Breaking News

cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

ಎಸ್ಸಿ-ಎಸ್ಟಿ ಸಮುದಾಯದ ಪ್ರಗತಿಗೆ ಮೀಸಲಾತಿ ಅಗತ್ಯ: ರಾಹುಲ್ ಜಾರಕಿಹೊಳಿ

ನ್ಯಾ. ನಾಗಮೋಹನ್ ದಾಸ್ ಆಯೋಗದ ವರದಿ ಜಾರಿಗೊಳಿಸುವಂತೆ ಒತ್ತಾಯಿಸಿ ಮನವಿ ಬೆಳಗಾವಿ: ನ್ಯಾ. ನಾಗಮೋಹನ್ ದಾಸ್ ಆಯೋಗದ ವರದಿ ಜಾರಿಗೊಳಿಸಿ, ಪರಿಶಿಷ್ಟ ಜಾತಿ ಮೀಸಲಾತಿ 15ರಿಂದ 17%, ಪರಿಶಿಷ್ಟ ಪಂಗಡದ ಮೀಸಲಾತಿಯನ್ನು 3ರಿಂದ ಶೇ 7.5ಕ್ಕೆ ಹೆಚ್ಚಿಸಬೇಕು ಒತ್ತಾಯಿಸಿ ಯುವ ನಾಯಕ ರಾಹುಲ್ ಜಾರಕಿಹೊಳಿಯವರ ನೇತೃತ್ವದಲ್ಲಿ ಸೋಮವಾರ ಕರ್ನಾಟಕ ದಲಿತ ಸಂಘಟನೆ ಹಾಗೂ ವಾಲ್ಮೀಕಿ ಸಮಾಜದಿಂದ ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್ ಉದ್ಯಾನವನದಿಂದ ಜಿಲ್ಲಾಧಿಕಾರಿಗಳ ಕಛೇರಿವರೆಗೂ ಬೃಹತ್‌ ಪ್ರತಿಭಟನೆ ನಡೆಸಿ, …

Read More »

ಅಥಣಿ ತಾಲೂಕಿನಲ್ಲಿ ಕಂಪಿಸಿದ ಭೂಮಿ, ಬೆಚ್ಚಿ ಬಿದ್ದ ಜನ!

ಬೆಳಗಾವಿ: ಕರ್ನಾಟಕ ಹಾಗೂ ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆ‌ ಸುರಿಯುತ್ತಿರುವ ಬೆನ್ನಲ್ಲೇ ಅಥಣಿ ತಾಲೂಕಿನ ಶಿರಹಟ್ಟಿ ಗ್ರಾಮದಲ್ಲಿ ಶನಿವಾರ ಬೆಳ್ಳಂಬೆಳಗ್ಗೆ ಲಘು ಭೂಕಂಪವಾಗಿದೆ.‌   ಶನಿವಾರ ಬೆಳಗ್ಗೆ 6:45ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ.ಯಾವುದೇ ಹಾನಿ ಸಂಭವಿಸಿಲ್ಲ. ಸುಮಾರು ಐದಾರು ಸೆಕೆಂಡ್ ಭೂಮಿ ಕಂಪನವಾಗಿದೆ.   ಧಾರಾಕಾರ‌ ಮಳೆ ಸುರಿಯುತ್ತಿರುವುದರ ಜತೆಗೆ ಲಘು ಭೂಕಂಪನ ಆಗಿರುವುದರಿಂದ ಜನರು ಆತಂಕಗೊಂಡಿದ್ದಾರೆ. ಸ್ಥಳಕ್ಕೆ ತಹಶೀಲ್ದಾರ್ ಹಾಗೂ ಡಿಎಸ್ ಪಿ ಸ್ಥಳಕ್ಕೆ …

Read More »

