Breaking News

cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

ವೈದ್ಯೋ ನಾರಾಯಣ ಹರಿ ಎಂಬ ಮಾತಿಗೆ ಗೋಕಾಕ ವೈದ್ಯರೊಬ್ಬರು ಸಾಕ್ಷಿ.

ಗೋಕಾಕ : ವೈದ್ಯೋ ನಾರಾಯಣ ಹರಿ ಎಂಬ ಮಾತಿದೆ ಎಂದರೇ ವೈದ್ಯನಾದವರು ದೇವರಂತೆ ಒಂದು ಜೀವವನ್ನು ಬದುಕಿಸಬಲ್ಲ ಸಾಮರ್ಥ್ಯ ಹೊಂದಿರುವ ವ್ಯಕ್ತಿ ಎಂದು. ಸದ್ಯದ ಪರಿಸ್ಥಿತಿಯಲ್ಲಿ ನಮ್ಮ ಕಣ್ಣೆದುರಿಗಿರುವ ದೇವರು ಎಂದರೇ ಈಗ ವೈದ್ಯರೇ ಆಗಿದ್ದಾರೆ. ಕೊರೋನಾ ವಿರುದ್ಧ ಹೋರಾಟದಲ್ಲಿ ಜನರ ಜೀವ ಉಳಿಸಲು ವೈದ್ಯರು ಸೇರಿದಂತೆ ಮುಂಚೂಣಿ ಕಾರ್ಯಕರ್ತರು ಜೀವವನ್ನೇ ಪಣಕ್ಕಿಟ್ಟು ಹೋರಾಡುತ್ತಿದ್ದಾರೆ. ಮನೆ ಮಕ್ಕಳನ್ನು, ತಂದೆ ತಾಯಿಯನ್ನು ಮರೆತು ಜನಸೇವೆಯಲ್ಲಿ ತೊಡಗಿರುವ ಅವರ ಕಾರ್ಯ ಶ್ಲಾಘನಾರ್ಹವಾಗಿದೆ. ಇದಕ್ಕೆ …

Read More »

ಜನಸಾಮಾನ್ಯರನ್ನು ರಕ್ಷಿಸುವಲ್ಲಿ ಬಿಜೆಪಿ ಸರ್ಕಾರ ವಿಫಲವಾಗಿದೆ: ಸತೀಶ ಜಾರಕಿಹೊಳಿ ಕಿಡಿ

ಬೆಳಗಾವಿ: “ಈ ಹೆಮ್ಮಾರಿ ಸೋಂಕು ದೇಶಾದ್ಯಂತ ವ್ಯಾಪಿಸಿದ್ದು. ಇದನ್ನು ನಿಯಂತ್ರಿಸಿ , ಜನಸಾಮಾನ್ಯರನ್ನು ರಕ್ಷಿಸುವಲ್ಲಿ  ಬಿಜೆಪಿ  ಕೇಂದ್ರ ಹಾಗೂ ರಾಜ್ಯ  ಸರ್ಕಾರ ವಿಫಲವಾಗಿದೆ” ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಕಿಡಿಕಾರಿದ್ದಾರೆ. ನಗರದಲ್ಲಿ ಮಾದ್ಯಮದರೊಂದಿಗೆ ಮಾತನಾಡಿದ ಅವರು,  ಸೋಂಕಿತರ ಪರೀಕ್ಷೆ ವರದಿ,  ಸಂಪರ್ಕಿತರ ಪತ್ತೆ ಹಾಗೂ ಲಸಿಕೆ ವಿತರಣೆವರೆಗೂ ಸರ್ಕಾರವು ಎಡವಿದೆ. ರಾಷ್ಟ್ರಾದ್ಯಂತ ಕೊರೋನಾ ಅಲೆ ರೌದ್ರನರ್ತನ ತಾಳಿದೆ. ಈ ಸಂಗ್ಧಿದ ಸ್ಥಿತಿಯಲ್ಲಿ ಸರ್ಕಾರ ಎಚ್ಚತ್ತಕೊಂಡು ಲಸಿಕೆ ವಿತರಿಸುವ ಕಾರ್ಯವಾಗಬೇಕಿದೆ …

