ಬೆಳಗಾವಿ: ಬಿಡಿಸಿಸಿ ಬ್ಯಾಂಕಿನ ಠೇವಣಿ ಹಣ ಸಂಪೂರ್ಣ ಸುರಕ್ಷಿತವಾಗಿದ್ದು, ರೈತರು ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ಬ್ಯಾಂಕ್ ಅಧ್ಯಕ್ಷ ಹಾಗೂ ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಸ್ಪಷ್ಟಪಡಿಸಿದರು. ಸೋಮವಾರ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ಯಾಂಕಿನ ಠೇವಣಿ ವಿಚಾರದಲ್ಲಿ ಬಿಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ರಮೇಶ ಕತ್ತಿ ಮತ್ತು ಡಾ. ಮಹಾಂತೇಶ ಕಡಾಡಿ ಅಪಪ್ರಚಾರದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದರು. ಈ ಹಿನ್ನೆಲೆಯಲ್ಲಿ ಕಡಾಡಿ ಅವರಿಗೆ ನೋಟಿಸ್ ನೀಡಲಾಗಿದ್ದು, ರಮೇಶ …
Read More »ನಕಲಿ ದಾಖಲೆ ಸೃಷ್ಟಿಸಿ ಜಮೀನು ಖರೀದಿ ಪ್ರಕರಣ ; ಸಿನಿ ಶೈಲಿಯಲ್ಲಿ ಹುಕ್ಕೇರಿ ಸಬ್ ರಜಿಸ್ಟರ್ ಬಂಧನ
ಹುಕ್ಕೇರಿ: ನಕಲಿ ದಾಖಲೆ ಸೃಷ್ಟಿಸಿ ಜಮೀನು ಮಾರಾಟಕ್ಕೆ ಸಂಬಂಧಿಸಿದಂತೆ ಸಬ್ ರಜಿಸ್ಟಾರ್ ಹಾಗೂ ಬಾಂಡ್ ರೈಟರ್ ಪೊಲೀಸರ ಅತಿಥಿಯಾಗಿದ್ದಾರೆ. ಸಬ್ ರಿಜಿಸ್ಟರ್ ಹಾಗೂ ಬಾಂಡ್ ರೈಟರನ್ನ ಪೊಲೀಸರು ಬಂಧಿಸಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಕುರಣಿ ಗ್ರಾಮದಲ್ಲಿ ನಕಲಿ ದಾಖಲೆ ಸೃಷ್ಟಿಗೆ ಸಂಬಂದಿಸಿದಂತೆ ಹುಕ್ಕೇರಿ ಸಬ್ ರಿಜಿಸ್ಟ್ರಾರ್ ಮಡಿವಾಳಯ್ಯ ಬಾನಿಮಠ ಹಾಗೂ ಬಾಂಡ್ ರೈಟರ್ ಆನಂದ ದಡ್ಡಿಮನಿ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. A …
Read More »ಮಹಾರಾಷ್ಟ್ರದಲ್ಲಿ ವಿಮಾನ ಪತನ : DCM ‘ಅಜಿತ್ ಪವಾರ್’ ಸೇರಿ 6 ಮಂದಿ ದುರ್ಮರಣ
ಬಾರಾಮತಿ: ಮಹಾರಾಷ್ಟ್ರದಲ್ಲಿ ಖಾಸಗಿ ವಿಮಾನ ಪತನಗೊಂಡು, DCM ‘ಅಜಿತ್ ಪವಾರ್’ ಸೇರಿ 6 ಮಂದಿ ದುರ್ಮರಣಕ್ಕೀಡಾಗಿದ್ದಾರೆ ಎಂದು ತಿಳಿದು ಬಂದಿದೆ.ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರು ಪ್ರಯಾಣಿಸುತ್ತಿದ್ದ ವಿಮಾನ (ಹೆಲಿಕಾಪ್ಟರ್) ಅಪಘಾತಕ್ಕೀಡಾಗಿರುವ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ ಈ ಘಟನೆಯು ಅವರ ಸ್ವಕ್ಷೇತ್ರವಾದ ಬಾರಾಮತಿಯಲ್ಲಿ ನಡೆದಿದೆ. ದುರಂತದಲ್ಲಿ ಡಿಸಿಎಂ ಅಜಿತ್ ಪವಾರ್ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಯ ವಿವರಗಳು: ಬಾರಾಮತಿ ಕ್ಷೇತ್ರದಲ್ಲಿ ಹೆಲಿಕಾಪ್ಟರ್ ಲ್ಯಾಂಡಿಂಗ್ ಆಗುವ ಸಮಯದಲ್ಲಿ ಈ …
Read More »ಅಪೆಕ್ಸ್ ನಿರ್ದೇಶಕರ ಜತೆ ಸಿಎಂ ಚಾಯ್ ಪೇ ಚರ್ಚಾ ಮಾತುಕತೆ
ಬೆಂಗಳೂರು : ಅಪೆಕ್ಸ್ ಬ್ಯಾಂಕ್ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿರುವ ಆಕಾಂಕ್ಷಿಗಳಾದ ಮಾಜಿ ಸಚಿವ ಹಾಗೂ ಶಾಸಕ ಕೆ.ಎನ್.ರಾಜಣ್ಣ ಹಾಗೂ ಪರಿಷತ್ ಸದಸ್ಯ ಎಸ್.ರವಿ ಸೇರಿ ಬ್ಯಾಂಕ್ ನಿರ್ದೇಶಕರೊಂದಿಗೆ ಸೋಮವಾರ ಸಭೆ ನಡೆಸಿದರು. ಸಂಜೆ ಚಹಾಕೂಟದ ಹೆಸರಿನಲ್ಲಿ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿರ್ದೇಶಕರೊಂದಿಗೆ ಚರ್ಚೆ ನಡೆಸಿರುವ ಸಿದ್ದರಾಮಯ್ಯ, ‘ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ಪಕ್ಷ ಯಾವುದೇ ನಿರ್ಧಾರ ತೆಗೆದುಕೊಂಡರೂ ಅದಕ್ಕೆ ಬದ್ಧವಾಗಿರಬೇಕು’ ಎಂದು …
Read More »ಡಾ. ಕೋರೆ ಅವರಿಗೆ ಪದ್ಮಶ್ರೀ – ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ
ಬೆಳಗಾವಿ- ಶಿಕ್ಷಣ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆ ಮಾಡಿದ ಬೆಳಗಾವಿಯವರೇ ಆದ ಡಾ.ಪ್ರಭಾಕರ ಕೋರೆ ಅವರಿಗೆ ಕೇಂದ್ರ ಸರ್ಕಾರ ಪದ್ಮಶ್ರೀ ಪುರಸ್ಕಾರಕ್ಕೆ ಆಯ್ಕೆ ಮಾಡಿರುವುದು ಅಭಿನಂದನೀಯವಾದುದು ಎಂದು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಹರ್ಷ ವ್ಯಕ್ತಪಡಿಸಿದರು. ಕೆಎಲ್ಇ ಸಂಸ್ಥೆಯ ಮೂಲಕ ಶೈಕ್ಷಣಿಕ ರಂಗದಲ್ಲಿ ಕೋರೆ ಅವರು ನೀಡಿರುವ ಕೊಡುಗೆ ಅವಿಸ್ಮರಣೀಯ ಮತ್ತು ಪ್ರಾತಃಸ್ಮರಣೀಯವಾಗಿದೆ. ಕೆಎಲ್ಇಯ ನೂರಾರು ಶೈಕ್ಷಣಿಕ ಸಂಸ್ಥೆಗಳ ಮೂಲಕ ಲಕ್ಷಾಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯ ರೂಪಿಸಿಕೊಳ್ಳಲು ಕೋರೆ …
