳಿಯಿಂದ ರಸ್ತೆಯಲ್ಲಿ ಚಿಕ್ಕ ಮಕ್ಕಳು, ವಯೋವೃದ್ಧರು ಸಂಚಾರ ಮಾಡಲು ಹಿಂದೇಟು ಹಾಕುವಂತಾಗಿದೆ. ವಾರ್ಡ್‌ 19 ರಲ್ಲಿ ಮಾರ್ಕಂಡೇಯ ನಗರದ ನಿವಾಸಿಗಳ ನಿದ್ದೆಗೆಡಿಸುತ್ತಿರುವ ನಾಯಿಗಳ ಉಪಟಳ ಹೆಚ್ಚಾಗಿದೆ. ನಗರದ ಮಾರ್ಕಂಡೇಯ ನಗರದಲ್ಲಿ ನಾಯಿಗಳ ಕಾಟ ಹೆಚ್ಚಾಗಿದ್ದು, ಆರರಿಂದ ಏಳು ಜನ ಮಕ್ಕಳಿಗೆ ನಾಯಿ ಕಡಿದು ಗಂಭೀರ ಗಾಯವಾಗಿವೆ. ಗೋಕಾಕ ನಗರದಲ್ಲಿ ನಾಯಿಗಳ ಉಪಟಳದಿಂದ ನಾಗರಿಕರು ಬೇಸತ್ತಿದ್ದಾರೆ. ಇನ್ನು ನಾಯಿ ಕಡಿತದಿಂದ ಗಾಯಗೊಂಡವರನ್ನು ಗೋಕಾಕ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ …

Read More »

*ಶಿವಾಪೂರ(ಹ) ಅಡವಿ ಸಿದ್ಧೇಶ್ವರ ಮಠದ ಅಭಿವೃದ್ಧಿಗೆ ಅವಿರತ ಶ್ರಮ- ಶಾಸಕ ಬಾಲಚಂದ್ರ ಜಾರಕಿಹೊಳಿ*

ಮೂಡಲಗಿ- ಇತಿಹಾಸ ಪ್ರಸಿದ್ಧ ಅಂಕಲಗಿ ಅಡವಿ ಸಿದ್ಧೇಶ್ವರ ಮಹಾಸ್ವಾಮಿಗಳು ಇಲ್ಲಿ ಬಂದು ನೆಲೆಸಿರುವ ಇತಿಹಾಸಗಳಿದ್ದು, ಈ ಮಠಕ್ಕೆ ಭವ್ಯವಾದ ಪರಂಪರೆ ಇದೆ. ನಮ್ಮ ಕ್ಷೇತ್ರದ ಭಕ್ತಾಧಿಗಳು ಸೇರಿಕೊಂಡು ಶ್ರೀ ಮಠದ ಅಭಿವೃದ್ಧಿಗೆ ಪಣ ತೊಡೋಣ. ಮಠದ ವಿಷಯದಲ್ಲಿ ಎಲ್ಲರೂ ಒಂದಾಗಿ ಶ್ರೀಕ್ಷೇತ್ರವನ್ನು ಪ್ರಗತಿ ಮಾಡೋಣ ಎಂದು ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ತಾಲ್ಲೂಕಿನ ಶಿವಾಪೂರ (ಹ) ಗ್ರಾಮದಲ್ಲಿ ಕಳೆದ ಶನಿವಾರದಂದು ಅಂಬಲಿ ಒಡೆಯ ಎಂದು …

Read More »

*ವಿನೂತನ ಪ್ರಯೋಗಕ್ಕೆ ಮುಂದಾದ ಸಿಡಿಪಿಓ ವಾಯ್ಕೆ ಗದಾಡಿಯವರನ್ನು ಅಭಿನಂದಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ*

