ಬೆಂಗಳೂರು: ರಾಜ್ಯದಲ್ಲಿ ಬಹುದಿನಗಳಿಂದ ನೆನೆಗುದಿಗೆ ಬಿದ್ದಿರುವ ಸಂಪುಟ ವಿಸ್ತರಣೆಗೆ ಕಾಲ ಕೂಡಿ ಬಂದಿದೆ. ಇದೀಗ ಬಿಜೆಪಿ ವರಿಷ್ಟ ಮಂಡಳಿ ಸಂಪುಟ ವಿಸ್ತರಣೆಗೆ ಅನುಮತಿ ನೀಡಿದ್ದಾರೆ. ನವೆಂಬರ್ ಮೊದಲ ವಾರದಲ್ಲಿ ಸಂಪುಟ ವಿಸ್ತರಣೆ ನಡೆಯಲಿದೆ ಎಂದು ಬಿಜೆಪಿ ಉನ್ನತ ಮೂಲಗಳು ಖಚಿತಪಡಿಸಿವೆ. ಖಾಲಿ ಇರುವ ಆರು ಸ್ಥಾನ ಭರ್ತಿ ಮಾಡಿಕೊಳ್ಳಲು ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಕೇಂದ್ರ ಬಿಜೆಪಿ ವರಿಷ್ಟರು ಸೂಚನೆ ನೀಡಿದ್ದಾರೆ ಎಂದು ಹೇಳಲಾಗಿದೆ. ರಮೇಶ್ ಜಾರಕಿಹೊಳಿ ಮತ್ತು ಈಶ್ವರಪ್ಪ ಮತ್ತೆ …
Read More »*ಡೆಪ್ಯುಟಿ ಸ್ಪೀಕರ್ ಮಾಮನಿ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಂಬನಿ*
ಗೋಕಾಕ್- ವಿಧಾನಸಭೆಯ ಉಪ ಸಭಾಪತಿ ಹಾಗೂ ಸವದತ್ತಿ ಶಾಸಕ ಆನಂದ ಮಾಮನಿ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಕಂಬನಿ ಮಿಡಿದಿದ್ದಾರೆ. ಕಳೆದ ಮೂರು ಅವಧಿಯಿಂದ ಸವದತ್ತಿ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಮಾಮನಿ ಅವರು ಸರ್ವಾಂಗೀಣ ಅಭಿವೃದ್ಧಿಗಾಗಿ ಶ್ರಮಿಸಿದ್ದರು. ಸವದತ್ತಿ ಯಲ್ಲಮ್ಮ ದೇವಸ್ಥಾನದ ಪ್ರಗತಿಗಾಗಿಯೂ ಸಾಕಷ್ಟು ಕೊಡುಗೆ ನೀಡಿದ್ದರು. ಇವರ ನಿಧನದಿಂದ ರಾಜ್ಯಕ್ಕೆ ತುಂಬಲಾರದ ಹಾನಿಯಾಗಿದೆ. ಮೃತರ ಕುಟುಂಬಕ್ಕೆ ದುಃಖವನ್ನು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಮಾಮನಿ ಅವರ ಆತ್ಮಕ್ಕೆ …
Read More »*ಸರಕಾರದ ಮೀಸಲಾತಿ ಸಂಬಂಧ ನಡೆಸುತ್ತಿರುವ ಸಮಾಜಗಳ ಹೋರಾಟಗಾರರು ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು : ಶಾಸಕ ಬಾಲಚಂದ್ರ ಜಾರಕಿಹೊಳಿ ಕಿವಿಮಾತು*
*ಮುಖ್ಯಮಂತ್ರಿಗಳ ಬಳಿ ನಿಯೋಗವನ್ನು ತೆಗೆದುಕೊಂಡು ಹೋಗೋಣ. ಮೀಸಲಾತಿ ಸಂಬಂಧ ಒಗ್ಗಟ್ಟಿನಿಂದ ಹಕ್ಕೋತ್ತಾಯ ಮಂಡಿಸೋಣ* *ಪಂಚಮಸಾಲಿ, ಕುರುಬ, ಉಪ್ಪಾರ, ಮಾದಿಗ ಸಮಾಜಗಳಿಗೆ ಎಲ್ಲ ರೀತಿಯ ಬೆಂಬಲ- ಶಾಸಕ ಬಾಲಚಂದ್ರ ಜಾರಕಿಹೊಳಿ* *ಮೂಡಲಗಿ:* ಈಗಾಗಲೇ ಸರ್ಕಾರದ ಮೀಸಲಾತಿ ಸಂಬಂಧ ಪಂಚಮಸಾಲಿ, ಕುರುಬ, ಉಪ್ಪಾರ ಹಾಗೂ ಮಾದಿಗ ಸಮುದಾಯದವರು ಹೋರಾಟಕ್ಕೆ ಇಳಿದಿದ್ದು, ಈ ಸಮಾಜಗಳ ಮೀಸಲಾತಿ ಬೇಡಿಕೆಗಳಿಗೆ ಸರ್ಕಾರದ ಮಟ್ಟದಲ್ಲಿ ನಾನು ಪ್ರಾಮಾಣಿಕವಾಗಿ ಸ್ಪಂದಿಸುತ್ತೇನೆ ಎಂದು ಶಾಸಕ ಹಾಗೂ ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ …
Read More »ಎಸ್ಸಿ-ಎಸ್ಟಿ ಮೀಸಲಾತಿ ಹೆಚ್ಚಳ ನಿರ್ಧಾರ ಚುನಾವಣೆ ಗಿಮಿಕ್: ಸತೀಶ್ ಜಾರಕಿಹೊಳಿ
