*ಸಧ್ಯದಲ್ಲೇ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಪಂಚಮಸಾಲಿ, ಉಪ್ಪಾರಗಳ ಮೀಸಲಾತಿ ಹಾಗೂ ನ್ಯಾ.ಸದಾಶಿವ ಆಯೋಗದ ವರದಿ ಜಾರಿ ಮಾಡುವಂತೆ ಮನವಿ ಮಾಡಿಕೊಳ್ಳುವೆ* *ಗೋಕಾಕ* : ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಳಿಸುವಂತೆ ನಡೆಸುತ್ತಿರುವ ಉಪ್ಪಾರ ಸಮುದಾಯದ ಹೋರಾಟಕ್ಕೆ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಬೆಂಬಲ ಸೂಚಿಸಿದ್ದಾರೆ. ಈ ಬಗ್ಗೆ ಗುರುವಾರದಂದು ಹೇಳಿಕೆ ನೀಡಿರುವ ಅವರು, ಉಪ್ಪಾರ ಸಮುದಾಯದ ಬೇಡಿಕೆಯನ್ನು ಈಡೇರಿಸುವಂತೆ ಮುಖ್ಯಮಂತ್ರಿಗಳನ್ನು ಒತ್ತಾಯ …
Read More »ಉಪ್ಪಾರ ಸಮಾಜವನ್ನು ಎಸ್ಟಿಗೆ ಸೇರಿಸುವಂತೆ ಒತ್ತಾಯಿಸಿ ಇದೆ ದಿ.13 ರಂದು ಪ್ರತಿಭಟನೆ!
ಗೋಕಾಕ : ಉಪ್ಪಾರ ಸಮಾಜವನ್ನು ಎಸ್ಟಿಗೆ ಸೇರಿಸುವಂತೆ ಒತ್ತಾಯಿಸಿ ಇದೆ ದಿ.13 ರಂದು ಪ್ರತಿಭಟನೆ ಮುಖಾಂತರ ರಾಜ್ಯ ಸರಕಾರವನ್ನು ಎಚ್ಚರಿಸಲು ಸಮಾಜ ಭಾಂದವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದು ಗೋಕಾಕ ತಾಲೂಕ ಉಪ್ಪಾರ ಸಂಘದ ಅಧ್ಯಕ್ಷ ಶಿವಪುತ್ರ ಜಕಬಾಳ ಹೇಳಿದರು. ಅವರು, ನಗರದ ಉಪ್ಪಾರ ಗಲ್ಲಿಯ ಉಪ್ಪಾರ (ಲೇಪಾಕ್ಷಿ) ಕಲ್ಯಾಣ ಮಂಟಪದಲ್ಲಿ ನಡೆದ ಸಭೆಯನ್ನು ಉದ್ಧೇಶಿಸಿ ಮಾತನಾಡಿ, ಉಪ್ಪಾರ ಸಮಾಜ ಆರ್ಥಿಕವಾಗಿ, ಶೈಕ್ಷಿಣಕಾಗಿ ಮತ್ತು ರಾಜಕೀಯವಾಗಿ ಹಿಂದುಳಿದಿದ್ದು ರಾಜ್ಯ ಸರಕಾರ …
Read More »ಶೀಘ್ರವೇ ಬೆಳಗಾಂ ಶುಗರ್ಸ ಕಾರ್ಖಾನೆಯ ಕಬ್ಬು ನುರಿಸುವ ಹಂಗಾಮಿಗೆ ಚಾಲನೆ : ಚೇರಮನ್ , ಸಿಎಫ್ಓ ಪ್ರದೀಪಕುಮಾರ ಇಂಡಿ
ಬೆಳಗಾವಿ: ಬೆಳಗಾಂ ಶುಗರ್ಸ ಪ್ರೈ. ಲಿ. ಕಾರ್ಖಾನೆಗೆ ಕಬ್ಬು ಪೂರೈಸುತ್ತಿರುವ ಎಲ್ಲ ರೈತಭಾಂದವರಿಗೆ ಅನಂತ ಕೃತಜ್ಞತೆಗಳು, ತಮ್ಮ ಸಹಾಯ ಮತ್ತು ಸಹಕಾರದಿಂದಾಗಿ ಸತತ ಯಶಸ್ಸನ್ನು ಸಾಧಿಸುತ್ತಿದೆ ಪ್ರಸಕ್ತ 2022-23 ರ ಹಂಗಾಮನ್ನು ಶೀಘ್ರದಲ್ಲಿ ಪ್ರಾರಂಭಿಸಲಾಗುವುದು ಎಂದು ಬೆಳಗಾಂ ಶುಗರ್ಸ ಚೇರಮನ್ ಮತ್ತು ಸಿ.