ಲಖನೌ: ಬಹುತೇಕ ನಿಯಂತ್ರಣಕ್ಕೆ ಬಂದಿದ್ದ ಕರೊನಾ ಸೋಂಕು ದೀಪಾವಳಿ ಹಬ್ಬದ ನಂತರ ಕೊಂಚ ಏರಿಕೆ ಕಾಣಲಾರಂಭಿಸಿದೆ. ಕೆಲವು ರಾಜ್ಯಗಳಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸೋಂಕಿನ ನಿಯಂತ್ರಣಕ್ಕೆಂದು ಉತ್ತರ ಪ್ರದೇಶ ಸರ್ಕಾರ ಕಠಿಣ ನಿಯಮವನ್ನು ಜಾರಿಗೊಳಿಸಿದೆ. ಉತ್ತರ ಪ್ರದೇಶದಲ್ಲಿ ಬುಧವಾರದಿಂದ ಅಗತ್ಯ ಸೇವೆಗಳ ನಿರ್ವಹಣಾ ಕಾಯ್ದೆ (ಎಸ್ಮಾ)ಯನ್ನು ಜಾರಿಗೊಳಿಸಲಾಗಿದೆ. ಈ ಕಾಯ್ದೆಯ ಅನುಸಾರ ಇನ್ನು ಆರು ತಿಂಗಳ ಕಾಲ ರಾಜ್ಯ ಸರ್ಕಾರಿ ಇಲಾಖೆಗಳು ಮತ್ತು ನಿಗಮಗಳಲ್ಲಿ ಯಾವುದೇ ರೀತಿಯ ಮುಷ್ಕರ …
Read More »ಕೊರೋನಾ ಲಸಿಕೆ : ಔಷಧಿ ಸಂಸ್ಥೆಗೆ ಮೋದಿ ಭೇಟಿ ಸಾಧ್ಯತೆ
ಪುಣೆ, ನವೆಂಬರ್ 26: ಕೊರೊನಾ ವೈರಸ್ ಸೋಂಕಿಗೆ ಲಸಿಕೆ ಅಂತಿಮಗೊಂಡು ಮಾರುಕಟ್ಟೆಗೆ ಬರುವ ಆಶಯ ವ್ಯಕ್ತವಾಗಿದ್ದು, ಕೋವಿಡ್ 19 ಲಸಿಕೆ ಉತ್ಪಾದನೆ ಮತ್ತು ಹಂಚಿಕೆಯ ಪ್ರಕ್ರಿಯೆಯನ್ನು ಅರ್ಥಮಾಡಿಕೊಳ್ಳುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಸೆರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಮತ್ತು ಜೆನ್ನೋವಾ ಬಯೋಫಾರ್ಮಸಿಟಿಕಲ್ಸ್ ಸಂಸ್ಥೆಗಳಿಗೆ ಶನಿವಾರ ಅಥವಾ ಭಾನುವಾರ ಭೇಟಿ ನೀಡುವ ಸಾಧ್ಯತೆ ಇದೆ. ಈ ಎರಡೂ ಸಂಸ್ಥೆಗಳು ಮಹಾರಾಷ್ಟ್ರದ ಪುಣೆಯಲ್ಲಿದ್ದು, ಲಸಿಕೆ ಉತ್ಪಾದನೆ ಮತ್ತು ಪರೀಕ್ಷೆಯ ವಿವಿಧ …
Read More »ಸಚಿವ ಸಂಪುಟ ಸರ್ಕಸ್: ಮುಖ್ಯಮಂತ್ರಿ ಯಡಿಯೂರಪ್ಪ ಸಭೆ
ಬೆಂಗಳೂರು,ನ.26-ಮುಖ್ಯಮಂತ್ರಿ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಾಳೆ ಬೆಳಗ್ಗೆ ಸಚಿವ ಸಂಪುಟ ಸಭೆ ನಡೆಯಲಿದೆ. ನಾಳೆ ಬೆಳಗ್ಗೆ 10.30ಕ್ಕೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯಲಿರುವ ಸಭೆಯಲ್ಲಿ ಕೆಲವು ಮಹತ್ವದ ತೀರ್ಮಾನಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಸಚಿವಸಂಪುಟ ವಿಸ್ತರಣೆ ತೂಗುಯ್ಯಾಲೆಯಲ್ಲಿರುವಾಗಲೇ ಸಿಎಂ ನಾಳೆ ಕರೆದಿರುವ ಸಂಪುಟ ಸಭೆ ರಾಜಕೀಯ ವಲದಯಲ್ಲಿ ಭಾರೀ ಮಹತ್ವ ಪಡೆದುಕೊಂಡಿದೆ. ಕಳೆದ ಬಾರಿ ನಡೆದ ಸಂಪುಟ ಸಭೆಯಲ್ಲಿ ಸಂಪುಟದಿಂದ ಕೈಬಿಡುವ ಕೆಲ ಸಚಿವರ ಹೆಸರುಗಳ ಸುಳಿವು ನೀಡಿದ್ದರು …