*ನೋಡುಗರನ್ನು ಆಕರ್ಷಿಸುತ್ತಿರುವ ವಡೇರಹಟ್ಟಿಯ ಸ್ಮಾರ್ಟ್ ಕ್ಲಾಸ್ ಅಂಗನವಾಡಿ ಕೇಂದ್ರ* *ಮೂಡಲಗಿ:* ವಡೇರಹಟ್ಟಿಯಲ್ಲಿ ನಿರ್ಮಾಣಗೊಂಡಿರುವ ಸ್ಮಾರ್ಟ್ ಕ್ಲಾಸ್ ಅಂಗನವಾಡಿಯು ಇಡೀ ಜಿಲ್ಲೆಯಲ್ಲಿಯೇ ಮಾದರಿಯಾಗಿದ್ದು, ನೋಡುಗರನ್ನು ಆಕರ್ಷಿಸುತ್ತಿದೆ. ಇದು ಅಂಗನವಾಡಿ ಕೇಂದ್ರನಾ? ಇಲ್ಲ ಬೇರೇ ಯಾವ ಕಾನ್ವೆಂಟ್ ಶಾಲೆಗೆ ಬಂದಿದ್ವಾ? ಎಂಬ ಪ್ರಶ್ನೆಯು ಸಾರ್ವಜನಿಕರನ್ನು ಸಹಜವಾಗಿ ಕಾಡುತ್ತಿದೆ. ಅಷ್ಟೊಂದು ಖಾಸಗಿ ಶಾಲೆಯ ಕಾನ್ವೆಂಟ್ ಮಾದರಿಯಲ್ಲಿ ಸರ್ಕಾರಿ ಅಂಗನವಾಡಿಯು ನಿರ್ಮಾಣವಾಗಿರುವುದು ಮನಸ್ಸಿಗೆ ಖುಷಿ ತರಿಸಿದೆ ಎಂದು ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ …

Read More »

ಗೋಕಾಕದಲ್ಲಿ ಕಳ್ಳತನವಾಗಿದ್ದ ಬೈಕ್ ಗಳನ್ನು ಪತ್ತೆ ಹಚ್ಚಿದ ಪೋಲಿಸ್ ಇಲಾಖೆ!

ಗೋಕಾಕ : ನಗರದಲ್ಲಿ ಈ ಹಿಂದೆ ಕಳ್ಳತನವಾಗಿದ್ದ ಬೈಕ್ ಗಳನ್ನು ಪತ್ತೆ ಹಚ್ಚಿ ಕಳ್ಳರನ್ನು ಹೆಡೆಮುರಿ ಕಟ್ಟುವಲ್ಲಿ ಗೋಕಾಕ ಪೋಲಿಸರು ಯಶಸ್ವಿಯಾಗಿದ್ದಾರೆ. ನಗರದ ಬಸ್ ನಿಲ್ದಾಣ, ಸೋಮವಾರ ಪೇಠ,ಟಿ.ವಿ.ಎಸ್.ಕಂಪನಿಯ ಸ್ಕೂಟಿ ಮೋಟಾರ ಹಾಗೂ ಅನೇಕ ಕಡೆ ಕಳ್ಳತನವಾಗಿದ್ದ ಬೈಕ್ ಹಚ್ಚಿದ್ದಾರೆ. ತನಿಖೆ ಸಂದರ್ಭದಲ್ಲಿ ಆರೋಪಿತರಾದ ನಿಂಗಪ್ಪ ಉದ್ದಪ್ಪ ಪಿಡಾಯಿ ಸಾ॥ ದೇವಪುರಹಟ್ಟಿ, ಸಂತೋಷ ಗೂಳಪ್ಪಾ ಪಾಟೀಲ ಸಾ॥ ತುಕ್ಕಾನಟ್ಟಿ ಇವರನ್ನು ಪತ್ತೆ ಹಚ್ಚಿ ದಸ್ತಗೀರ್ ಮಾಡಿ ಸದರಿ ಆರೋಪಿತರ ತಾಬಾದಲ್ಲಿಂದ …

Read More »

