ಉಡುಪಿ : ದಕ್ಷಿಣ ಕನ್ನಡ ಜಿಲ್ಲೆಯನ್ನ ಕಾಂಗ್ರೆಸ್ ಭದ್ರಕೋಟೆಯನ್ನಾಗಿ ಮರು ಸ್ಥಾಪಿಸಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. ನಗರದ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ನಡೆದ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಮಂಗಳೂರು, ಉಡುಪಿ ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿತ್ತು. ಆ ಕೋಟೆಯನ್ನು ಮತ್ತೊಮ್ಮೆ ಭದ್ರಕೋಟೆಯನ್ನಾಗಿ ಮರು ಸ್ಥಾಪಿಸುವ ಕಾಲ ಸನ್ನದವಾಗಿದೆ ಎಂದರು. ಕಾಂಗ್ರೆಸ್ ಪಕ್ಷವನ್ನು ಕೇಡರ್ ಮಾದರಿಯಲ್ಲಿ ಒಗ್ಗಟ್ಟಾಗಿ ಬೂತ್ ಮಟ್ಟದಿಂದ ಸಂಘಟಿಸಲು ಈಗಾಗಲೇ ರಾಜ್ಯಾದ್ಯಂತ ಕಾರ್ಯ …
Read More »ರಮೇಶ್ ಕತ್ತಿಗೆ : ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಮರು ಆಯ್ಕೆ
ಉಪಾಧ್ಯಕ್ಷರಾಗಿ ಸುಭಾಷ್ ಢವಳೇಶ್ವರ ಬೆಳಗಾವಿ: ಭಾರೀ ಕುತೂಹಲ ಮೂಡಿಸಿದ್ದ ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷ ಗದ್ದುಗೆಯ ಹಗ್ಗ ಜಗ್ಗಾಟಕ್ಕೆ ಶನಿವಾರ ತೆರೆ ಬಿದ್ದಿದ್ದು, ಅಧ್ಯಕ್ಷ,ಉಪಾಧ್ಯಕ್ಷ ಹೆಸರುಗಳನ್ನು ಘೋಷಣೆ ಮಾಡಲಾಗಿದೆ. ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ಬೆಳಿಗ್ಗೆ ಘಟಾನುಘಟಿ ಬಿಜೆಪಿ ನಾಯಕರು ನಡೆಸಿದ ಸಭೆಯಲ್ಲಿ ಅವಿರೋಧ ಆಯ್ಕೆ ಬಗ್ಗೆ ಒಮ್ಮತದ ಅಭಿಪ್ರಾಯ ವ್ಯಕ್ತವಾಗಿದೆ. ಇದರಿಂದ ಅಧ್ಯಕ್ಷ ಸ್ಥಾನಕ್ಕೆ ರಮೇಶ ಕತ್ತಿಯಾಗಿದೆ ಮುಂದುವರೆಯಲಿದೆ. ಉಪಾಧ್ಯಕ್ಷ ಸ್ಥಾನಕ್ಕೆ ಸುಭಾಷ್ ಢವಳೇಶ್ವರ ಅವರನ್ನು ಆಯ್ಕೆ ಮಾಡಿದ್ದಾರೆ. …
Read More »ದೀಪಗಳ ಹಬ್ಬ ದೀಪಾವಳಿಯ ಸಂದರ್ಭದಲ್ಲಿ ಶುಭಾಶಯ ಕೋರಿದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ
*ದೀಪಗಳ ಹಬ್ಬ ದೀಪಾವಳಿಯ ಸಂದರ್ಭದಲ್ಲಿ ಶುಭಾಶಯ ಕೋರಿದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ* ಅಂಧಕಾರವನ್ನು ಹೊಡೆದೋಡಿಸಿ ಬೆಳಕಿನತ್ತ ಸಾಗುವ ದೀಪಾವಳಿ ಹಬ್ಬದ ಈ ಶುಭ ಸಂದರ್ಭದಲ್ಲಿ ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ* ಅವರು ನಾಡಿನ ಜನತೆಗೆ ಶುಭಹಾರೈಸಿದ್ದಾರೆ. ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಈ ಸಂದರ್ಭದಲ್ಲಿ ಸುರಕ್ಷಿತವಾಗಿ ದೀಪದ ಹಬ್ಬವನ್ನು ಆಚರಿಸಿ ಎಂದು ಸಚಿವರು ಸಾರ್ವಜನಿಕರಲ್ಲಿ ವಿನಂತಿಸಿದ್ದಾರೆ. ನಮ್ಮ ನಮ್ಮ ಮನೆಗಳಲ್ಲಿ ನಂದಾದೀಪವನ್ನು ಬೆಳಗೋಣ ; ಮಾಲಿನ್ಯರಹಿತ ಹಸಿರು …
Read More »ಪೋಷಕರು ಪಟ್ಟ ಕಷ್ಟ ಮತ್ತು ಕಂಡ ಕನಸಿಗೆ ವಿದ್ಯಾರ್ಥಿಗಳು ಬೆಲೆ ಬರುವಂತೆ ನಡೆದುಕೊಳ್ಳಬೇಕು : ಸತೀಶ್ ಜಾರಕಿಹೊಳಿ ಹೇಳಿಕೆ.
