Breaking News

ರೊಚ್ಚಿಗೆದ್ದ ದಸ್ತು ಬರಹಗಾರರು ; ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಡಿ.16ಕ್ಕೆ ಬೆಳಗಾವಿ ಚಲೋ


ಡೀಡ್ ರೈಟರ್ ಲಾಗಿನ್, ದಸ್ತಾವೇಜುಗಳಿಗೆ ಬಿ ಕಾಲಂ ಕಡ್ಡಾಯಕ್ಕೆ ಸ್ಪಂದಿಸದ ಸರ್ಕಾರ: ಆರೋಪ

ಕರ್ನಾಟಕ ರಾಜ್ಯ ನೋಂದಣಿ ಮತ್ತು ಮುದ್ರಾಂಕ ಇಲಾಖೆಯಿಂದ ಪರವಾನಿಗೆ ಪಡೆದ ದಸ್ತು ಪತ್ರ ಬರಹಗಾರರ ಒಕ್ಕೂಟದಿಂದ ಚೇತನ ಹೋಟೆಲ್‌ನಲ್ಲಿ ಸಭೆ ನಡೆದಿದ್ದು, ರಾಜ್ಯ ಪತ್ರ ಬರಹಗಾರರ ವಿವಿಧ ಬೇಡಿಕೆಗಳ ಈಡೇರಿಸುವಂತೆ ಒತ್ತಾಯಿಸಿ ಡಿ.16ರಂದು ಬೆಳಗಾವಿ ಚಲೋ ನಡೆಸುವುದು ಸೇರಿದಂತೆ ವಿವಿಧ ನಿರ್ಣಯಗಳನ್ನು ಕೈಗೊಳ್ಳಲಾಯಿತು.

ಕರ್ನಾಟಕ ರಾಜ್ಯ ನೋಂದಣಿ ಮತ್ತು ಮುದ್ರಾಂಕ ಇಲಾಖೆಯಿಂದ ಪರವಾನಿಗೆ ಪಡೆದ ದಸ್ತು ಪತ್ರ ಬರಹಗಾರರ ಒಕ್ಕೂಟದಿಂದ ಸಭೆ ನಡೆದಿದ್ದು, ರಾಜ್ಯ ಪತ್ರ ಬರಹಗಾರರ ವಿವಿಧ ಬೇಡಿಕೆಗಳ ಈಡೇರಿಸುವಂತೆ ಒತ್ತಾಯಿಸಿ ಡಿ.16ರಂದು ಬೆಳಗಾವಿ ಚಲೋ ನಡೆಸುವುದು ಸೇರಿದಂತೆ ವಿವಿಧ ನಿರ್ಣಯಗಳನ್ನು ಕೈಗೊಳ್ಳಲಾಯಿತು.

ರಾಜ್ಯ ಪತ್ರ ಬರಹಗಾರರ ಅಸ್ತಿತ್ವಕ್ಕಾಗಿ ಹಾಗೂ ರಾಜ್ಯದ ಎಲ್ಲ ಪತ್ರ ಬರಹಗಾರರಿಗೆ ಡೀಡ್ ರೈಟರ್ ಲಾಗಿನ್ ಹಾಗೂ ಎಲ್ಲ ನೋಂದಣಿ ದಸ್ತಾವೇಜುಗಳಿಗೆ ಬಿ ಕಾಲಂ ಕಡ್ಡಾಯಗೊಳಿಸುವಂತೆ ಕಳೆದ ವರ್ಷದಿಂದ ಸಂಬಂಧಪಟ್ಟ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಅಧಿಕಾರಿಗಳು ಮತ್ತು ಸಚಿವರಿಗೆ ಮನವಿ ಸಲ್ಲಿಸಲಾಗಿದೆ. ಆದರೂ, ಇದುವರೆಗೂ ಯಾವುದೇ ಬೇಡಿಕೆ ಈಡೇರಿಸದೇ ಇರುವ ನಿರ್ಲಕ್ಷ್ಯವನ್ನು ಸಭೆಯಲ್ಲಿ ಖಂಡಿಸಲಾಯಿತು.

