ಯಾದವಾಡ ಗ್ರಾಮದಲ್ಲಿ ಮನೆ- ಮನೆಗೆ ತೆರಳಿ ಅಭಿಯಾನದ ಯಶಸ್ಸಿಗೆ ಕರೆ ನೀಡಿದ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ- ಎಸ್ಐಆರ್ ಅಭಿಯಾನದ ಪ್ರಯುಕ್ತ ಪ್ರತಿ ಕಾರ್ಯಕರ್ತರು 20 ಮನೆ- ಮನೆಗೆ ತೆರಳಿ ಅದರ ಸಮಗ್ರ ಮಾಹಿತಿಯನ್ನು ನೀಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಕರೆ ನೀಡಿದರು.
ಶನಿವಾರದಂದು ತಾಲ್ಲೂಕಿನ ಯಾದವಾಡ ಗ್ರಾಮದಲ್ಲಿ ಅರಭಾವಿ ಬಿಜೆಪಿ ಮಂಡಲ ಹಮ್ಮಿಕೊಂಡ ಎಸ್ಐಆರ್ ಮಹಾ ಸಂಪರ್ಕ ಅಭಿಯಾನದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಎಸ್ಐಆರ್ ಅಭಿಯಾನದಲ್ಲಿ ಪ್ರತಿಯೊಬ್ಬ ಕಾರ್ಯಕರ್ತರು ಭಾಗಿಯಾಗಿ ಅಭಿಯಾನವನ್ನು ಯಶಸ್ವಿ ಮಾಡುವಂತೆ ಅವರು ಹೇಳಿದರು.
ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಯಾದವಾಡ ಗ್ರಾಮದಲ್ಲಿ ನಡೆಯುತ್ತಿರುವ ವಿಶೇಷ ಮತದಾರ ಪಟ್ಟಿಯ ಪರೀಕ್ಷರಣೆಯಲ್ಲಿ ಪಾಲ್ಗೊಂಡು ಮನೆ- ಮನೆಗೆ ಭೇಟಿ ನೀಡಿ ಅಭಿಯಾನದ ಬಗ್ಗೆ ಮಾಹಿತಿಯನ್ನು ನೀಡಿದರು.
ಯಾದವಾಡದ 258 ಮತ್ತು 259 ರ ಮತಗಟ್ಟೆಗಳಿಗೆ ಭೇಟಿ ನೀಡಿ ಮಹಾ ಸಂಪರ್ಕ ಅಭಿಯಾನದಲ್ಲಿ ಭಾಗಿಯಾದರು.
ಈ ಸಂದರ್ಭದಲ್ಲಿ ಬೆಳಗಾವಿ ಬಿಜೆಪಿ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಸುಭಾಸ ಪಾಟೀಲ, ಅರಭಾವಿ ಬಿಎಲ್ಎ-1 ಗೋವಿಂದ ಕೊಪ್ಪದ, ಅರಭಾವಿ ಮಂಡಲ ಅಧ್ಯಕ್ಷ ಮಹಾದೇವ ಶೆಕ್ಕಿ, ಪ್ರಕಾರ್ಯದರ್ಶಿ ಪ್ರಮೋದ ನುಗ್ಗಾನಟ್ಟಿ, ಬಿಎಲ್ಓ, ಬಿಎಲ್ಎ-2, ಪಕ್ಷದ ಪದಾಧಿಕಾರಿಗಳು, ಪ್ರಮುಖರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
CKNEWSKANNADA / BRASTACHARDARSHAN CK NEWS KANNADA