ರಾಯಚೂರು: ರಾಜ್ಯ ಬಿಜೆಪಿ ಸರ್ಕಾರದ ಎಸ್.ಸಿ ಮತ್ತು ಎಸ್.ಟಿ ಮೀಸಲಾತಿ ಹೆಚ್ಚಳ ನಿರ್ಧಾರ ಚುನಾವಣೆ ಗಿಮಿಕ್ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಟೀಕಿಸಿದ್ದಾರೆ. ರಾಯಚೂರಿನಲ್ಲಿ ಇಂದು ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಮೀಸಲಾತಿ ಹೆಚ್ಚಳ ನಿರ್ಧಾರ ಚುನಾವಣೆ ಗಿಮಿಕ್ ಆಗಿದೆ, ಶ್ರೀಗಳು ಧರಣಿಗೆ ಕೂತಾಗಲೇ ಮೀಸಲಾತಿ ಹೆಚ್ಚಳ ಮಾಡಬೇಕಿತ್ತು. ವಾಲ್ಮಿಕಿ ಸ್ವಾಮೀಜಿಗಳು 6 ತಿಂಗಳು ಧರಣಿ ಮಾಡಿದ್ದಾರೆ. ಈಗ ತರಾತುರಿಯಲ್ಲಿ ಸರ್ವಪಕ್ಷ ಸಭೆ ನಡೆಸಿ ಮೀಸಲಾತಿ ಹೆಚ್ಚಳ …
Read More »*ಸಂತೋಷ್ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ!*
ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ಸಜ್ಜೆಹಾಳ ಗ್ರಾಮದಲ್ಲಿ ಕಮಲಾದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಈ ಸಂದರ್ಭದಲ್ಲಿ ರಾಯಪ್ಪ ತಿರ್ಕಣ್ಣವರ, ಸಿದ್ದಪ್ಪ ಅವರಾದಿ, ವಾಸು ಗಲಗಲಿ, …
Read More »*GPL ಕ್ರಿಕೆಟ್ ; ಫೈನಲ್ ಪಂದ್ಯಾವಳಿಯಲ್ಲಿ ಗೋಕಾಕ ನೈಟ್ ರೈಡರ್ಸ್ ವಿಜೇತ*
ಗೋಕಾಕ: ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ GPL ಸೀಜನ್ 5 ಫೈನಲ್ ಕ್ರಿಕೆಟ್ ಪಂದ್ಯಾವಳಿ ಯಲ್ಲಿ ಗೋಕಾಕ ನೈಟ್ ರೈಡರ್ಸ್ ತಂಡ ವಿಜೇತರಾಗಿದ್ದಾರೆ. ಇಂದು ನಡೆದ ಫೈನಲ್ ಪಂದ್ಯದಲ್ಲಿ ಗೋಕಾಕ್ ರಾಯಲ್ಸ್ ವಿರುದ್ಧ ಗೋಕಾಕ್ ನೈಟ್ ರೈಡರ್ಸ್ ತಂಡ ವಿಜೇತರಾಗಿದ್ದಾರೆ. ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಅವರು ವಿಜೇತ ತಂಡಕ್ಕೆ 75.000 ನಗದು ಬಹುಮಾನ ನೀಡಿದ್ದು, ರನ್ನರ್ ಆಫ್ ತಂಡಕ್ಕೆ 45.000 ಕಿಶೋರ್ ಭಟ್ ಹಾಗೂ ಫ್ರೀಜ್, ಕೂಲರ್ …
Read More »*GPL ಕ್ರಿಕೆಟ್ ; ಇಂದು ಫೈನಲ್ ಪಂದ್ಯಾವಳಿ*
ಗೋಕಾಕ: ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ GPL ಸೀಜನ್ 5 ಫೈನಲ್ ಕ್ರಿಕೆಟ್ ಪಂದ್ಯಾವಳಿ ನಡೆಯುತ್ತಿದೆ. ಕಳೆದ 4 ದಿನಗಳಿಂದ ಸತತ ಮಳೆಯಿಂದ ಪಂದ್ಯಾವಳಿ ಮುನ್ನಡೆಯಾಗಿದ್ದು. ಇಂದು ಫೈನಲ್ ಹಂತಕ್ಕೆ ಗೋಕಾಕ್ ರಾಯಲ್ಸ್ V/S ಗೋಕಾಕ್ ನೈಟ್ ರೈಡರ್ಸ್ ತಂಡಗಳು ತಲುಪಿದ್ದು ಯಾರು ವಿಜೇತರಾಗ್ತಾರೆ ಅಂತ ಕಾಯ್ದು ನೋಡಬೇಕಾಗಿದೆ. ಗೋಕಾಕ್ ರಾಯಲ್ಸ್ ಟಾಸ್ ನಲ್ಲಿ ವಿಜೇತರಾಗಿ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದು , ರಾಷ್ಟ್ರ ಗೀತೆ ಹಾಡಿ ಗೌರವಿಸಿ ಪಂದ್ಯಾವಳಿ ಆರಂಭಿಸಿದರು. …