Read More »ದೇಶದಲ್ಲಿ ಸತತ ಎರಡು ವಾರದಿಂದ ಕೊರೋನಾ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ
ನವದೆಹಲಿ, ನವೆಂಬರ್ 26: ದೇಶದಲ್ಲಿ ಸತತ ಎರಡು ವಾರದಿಂದ ದೈನಂದಿನ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ 50 ಸಾವಿರಕ್ಕಿಂತ ಕಡಿಮೆ ಇದ್ದರೂ, ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿರುವುದು ಕಳವಳ ಮೂಡಿಸಿದೆ. ಹೊಸ ಪ್ರಕರಣಗಳ ಸಂಖ್ಯೆ 50 ಸಾವಿರದ ಆಸುಪಾಸಿನಲ್ಲಿರುತ್ತಿದ್ದು, ಚೇತರಿಕೆ ಪ್ರಮಾಣದಲ್ಲಿ ಇಳಿಕೆಯಾಗಿದೆ. ಇದರಿಂದ ಸಕ್ರಿಯ ಪ್ರಕರಣಗಳಲ್ಲಿ ಹೆಚ್ಚಳವಾಗಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 44,489 ಹೊಸ ಕೊರೊನಾ ವೈರಸ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 92,66,706ಕ್ಕೆ …
Read More »ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣ ಅಧ್ಯಕ್ಷ ಡಿ.ಕೆ.ಶಿವಕುಮಾರಗೆ ವಿಚಾರಣೆ
ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿಚಾರಣೆಗಾಗಿ ಬುಧವಾರ ಸಿಬಿಐ ಮುಂದೆ ಹಾಜರಾದರು. ಆದರೆ, ಅಗಲಿದ ಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಅನುಮತಿ ಕೋರಿದ ಹಿನ್ನೆಲೆಯಲ್ಲಿ ಕೇವಲ 1 ಗಂಟೆ ಕಾಲ ಮಾತ್ರ ವಿಚಾರಣೆ ನಡೆಸಲಾಯಿತು. ಮೊದಲೇ ನೋಟಿಸ್ ನೀಡಿದ್ದರಿಂದ ಗುರುವಾರ ಸಂಜೆ 4 ಗಂಟೆ ಸುಮಾರಿಗೆ ಸಿಬಿಐ ಕಚೇರಿಗೆ ಡಿಕೆ ಶಿವಕುಮಾರ್ ತೆರಳಿ ವಿಚಾರಣೆಗೆ …
Read More »ನಿವಾರ್ ಚಂಡಮಾರುತ ಕುರಿತು ಗೃಹ ಅಮಿತ್ ಶಾ ತಮಿಳುನಾಡು, ಪುದುಚೇರಿ ಮುಖ್ಯಮಂತ್ರಿಗಳೊಂದಿಗೆ ಮಾತುಕತೆ
