Breaking News

ತಮ್ಮ ಸಹೋದರಿ ಲಕ್ಷ್ಮೀ ಅವರಿಂದ ರಾಖಿ ಕಟ್ಟಿಸಿಕೊಂಡು ಸಂಭ್ರಮಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ


ಜನುಮ- ಜನುಮದ ಅನುಬಂಧ ಈ ರಕ್ಷಾ ಬಂಧನ -ಶಾಸಕ ಬಾಲಚಂದ್ರ ಜಾರಕಿಹೊಳಿ

ದೊಡ್ಮನೆ ಕುಟುಂಬದಲ್ಲಿ ಹರ್ಷೊಲ್ಲಾಸದಿಂದ ನಡೆದ ರಾಖಿ ಹಬ್ಬ

ಗೋಕಾಕ- ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ರಕ್ಷಾ ಬಂಧನವು ವಿಶೇಷ ಮಹತ್ವವಿದ್ದು, ಸಹೋದರ- ಸಹೋದರಿಯರ ಪ್ರೀತಿ, ವಾತ್ಸಲ್ಯವನ್ನು ಬಿಂಬಿಸುವ ಹಬ್ಬವಾಗಿದೆ ಎಂದು ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು.

ಸೋಮವಾರದಂದು ನಗರದ ಹೊಸಪೇಟೆ ರಸ್ತೆಯಲ್ಲಿರುವ ತಮ್ಮ ಲಕ್ಷ್ಮೀ ನಿವಾಸದಲ್ಲಿ ಸಹೋದರಿಯವರಿಂದ ರಾಖಿ ಕಟ್ಠಿಸಿಕೊಂಡು ಮಾತನಾಡಿದ ಅವರು, ಪ್ರತೀ ವರ್ಷವೂ ಈ ರಾಖಿ ಹಬ್ಬವನ್ನು ನಾವೆಲ್ಲ ಆಚರಿಸಿಕೊಂಡು ಬರುತ್ತಿದ್ದೇವೆ ಎಂದು ತಿಳಿಸಿದರು.

ಪ್ರತಿಯೊಬ್ಬ ಸಹೋದರಿಯರು ಸಮಾಜದ ದುಷ್ಟ ಶಕ್ತಿಗಳಿಂದ ರಕ್ಷಿಸಲೆಂದು ತಮ್ಮ ಸಹೋದರರಿಗೆ ರಾಖಿಯನ್ನು ಕಟ್ಟುತ್ತಾರೆ. ಪ್ರತಿಯಾಗಿ ಸಹೋದರರು ಕೂಡ ತಮ್ಮ ಭ್ರಾತತ್ವ ಪ್ರೀತಿಯನ್ನು ಉಜ್ವಲಗೊಳಿಸಲು ಸಹೋದರಿಯರಿಗೆ ಬೆನ್ನೆಲುಬು ನಿಲ್ಲುತ್ತಾರೆ ಎಂದು ತಿಳಿಸಿದರು.

ಪ್ರಾಚೀನ ಕಾಲದಿಂದಲೂ ಶ್ರಾವಣ ಮಾಸದಲ್ಲಿ ಆಚರಿಸುವ ರಕ್ಷಾ ಬಂಧನವು ಒಡ ಹುಟ್ಟಿದವರ ನಡುವಿನ ವಾತ್ಸಲ್ಯವನ್ನು ಬಿಂಬಿಸುವ ಹಬ್ಬವೇ ಈ ರಕ್ಷಾ ಬಂಧನವಾಗಿದೆ ಎಂದು ಅವರು ಹೇಳಿದರು.

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಸಹೋದರಿಯಾದ ಲಕ್ಷ್ಮಿ ಅವರು ಬಾಲಚಂದ್ರ ಜಾರಕಿಹೊಳಿ ಅವರಿಗೆ ಹಣೆಗೆ ತಿಲಕವನ್ನಿಟ್ಟು ಆರತಿಯನ್ನು ಬೆಳಗಿ ಅವರಿಗೆ ರಾಖಿಯನ್ನು ಕಟ್ಟುವ ಮೂಲಕ ಈ ಮಹತ್ವಪೂರ್ಣ ರಕ್ಷಾ ಬಂಧನ ಹಬ್ಬಕ್ಕೆ ಸಾಕ್ಷಿಯಾದರು.

ಈ ಸಂದರ್ಭದಲ್ಲಿ ಲಕ್ಷ್ಮೀ ನಾಯಕ ಅವರ ಪುತ್ರ ಅಭಿಷೇಕ ಮತ್ತು ಪುತ್ರಿ ಅರುಣಾ ಅವರು ಉಪಸ್ಥಿತರಿದ್ದರು.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ಅರಭಾವಿ ಕ್ಷೇತ್ರದಲ್ಲಿ ಶಿಕ್ಷಣಕ್ಕೆ ಪ್ರಥಮ ಪ್ರಾಶಸ್ತ್ಯ: ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ- ಅರಭಾವಿ ಕ್ಷೇತ್ರದಲ್ಲಿ ಶಿಕ್ಷಣಕ್ಕೆ ಪ್ರಥಮ ಪ್ರಾಶಸ್ತ್ಯ ನೀಡಿದ್ದು, ಅದರಲ್ಲೂ ಬಡ ವಿದ್ಯಾರ್ಥಿಗಳಿಗೆ ಅನುಕೂಲವಾಗಲು ವಸತಿ ಶಾಲೆಗಳನ್ನು ಆರಂಭಿಸಿದ್ದು, ಇದರಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