ಬೆಳಗಾವಿ ಜಿಲ್ಲೆಗೆ ಮೂರು ದಿನ ಯಲ್ಲೋ ಅಲರ್ಟ್ : ಡಿ.ಸಿ ನಿತೇಶ್ ಪಾಟೀಲ್

ಬೆಳಗಾವಿ: ಇನ್ನೂ ಮೂರ್ನಾಲ್ಕು ದಿನಗಳ ಕಾಲ ಬೆಳಗಾವಿ ಜಿಲ್ಲೆಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಸದ್ಯ ಜಿಲ್ಲೆಯಲ್ಲಿ ಯಾವುದೇ ಸಮಸ್ಯೆ ಇಲ್ಲ ತಹಶೀಲ್ದಾರ್ ಅಕೌಂಟ್‍ನಲ್ಲಿ ಹಣ ಇದ್ದು ತುರ್ತು ಪರಿಹಾರಕ್ಕೂ ಯಾವುದೇ ಸಮಸ್ಯೆ ಇಲ್ಲ ಎಂದು ಡಿ.ಸಿ ನಿತೇಶ್ ಪಾಟೀಲ್ ಹೇಳಿದ್ದಾರೆ.   ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆಗೆ 69 ಸಾವಿರ ಕ್ಯೂಸೆಕ್‍ನಷ್ಟು ನೀರು ಹರಿದು ಬರುತ್ತಿದೆ. ಅದೇ ರೀತಿ ಆಲಮಟ್ಟಿ ಜಲಾಶಯಕ್ಕೆ ನೀರು ಹರಿದು ಹೋಗುತ್ತಿದೆ. …

Read More »

ಅರಭಾವಿ ಕ್ಷೇತ್ರದ ಎಲ್ಲ ಕುಟುಂಬಗಳಿಗೂ ಕೋವಿಡ್-19 ಸಮಯದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಂದ ಆಹಾರ ಧಾನ್ಯಗಳ ಕಿಟ್ ವಿತರಣೆಗೆ ಶ್ಲಾಘನೆ*

ಗೋಕಾಕದಲ್ಲಿ ಶುಕ್ರವಾರದಂದು ಜರುಗಿದ ಬಿಜೆಪಿ ಅರಭಾವಿ ಮಂಡಲ ಕಾರ್ಯಕಾರಿಣಿ ಸಭೆ* *ಗೋಕಾಕ*: ಇಡೀ ವಿಶ್ವವೇ ಭಾರತದತ್ತ ತಿರುಗಿ ನೋಡಲು ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರೀಯ ಆಡಳಿತವೇ ಕಾರಣ. ಹೀಗಾಗಿ ಮೋದಿ ಅವರು ವಿಶ್ವಮಾನ್ಯ ನಾಯಕರು ಎಂದು ಬಿಜೆಪಿ ರಾಷ್ಟ್ರೀಯ ಓಬಿಸಿ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಲಕ್ಷ್ಮಣ ತಪಸಿ ಹೇಳಿದರು. ಶುಕ್ರವಾರದಂದು ಇಲ್ಲಿಯ ಎನ್‍ಎಸ್‍ಎಫ್ ದಲ್ಲಿ ಅರಭಾವಿ ಮಂಡಲ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪ್ರಧಾನಿ ನರೇಂದ್ರ …

Read More »

ಪ್ರವಾಹ ಭೀತಿ ಇದ್ದರೂ ಸಭೆ ನಡೆಸದ ಸಚಿವರು- ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಕಿಡಿ!

ಬೆಳಗಾವಿ: ಮಹಾರಾಷ್ಟ್ರದ ಘಟ್ಟಪ್ರದೇಶದಲ್ಲಿ ಮತ್ತು ಬೆಳಗಾವಿ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ಜಿಲ್ಲೆಯ ನದಿಗಳು ಉಕ್ಕಿ ಹರಿಯುತ್ತಿವೆ. ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಸರ್ಕಾರ ಮಾತ್ರ ಮುಂಜಾಗ್ರತಾ ಸಭೆ ಮಾಡುತ್ತಿಲ್ಲ. ಯಾರೂ ಜವಾಬ್ದಾರಿ ತೆಗೆದುಕೊಳ್ಳುತ್ತಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಕಿಡಿಕಾರಿದರು. ನಗರದ ಕಾಂಗ್ರೆಸ್ ಭವನದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಬಾರಿಯೂ ಪ್ರವಾಹದ ಸಂದರ್ಭದಲ್ಲಿ ಯಾವುದೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಲಿಲ್ಲ. ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ …

Read More »

ಯುವ ಜನತೆ ದುಶ್ಚಟ ಮಾಡದೆ, ಸಾಮಾಜಿಕ ಕಾರ್ಯಗಳಿಗೆ ಹೆಚ್ಚಿನ ಮಹತ್ವ ನೀಡಿ : ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ!

