Breaking News

cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

ಹೆಣ್ಣುಮಕ್ಕಳಿಗೆ ಪಿತ್ರಾರ್ಜಿತ ಆಸ್ತಿಯಲ್ಲಿ ಸಮಾನ ಹಕ್ಕು : ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಪುತ್ರಿಯರಿಗೂ ಆಸ್ತಿಯಲ್ಲಿ ಸಮಾನ ಹಕ್ಕು ನೀಡುವ ಹಿಂದು ಉತ್ತರಾಧಿಕಾರ ಕಾಯ್ದೆ (2005) ಪೂರ್ವಾನ್ವಯವಾಗುತ್ತದೆ ಎಂದು ಸುಪ್ರೀಂ ಕೋರ್ಟ್​ ಮಹತ್ವದ ತೀರ್ಪು ನೀಡಿದೆ. ತಂದೆ ಅಥವಾ ತಾಯಿ ಸೇರಿ ಆಸ್ತಿ ಹಕ್ಕುದಾರರು ಹಿಂದು ಉತ್ತರಾಧಿಕಾರ ತಿದ್ದುಪಡಿ ಕಾಯ್ದೆ ಜಾರಿಗೆ ಬಂದ 2005ಕ್ಕೂ ಮೊದಲೇ ನಿಧನರಾಗಿದ್ದರೂ, ಅವರ ಆಸ್ತಿಯಲ್ಲಿ ಹೆಣ್ಣುಮಕ್ಕಳು ಸಮಾನ ಪಾಲು ಹೊಂದಿರುತ್ತಾರೆ ಎಂದು ಸುಪ್ರೀಂ ಕೋರ್ಟ್​ ಆದೇಶ ನೀಡಿದೆ ನ್ಯಾಯಮೂರ್ತಿ ಅರುಣ್​ ಮಿಶ್ರಾ ನೇತೃತ್ವದ ಮೂರು ಸದಸ್ಯರ ಪೀಠ ಈ …

Read More »

ಎರಡೂ ಕೈಗಳಿಲ್ಲದಿದ್ದರೂ ಕೌಶಿಕ್ SSLC ಯಲ್ಲಿ ಫಸ್ಟ್‌ ಕ್ಲಾಸ್‌ ಪಾಸ್‌.

ಮಂಗಳೂರು : ಎರಡೂ ಕೈಗಳಿಲ್ಲದಿದ್ದರೂ ಕಾಲಿನಿಂದಲೇ SSLC ಪರೀಕ್ಷೆ ಬರೆದು ಶ್ಲಾಘನೆಗೆ ಪಾತ್ರವಾಗಿದ್ದ ಕೌಶಿಕ್ ಪರೀಕ್ಷೆಯಲ್ಲಿ ಮೆಚ್ಚುಗೆಯ ಅಂಕ ಪಡೆದಿದ್ದಾರೆ. ಬಂಟ್ವಾಳ ತಾಲೂಕಿನ ಎಸ್.ವಿ.ಎಸ್.ಪ್ರೌಢಶಾಲೆಯಲ್ಲಿ ಪರೀಕ್ಷೆಗೆ ಹಾಜರಾಗಿ ಕಾಲಿನ ಬೆರಳುಗಳಿಂದಲೇ ಉತ್ತರ ಬರೆದ ಕೌಶಿಕ್ ಪರೀಕ್ಷೆಯಲ್ಲಿ 424 ಅಂಕ ಗಳಿಸುವ ಮೂಲಕ ಶೇ.68 ಅಂಕ ಗಳಿಸಿದ್ದಾರೆ. ಕನ್ನಡದಲ್ಲಿ 96, ಆಂಗ್ಲ ಭಾಷೆಯಲ್ಲಿ 50, ಸಂಸ್ಕೃತದಲ್ಲಿ 83, ಗಣಿತದಲ್ಲಿ 63, ವಿಜ್ಞಾನದಲ್ಲಿ 54, ಸಮಾಜದಲ್ಲಿ 78 ಅಂಕ ಗಳಿಸಿದ್ದು, ಒಟ್ಟು 424 …

Read More »