ಕಾವೇರಿ 1.0 ಮತ್ತು ಕಾವೇರಿ 2.0 ದಿಂದ ಮುಂದುವರಿದು ಈಗ ಕಾವೇರಿ 3.0 ತಂತ್ರಾಂಶದಡಿ ನೋಂದಣಿ ವ್ಯವಸ್ಥೆಯ ಕಾರ್ಯವನ್ನು ಜಾರಿಗೊಳಿಸಲಾಗಿದೆ. ಇದರಿಂದ ಸಾರ್ವಜನಿಕರ ನೋಂದಣಿಯಾದ ಆಸ್ತಿಗಳಿಗೆ ಭದ್ರತೆ ಕಡಿಮೆಯಾಗುತ್ತದೆ. ಪತ್ರ ಬರಹಗಾರರಿಗೆ ಇನ್ನಿಲ್ಲದ ಸಮಸ್ಯೆಗಳೂ ಉಂಟಾಗುತ್ತವೆ. ಸರ್ಕಾರ ಯಾವುದೇ ಕೈಪಿಡಿ ಹೊರಡಿಸದೇ ಏಕಪಕ್ಷೀಯ ನಿರ್ಧಾರ ಮತ್ತು ಬದಲಾವಣೆಗಳನ್ನು ತರುತ್ತಿದೆ ಎಂದು ಸದಸ್ಯರು ಆಕ್ಷೇಪಿಸಿದರು.

ಈ ಹಿನ್ನೆಲೆ ಸರ್ಕಾರದ ಧೋರಣೆ ಖಂಡಿಸಿ ಮತ್ತು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿ.16ರಂದು ಬೆಳಗಾವಿ ಚಲೋ ಕಾರ್ಯಕ್ರಮ ನಡೆಸಲಾಗುವುದು. ಬೆಳಗಾವಿಯ ಸುವರ್ಣ ಸೌಧದ ಮುಂದೆ ಧರಣಿ ನಡೆಸಲಾಗುವುದು. ಸರ್ಕಾರ ಇದಕ್ಕೂ ಸ್ಪಂದಿಸದೇ ಇದ್ದಲ್ಲಿ ನ್ಯಾಯಾಲಯದ ಮೊರೆ ಹೋಗುವುದು, ರಾಜ್ಯಾದ್ಯಂತ ಎಲ್ಲ ಉಪ ನೋಂದಣಿ ಕಚೇರಿಗಳಲ್ಲಿ ಒಂದು ದಿವಸ ಲೇಖನಿ ಸ್ಥಗಿತಗೊಳಿಸಿ ಧರಣಿ ನಡೆಸುವ ಕುರಿತು ಸಹ ನಿರ್ಣಯಗಳನ್ನು ಕೈಗೊಳ್ಳಲಾಗಿದೆ.

 


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ನಮ್ಮ ದೇಶದಲ್ಲಿರುವ ಕ್ರಿಕೆಟ್‌ ಪಂದ್ಯಕ್ಕೆ ಇರುವ ಜನಪ್ರಿಯತೆ ಬೇರೊಂದು ಕ್ರೀಡೆಗಿಲ್ಲ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ:ನಮ್ಮ ದೇಶದಲ್ಲಿರುವ ಕ್ರಿಕೆಟ್‌ ಪಂದ್ಯಕ್ಕೆ ಇರುವ ಜನಪ್ರಿಯತೆ ಬೇರೊಂದು ಕ್ರೀಡೆಗಿಲ್ಲ. ಪ್ರಪಂಚಾದ್ಯಂತ ಪಸರಿಸಿರುವ ಕ್ರಿಕೆಟ್ ಆಟವು ಪ್ರತಿ ಹಳ್ಳಿ- ಹಳ್ಳಿಗೂ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