Breaking News

cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

ಅಂಕಲಗಿ-ಪಾಶ್ಚಾಪುರ ರಸ್ತೆ ಕಾಮಗಾರಿ ಪರಿಶೀಲಿಸಿದ ಸಚಿವ ಸತೀಶ್‌ ಜಾರಕಿಹೊಳಿ

ಗೋಕಾಕ: ಗೋಕಾಕ, ಯಮಕನಮರಡಿ ಮತಕ್ಷೇತ್ರದ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅಂಕಲಗಿ ಪಾಶ್ಚಾಪುರ ರಸ್ತೆ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿಯವರು ಪರಿಶೀಲಿಸಿ, ಸ್ಥಳದಲ್ಲಿದ್ದ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಕಾಮಗಾರಿಯಲ್ಲಿ ಗುಣಮಟ್ಟದ ಕಾಯ್ದುಕೊಳ್ಳಲು ಸೂಚಿಸಿದರು. ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ರಸ್ತೆ ನಿರ್ಮಿಸಬೇಕು. ರಸ್ತೆ ಕಾಮಗಾರಿಯಲ್ಲಿ ಕಳಪೆ ಕಂಡು ಬಂದರೆ ಸಂಬಂಧಿಸಿದ ಅಧಿಕಾರಿಗಳು ಮತ್ತು ಗುತ್ತಿಗೆದಾರರ ಮೇಲೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ಎಜುಕೇಟಿವ್‌ ಇಂಜಿನಿಯರ್‌ ಎಸ್. ಎನ್.‌ ಬಳೊಲ್‌, …

Read More »

*ಮಿನಿ ವಿಧಾನ ಸೌಧ ನಿರ್ಮಾಣಕ್ಕೆ ಅನುಮೋದನೆ ಶೀಘ್ರ : ಶಾಸಕ ಬಾಲಚಂದ್ರ ಜಾರಕಿಹೊಳಿ*

ಮೂಡಲಗಿ ಪುರಸಭೆ ಸದಸ್ಯರ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ *ಮೂಡಲಗಿ :* ಮೂಡಲಗಿ ಪಟ್ಟಣದ ಬಸವೇಶ್ವರ ನಗರದ ಬಳಿ ನಿರ್ಮಿಸಲು ಉದ್ಧೇಶಿಸಿರುವ ಮಿನಿ ವಿಧಾನ ಸೌಧ ನಿರ್ಮಾಣಕ್ಕೆ ಸರ್ಕಾರದ ಅನುಮೋದನೆಯೊಂದೇ ಬಾಕಿ ಇದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಸೋಮವಾರ ಸಂಜೆ ಮೂಡಲಗಿ ಪುರಸಭೆ ಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು, ಮಿನಿ ವಿಧಾನ ಸೌಧ ನಿರ್ಮಾಣಕ್ಕೆ ಇಷ್ಟರಲ್ಲೇ ಸರ್ಕಾರದ ಅನುಮೋದನೆ ದೊರೆಯಲಿದೆ ಎಂದು ಹೇಳಿದರು. ಪಟ್ಟಣದ ತಹಶೀಲ್ದಾರ …

Read More »

*ಡೇರಿಗಳಿಗೆ ಹಾಲು ಪೂರೈಸುತ್ತಿರುವ ರೈತರ ಮಕ್ಕಳಿಗೆ ಬೆಳಗಾವಿಯಲ್ಲಿ ವಸತಿ ನಿಲಯ : ಶಾಸಕ ಬಾಲಚಂದ್ರ ಜಾರಕಿಹೊಳಿ*

*ಗೋಕಾಕ* : ಕಹಾಮ ಹಾಗೂ ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟದ ಸಹಯೋಗದಲ್ಲಿ ಬೆಳಗಾವಿಯಲ್ಲಿ ರೈತರ ಮಕ್ಕಳ ಶಿಕ್ಷಣಕ್ಕಾಗಿ ವಸತಿ ನಿಲಯವನ್ನು ನಿರ್ಮಿಸಿದ್ದು, ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ಹಾಲು ಪೂರೈಕೆ ಮಾಡುವ ರೈತರ ಮಕ್ಕಳು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಕಹಾಮ ನಿರ್ದೇಶಕ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.     ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಜಿಲ್ಲಾ ಹಾಲು ಒಕ್ಕೂಟದಿಂದ ಜರುಗಿದ ವಿವಿಧ ಫಲಾನುಭವಿಗಳಿಗೆ 6.40 ಲಕ್ಷ …