Read More »

ಇನ್ನೂ ಎಕ್ಸಾಮ್ ಮುಗಿದಿಲ್ಲ ಆಗಲೇ ಮುಂದಿನ ಸೆಮಿಸ್ಟರ್ ಆನ್ಲೈನ್ ಕ್ಲಾಸ್ ॥ RCU ಆಡಳಿತ ನಡೆಗೆ ವಿದ್ಯಾರ್ಥಿಗಳ ವಿರೋಧ॥

ಬೆಳಗಾವಿ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಮೊದಲಿನಿಂದಲೂ ವಿದ್ಯಾರ್ಥಿಗಳನ್ನೂ ಗೊಂದಲದಲ್ಲಿ ಸಿಲಿಕಿಸುತ್ತಾ ಬಂದಿದೆ, ಯಾವುದೇ ರೀತಿಯ ಮುನ್ನ ತಯಾರಿ ಇಲ್ಲದೇ ಅವರು ತೆಗೆದುಕೊಳ್ಳುವ ನಿರ್ಧಾರ, ಪರೀಕ್ಷೆ ಸಮಯದಲ್ಲಿ ಮಾಡುವ ಗೊಂದಲ ಹೀಗೆ ಅನೇಕ ಸಮಸ್ಯೆಗಳಿಗೆ ಮಾಡುತ್ತಲೇ ಬಂದಿದೆ. ಅದೇ ರೀತಿ ಈ ಬಾರಿ ಪದವಿ ಹಾಗೂ ಸ್ನಾತಕೋತ್ತರ ಪದವಿಯ ಹಿಂದಿನ ಸೆಮಿಸ್ಟರ್ ಪರೀಕ್ಷೆಗಳೇ ಇನ್ನೂ ಮುಗಿದಿಲ್ಲ. ಅಷ್ಟರಲ್ಲೇ ಮುಂದಿನ ಸೆಮಿಸ್ಟರ್ ತರಗತಿಗಳನ್ನು ಆನ್​ಲೈನ್ ಮೂಲಕ ನಡೆಸಲು ರಾಣಿ ಚನ್ನಮ್ಮ ವಿಶ್ವವಿದ್ಯಾಲಯ (ಆರ್​ಸಿಯು) …

Read More »

ಬೆಳಗಾವಿಗೆ ನೂತನ ಉಸ್ತುವಾರಿ ಸಚಿವರಾಗಿ ಗೋವಿಂದ ಕಾರಜೋಳ ನೇಮಕ.

ಉಪಮುಖ್ಯಮಂತ್ರಿಯೂ ಆಗಿರುವ ಗೋವಿಂದ ಕಾರಜೋಳ ಅವರನ್ನು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ. ಉಮೇಶ ಕತ್ತಿ ಅವರಿಗೆ ಬಾಗಲಕೋಟೆಯ ಉಸ್ತುವಾರಿ ,ಅರವಿಂದ ಲಿಂಬಾವಳಿ ಬೀದರ್, ಎಂಟಿಬಿ ನಾಗರಾಜ ಕೋಲಾರ, ಮುರುಗೇಶ ನಿರಾಣಿ ಕಲಬುರಗಿ, ಎಸ್.ಅಂಗಾರ ಚಿಕ್ಕಮಗಳೂರು ಉಸ್ತುವಾರಿ ಸಚಿವರಾಗಿದ್ದಾರೆ.

Read More »