Read More »ನಮ್ಮ ದೇಶದಲ್ಲಿರುವ ಕ್ರಿಕೆಟ್ ಪಂದ್ಯಕ್ಕೆ ಇರುವ ಜನಪ್ರಿಯತೆ ಬೇರೊಂದು ಕ್ರೀಡೆಗಿಲ್ಲ : ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ:ನಮ್ಮ ದೇಶದಲ್ಲಿರುವ ಕ್ರಿಕೆಟ್ ಪಂದ್ಯಕ್ಕೆ ಇರುವ ಜನಪ್ರಿಯತೆ ಬೇರೊಂದು ಕ್ರೀಡೆಗಿಲ್ಲ. ಪ್ರಪಂಚಾದ್ಯಂತ ಪಸರಿಸಿರುವ ಕ್ರಿಕೆಟ್ ಆಟವು ಪ್ರತಿ ಹಳ್ಳಿ- ಹಳ್ಳಿಗೂ, ಗಲ್ಲಿ- ಗಲ್ಲಿಗೂ ಬೆಳೆದಿದೆ ಎಂದು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಹೇಳಿದರು. ಇಲ್ಲಿಗೆ ಸಮೀಪದ ನಾಗನೂರ ಪಟ್ಟಣದ ಹೊರವಲಯದ ಸರ್ಕಾರಿ ಮಾಧ್ಯಮಿಕ ಶಾಲೆಯ ಆವರಣದಲ್ಲಿ ಗುರುವಾರ ನಾಗನೂರ ಪ್ರಿಮಿಯರ್ ಲೀಗ್ (ಎನ್ಪಿಎಲ್) ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದರು. ಕ್ರಿಕೆಟ್ ಪಂದ್ಯವು ಅಂತರರಾಷ್ಟ್ರೀಯ ಕ್ರೀಡೆಯಾಗಿದೆ. ಮೊದಲಿನ ಆಟಕ್ಕೂ, ಈಗಿರುವ …
Read More »ಕರ್ನಾಟಕ ರಾಜ್ಯ ಪತ್ರಕರ್ತರ ವೇದಿಕೆ ಗೋಕಾಕ ತಾಲೂಕು ಗೌರವಾಧ್ಯಕ್ಷರಾಗಿ ಹಿರಿಯ ಪತ್ರಕರ್ತ ಲಕ್ಷ್ಮಣ್ ಖಡಕಭಾವಿ, ಅಧ್ಯಕ್ಷರಾಗಿ ಸಂತೋಷ ಜುಟ್ಟದವರ ಆಯ್ಕೆ
ಗೋಕಾಕ : ಕರ್ನಾಟಕ ರಾಜ್ಯ ಪತ್ರಕರ್ತರ ವೇದಿಕೆ ರಿ.ಬೆಂಗಳೂರು ಇದರ ಗೋಕಾಕ ತಾಲೂಕು ಘಟಕದ ಗೌರವಾಧ್ಯಕ್ಷರಾಗಿ ಹಿರಿಯ ಪತ್ರಕರ್ತ ಲಕ್ಷ್ಮಣ ಖಡಕಭಾವಿ, ತಾಲೂಕು ಅಧ್ಯಕ್ಷರಾಗಿ ಸಂತೋಷ ಜುಟ್ಟದವರ ಅವರನ್ನು ಆಯ್ಕೆಮಾಡಲಾಯಿತು. ಸುಮಾರು 25 ವರ್ಷಗಳ ಸುದೀರ್ಘವಾಗಿ ಪತ್ರಿಕಾ ರಂಗದಲ್ಲಿ ಹಾಗೂ ನೂತನ ಡಿಜಿಟಲ್ ಮಾಧ್ಯಮದಲ್ಲಿ ತಮ್ಮದೆ ಆದ ಮಾರ್ಗದರ್ಶನ ಮಾಡಿದ ತಾಲೂಕಿನ ಹಿರಿಯ ಪತ್ರಕರ್ತ ಲಕ್ಷ್ಮಣ ಖಡಕಭಾಂವಿ ಅವರು ಗೋಕಾಕ ತಾಲೂಕು ಗೌರವಾಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ. ನಗರದಲ್ಲಿ ಸೋಮವಾರದಂದು ರಾಜ್ಯಾಧ್ಯಕ್ಷ …
Read More »ಮಠಾಧೀಶರ ವೇದಿಕೆಗೆ ಅಗತ್ಯವಿರುವ ಎಲ್ಲ ನೆರವು- ಶಾಸಕ ಬಾಲಚಂದ್ರ ಜಾರಕಿಹೊಳಿ