ನೈತಿಕ ಶಿಕ್ಷಣ, ವ್ಯಕ್ತಿತ್ವ ರೂಪುಗೊಳ್ಳಲು ಶಿಕ್ಷಕರ ಮಾರ್ಗದರ್ಶನ ಬಹುಮುಖ್ಯ: ಸಂಸದೆ ಪ್ರಿಯಾಂಕಾ ಜಾರಕಿಹೊಳಿ

ಹುಕ್ಕೇರಿ: ಡಾ.‌ ಸರ್ವಪಲ್ಲಿ ರಾಧಾಕೃಷ್ಣನ್ ಅವರ 136 ನೇ ಜನ್ಮದಿನದ ಅಂಗವಾಗಿ ಹುಕ್ಕೇರಿ ನಗರದಲ್ಲಿ ಇಂದು ತಾಲೂಕಾ ಆಡಳಿತ ವತಿಯಿಂದ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ, ಕ್ರೀಡಾಕೂಟ ಹಾಗೂ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಉದ್ಘಾಟಿಸಿದರು. ಶಿಕ್ಷಕರು ನಮಗೆ ನೀಡಿದ ಮಾರ್ಗದರ್ಶನ, ಶಿಕ್ಷಣ, ಕಲಿಸಿದ ನೈತಿಕ ಶಿಕ್ಷಣ, ಸಹಕಾರ, ವ್ಯಕ್ತಿತ್ವ ರೂಪುಗೊಳ್ಳಲು ನೀಡಿದ ಹಿತನುಡಿ ಎಲ್ಲವನ್ನು ಸ್ಮರಿಸಿ ಅವರಿಗೆ ಗೌರವ ಸಮರ್ಪಣೆ ನೀಡುವ ದಿನ‌ವಾದ ಇಂದು ಎಲ್ಲ …

Read More »

ಮಮದಾಪೂರ ದೇವಸ್ಥಾನದ ಕಟ್ಟಿ ಮೇಲೆ ಮಲಗಿದ್ದ ವ್ಯಕ್ತಿಯ ಕೊಲೆ

ಗುಡಿಯ ಕಟ್ಟೆಯ ಮೇಲೆ ಮಲಗಿದ್ದ ವ್ಯಕ್ತಿಯೊಬ್ಬನನ್ನು ಕಬ್ಬು ಕಡಿಯುವ ಕೋಯ್ತಾದಿಂದ ಕೊಚ್ವಿ ಕೊಲೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲ್ಲೂಕಿನ ಮಮದಾಪೂರ ಗ್ರಾಮದಲ್ಲಿ ನಡೆದಿದೆ. ಮಮದಾಪೂರ ಗ್ರಾಮದ ಬೀರ ಸಿದ್ದೇಶ್ವರ ಗುಡಿಯಲ್ಲಿ ಭಜನೆ ಕಾರ್ಯಕ್ರಮ ನಡೆದಿತ್ತು ಈ ಕಾರ್ಯಕ್ರಮ ಮುಗಿಸಿ ಗುಡಿಯ ಕಟ್ಟೆಯ ಮೇಲೆ ಮಲಗಿದ್ದ ಮಡ್ಡೆಪ್ಪ ಯಲ್ಲಪ್ಪ ಬಾನಸಿ (47) ಎಂಬಾತನಿಗೆ ಅದೇ ಗ್ರಾಮದ ಬೀರಪ್ಪ ಸಿದ್ದಪ್ಪ ಸೋನದೋಳಿ ಎಂಬಾತ ಕೋಯ್ತಾದಿಂದ ಕುತ್ತಿಗೆ ಭಾಗದಲ್ಲಿ ಕೊಚ್ಚಿ ಹಲ್ಲೆ …

Read More »