Read More »

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಗೋಕಾಕ ನಗರದ ವಿದ್ಯಾರ್ಥಿಗಳ ಗೆಲುವು; ರಾಜ್ಯ ಮಟ್ಟಕ್ಕೆ ಆಯ್ಕೆ!

ಗೋಕಾಕ : ಕರ್ನಾಟಕ ಸರ್ಕಾರ ಪದವಿ ಪೂರ್ವ ಶಿಕ್ಷಣ ಇಲಾಖೆ ಚಿಕ್ಕೋಡಿ ಹಾಗೂ ವಿದ್ಯಾ ಸಂವರ್ಧಕ ಮಂಡಳದ ಜಿ. ಆಯ್. ಬಾಗೇವಾಡಿ ಸಂ .ಪ ಪೂ ಮಹಾವಿದ್ಯಾಲಯ.ಅವರ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿರುವ 2023-24ನೇ ಸಾಲಿನ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಪದವಿ ಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಕರಾಟೆ, ಜೂಡೋ ಟೈಕೊಂಡು ಕ್ರೀಡಾಕೂಟದಲ್ಲಿ ಗೋಕಾಕ್ ನಗರದ ವಿವಿಧ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಗೋಕಾಕ್ ಕರಾಟೆ ಅಕಾಡೆಮಿಯ ವಿದ್ಯಾರ್ಥಿಗಳು ಜಿಲ್ಲಾ …

Read More »

ಕುಲಗೋಡಕ್ಕೆ ನಾಡ ಕಛೇರಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ

ಮೂಡಲಗಿ : ಕುಲಗೋಡ ಗ್ರಾಮಸ್ಥರ ಪ್ರಮುಖ ಬೇಡಿಕೆಯಾಗಿರುವ ನಾಡ ಕಛೇರಿಯನ್ನು ಕುಲಗೋಡದಲ್ಲಿ ಆರಂಭಿಸಲು ಪ್ರಯತ್ನಿಸುತ್ತೇನೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಗ್ರಾಮಸ್ಥರಿಗೆ ಭರವಸೆ ನೀಡಿದರು. ಕುಲಗೋಡ ಗ್ರಾಮದ ಬಲಭೀಮ ದೇವಸ್ಥಾನದಲ್ಲಿ ಗ್ರಾಮಸ್ಥರ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ಕುಲಗೋಡ ಗ್ರಾಮವು ಈಗಾಗಲೇ ಅರಭಾವಿ ನಾಡ ಕಛೇರಿಗೆ ಒಳಪಟ್ಟಿದ್ದರಿಂದ ಇಲ್ಲಿನ ಸಾರ್ವಜನಿಕರಿಗೆ ಅರಭಾವಿ ದೂರವಾಗುತ್ತಿರುವುದರಿಂದ ಕುಲಗೋಡದಲ್ಲಿಯೇ ಈ ಕಛೇರಿಯನ್ನು ಆರಂಭಿಸಲಿಕ್ಕೆ ಕಂದಾಯ ಇಲಾಖಾಧಿಕಾರಿಗಳಿಗೆ ನಿರ್ದೇಶನ ನೀಡುವುದಾಗಿ ತಿಳಿಸಿದರು. ರಾಜ್ಯದಲ್ಲಿ ಕಾಂಗ್ರೇಸ್ …

Read More »

*ಮೂಡಲಗಿ ಶೈಕ್ಷಣಿಕ ವಲಯದ ಹೆಮ್ಮೆಯ ಸಾಧನೆಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ*