ಬೆಳಗಾವಿ : ಪೋಷಕರು ಪಟ್ಟ ಕಷ್ಟ ಮತ್ತು ಕಂಡ ಕನಸಿಗೆ ವಿದ್ಯಾರ್ಥಿಗಳು ಬೆಲೆ ಬರುವಂತೆ ನಡೆದುಕೊಳ್ಳಬೇಕು. ತಮ್ಮ ಮೇಲೆ ಹೆಚ್ಚಿನ ಜವಾಬ್ದಾರಿ ಇರಲಿದೆ ಎಂದು ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. ಇಲ್ಲಿನ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಪಿಎಚ್ ಡಿ ಪದವೀಧರರು ಮತ್ತು ರ್ಯಾಂಕ್ ವಿಜೇತರಿಗೆ ಪ್ರಮಾಣ ಪತ್ರಗ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಕಷ್ಟಪಟ್ಟು ಪಡೆದಂತ ರ್ಯಾಂಕ್, ಪದವಿ ಸಮಾಜವನ್ನು ಸದೃಢವಾಗಿ ಕಟ್ಟಲು ಸದುಪಯೋಗಬಾಗಲಿ. ಸಾಮಾಜಿಕ ಜವಾಬ್ದಾರಿ …
Read More »ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ನಾಡಿನ ಜನತೆಗೆ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಹಾಗೂ ಬಾಲಚಂದ್ರ ಜಾರಕಿಹೊಳಿ ಅವರು ಬೆಳಕಿನ ಹಬ್ಬ ದೀಪಾವಳಿಯ ಶುಭಾಶಯ ಕೋರಿದ್ದಾರೆ. ಎಲ್ಲರ ಬದುಕಿನಲ್ಲಿ ದೀಪಾವಳಿ ಹಬ್ಬ ನಿರಾಸೆಯ ಕಾರ್ಮೋಡ ತೊಡೆದು ಚೈತನ್ಯ ತುಂಬಲಿ. ಎಲ್ಲರ ಜೀವನದಲ್ಲಿ ದೀಪಗಳ ಬೆಳಕು ಸದಾ ಬೆಳಗಲಿ. ಮಹಾಲಕ್ಷ್ಮೀ ದೇವಿ ಸರ್ವರಿಗೂ ಸುಖ, ಶಾಂತಿ, ನೆಮ್ಮದಿ, ಸಮೃದ್ಧಿ, ಸಂಪತ್ತು, ಶಕ್ತಿ, ಆಯುರಾರೋಗ್ಯ ಕರುಣಿಸಲಿ ಎಂದು ಅವರು ದೇವರಲ್ಲಿ ಪ್ರಾರ್ಥಿಸಿದ್ದಾರೆ. ಕೋವಿಡ್-19 ಹಿನ್ನೆಲೆಯಲ್ಲಿ ದೀಪಾವಳಿ …
Read More »ಖ್ಯಾತ ಹಿರಿಯ ಪತ್ರಕರ್ತ ರವಿ ಬೆಳಗೆರೆ ನಿಧನ