ಗೋಕಾಕ:ಪತ್ರಿಕಾ ಛಾಯಾಗ್ರಾಹಕ ಬಿ‌.ಪ್ರಭಾಕರ ( ಪ್ರವೀಣ) ಅವರಿಗೆ ಛಾಯಾಶ್ರೀ ಪ್ರಶಸ್ತಿ

ಗೋಕಾಕ : ನಗರದ ವೃತಿ ನಿರತ ಹಾಗೂ ಪತ್ರಿಕಾ ಛಾಯಾಗ್ರಾಹಕ ಬಿ‌.ಪ್ರಭಾಕರ ( ಪ್ರವೀಣ) ಅವರು ಕರ್ನಾಟಕ ಪೋಟೋಗ್ರಾರ್ಫರ ಅಸೋಸಿಯೇಷನ್ ಕೊಡಮಾಡುವ ಛಾಯಾಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಬೆಂಗಳೂರಿನಲ್ಲಿ ಇದೆ ತಿಂಗಳು 20,21,22 ರಂದು ತ್ರಿಪುರ ವಾಸಿನಿ ಅರಮನೆ ಮೈದಾನದಲ್ಲಿ ನಡೆಯಲಿರುವ ಕರ್ನಾಟಕ ಪೋಟೋಗ್ರಾರ್ಫರ ಅಸೋಸಿಯೇಷನ್ ನ ದಶಮಾನೋತ್ಸವ ಸಮಾರಂಭದಲ್ಲಿ ಈ ಪ್ರಶಸ್ತಿ ನೀಡಿ ಗೌರವಿಸಲಾಡುವುದು ಎಂದು ಕೆಪಿಎ ನಿರ್ದೇಶಕ ಮಲ್ಲಿಕಾರ್ಜುನ ಕೆ.ಆರ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರಶಸ್ತಿಗೆ ಆಯ್ಕೆಯಾಗಿದಕ್ಕೆ ಕರ್ನಾಟಕ ಕಾರ್ಯನಿರತ …

Read More »

ಕಾರು ಅಪಘಾತ: ಒಮಾನ್ ದೇಶದಲ್ಲಿ‌ ಗೋಕಾಕ ಮೂಲದ ನಾಲ್ವರು ಮೃತಪಟ್ಟಿದ್ದಾರೆ

ಗೋಕಾಕ: ಒಮಾನ್ ದೇಶದಲ್ಲಿ ಈಚೆಗೆ ಸಂಭವಿಸಿದ ಕಾರು ಅಪಘಾತದಲ್ಲಿ ಗೋಕಾಕ‌ ಮೂಲದ‌ ನಾಲ್ವರು ಸಜೀವ ದಹನವಾಗಿದ್ದಾರೆ. ಪವನ್‌ಕುಮಾರ್ ಮಾಯಪ್ಪ ತಹಶೀಲ್ದಾರ, ಪೂಜಾ ಮಾಯಪ್ಪ ತಹಶೀಲ್ದಾರ, ವಿಜಯಾ ಮಾಯಪ್ಪ ತಹಶೀಲ್ದಾರ ಮತ್ತು ಅದಿಶೇಷ ಬಸವರಾಜ ಮೃತಪಟ್ಟವರು.   ಒಮಾನಿನ ಸಲಾಲಾ ನಗರದಿಂದ ಮುಸ್ಕತ್‌ಗೆ ತೆರಳುತ್ತಿದ್ದ ವೇಳೆ ಹೈಮಾ ಪ್ರದೇಶದ ಹತ್ತಿರ ಕಾರ್ ಅಪಘಾತಕ್ಕೀಡಾಯಿತು.ಮೊದಲು ಇವರೆಲ್ಲ ಕೇರಳದವರು ಎಂಬ ತಪ್ಪು ಮಾಹಿತಿ‌ ರವಾನೆಯಾಗಿತ್ತು. ನಾಲ್ವರೂ ಗೋಕಾಕ ಮೂಲದವರು ಎಂದು ಭಾರತೀಯ ರಾಯಭಾರ ಕಚೇರಿ‌ …

Read More »