ಮೂಡಲಗಿ : ಯುವ ಜನತೆ ದುಶ್ಚಟ ಮಾಡದೆ, ದೇವರ ಕಾರ್ಯ, ಸಾಮಾಜಿಕ ಕಾರ್ಯಗಳಿಗೆ ಹೆಚ್ಚಿನ ಮಹತ್ವ ನೀಡಿ ಎಂದು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಅವರು ಯುವಕರಿಗೆ ಕರೆ ನೀಡಿದರು. ನಗರದ ಶ್ರೀ ವೆಂಕಟೇಶ್ವರ ದೇವಸ್ತಾನದ ಸಪ್ತಾಹ ಮತ್ತು ಅಭಿಷೇಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಕ್ಷೇತ್ರದ ಪ್ರತಿ ಸಮಾಜಮುಖಿ ಕಾರ್ಯಕ್ರಮಗಳಿಗೆ ನಾವು ಸದಾ ನಿಮ್ಮೋಂದಿಗೆ ಬೆನ್ನೆಲುಬಾಗಿ ನಿಲ್ಲುತ್ತೇವೆ, ಇಂದಿನ ಯುವ ಜನತೆ ದುಶ್ಚಟಗಳನ್ನು ಯಾವುದೇ ಕಾರಣಕ್ಕೂ ಮಾಡಬೇಡಿ, ದೈವ …

Read More »

ಕುಲಗೋಡ ಪೋಲಿಸರ ಭರ್ಜರಿ ಭೇಟೆ; 95 ಕೆ.ಜಿ ಗಾಂಜಾ ವಶ.!

ಕುಲಗೋಡ : ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಅಕ್ರಮ ಗಾಂಜಾ ಬೆಳೆಯುತ್ತಿರುವ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ, ಸುಮಾರು 95 ಕೆ.ಜಿ, ₹ 9.51 ಲಕ್ಷ ಮೌಲ್ಯದ ಗಾಂಜವನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳಾದ ಬಸಪ್ಪ ರಾಮಪ್ಪ ಲಗಳಿ. ಸಿದ್ದಪ್ಪಾ ಬಸಪ್ಪಾ ಲಗಳಿ ಬಂಧಿತ ಆರೋಪಿಗಳು. ಪಿಎಸ್ಐ ಗೋವಿಂದಗೌಡ ಎಸ್ ಪಾಟೀಲ್, ಎಎಸ್ಐ ಬಿ ವೈ ಅಂಬಿ, ಕಲ್ಮೇಶ್ ಬಾಗಲಿ, ಸಿದ್ದು ಮಂಗಿ, ಮಾಳಪ್ಪಾ ಆಡಿನ, ಮಹೇಶ್ ಲದ್ದಿ, ಎಸ್ ವಿ ಹಂಜಿ, ಮಾರುತಿ ಕುರಿನವರ್, …

Read More »

ಕೃಷಿ ಸಂಜೀವಿನಿ ವಾಹನಕ್ಕೆ ಶಾಸಕ ರಮೇಶ ಜಾರಕಿಹೊಳಿ ಚಾಲನೆ!

ಗೋಕಾಕ : ರೈತರು ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಹೆಚ್ಚಿನ ಪ್ರಗತಿ ಸಾಧಿಸುವಂತೆ ಶಾಸಕ ರಮೇಶ್ ಜಾರಕಿಹೊಳಿ ಹೇಳಿದರು. ನಗರದ ತಮ್ಮ ಕಾರ್ಯಾಲಯದ ಆವರಣದಲ್ಲಿ ಕೃಷಿ ಇಲಾಖೆಯ ಮುಂಗಾರು ಹಂಗಾಮಿನ ಕೃಷಿ ಅಭಿಯಾನ ಹಾಗೂ ಕೃಷಿ ಸಂಜೀವಿನಿ ವಾಹನವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಇಂದಿನ ವೈಜ್ಞಾನಿಕ ಯುಗದಲ್ಲಿ ಯಂತ್ರಗಳ ಅಳವಡಿಕೆಯಿಂದ ಹೆಚ್ಚಿನ ಪ್ರಗತಿ ಸಾಧಿಸಲು ಸಾಧ್ಯ ರೈತರು ಈ ತಂತ್ರಜ್ಞಾನಕ್ಕೆ ಹೆಚ್ಚಿನ ಮಹತ್ವ ನೀಡಬೇಕು. ಕೃಷಿ ಇಲಾಖೆ ಹಾಗೂ ಇತರ ಕೃಷಿಗೆ …