ಸರ್ಕಾರದಿಂದ ಮತ್ತೆ ಮಾರ್ಗಸೂಚಿ ಪರಿಷ್ಕರಣೆ – ಸಂತೆ, ವಾರದ ಸಂತೆಗಳು ನಿರ್ಬಂಧ

ಬೆಂಗಳೂರು – ರಾಜ್ಯದಲ್ಲಿ ಜಾರಿಯಲ್ಲಿರುವ ಜನತಾ ಕರ್ಫ್ಯೂ ಆದೇಶಕ್ಕೆ ಮಹತ್ವದ ಬದಲಾವಣೆ ಮಾಡಿ ಪರಿಷ್ಕೃತ ಆದೇಶ ಹೊರಡಿಸಲಾಗಿದ್ದು, ಭಾನುವಾರದಿಂದಲೇ ಇದು ಜಾರಿಯಾಗಲಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿ ಆಗುತ್ತಿರುವ ನೂಕುನುಗ್ಗಲು, ಜನಸಂದಣಿ ತಪ್ಪಿಸಲು ಕೆಲವು ಬದಲಾವಣೆ ಮಾಡಲಾಗಿದೆ. ಎಲ್ಲಾ ರೀತಿಯ ಸಂತೆ, ವಾರದ ಸಂತೆಗಳನ್ನು ನಿರ್ಬಂಧಿಸಲಾಗಿದೆ. ಇದರ ಬದಲಿಗೆ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೂ ಹಾಪ್ ಕಾಮ್ಸ್, ಹಾಲಿನ ಬೂತ್, ತಳ್ಳುವ ಗಾಡಿಯ ಮೂಲಕ ಹಣ್ಣು ತರಕಾರಿ ಮಾರಾಟ ಮಾಡುವುದಕ್ಕೆ …

Read More »

ಕೊರೊನಾ ಲಸಿಕೆ ಪಡೆದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

ಗೋಕಾಕ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಇಲ್ಲಿನ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಶನಿವಾರ ಕೊರೊನಾ ಮೊದಲ ಡೋಸ್ ಲಸಿಕೆ ಪಡೆದರು. ಕೊರೊನಾ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಲಸಿಕೆ ಬಗ್ಗೆ ಜಾಗೃತಿ ಮೂಡಿಸಲು ಹಾಗೂ ಕೊರೊನಾ ಕುರಿತು ಎಚ್ಚರ ವಹಿಸುವ ಕುರಿತು ಜನರಿಗೆ ಸಂದೇಶ ಸಾರುವ ನಿಟ್ಟಿನಲ್ಲಿ ಸತೀಶ ಅವರು ಲಸಿಕೆ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಗೋಕಾಕ ತಾಲೂಕು ವೈದ್ಯಾಧಿಕಾರಿ ಡಾ.ರವೀಂದ್ರ ಅಂಟಿನ್ ಹಾಗೂ ಆಸ್ಪತ್ರೆಯ ಸಿಬ್ಬಂದಿ ಇದ್ದರು. ಸುರಕ್ಷತಾ …

Read More »

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿಯವರ ಗನ್ ಮ್ಯಾನ್ ಕೊರೊನಾಗೆ ಬಲಿ

ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಗನ್ ಮ್ಯಾನ್ ಕೊರೊನಾಗೆ ಬಲಿಯಾಗಿದ್ದಾರೆ. ಬೆಂಗಳೂರಿನ ನಿವಾಸಿ ರಮೇಶ (43) ಮೃತ ವ್ಯಕ್ತಿಯಾಗಿದ್ದಾರೆ. ಕಳೆದ 10 ವರ್ಷಗಳಿಂದ ಇವರು ಸತೀಶ ಜಾರಕಿಹೊಳಿ ಅವರ ಗನ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದರು. ಸತೀಶ ಅವರು ಬೆಂಗಳೂರಿಗೆ ತೆರಳಿದ ಸಂದರ್ಭದಲ್ಲಿ ಮಾತ್ರ ಮೃತ ರಮೇಶ ಅವರು ಗನ್ ಮ್ಯಾನ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಕಳೆದ ಕೆಲ ದಿನಗಳ ಹಿಂದೆ ಅವರು ನಗರದ ಖಾಸಗಿ ಆಸ್ಪತ್ರೆಗೆ …

Read More »