ಎಫ್.ಓ ಪ್ರದೀಪಕುಮಾರ ಇಂಡಿ ತಿಳಿಸಿದರು. ಪ್ರಸ್ತುತ ಹಂಗಾಮಿನಲ್ಲಿ ಕಾರ್ಖಾನೆಯ ಸುತ್ತ-ಮುತ್ತಲಿನ ಸುಮಾರು 80 ಕಿ.ಮಿ ಅಂತರದಲ್ಲಿರುವ ಕಬ್ಬು ಪ್ರದೇಶದಲ್ಲಿರುವ ಗುಣಮಟ್ಟದ ತಳಿಯ ಕಬ್ಬನ್ನು ಪಡೆಯಲಾಗುವುದು . …
Read More »*ಮಹರ್ಷಿ ಶ್ರೀ ವಾಲ್ಮೀಕಿ ಅವರು ಯುವ ಜನತೆಗೆ ಆದರ್ಶ : ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ*
*ಮಹರ್ಷಿ ಶ್ರೀ ವಾಲ್ಮೀಕಿ ದೇವಸ್ಥಾನಕ್ಕೆ ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಭೇಟಿ* ಗೋಕಾಕ : ನಗರದ ಕರ್ನಾಟಕ ಸರ್ಕಾರ, ತಾಲೂಕು ಪಂಚಾಯತ್, ನಗರಸಭೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಗೋಕಾಕ ಇವರ ಸಂಯುಕ್ತಾಶ್ರಯದಲ್ಲಿ ಗೋಕಾಕ ಮಹರ್ಷಿ ವಾಲ್ಮೀಕಿ ದೇವಸ್ಥಾನದ ಆವರಣದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ನಡೆಯಿತು. ಈ ಸಂದರ್ಭದಲ್ಲಿ ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಅವರು ಮಾತನಾಡಿ ಜಗತ್ತಿನ ಶ್ರೇಷ್ಠ ಕಾವ್ಯಗಳಲ್ಲಿ ಒಂದಾದ ರಾಮಾಯಣ ರಚಿಸಿದ ವಾಲ್ಮೀಕಿ …
Read More »ಮೂಡಲಗಿ ಪಟ್ಟಣದ ಅಭಿವೃದ್ದಿಗೆ ಬದ್ದ : ಶಾಸಕ, ಕೆ.ಎಮ್.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಮೂಡಲಗಿ ಪಟ್ಟಣದ ರಸ್ತೆಗಳ ಅಭಿವೃದ್ದಿಗೆ ನಗರೋತ್ಥಾನ ಯೋಜನೆಯಡಿ ಅನುದಾನ ಬಿಡುಗಡೆಗೊಂಡಿದ್ದು, ಮತ್ತೇ ಹೆಚ್ಚುವರಿಯಾಗಿ 5 ಕೋಟಿ ರೂಪಾಯಿ ಬಿಡುಗಡೆ ಮಾಡುವಂತೆ ಪೌರಾಡಳಿತ ಇಲಾಖೆಗೆ ಪ್ರಸ್ತಾವಣೆ ಸಲ್ಲಿಸಲಾಗಿದೆ ಎಂದು ಶಾಸಕ ಹಾಗೂ ಕೆ.ಎಮ್.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಶನಿವಾರದಂದು ಪಟ್ಟಣದ ಕಲ್ಮೇಶ್ವರ ವೃತ್ತದ ಬಳಿ ನಗರೋತ್ಥಾನ ಯೋಜನೆಯಡಿ 4.05 ಕೋಟಿ ವೆಚ್ಚದ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಡಿಸೆಂಬರ ತಿಂಗಳ ಅಂತ್ಯದೊಳಗೆ ಮೂಡಲಗಿ …
