ಗೋಕಾಕ : ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 4ನೇ ರ್ಯಾಂಕ ಬಂದ ವಿದ್ಯಾರ್ಥಿಗಳು ಹಾಗೂ ಗೋಕಾಕ ವಲಯದಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಮತ್ತು ಶೇ100ರಷ್ಟು ಫಲಿತಾಂಶ ಪಡೆದ ಶಾಲಾ ಮುಖ್ಯೋಪಾಧ್ಯಾಯರನ್ನು ರವಿವಾರದಂದು ಶಾಸಕ ರಮೇಶ್ ಜಾರಕಿಹೊಳಿ ಅವರು ಸತ್ಕರಿಸಿ, ಗೌರವಿಸಿದರು.

ನಂತರ ಶಾಸಕ ರಮೇಶ್ ಜಾರಕಿಹೊಳಿ ಅವರನ್ನು ತಾಲೂಕು ಅಧಿಕಾರಿಗಳು ಸತ್ಕಾರ ಮಾಡಿದರು.

ಈ ಸಂದರ್ಭದಲ್ಲಿ ತಹಶೀಲದಾರ ಡಾ.ಮೋಹನ ಭಸ್ಮ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಪರಶುರಾಮ ಘಸ್ತೆ,ಕ್ಷೇತ್ರ ಶಿಕ್ಷಣಾಧಿಕಾರಿ ಜಿ ಬಿ ಬಳಗಾರ, ಕ್ಷೇತ್ರ ಸಮನ್ವಯಾಧಿಕಾರಿ ಎಸ್, ವಿ ಕುಲಕರ್ಣಿ, ಹಾಗೂ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಟಿ ಆರ್ ಕಾಗಲ, ಮಡೆಪ್ಪ ತೋಳಿನವರ ಶಾಸಕ ಆಪ್ತ ಸಹಾಯಕ ಭೀಮಗೌಡ ಪೋಲಿಸಗೌಡರ, ಕಾಂತು ಎತ್ತಿನಮನಿ, ಸುರೇಶ ಸನದಿ ಸೇರಿದಂತೆ ವಿವಿಧ ಶಾಲೆಗಳ ಶಿಕ್ಷಕರು, ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
CKNEWSKANNADA / BRASTACHARDARSHAN CK NEWS KANNADA