ಚೆನ್ನೈ : ನಿವಾರ್ ಚಂಡಮಾರುತವು ಮತ್ತಷ್ಟು ಬಲವನ್ನು ಕಡಿಮೆ ಮಾಡುತ್ತದೆ ಮತ್ತು ಮುಂದಿನ ಮೂರು ಗಂಟೆಗಳಲ್ಲಿ ಚಂಡಮಾರುತದ ಬಿಳುಗಾಳಿಯನ್ನು ಸೃಷ್ಟಿ ಮಾಡಲಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಗುರುವಾರ ಬೆಳಿಗ್ಗೆ ಪ್ರಕಟಿಸಿದೆ. ಗುರುವಾರ ಮುಂಜಾನೆ ಪುದುಚೇರಿ ಬಳಿ ನಿವಾರ್ಚಂಡಮಾರುತದಿಂದಾಗಿ ಭೂಕುಸಿತದ ಸಂಭವಿಸಿತ್ತು. ಪುದುಚೇರಿ ಮತ್ತು ತಮಿಳುನಾಡು ಎರಡೂ ಕಡೆ ಭಾರೀ ಮಳೆಯಾಗಿದೆ. ಐಎಂಡಿ ಪ್ರಕಾರ, ನಿವಾರ್ ಕೇಂದ್ರಾಡಳಿತ ಭೂಪ್ರದೇಶವನ್ನು ದಾಟಿದ ನಂತರ ತೀವ್ರವಾದ ಬಿರುಗಾಳಿಯಿಂದ ತೀವ್ರ ಚಂಡಮಾರುತಕ್ಕೆ ದುರ್ಬಲಗೊಂಡಿತು. …
Read More »ವಿವಿಧ ಇಲಾಖೆಗಳ ನಿಗಮ-ಮಂಡಳಿಗಳಿಗೆ ಅಧಿಕಾರೇತರ ಸದಸ್ಯರ ನೇಮಕ
ಬೆಂಗಳೂರು : ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ನಿಗಮ-ಮಂಡಳಿಗಳಿಗೆ ಅಧಿಕಾರೇತರ ಸದಸ್ಯರು ಹಾಗೂ ನಿರ್ದೇಶಕರನ್ನು ನಾಮನಿರ್ದೇಶನಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಮಂಗಳವಾರ 33 ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕಗೊಳಿಸಿ ಸರ್ಕಾರ ಆದೇಶ ಹೊರಡಿಸಿತ್ತು. ಇದೀಗ ಮುಂದುವರಿದ ಭಾಗವಾಗಿ ನಿಗಮ-ಮಂಡಳಿಗಳಿಗೆ ಅಧಿಕಾರೇತರ ಸದಸ್ಯರು ಹಾಗೂ ನಿರ್ದೇಶಕರು ನಾಮನಿರ್ದೇಶನಗೊಳಿಸಿ ಆದೇಶ ಹೊರಡಿಸಿದೆ. ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ ವ್ಯಾಪ್ತಿಯಲ್ಲಿ ಬರುವ 5 ನಿಗಮಗಳಿಗೆ ನಾಮನಿರ್ದೇಶನಗೊಂಡ ಸದಸ್ಯರನ್ನು ಗಮನಿಸುವುದಾದರೆ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯ ಕರ್ನಾಟಕ ದ್ರಾಕ್ಷಾರಸ …
Read More »ಡಿ.31ರ ವರೆಗೆ ಅಂತಾರಾಷ್ಟ್ರೀಯ ವಿಮಾನ ಸೇವೆ ಬಂದ್
ಕೊರೋನಾ ಹಾವಳಿಯಿಂದ ಬಂದ್ ಆಗಿರುವ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟ ಡಿಸೆಂಬರ್ 31ರವೆಗೂ ಬಂದ್ ಆಗಿರಲಿದೆ ಅಂತ ನಾಗರಿಕ ವಿಮಾನಯಾನ ನಿರ್ದೇಶನಾಲಯ (DGCA) ಪ್ರಕಟಣೆ ಹೊರಡಿಸಿದೆ. ಇದರ ಪ್ರಕಾರ ಕಾರ್ಗೋ ಅಥವಾ ಸರಕು ವಿಮಾನ ಹೊರತುಪಡಿಸಿ, ಕೇಸ್ ಟು ಕೇಸ್ ಬೇಸಿಸ್ ಮೇಲೆ ಡಿಜಿಸಿಎ ಅನುಮತಿ ನೀಡಿರುವ ವಿಮಾನಗಳನ್ನ ಹೊರತುಪಡಿಸಿ ಬೇರೆ ಯಾವುದೇ ವಿಮಾನ ಭಾರತದಿಂದ ವಿದೇಶಕ್ಕೆ ಹಾರಾಟ ನಡೆಸುವಂತಿಲ್ಲ ಮತ್ತು ವಿದೇಶದಿಂದ ಯಾವುದೇ ವಿಮಾನ ಭಾರತದಲ್ಲಿ ಲ್ಯಾಂಡ್ ಆಗುವಂತಿಲ್ಲ. ಡಿಸೆಂಬರ್ …