Read More »ಅ. 11ಕ್ಕೆ ಸತೀಶ್ ಶುಗರ್ಸ್ ಕಾರ್ಖಾನೆ ಕಬ್ಬು ನುರಿಸಲು ಚಾಲನೆ
ಬೆಳಗಾವಿ: ಪ್ರಸಕ್ತ 2022-23ರ ಹಂಗಾಮಿಗೆ ಅ. 11 ರಂದು ಬೆಳಗ್ಗೆ 10:30ಕ್ಕೆ ಜಿಲ್ಲೆಯ ರೈತ ಮುಖಂಡರು, ಕಾರ್ಖಾನೆಯ ಆಡಳಿತ ಮಂಡಳಿ ಮತ್ತು ಅಧಿಕಾರಿ ವರ್ಗದವರು ಕಬ್ಬು ನುರಿಸುವ ಕಾರ್ಯಕ್ರಮಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡುವರು ಎಂದು ಸತೀಶ್ ಶುಗರ್ಸ್ ಚೇರಮನ್ ಹಾಗೂ ಸಿ.ಎಫ್.ಒ ಪ್ರವೀಣಕುಮಾರ ತಿಳಿಸಿದ್ದಾರೆ. ಸತೀಶ ಶುಗರ್ಸ್ ಕಾರ್ಖಾನೆಗೆ ಕಬ್ಬು ಪೂರೈಸುತ್ತಿರುವ ಎಲ್ಲ ರೈತ ಬಾಂಧವರಿಗೆ ಅನಂತ ಕೃತಜ್ಞತೆಗಳನ್ನು ಸಲ್ಲಿಸುತ್ತಾ, ನಮ್ಮ ಕಾರ್ಖಾನೆಯು ಕಬ್ಬು ಪೂರೈಸಿದ ರೈತ ಬಾಂಧವರ ಸಹಾಯ …
Read More »*ಭಾರತ ಜೋಡೋ ಪಾದಯಾತ್ರೆ; ಗೋಕಾಕ ಕ್ಷೇತ್ರದಲ್ಲಿ ಕೈ ಕಾರ್ಯಕರ್ತರ ಸಭೆ!*
ಗೋಕಾಕ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಭಾರತ ಜೋಡೋ ಪಾದಯಾತ್ರೆ ಈಗಾಗಲೇ ಮೈಸೂರಿನಲ್ಲಿ ಅದ್ಧೂರಿಯಾಗಿ ಸಾಗುತ್ತಿದ್ದು, ಗೋಕಾಕ ಮತ್ತು ಅರಭಾವಿ ಮತಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು, ನಾಯಕರು ಅ. 11ನೇ ತಾರೀಖು ಹಿರಿಯೂರಿನಲ್ಲಿ ನಡೆಯುವ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಬೇಕೆಂದು ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ ಹೇಳಿದರು. ನಗರದ ಅರ್ಬನ್ ಬ್ಯಾಂಕ್ನ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ಭಾರತ ಜೋಡೋ ಯಾತ್ರೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಈ ಪಾದಯಾತ್ರೆ …
Read More »ಎಸ್ಸಿ, ಎಸ್ಟಿ ಸಮುದಾಯಕ್ಕೆಮೀಸಲಾತಿ ಹೆಚ್ಚಳಕ್ಕೆ ಸಚಿವ ಸಂಪುಟ ಗ್ರೀನ್ ಸಿಗ್ನಲ್