ಕೊರೋನಾ ಗೆದ್ದು ಬಂದ ರಾಜಾಹುಲಿ

ಬೆಂಗಳೂರು: ಕೊರೊನಾ ಸೋಂಕಿತರಾಗಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಸಂಜೆ 4 ಗಂಟೆಗೆ ಯಡಿಯೂರಪ್ಪ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಯಿತು. ಆಸ್ಪತ್ರೆ ಸಿಬ್ಬಂದಿ ಹೂಗುಚ್ಛ ನೀಡುವ ಮೂಲಕ ಯಡಿಯೂರಪ್ಪ ಅವರನ್ನು ಬೀಳ್ಕೊಟ್ಟರು. ಆಗಸ್ಟ್ 2ರ ಭಾನುವಾರ ರಾತ್ರಿ ಯಡಿಯೂರಪ್ಪ ಅವರಿಗೆ ಕೋವಿಡ್ ಸೋಂಕು ತಗಲಿರುವುದು ಖಚಿತವಾಗಿತ್ತು. ಬಳಿಕ ಅವರನ್ನು ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. 9 ದಿನದಿಂದ ಅವರು …

Read More »

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಖಂಡಿಸಿ : ಹಿಂದೂ ಜಾಗರಣ ವೇದಿಕೆ ಹಾಗೂ ಹಿಂದೂ ಪರ ಸಂಘಟನೆಗಳ ಪ್ರತಿಭಟನೆ

ಧಾರವಾಡ ಜಿಲ್ಲಾ ಬೆಗುರು ಗ್ರಾಮದಲ್ಲಿ ನಡೆದ ಅಪ್ರಾಪ್ತ ಹಿಂದೂ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಕುರಿತು, ಮಾನ್ಯ ಮುಖ್ಯಮಂತ್ರಿಗಳು ಕರ್ನಾಟಕ ಸರ್ಕಾರ ಮೇಲ್ಕಾಣಿಸಿದ ವಿಷಯ ಅನ್ವಯ ಧರ್ಮಾಂದ ಹಾಗೂ ಕಾಮಾಂದ ಬಸಿರ ಎನ್ನುವ ವಿಕೃತ ಮನಸ್ಥಿತಿವುಳ್ಳ ದುಷ್ಠನ ಅತ್ಯಾಚಾರಕ್ಕೆ ಒಳಗಾದ ಬಾಲಕಿ ಮನನೊಂದ ಆತ್ಮಹತ್ಯೆ ಮಾಡಿಕೊಂಡು ಇಡಿ ಮನುಕುಲಕ್ಕೆ ತಲೆತಗ್ಗಿಸುವ ಸಂಗತಿ ಆಗಿದ್ದು ಇಂತಹ ದುರ್ಜನರಿಗೆ ಬಹಿರಂಗವಾಗಿ ಗಲ್ಲು ಶಿಕ್ಷೆಯನ್ನು ನೀಡಿ ಇಂತಹ ಘಟನೆಗಳು ಮರುಕಳಿಸದಂತೆ ಕಾನೂನು ಜಾರಿಗೆಗೊಳಿಸಬೇಕೆಂದು ಗೋಕಾಕ …

Read More »

ಯಮಕನಮರಡಿ ಕ್ಷೇತ್ರದ 17 ರೈತರಿಗೆ ಅರಣ್ಯ ಹಕ್ಕು ಪತ್ರ ವಿತರಿಸಿದ ಶಾಸಕ ಸತೀಶ ಜಾರಕಿಹೊಳಿ

ಬೆಳಗಾವಿ:  ವಿವಿಧ ಬಗೆಯ ಬೆಳೆಗಳ ಬೆಳೆದು ರೈತರು ಆರ್ಥಿಕವಾಗಿ ಸೃದಢೃವಾಗಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ  ಅವರು ರೈತರಿಗೆ ಸಲಹೆ ನೀಡಿದರು. ಇಲ್ಲಿನ ಸಮಾಜ ಕಲ್ಯಾಣ ಇಲಾಖೆ ಕಚೇರಿಯಲ್ಲಿ  ಸೋಮವಾರದಂದು ಯಮನಕಮರಡಿ ಕ್ಷೇತ್ರದ ವ್ಯಾಪ್ತಿಯ 17 ರೈತರಿಗೆ ಅರಣ್ಯ ಹಕ್ಕುಪತ್ರ ವಿತರಣೆ ಮಾಡಿ ಬಳಿಕ ಮಾತನಾಡಿದರು. ಸರ್ಕಾರದ ಯೋಜನೆಗಳ ಸುದುಪಯೋಗ ಪಡೆದುಕೊಳ್ಳಬೇಕು. ಕೃಷಿ ಇಲಾಖೆಯಿಂದ ತರಬೇತಿಗಳ ಪಡೆದುಕೊಂಡು ವಿವಿಧ ಮಿಶ್ರ ಬೆಳೆಗಳ ಬೆಳೆದು  ಪ್ರಗತಿಪರ ರೈತರಾಗಿ ಸಮಾಜದಲ್ಲಿ ಗುರುತಿಸಿಕೊಳ್ಳಬೇಕು …

Read More »

ಬಳ್ಳಾರಿ ನಾಲಾದಲ್ಲಿ ಕೊಚ್ಚಿ ಹೋದ ಯುವಕನ ಶವ ಪತ್ತೆ!