ಸರ್ಕಾರ ಸ್ಪಷ್ಟ ನಿರ್ಧಾರ ಕೈಗೊಳ್ಳುತ್ತಿಲ್ಲ: ಸತೀಶ್ ಜಾರಕಿಹೊಳಿ

ಗೋಕಾಕ: “ಕೊರೊನಾ ಹಿನ್ನೆಲೆಯಲ್ಲಿ ರಾಜ್ಯವನ್ನು ಸಂಪೂರ್ಣ ಬಂದ್ ಮಾಡಿರುವುದರಿಂದ ಜನಸಾಮಾನ್ಯರು ಹಾಗೂ ಸಣ್ಣಪುಟ್ಟ ವ್ಯಾಪಾರಸ್ತರು ತೊಂದರೆಗೀಡಾಗಿದ್ದಾರೆ. ಹೀಗಾಗಿ, ಸರ್ಕಾರ ಇವರಿಗೆ ಅಗತ್ಯ ಸೌಲಭ್ಯ ಒದಗಿಸಬೇಕು” ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ನಗರದ ಹಿಲ್ ಗಾರ್ಡನ್ ಕಚೇರಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸರ್ಕಾರ ಸಂಪೂರ್ಣವಾಗಿ ಗೊಂದಲದಲ್ಲಿದೆ. ಕೆಲವು ದಿನಗಳ ಹಿಂದೆ 2 ದಿನ ಅರ್ಧ ಬಂದ್ ಮಾಡಿದರು. ಈಗ 14 ದಿನ ಸಂಪೂರ್ಣ ಬಂದ್ ಮಾಡಿದ್ದಾರೆ. ಇದರಿಂದ …

Read More »

ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಿದಲ್ಲಿ ಕೊರೋನಾ ಎರಡನೇ ಅಲೆಯನ್ನು ನಿಯಂತ್ರಿಸಲು ಸಾಧ್ಯ :ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ತಾಲೂಕಿನ ಎಲ್ಲ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಿದಲ್ಲಿ ಕೊರೋನಾ ಎರಡನೇ ಅಲೆಯನ್ನು ನಿಯಂತ್ರಿಸಲು ಸಾಧ್ಯ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಮಲ್ಲಾಪೂರ ಪಿಜಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನೂತನವಾಗಿ ಕೋವಿಡ್ ಕೇರ್ ಸೆಂಟರ್ ಪ್ರಾರಂಭಿಸಿದ ಅಧಿಕಾರಿಗಳನ್ನುದ್ಧೇಶಿಸಿ ದೂರವಾಣಿಯಲ್ಲಿ ಮಾತನಾಡಿದರು. ಮಲ್ಲಾಪೂರ ಪಿಜಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪ್ರಾರಂಭಿಸಿರುವ ಕೋವಿಡ್ ಕೇರ್ ಸೆಂಟರ್ ಸಕಲ ಸೌಲಭ್ಯಗಳನ್ನೊಳಗೊಂಡ ಮಾದರಿ …

Read More »

ಜನರ ಜೀವ ಅಮೂಲ್ಯವಾದದ್ದು ಅದನ್ನು ರಕ್ಷಿಸಿಕೊಳ್ಳುವತ್ತ ಗಮನಹರಿಸಿ : ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಜನರ ಜೀವ ಅಮೂಲ್ಯವಾದದ್ದು. ಅದನ್ನು ರಕ್ಷಿಸಿಕೊಳ್ಳುವತ್ತ ಸಾರ್ವಜನಿಕರು ಗಮನಹರಿಸಬೇಕು. ರೋಗದ ಲಕ್ಷಣಗಳು ಕಂಡುಬಂದಲ್ಲಿ ವಿಳಂಬಕ್ಕೆ ಅವಕಾಶವಿಲ್ಲದಂತೆ ಕೋವಿಡ್ ಪರೀಕ್ಷೆಗೆ ಒಳಪಟ್ಟು ಸೂಕ್ತ ಚಿಕಿತ್ಸೆ ಪಡೆಯಬೇಕು ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ನಗರದ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಗೋಕಾಕ ಮತ್ತು ಮೂಡಲಗಿ ತಾಲೂಕಾ ಟಾಸ್ಕಪೋರ್ಸ್ ಕಮೀಟಿ 3ನೇ ಸಭೆಯನ್ನು ಉದ್ಧೇಶಿಸಿ ಮಾತನಾಡಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಗೋಕಾಕ ಹಾಗೂ …

Read More »