ಬೆಂಗಳೂರು: ಎಸ್ಸಿ, ಎಸ್ಟಿ ಸಮುದಾಯಕ್ಕೆ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಳ ಮಾಡುವುದಕ್ಕೆ ರಾಜ್ಯ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದ್ದು, ಈ ಮೂಲಕ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ವರದಿಯನ್ನು ಒಪ್ಪಿಕೊಂಡಿದೆ. ‘SC ಮೀಸಲಾತಿಯನ್ನು ಶೇ 15 ರಿಂದ ಶೇ 17ಕ್ಕೆ ಹೆಚ್ಚಿಸಲು ಮತ್ತು ST ಮೀಸಲಾತಿಯನ್ನು ಶೇ 3ರಿಂದ ಶೇ 7ಕ್ಕೆ ಹೆಚ್ಚಿಸಲು ಶಿಫಾರಸು ಮಾಡಿದೆ. ಶುಕ್ರವಾರ ನಡೆದಿದ್ದ ಸಭೆ: ಶುಕ್ರವಾರ ವಿಧಾನಮಂಡಲದ ಉಭಯ ಸದನಗಳ ನಾಯಕರ ಸಭೆಯಲ್ಲೂ …
Read More »*ಸಂತೋಷ್ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ!*
ಕೆ. ಶಿವಾಪುರ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲೂಕಿನ ಕೆ.ಶಿವಾಪುರ ಗ್ರಾಮದಲ್ಲಿ ಅಲ್ಲಾಯಪ್ ಮಸೀದಿಯ ಮುಂಭಾಗದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ …
Read More »ವಾಲ್ಮೀಕಿ ಜಯಂತಿ ಹಾಗೂ ಈದ್ ಮೀಲಾದ ಹಬ್ಬವನ್ನು ಶಾಂತಿ ಸೌಹಾರ್ದತೆಯಿಂದ ಆಚರಿಸಿ: ಸಿ.ಪಿ.ಐ ಶ್ರೀಶೈಲ ಬ್ಯಾಕೂಡ
ಘಟಪ್ರಭಾ: ಈ ಬಾರಿ ಇಬ್ಬರು ಮಹಾ ಪುರುಷರ ಜಯಂತಿಗಳು ಒಂದೇ ದಿನ ಬಂದಿರುವುದರಿಂದ ಎಲ್ಲರೂ ಈದ್ ಮೀಲಾದ ಹಾಗೂ ವಾಲ್ಮೀಕಿ ಜಯಂತಿಯನ್ನು ಸೌರ್ಹಾದತೆಯಿಂದ ಆಚರಿಸಬೇಕೆಂದು ಘಟಪ್ರಭಾ ಪೊಲೀಸ್ ಠಾಣೆಯ ಸಿ.ಪಿ.ಐ ಶ್ರೀಶೈಲ ಬ್ಯಾಕೂಡ ಹೇಳಿದರು. ಅವರು ಶುಕ್ರವಾರ ಘಟಪ್ರಭಾ ಪೊಲೀಸ ಠಾಣೆಯಲ್ಲಿ ಈದ್ ಮೀಲಾದ ಹಬ್ಬದ ನಿಮಿತ್ತ ಕರೆಯಲಾದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಪ್ರವಾದಿ ಮೊಹ್ಮದ ಪೈಗಂಬರರು ಹಾಗೂ ಮಹರ್ಷಿ ವಾಲ್ಮೀಕಿಯವರ ಜಯಂತಿ ಅ.09 ರಂದು ಒಂದೇ ದಿನ …
Read More »
CKNEWSKANNADA / BRASTACHARDARSHAN CK NEWS KANNADA