ವಡೇರಹಟ್ಟಿ/ ಬಸವೇಶ್ವರ ಸಭಾ ಭವನದಲ್ಲಿ ಜರುಗಿದ ಮೂಡಲಗಿ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ಮೂಡಲಗಿ ವಲಯವು ಸರ್ಕಾರಿ ಹಾಗೂ ವಸತಿ ಶಾಲೆಗಳಲ್ಲಿನ ಹಾಜರಾತಿ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ದಾಖಲೆ ಮಟ್ಟದ ಫಲಿತಾಂಶದ ಜೊತೆಗೆ ಉತ್ತಮ ಗುಣಮಟ್ಟದ ಕಲಿಕೆಯನ್ನು ಅರಿತು ದೇಶದಲ್ಲಿಯೇ ಉತ್ತಮ ಸಾಧನೆ ಮಾಡಿ ಹೆಮ್ಮರವಾಗಿ ಬೆಳೆಯುತ್ತಿದೆ. ಇದಕ್ಕೆ ವಲಯದಲ್ಲಿರುವ ಎಲ್ಲ ಶಿಕ್ಷಕ ಸಮುದಾಯದ ಪರಿಶ್ರಮವೇ ಕಾರಣವಾಗಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ …

Read More »

ಲಕ್ಷ್ಮೀ ಎಜುಕೇಷನ್ ಟ್ರಸ್ಟ್ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ..!

ಗೋಕಾಕ : ವಿಶ್ವದಲ್ಲಿಯೆ ಗುರುಗಳಿಗೆ ಭಾರತ ದೇಶದಲ್ಲಿ ಶ್ರೇಷ್ಠ ಸ್ಥಾನನೀಡ ಗೌರವಿಸಲಾಗುತ್ತಿದೆ ಎಂದು ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಎಸ್.ಜೋಡಗೇರಿ ಹೇಳಿದರು. ಮಂಗಳವಾರದಂದು ನಗರದ ಲಕ್ಷ್ಮೀ ಎಜುಕೇಶನ್ ಟ್ರಸ್ಟ್ ನ ವಿವಿಧ ಅಂಗ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಸಮಾಜದಲ್ಲಿ ಅಗ್ರಗಣ್ಯ ಸ್ಥಾನ ಹೊಂದಿದ ಶಿಕ್ಷಕ ವೃತ್ತಿ ಎಲ್ಲಾ ಇಲಾಖೆಗಳನ್ನು ಮುನ್ನಡೆಸುತ್ತದೆ. ದೇಶದ ಸಮೃದ್ಧ ಭವಿಷ್ಯ ನಿರ್ಮಾಣವಾಗುವದು ಶಾಲೆಗಳ ವರ್ಗದ ಕೊಠಡಿಯಲ್ಲಿ. ಇಂತಹ ಪವಿತ್ರ …

Read More »

*ದಿ. ಜಯಶ್ರೀ ಚಂದ್ರಶೇಖರ ಕೊಣ್ಣೂರ ಇವರ ಸ್ಮರಣಾರ್ಥ; ನೂತನ ಶ್ರೀ ಮಲ್ಲಿಕಾರ್ಜುನ ಕಲ್ಯಾಣ ಮಂಟಪ ಉದ್ಘಾಟನೆ ಸಮಾರಂಭ*

ಗೋಕಾಕ : ಖಾತ್ಯ ಉದ್ಯಮಿ ಚಂದ್ರಶೇಖರ ಕೊಣ್ಣೂರು ಅವರ ಧರ್ಮಪತ್ನಿ ಅವರ ದಿ. ಜಯಶ್ರೀ ಚಂದ್ರಶೇಖರ ಕೊಣ್ಣೂರು ಅವರ ಸ್ಮರಣಾರ್ಥವಾಗಿ ನೂತನವಾಗಿ ನಿರ್ಮಿಸಿರುವ ನೂತನ ಶ್ರೀ ಮಲ್ಲಿಕಾರ್ಜುನ ಕಲ್ಯಾಣ ಮಂಟಪ ಉದ್ಘಾಟನೆ ಸಮಾರಂಭ ನೆರವೇರಿತು. ಮರಡಿ ಶಿವಾಪುರದ ಹೊರವಲಯದಲ್ಲಿ ನಿರ್ಮಿಸಿರುವ ಶ್ರೀ ಮಲ್ಲಿಕಾರ್ಜುನ ಕಲ್ಯಾಣ ಮಂಟಪ ಉದ್ಘಾಟನೆಯನ್ನು ಮಠಾಧೀಶರು ಹಾಗೂ ಗಣ್ಯರು ನೆರವೇರಿಸಿದರು. ಈ ಸಂದರ್ಭದಲ್ಲಿ ದಿವ್ಯ ಸಾನಿಧ್ಯ ವಹಿಸಿರುವ ಸುಕ್ಷೇತ್ರ ಇಂಚಲ ಮಠದ ಪರಮಪೂಜ್ಯ ಶ್ರೀ ಡಾ ಶಿವಾನಂದ …