Read More »ಕಾಂಗ್ರೆಸ್ ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಅಭಿನಂದನೆ ಸಲ್ಲಿಸಿದ ಕೆಪಿಸಿಸಿ ಕಾರ್ಯಾಧಕ್ಷ ಸತೀಶ ಜಾರಕಿಹೊಳಿ
ಬೆಳಗಾವಿ: ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ನೂತನವಾಗಿ ಆಯ್ಕೆಯಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ತಿಳಿಸಿದ ಅವರು, ಕಾಂಗ್ರೆಸ್ಗೆ ಅಧ್ಯಕ್ಷೀಯ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಕೇಂದ್ರದ ಮಾಜಿ ಸಚಿವರಾದ ಮಲ್ಲಿಕಾರ್ಜುನ ಖರ್ಗೆಅವರು ಗೆದ್ದಿದ್ದಾರೆ. ಈ ಮೂಲಕ ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಮುಂದಿನ ದಿನಗಳಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಒಳ್ಳೆಯದಾಗಲಿ ಎಂದು ಶುಭ ಹಾರೈಸಿದ ಅವರು, ಭಾರತೀಯ …
Read More »ಕಾಂಗ್ರೆಸ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಯ್ಕೆ!
ಎಐಸಿಸಿ ಅಧ್ಯಕ್ಷ (Congress President) ಸ್ಥಾನಕ್ಕೆ ಅಕ್ಟೋಬರ್ 17ರಂದು ನಡೆದಿದ್ದ ಚುನಾವಣೆಯ ಫಲಿಂತಾಶ ಹೊರ ಬಿದ್ದಿದ್ದು, ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಪ್ರತಿಸ್ಪರ್ಧಿ ಶಶಿ ತರೂರ್ ಸೋಲು ಕಂಡಿದ್ದಾರೆ. ಈ ಮೊದಲು ಕಳೆದ 22 ವರ್ಷದಲ್ಲಿ ಇದೇ ಮೊದಲ ಬಾರಿಗೆ ಗಾಂಧಿ ಮನೆತನ ಹೊರತಾದ ವ್ಯಕ್ತಿಯೊಬ್ಬರು ಕಾಂಗ್ರೆಸ್ ಅಧ್ಯಕ್ಷರಾದಂತಾಗಿದೆ. ಹಾಗೆಯೇ, ಈ ಸ್ಥಾನವನ್ನು ವಹಿಸಿಕೊಳ್ಳುತ್ತಿರುವ ಕರ್ನಾಟಕದ ಎರಡನೇ ವ್ಯಕ್ತಿಯಾಗಿದ್ದಾರೆ. ತರೂರ್ ಅವರಿಗೆ 1072 ಮತಗಳು …
Read More »ಗೋಕಾಕ ತಾಲೂಕಿನಲ್ಲಿ ಜಾನುವಾರು ಆರೋಗ್ಯ ಶಿಬಿರ ಮತ್ತು ಚರ್ಮಗಂಟು ರೋಗದ ಅರಿವು ಕಾರ್ಯಕ್ರಮ
ಗೋಕಾಕ : ಜಾನುವಾರುಗಳಿಗೆ ಚರ್ಮಗಂಟಿನ ರೋಗ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಅದನ್ನು ಇತರೆ ಜಾನುವಾರುಗಳಿಂದ ಬೇರ್ಪಡಿಸಿ ಚಿಕಿತ್ಸೆ ನೀಡುವಂತೆ ಪಶು ಇಲಾಖೆ ಸಹಾಯಕ ನಿರ್ದೇಶಕ ಮೋಹನ ಕಮತ ತಿಳಿಸಿದರು ತಾಲೂಕಿನ ಅಂಕಲಗಿ ಗ್ರಾಮದಲ್ಲಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಿಂದ ರೈತರಿಗಾಗಿ ಹಮ್ಮಿಕೊಂಡ ಜಾನುವಾರು ಆರೋಗ್ಯ ಶಿಬಿರ ಮತ್ತು ಚರ್ಮಗಂಟು ರೋಗದ ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು . ಜಾನುವಾರುಗಳು ರೈತನ ಆರ್ಥಿಕ ಶಕ್ತಿಯಾಗಿವೆ . …
Read More »
CKNEWSKANNADA / BRASTACHARDARSHAN CK NEWS KANNADA