ಹಿರಿಯ ಪತ್ರಕರ್ತ, ಹಾಯ್ ಬೆಂಗಳೂರು ಟ್ಯಾಬ್ಲಾಯ್ಡ್ ನ ನ ಸ್ಥಾಪಕ ರವಿ ಬೆಳೆಗೆರೆ (62) ನ.12 ರ ಮಧ್ಯರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. 1958 ರ ಮಾರ್ಚ್ 15 ರಂದು ಬಳ್ಳಾರಿಯಲ್ಲಿ ಜನಿಸಿದ್ದ ರವಿ ಬೆಳೆಗೆರೆ ಇತಿಹಾಸ ಮತ್ತು ಪ್ರಾಚ್ಯಶಾಸ್ತ್ರದ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದು ಪ್ರಾಧ್ಯಾಪಕರಾಗಿ ವೃತ್ತಿ ಆರಂಭಿಸಿದ್ದರು. ನಂತರ ಪತ್ರಿಕೋದ್ಯಮ ವೃತ್ತಿ ಪ್ರಾರಂಭಿಸಿದ್ದ ಅವರು, ಕನ್ನಡಪ್ರಭ, ಸಂಯುಕ್ತ ಕರ್ನಾಟಕ ಸೇರಿದಂತೆ ಹಲವು ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸಿದ್ದರು, ನಂತರ 1995 ರಲ್ಲಿ …
Read More »ಚನ್ನಮ್ಮನ ಹುಟ್ಟೂರು ಕಾಕತಿ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಿ: ಶಾಸಕ ಸತೀಶ್ ಜಾರಕಿಹೊಳಿ
ಬೆಳಗಾವಿ: ವೀರರಾಣಿ ಕಿತ್ತೂರು ಚೆನ್ನಮ್ಮನ ಹುಟ್ಟೂರು ಕಾಕತಿಯಲ್ಲಿರುವ ವಾಡೆ, ಕೋಟೆ ಮತ್ತಿತರ ಸ್ಥಳಗಳ ಅಭಿವೃದ್ಧಿಗೆ ಸಮಗ್ರ ಯೋಜನೆಯನ್ನು ರೂಪಿಸಿ ಆದಷ್ಟು ಬೇಗನೆ ಜಾರಿಗೊಳಿಸಬೇಕು ಎಂದು ಶಾಸಕ ಸತೀಶ್ ಜಾರಕಿಹೊಳಿ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಚೆನ್ನಮ್ಮನ ಹುಟ್ಟೂರು ಕಾಕತಿ ಅಭಿವೃದ್ಧಿಗೆ ಸಂಬಂಧಿಸಿದಂತೆ ಕಾಕತಿಯ ಸಿದ್ಧೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಗುರುವಾರ (ನ.12) ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಅರಮನೆ(ವಾಡೆ) ಇರುವಂತಹ ಜಾಗೆಯನ್ನು ಸರ್ಕಾರವೇ ಪಡೆದುಕೊಂಡು ಅದನ್ನು ಅಭಿವೃದ್ಧಿಪಡಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು. ನಾಡಿನ ಇತಿಹಾಸದಲ್ಲಿ …
Read More »ಕುರುಬ ಸಮಾಜದಿಂದ ಎಸ್,ಟಿ ಮೀಸಲಾತಿಗಾಗಿ ಬೆಳಗಾವಿ ವಿಭಾಗ ಮಟ್ಟದ ಸಮಾವೇಶದ ಪೂರ್ವಭಾವಿ ಸಭೆ.