ಬೆಳಗಾವಿ : ಕಾಲು ಜಾರಿ ಬಳ್ಳಾರಿ ನಾಲಾದಲ್ಲಿ ಶನಿವಾರ ಸಂಜೆ ಕೊಚ್ಚಿ ಹೋದ ಯುವಕನ  ಶವ ಭಾನುವಾರ ಸಂಜೆ ಪತ್ತೆಯಾಗಿದೆ. ಗೋಕಾಕ್ ತಾಲ್ಲೂಕಿನ ಡುಮ್ಮ ಉರುಬಿನಟ್ಟಿ ಗ್ರಾಮದಲ್ಲಿ ಘಟನೆ ನಡೆದಿತ್ತು. ಜಲಾವೃತಗೊಂಡ ಗದ್ದೆಯಲ್ಲಿ ಮುಳುಗಡೆಯಾದ ಪಂಪ್ ಸೆಟ್  ನೋಡಲು ಹೋಗಿದ್ದ ನಾಗರಾಜ್ ಹುಬ್ಬಳ್ಳಿ‌   ( 18) ಎಂಬ ಯುವಕ  ಕಾಲು ಜಾರಿ ಬಳ್ಳಾರಿ ನಾಲಾದಲ್ಲಿ ಕೊಚ್ಚಿ ಹೋಗಿದ್ದನು. ವಿಷಯ ತಿಳಿದ  ಬಳಿಕ ಎಸ್‌ಡಿಆರ್‌ಎಫ್ ತಂಡ, ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಮತ್ತು …

Read More »

ಆತ್ಮ ನಿರ್ಭರ ಭಾರತ; ರಾಜನಾಥ್ ಸಿಂಗ್ ಮಹತ್ವದ ಘೋಷಣೆ

ಹೊಸದಿಲ್ಲಿ,ಆ .09 : ದೇಶದ ರಕ್ಷಣಾ ಮಂತ್ರಿ ರಾಜನಾಥ್ ಸಿಂಗ್ ರವರು ಇಂದು ಆ .9 ರಂದು ಆತ್ಮನಿರ್ಭರ ಭಾರತದ ಕಲ್ಪನೆಯನ್ನು ಸಾಕಾರಗೊಳಿಸುವತ್ತ ಹೆಜ್ಜೆ ಇಟ್ಟಿದ್ದು ರಕ್ಷಣಾ ಮಂತ್ರಾಲಯದ ಬಗ್ಗೆ ಮಹತ್ವದ ನಿರ್ಧಾರಗಳನ್ನು ಪ್ರಕಟಿಸಿದ್ದಾರೆ .  ದೇಶದ ರಕ್ಷಣಾ  ಕ್ಷೇತ್ರದಲ್ಲಿ  ಸ್ವಾವಲಂಬನೆ ಸಾಧಿಸಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ರಕ್ಷಣಾ ವಲಯಕ್ಕೆ ಸಂಬಂಧಿಸಿದಂತೆ 101 ವಸ್ತುಗಳನ್ನು ಭಾರತದಲ್ಲೇ ಉತ್ಪಾದಿಸಲಿದ್ದೇವೆ . ವಿದೇಶದಿಂದ ಆಮದಾಗುವ  ರಕ್ಷಣಾ ಸಾಮಾಗ್ರಿಗಳಿಗಳನ್ನು ಕಡಿಮೆ ಮಾಡಿ ದೇಶದಲ್ಲೇ ಉತ್ಪಾದಿಸಲಾಗುವುದು ಎಂದು …

Read More »