Read More »

ಘಟಪ್ರಭಾದಲ್ಲಿ ನೂತನ ಬಸ್ ನಿಲ್ದಾಣ ನಿರ್ಮಿಸುವಂತೆ ಕನ್ನಡ ಪರ ಸಂಘಟನೆಗಳ ಒಕ್ಕೂಟದಿಂದ ಶಾಸಕ ರಮೇಶ್ ಜಾರಕಿಹೊಳಿ ಅವರಿಗೆ ಮನವಿ!

ಗೋಕಾಕ : ತಾಲೂಕಿನ ಘಟಪ್ರಭಾ ಪಟ್ಟಣದಲ್ಲಿ ನೂತನವಾಗಿ ಬಸ ನಿಲ್ದಾಣ ನಿರ್ಮಿಸುವಂತೆ ಕನ್ನಡ ಪರ ಸಂಘಟನೆಗಳ ಒಕ್ಕೂಟದ ತಾಲೂಕು ಘಟಕ ವತಿಯಿಂದ ಗುರುವಾರದಂದು ನಗರದಲ್ಲಿ ಶಾಸಕ ರಮೇಶ್ ಜಾರಕಿಹೊಳಿ ಅವರಿಗೆ ಮನವಿ ಅರ್ಪಿಸಲಾಯಿತು. ಈ ಸಂದರ್ಭದಲ್ಲಿ ಕೆಂಪಣ್ಣ ಚೌಕಾಶಿ, ಪ್ರಶಾಂತ್ ಅರಳಿಕಟ್ಟಿ , ಸಂತೋಷ ಖಂಡ್ರಿ, ಮಲಿಕಜಾನ ತಲವಾರ, ಶೆಟ್ಟೆಪ್ಪ ಗಾಡಿವಡ್ಡರ, ಅಪ್ಟಸಾಬ ಮುಲ್ಲಾ, ಬಸವರಾಜ ಬೆಡರಟ್ಟಿ, ಮಾರುತಿ ಚೌಕಾಶಿ, ರಾಜು ದೊಡ್ಡಮನಿ, ತಮ್ಮಣ್ಣ ಅರಬಾಂವಿ ಸೇರಿದಂತೆ ಅನೇಕರು ಇದ್ದರು

Read More »

ಬಕ್ರೀದ್ ಹಬ್ಬದ ನಿಮಿತ್ಯ ಘಟಪ್ರಭಾದಲ್ಲಿ ಪೂರ್ವಭಾವಿ ಸಭೆ.

ಘಟಪ್ರಭಾ: ಜುಲೈ 10ರಂದು ಬಕ್ರೀದ್ ಹಬ್ಬವು ಶಾಂತರೀತಿಯಿಂದ ಜರುಗುವಂತೆ ಮತ್ತು ಹಬ್ಬದ ಸಂದರ್ಭದಲ್ಲಿ ಅಹಿತಕರ ಘಟನೆ ಮತ್ತು ಯಾವುದೇ ರೀತಿಯ ಕಾಯ್ದೆ ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕು ಎಂದು ಘಟಪ್ರಭಾ ಪೋಲಿಸ್ ಠಾಣೆಯ ಸಿ ಪಿ ಐ ಶ್ರೀ ಶೈಲ ಬ್ಯಾಕೂಡ ಅವರು ಹೇಳಿದರು. ಅವರು ಬಕ್ರಿದ್ ಹಬ್ಬದ ಆಚರಣೆಯ ಸಂದರ್ಭದಲ್ಲಿ ಅನಧೀಕೃತವಾಗಿ ಜಾನುವಾರುಗಳ ವಧೆ,ಜಾನುವಾರು ಸಾಗಾಣಿಕೆ ತಡೆಗಟ್ಟುವ ಕುರಿತಂತೆ ಪೋಲಿಸ್ ಠಾಣೆಯ ಸಭಾಂಗಣದಲ್ಲಿ ಜುಲೈ6ರಂದು ಸಂಜೆ ನಡೆದ ಪೂರ್ವ ಸಿದ್ಧತೆಯ ಸಭೆಯ …

Read More »