https://youtu.be/DaIE-P_tfyQ ಗೋಕಾಕ: ಕುರುಬ ಸಮುದಾಯಕ್ಕೆ ಎಸ್ಟಿ ಮೀಸಲಾತಿ ನೀಡುವಂತೆ ಒತ್ತಾಯಿಸಿ ನ. 29 ರಂದು ಬಾಗಲಕೋಟೆ ನಗರದಲ್ಲಿ ಬೆಳಗಾವಿ ವಿಭಾಗ ಮಟ್ಟದ ಬೃಹತ್ ಪ್ರತಿಭಟನಾ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಪುತ್ರ ಕೆ.ಈ ಕಾಂತೇಶ ಹೇಳಿದ್ದಾರೆ. ಗೋಕಾಕ ನಗರದಲ್ಲಿ ಗುರುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಗಾವಿ ವಿಭಾಗ 6 ಜಿಲ್ಲೆಯ ಸುಮಾರು 10 ಸಾವಿರ ಜನರು ನ. 29 ರಂದು ಬಾಗಲಕೋಟೆಯಲ್ಲಿ ನಡೆಯಲಿರುವ …
Read More »ಬೆಳಗಾವಿ ಬಿಜೆಪಿ ಕಾರ್ಯಕರ್ತರ ಕನಸು ನನಸು ಮಾಡಿದ ಸಾಹುಕಾರ
ಭಾರತೀಯ ಜನತಾ ಪಾರ್ಟಿ ಬೆಳಗಾವಿ ಜಿಲ್ಲಾ ಕಚೇರಿ ನಿರ್ಮಾಣಕ್ಕಾಗಿ 30 ಗುಂಟೆ ಜಮೀನನ್ನು ಬೆಳಗಾವಿ ಮಹಾನಗರ ಪಾಲಿಕೆಯಿಂದ ನೀಡಲು ಇಂದು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ ಬೆಳಗಾವಿ ಜಿಲ್ಲಾ ಉಸ್ತುವಾರಿ ಹಾಗೂ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಅವರ ಸತತ ಪ್ರಯತ್ನದ ಫಲವಾಗಿ ಮಹಾನಗರಪಾಲಿಕೆಯ ಪ್ರಸ್ಥಾಪವನ್ನು ಸಚಿವ ಸಂಪುಟ ಒಪ್ಪಿಗೆ ನೀಡಿ ಅನುಮೋದನೆ ನೀಡಲಾಗಿದೆ ಮಾಜಿ ಶಾಸಕರು ಹಾಗೂ ಭಾರತೀಯ ಜನತಾ ಪಾರ್ಟಿ ಜಿಲ್ಲಾಧ್ಯಕ್ಷರು ಶ್ರೀ …
Read More »ಅರಭಾಂವಿ: ವಸತಿ ಸೌಲಭ್ಯಗಳ ಆದೇಶ ಪತ್ರ ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ: ಡಾ. ಬಾಬು ಜಗಜೀವನರಾಮ ಅಭಿವೃದ್ಧಿ ನಿಗಮದಿಂದ ಅರಭಾವಿ ಪಟ್ಟಣದ ಪರಿಶಿಷ್ಟ ಜಾತಿ ಫಲಾನುಭವಿಗಳಿಗೆ ವಸತಿ ನಿರ್ಮಾಣಕ್ಕಾಗಿ 90 ಲಕ್ಷ ಅನುದಾನ ಬಿಡುಗಡೆಯಾಗಿದೆಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಮಂಗಳವಾರದಂದು ಇಲ್ಲಿಯ ಎನ್ಎಸ್ಎಫ್ ಅತಿಥಿಗೃಹದಲ್ಲಿ ಫಲಾನುಭವಿಗಳಿಗೆ ವಸತಿ ಸೌಲಭ್ಯಗಳ ಆದೇಶ ಪತ್ರಗಳನ್ನು ವಿತರಿಸಿ ಮಾತನಾಡಿದರು. ಅರಭಾವಿ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಡಾ: ಬಾಬು ಜಗಜೀವನರಾಮ ಅಭಿವೃದ್ಧಿ ನಿಗಮದಿಂದ 18 ಫಲಾನುಭವಿಗಳಿಗೆ ಮನೆಗಳು ಮಂಜೂರಾಗಿವೆ. ತಲಾ 5 ಲಕ್ಷ …
Read More »
CKNEWSKANNADA / BRASTACHARDARSHAN CK NEWS KANNADA