ಬಿಜೆಪಿಯು ಶಿಸ್ತಿನ ಪಕ್ಷ. ಕಾರ್ಯಕರ್ತರೇ ನಮಗೆ ಆಸ್ತಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ: ಬರುವ ಸೆಪ್ಟಂಬರ್ ತಿಂಗಳಿನಿಂದ ಅಕ್ಟೋಬರ್ ತಿಂಗಳತನಕ ನಡೆಯುವ ಬಿಜೆಪಿ ಸದಸ್ಯತ್ವ ಅಭಿಯಾನವನ್ನು ಯಶಸ್ವಿಗೊಳಿಸಬೇಕು. ನಮ್ಮ ಅರಭಾವಿ ಕ್ಷೇತ್ರದಿಂದಲೇ ಅತೀ ಹೆಚ್ಚಿನ ಸದಸ್ಯರನ್ನು ನೋಂದಣಿ ಮಾಡಿಸುವ ಮೂಲಕ ಮತ್ತೊಂದು ದಾಖಲೆಯನ್ನು ಬರೆಯಲು ಅಗತ್ಯವಿರುವ ಸಿದ್ಧತೆಗಳನ್ನು ನಡೆಸುವಂತೆ ಬೆಮ್ಯುಲ್ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕಾರ್ಯಕರ್ತರಿಗೆ ಕರೆ ನೀಡಿದರು. ಬುಧವಾರ ಸಂಜೆ ನಗರದ ಎನ್‌ಎಸ್‌ಎಫ್ ಕಾರ್ಯಾಲಯದ ಆವರಣದಲ್ಲಿ ಅರಭಾವಿ ಬಿಜೆಪಿ ಮಂಡಲ ಹಮ್ಮಿಕೊಂಡಿದ್ದ ಬಿಜೆಪಿ ಸದಸ್ಯತ್ವ ಅಭಿಯಾನ …

Read More »

ರಾಯಣ್ಣನಂತಹ ದೇಶ ಪ್ರೇಮಿಗಳು ಮತ್ತೇ ಹುಟ್ಟಬೇಕಿದೆ -ಸಿಎಂ ಸಿದ್ಧರಾಮಯ್ಯ

ಸಂಗೊಳ್ಳಿ ರಾಯಣ್ಣನ ಪುತ್ಥಳಿ ಅನಾವರಣ ಮಾಡಿದ ಮುಖ್ಯಮಂತ್ರಿ ಯಾವ ತಪ್ಪು ಮಾಡಿಲ್ಲ. ಅಧಿಕಾರದಿಂದ ಕೆಳಗಿಳಿಸುವ ವಿರೋಧಿಗಳ ಹುನ್ನಾರ ನಡೆಯಲ್ಲ ಬಾಲಚಂದ್ರ ಜಾರಕಿಹೊಳಿ ನಮ್ಮವರು. ಆದರೆ ಅವರ ಮಿತ್ರರು ನಮ್ಮವರಲ್ಲ ; ಬಾಲಚಂದ್ರರತ್ತ ಮುಖ ನೋಡಿ ಮುಗುಳ್ನಗೆ ಬೀರಿದ ಸಿದ್ದರಾಮಯ್ಯ  https://youtu.be/UtrDWYxriFM ಗೋಕಾಕ: ಸಂಗೊಳ್ಳಿ ರಾಯಣ್ಣ ಹುಟ್ಟಿದ ಸ್ಥಳದಲ್ಲಿ ಮ್ಯೂಜಿಯಮ್ ಮತ್ತು ಸೈನಿಕ ಶಾಲೆ ತೆರೆಯಲಾಗಿದೆ. ನಂದಗಡದಲ್ಲಿರುವ ಸಮಾಧಿಯನ್ನು ಸಹ ಅಭಿವೃದ್ದಿ ಮಾಡಲಾಗಿದೆ. ಸಂಗೊಳ್ಳಿ ಯಾತ್ರಾ ಕೇಂದ್ರವಾಗಬೇಕು. ರಾಯಣ್ಣನ ಜೀವನ ದರ್ಶನದ …

Read More »