Breaking News

ಪುಸ್ತಕಗಳನ್ನು ಓದಿ ಬಳಕೆ ಮಾಡಿಕೊಂಡು ಸ್ಪರ್ಧಾತ್ಮಕ ಪರೀಕ್ಷೆಯನ್ನು ಯಶಸ್ವಿಯಾಗಿ ಎದುರಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ


ಮೂಡಲಗಿ- ಮೂಡಲಗಿ ಶೈಕ್ಷಣಿಕ ವಲಯದ ಸರಕಾರಿ ಪದವಿ ಪೂರ್ವ ಕಾಲೇಜು ಹಾಗೂ ಸರಕಾರಿ ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಓದಲು ಅನುಕೂಲವಾಗುವ ನಿಟ್ಟಿನಲ್ಲಿ ಶಾಸಕರ ಸ್ಥಳೀಯ ಪ್ರದೇಶ ಅಭಿವೃದ್ಧಿ ನಿಧಿಯಡಿ 2 ಲಕ್ಷ ರೂ ಮೊತ್ತದ ಪುಸ್ತಕಗಳನ್ನು ನೀಡಲಾಗಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ಸೋಮವಾರದಂದು ಪಟ್ಟಣದ ಪುರಸಭೆಯ ಆವರಣದಲ್ಲಿ 2 ಲಕ್ಷ ರೂಪಾಯಿ ವೆಚ್ಚದ ಪುಸ್ತಕಗಳನ್ನು ವಿತರಿಸಿ ಮಾತನಾಡಿದ ಅವರು, ಇಂಥ ಪುಸ್ತಕಗಳನ್ನು ಓದಿ ಬಳಕೆ ಮಾಡಿಕೊಂಡು ಸ್ಪರ್ಧಾತ್ಮಕ ಪರೀಕ್ಷೆಯನ್ನು ಯಶಸ್ವಿಯಾಗಿ ಎದುರಿಸುವಂತೆ ತಿಳಿಸಿದರು .

ಸರಕಾರದ ವಿವಿಧ ಸೇವೆಗಳಿಗೆ ಈ ಭಾಗದ ವಿದ್ಯಾರ್ಥಿಗಳು ಸಿದ್ದರಾಗಬೇಕು. 

ಸದರಿ ಪುಸ್ತಕಗಳು ಭವಿಷ್ಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ವಿದ್ಯಾರ್ಥಿಗಳು ಎದುರಿಸಲು ಅನುಕೂಲವಾಗಲಿವೆ. ಸರಕಾರದ ವಿವಿಧ ಹುದ್ದೆಗಳ ಮೂಲಕ ನಡೆಯುವ ಪರೀಕ್ಷೆಗಳಿಗೆ ಸಿದ್ಧತೆಗೊಳ್ಳಲು ಬೇಕಾದ ಅಗತ್ಯ ಪುಸ್ತಕಗಳಾಗಿವೆ. ಈ ಪುಸ್ತಕಗಳನ್ನು ಕಾಲೇಜುಗಳ ಹಾಗೂ ಪ್ರೌಢಶಾಲೆಗಳ ಗ್ರಂಥಾಲಯದಲ್ಲಿಟ್ಟು ವಿದ್ಯಾರ್ಥಿಗಳ ಓದಿಗೆ ಒದಗಿಸಿಕೊಟ್ಟು ಉಜ್ವಲ ಭವಿಷ್ಯ ರೂಪಿಸಲು ಅನುಕೂಲವಾಗಲಿದೆ.

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಎರಡು ಲಕ್ಷ ರೂ ಮೊತ್ತದ ಪುಸ್ತಕಗಳನ್ನು ಮೂಡಲಗಿ ಶೈಕ್ಷಣಿಕ ವಲಯದ ಐದು ಸರಕಾರಿ ಪದವಿ ಪೂರ್ವ ಕಾಲೇಜುಗಳ ಹಾಗೂ 37 ಸರ್ಕಾರಿ ಪ್ರೌಢಶಾಲೆಗಳ ಗ್ರಂಥಾಲಯಗಳಿಗೆ ನೀಡಿದರು.

ಈ ಸಂದರ್ಭದಲ್ಲಿ ತಹಸಿಲ್ದಾರ್ ಎಸ್. ಎ. ಬಬಲಿ, ಬಿಇಓ ಅಜಿತ ಮನ್ನಿಕೇರಿ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಫಕ್ಕೀರಪ್ಪ ಚಿನ್ನನ್ನವರ, ಸಿಡಿಪಿಓ ಯಲ್ಲಪ್ಪ ಗಡಾಡಿ, ಪುರಸಭೆ ಸದಸ್ಯರು, ಶಿಕ್ಷಣ ಇಲಾಖೆಯ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

*ಅಜೀತ ಮನ್ನಿಕೇರಿ ಅವರ ಅವಿರತ ಪ್ರಯತ್ನದಿಂದ ಮೂಡಲಗಿ ಶೈಕ್ಷಣಿಕ ವಲಯವು ರಾಜ್ಯ- ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸುವಂತಾಗಿದೆ- ಶಾಸಕ ಬಾಲಚಂದ್ರ ಜಾರಕಿಹೊಳಿ*

*ತಿಗಡಿ ಗ್ರಾಮದಲ್ಲಿ ಶಿಕ್ಷಕರ ದಿನಾಚರಣೆ ನಿಮಿತ್ತ ಅದ್ದೂರಿಯಾಗಿ ನಡೆದ ತಾಲ್ಲೂಕು ಮಟ್ಟದ ಗುರು ಸ್ಮರಣೆ ಕಾರ್ಯಕ್ರಮ* *ಡಿಡಿಪಿಐ ಆಗಿ ಪದೋನ್ನತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