Read More »ಲೋಕಸಭಾ ಕ್ಷೇತ್ರದ ಉಪಚುನಾವಣೆ ಕುರಿತು,ಸ್ಪರ್ಧೆಗೆ ವೈಯಕ್ತಿಕವಾಗಿ ನನಗೆ ಆಸಕ್ತಿ ಇಲ್ಲ: ಕೆಪಿಸಿಸಿ ಕಾರ್ಯಧ್ಯಕ್ಷರಾದ ಸತೀಶ್ ಜಾರಕಿಹೊಳಿ ಹೇಳಿಕೆ ಚಿಕ್ಕೋಡಿ ಹಾಗೂ ಗೋಕಾಕ ಹೊಸ ಜಿಲ್ಲೆ ಆಗಲಿ,
ಚಿಕ್ಕೋಡಿ ಹಾಗೂ ಗೋಕಾಕ ಹೊಸ ಜಿಲ್ಲೆ ರಚನೆಯಾಗಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಯಮಕನಮರಡಿ ಕಾಂಗ್ರೆಸ್ ಶಾಸಕ ಸತೀಶ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಅಭಿವೃದ್ದಿ ನಿಟ್ಟಿನಲ್ಲಿ 18 ಶಾಸಕರನ್ನು ಹೊಂದಿರುವ ದೊಡ್ಡ ಜಿಲ್ಲೆ ಬೆಳಗಾವಿ ವಿಭಜನೆಯಾಗುವುದು ಅನಿವಾರ್ಯ. ಜಿಲ್ಲೆ ವಿಭಜನೆ ಬಗ್ಗೆ ಮೊದಲಿನಿಂದಲೂ ನಾವು ಆ ಕುರಿತು ಪ್ರತಿಪಾದಿಸುತ್ತ ಬಂದಿರುವುದಾಗಿ ಹೇಳಿದರು. ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಕುರಿತು ತಮ್ಮ ಹೆಸರು ಕೇಳಿ ಬರುತ್ತಿರುವ …
Read More »ಪೊಲೀಸ್ ವಿರುದ್ಧ ಪೊಲೀಸರಿಂದ ದೂರು!
ಬೆಂಗಳೂರು : ಠಾಣೆಯಲ್ಲಿ ಕೆಲಸ ನಿರ್ವಹಿಸುವ ಪೊಲೀಸ್ ಸಿಬ್ಬಂದಿಗಳನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿ, ಮಾನಸಿಕ ಹಿಂಸೆ ನೀಡುತ್ತಿದ್ದಾರೆ ಎಂದು ಆರೋಪಿಸಿ ಠಾಣೆಯ ಇನ್ಸ್ಪೆಕ್ಟರ್ ವಿರುದ್ಧ ಪೊಲೀಸ್ ಸಹದ್ಯೋಗಿಗಳೇ ಜಂಟಿ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಇನ್ಸ್ಪೆಕ್ಟರ್ ರಾಘವೇಂದ್ರ ಬಾಬು ಎಂಬುವವರು ಜನವರಿ 18ರಂದು ಕೊಡಿಗೇಹಳ್ಳಿ ಠಾಣೆಗೆ ವರ್ಗಾವಣೆಯಾಗಿ ಬಂದಿದ್ದಾರೆ. ಮುಖ್ಯಪೇದೆಯೊಬ್ಬರ ಚಾಡಿ ಮಾತನ್ನು ಕೇಳಿಕೊಂಡು ಸಿಬ್ಬಂದಿಗಳಿಗೆ ಅವಾಚ್ಯ ಪದಗಳಿಂದ ನಿಂದಿಸುತ್ತಿದ್ದಾರೆ. ಠಾಣೆಗೆ ಬರುವ ದೂರುದಾರರಿಗೂ ಭೀತಿ ಹುಟ್ಟಿಸಿ, ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ. ಮುಖ್ಯಪೇದೆ …
Read More »
CKNEWSKANNADA / BRASTACHARDARSHAN CK NEWS KANNADA