ಕೃಷಿ ಕ್ಷೇತ್ರಕ್ಕೆ ಪ್ರಧಾನಿ ಮೋದಿ ಗಿಫ್ಟ್

  ನವದೆಹಲಿ, ಆ.9-ಕೃಷಿ ವಲಯದಲ್ಲಿ ನವೋದ್ಯಮಕ್ಕೂ ಉತ್ತೇಜನ ನೀಡುವ ನಿಟ್ಟಿನಲ್ಲಿ ದೇಶದ ವಿವಿಧೆಡೆ 350ಕ್ಕೂ ಹೆಚ್ಚು ಅಗ್ರಿ ಸ್ಟಾರ್ಟ್ ಅಪ್ ಆರಂಭಕ್ಕೆ ಕೇಂದ್ರ ಸರ್ಕಾರ ಹಣಕಾಸು ನೆರವು ನೀಡಲಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ರೈತರು ಮತ್ತು ಬೆಳೆಗಾರ ಹಿತರಕ್ಷಣೆಗಾಗಿ ಕೃಷಿ ಉತ್ಪಾದಕರ ಸಂಘಟನೆ (ಎಫ್‍ಪಿಒ)ಗಳ ಜಾಲವನ್ನು ಸಹ ಸೃಷ್ಟಿಸಲಾಗುವುದು ಎಂದು ಅವರು ಘೋಷಿಸಿದರು. ಕೃಷಿ ಮೂಲ ಸೌಕರ್ಯಾಭಿವೃದ್ಧಿ ನಿ ರೈತರಿಗೆ ಒಂದು ಲಕ್ಷ ಕೋಟಿ ರೂ.ಗಳ ಹಣಕಾಸು …

Read More »

ಬಾಲಿವುಡ್​ ನಟ ಸಂಜಯ್​ ದತ್​​ಗೆ ಅನಾರೋಗ್ಯ; ಆಸ್ಪತ್ರೆಗೆ ದಾಖಲು.

ಮುಂಬೈ:  ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿ ಹಿನ್ನೆಲೆ ಬಾಲಿವುಡ್ ನಟ ಸಂಜಯ್ ದತ್ ಅವರಿಗೆ  ಶನಿವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಟ  ಪ್ರಸ್ತುತ ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಡ್ಡಾಯ ಪ್ರೋಟೋಕಾಲ್ ನಂತೆ ನಟ ಸಂಜಯ್ ದತ್ ಅವರಿಗೆ ಕೋವಿಡ್ -19  ಪರೀಕ್ಷೆ ನಡೆಸಲಾಗಿದ್ದು  ಅವರ ವರದಿಗಳು ನೆಗೆಟಿವ್ ಬಂದಿದೆ, ನಟ ಸಂಜಯ್ ದತ್ ಅವರ ಕೋವಿಡ್ ವರದಿ ನೆಗೆಟಿವ್ ಬಂದಿದ್ದು ಆದರೆ ವೈದ್ಯಕೀಯ ಪರೀಕ್ಷೆಯ ಕಾರಣ ಇನ್ನೂ ಸ್ವಲ್ಪ ಸಮಯದವರೆಗೆ ಅವರು …

Read More »

ಶಿವಮೊಗ್ಗ-ರಾಣೇಬೆನ್ನೂರ ರೈಲು ಯೋಜನೆ ಅನುಷ್ಠಾನ: ರೈಲ್ವೆ ರಾಜ್ಯ ಸಚಿವ ಸುರೇಶ್ ಅಂಗಡಿ ಭರವಸೆ

ಬೆಳಗಾವಿ,: ಬೆಳಗಾವಿ-ಧಾರವಾಡ ಮತ್ತು ಶಿವಮೊಗ್ಗ-ರಾಣೇಬೆನ್ನೂರ ಯೋಜನೆಗಳನ್ನು ಮುಂದಿನ ರೈಲ್ವೆ ಬಜೆಟ್ ನಲ್ಲಿ ಅಳವಡಿಸಿಕೊಂಡು ಆದಷ್ಟು ಬೇಗನೇ ಕಾಮಗಾರಿಯನ್ನು ಆರಂಭಿಸಲಾಗುವುದು ಎಂದು ರೈಲ್ವೆ ಇಲಾಖೆಯ ರಾಜ್ಯ ಸಚಿವರಾದ ಸುರೇಶ್ ಅಂಗಡಿ ತಿಳಿಸಿದ್ದಾರೆ. ಶಿವಮೊಗ್ಗ ಮುಖ್ಯ ರೈಲು ನಿಲ್ದಾಣದಲ್ಲಿ ಲಿಫ್ಟ್, ಅರಸಾಳು ನಿಲ್ದಾಣದಲ್ಲಿ ಮೂಲಸೌಕರ್ಯಗಳು, ಸ್ಟೇಷನ್ ಬಿಲ್ಡಿಂಗ್ (ಮ್ಯೂಸಿಯಂ ಬಿಲ್ಡಿಂಗ್) ಹಾಗೂ ವಿಸ್ತರಣೆಗೊಂಡ ರೈಲ್ವೆ ಫ್ಲಾಟ್ ಫಾರ್ಮ್ ಇವುಗಳನ್ನು ಶನಿವಾರ (ಆ.8) ವರ್ಚುವಲ್ ವೇದಿಕೆಯ ಮೂಲಕ ತಮ್ಮ ಬೆಳಗಾವಿ ಕಚೇರಿಯಿಂದಲೇ ಉದ್ಘಾಟಿಸಿ ಅವರು …

Read More »