Read More »

ಕೌಜಲಗಿಯ ಕಳ್ಳಿಗುದ್ದಿ ಕ್ರಾಸ್-ಕೆವ್ಹಿಜೆ ಬ್ಯಾಂಕ್‍ವರೆಗಿನ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

*ಗೋಕಾಕ* : ರಸ್ತೆಯ ಅಕ್ಕ-ಪಕ್ಕದ ಸಾರ್ವಜನಿಕರ ಆಶಯದಂತೆ ಕೌಜಲಗಿ-ಕಳ್ಳಿಗುದ್ದಿ ಕ್ರಾಸದಿಂದ ಕೆವ್ಹಿಜಿ ಬ್ಯಾಂಕ್‍ವರೆಗಿನ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುವುದು. ಶೀಘ್ರದಲ್ಲಿಯೇ ಈ ರಸ್ತೆ ಕಾಮಗಾರಿಯು ಸಾರ್ವಜನಿಕ ಸಂಚಾರಕ್ಕೆ ಅನುಕೂಲವಾಗಲಿದೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.      ಸೋಮವಾರದಂದು ಗೋಕಾಕ ತಾಲೂಕಿನ ಕೌಜಲಗಿಯಲ್ಲಿ 1.80 ಕೋಟಿ ರೂ. ವೆಚ್ಚದ ಬಾದಾಮಿ-ಗೊಡಚಿ-ಗೋಕಾಕ ಫಾಲ್ಸ್ ರಾ.ಹೆ-134 ರ ಸರಪಳಿ 87.065 ರಿಂದ 87.59 ಕಿ.ಮೀ ವರೆಗಿನ ಕೌಜಲಗಿ ಗ್ರಾಮ ವ್ಯಾಪ್ತಿಯ ಕಳ್ಳಿಗುದ್ದಿ ಕ್ರಾಸದಿಂದ …

Read More »

*ನಾಗನೂರ: ಬ್ರಿಡ್ಜ್-ಕಂ-ಬ್ಯಾರೇಜ್ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ*

*ಮೂಡಲಗಿ*: ನಾಗನೂರು ಪಟ್ಟಣದ ಜನರ ಪ್ರಮುಖ ಬೇಡಿಕೆಯಾಗಿದ್ದ ಬ್ರೀಡ್ಜ್—ಕಂ-ಬ್ಯಾರೇಜ್ ನಿರ್ಮಾಣಕ್ಕೆ ಸಣ್ಣ ನೀರಾವರಿ ಇಲಾಖೆಯಿಂದ 2.75 ಕೋಟಿ ರೂಪಾಯಿ ಅನುದಾನ ಬಂದಿದ್ದು, ಇದೇ ನವೆಂಬರ ತಿಂಗಳೊಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.      ರವಿವಾರದಂದು ತಾಲೂಕಿನ ನಾಗನೂರ ಪಟ್ಟಣದ ಲಕ್ಷ್ಮೀದೇವಿ ದೇವಸ್ಥಾನ ಹತ್ತಿರ ಸಣ್ಣ ನೀರಾವರಿ ಇಲಾಖೆಯಿಂದ ಹಳ್ಳಕ್ಕೆ ಅಡ್ಡಲಾಗಿ ಬ್ರೀಡ್ಜ್—ಕಂ-ಬ್ಯಾರೇಜ್ ನಿರ್ಮಾಣ ಕಾಮಗಾರಿ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಈ ಬ್ಯಾರೇಜ್ …

Read More »