ಮುನ್ಯಾಳ- ರಂಗಾಪೂರ ಗ್ರಾಮದಲ್ಲಿ ಅರಭಾವಿ ಮತಕ್ಷೇತ್ರದ ಮಠಾಧೀಶರ ವೇದಿಕೆ ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ- ದೇವರು, ತಾಯಿ-ತಂದೆ, ಪೂಜ್ಯರು ಮತ್ತು ಜನರ ಆಶೀರ್ವಾದದಿಂದ ನಾವು ಜಿಲ್ಲೆಯಲ್ಲಿಯೇ ಗಟ್ಟಿಯಾಗಿ ಜನರ ಮುಂದೆ ನಿಲ್ಲಲು ಕಾರಣವಾಗಿದೆ. ಮುಂದೆಯೂ ಸಹ ಇದೇ ಆಶೀರ್ವಾದವು ಸದಾ ಕಾಲ ನಮ್ಮೇಲಿರಲಿ ಎಂದು ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಹೇಳಿದರು. ತಾಲ್ಲೂಕಿನ ಮುನ್ಯಾಳ- ರಂಗಾಪೂರ ಮಠದಲ್ಲಿ ಶನಿವಾರದಂದು ನೂತನವಾಗಿ ಅಸ್ತಿತ್ವಕ್ಕೆ ಬಂದ ಅರಭಾವಿ ಮತಕ್ಷೇತ್ರದ ಮಠಾಧೀಶರ ವೇದಿಕೆಯನ್ನು …
Read More »ಗೋಕಾಕ ತಾಲೂಕು ದಸ್ತು ಬರಹಗಾರರರಿಂದ ಅನಿರ್ದಿಷ್ಟಾವಧಿ ಮುಷ್ಕರ.
ಗೋಕಾಕ : ಕರ್ನಾಟಕ ರಾಜ್ಯದ ನೋಂದಣಿ ಮತ್ತು ಮುದ್ರಾಂಕ ಇಲಾಖೆಯಿಂದ ಪರವಾನಗಿ ಪಡೆದ ದಸ್ತು ಬರಹಗಾರರ ಒಕ್ಕೂಟದ ಕರೆ ಮೇರೆಗೆ ನಗರದ ಉಪನೋಂದಣಿ ಕಚೇರಿ ಆವರಣದಲ್ಲಿ ಶುಕ್ರವಾರದಂದು ಲೇಖನಿ ಸ್ಥಗಿತಗೊಳಿಸಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಲಾಯಿತು. ಅಧ್ಯಕ್ಷರಾದ ವಿಶ್ವಾಸ ಸುಣದೋಳಿ ಅವರು ಮಾತನಾಡಿ, ‘ಹೊರ ರಾಜ್ಯದಲ್ಲಿರುವಂತೆ ನಮ್ಮ ರಾಜ್ಯದಲ್ಲೂ ದಸ್ತು ಬರಹಗಾರರಿಗೆ ಪ್ರತ್ಯೇಕ ಲಾಗೀನ್ ನೀಡಬೇಕು. ನೋಂದಣಿ ಆಗುವ ಎಲ್ಲ ದಸ್ತಾವೇಜುಗಳಿಗೆ ಪತ್ರ ಬರಹಗಾರರು ಅಥವಾ …
Read More »ರೊಚ್ಚಿಗೆದ್ದ ದಸ್ತು ಬರಹಗಾರರು ; ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಡಿ.16ಕ್ಕೆ ಬೆಳಗಾವಿ ಚಲೋ
ಡೀಡ್ ರೈಟರ್ ಲಾಗಿನ್, ದಸ್ತಾವೇಜುಗಳಿಗೆ ಬಿ ಕಾಲಂ ಕಡ್ಡಾಯಕ್ಕೆ ಸ್ಪಂದಿಸದ ಸರ್ಕಾರ: ಆರೋಪ ಕರ್ನಾಟಕ ರಾಜ್ಯ ನೋಂದಣಿ ಮತ್ತು ಮುದ್ರಾಂಕ ಇಲಾಖೆಯಿಂದ ಪರವಾನಿಗೆ ಪಡೆದ ದಸ್ತು ಪತ್ರ ಬರಹಗಾರರ ಒಕ್ಕೂಟದಿಂದ ಚೇತನ ಹೋಟೆಲ್ನಲ್ಲಿ ಸಭೆ ನಡೆದಿದ್ದು, ರಾಜ್ಯ ಪತ್ರ ಬರಹಗಾರರ ವಿವಿಧ ಬೇಡಿಕೆಗಳ ಈಡೇರಿಸುವಂತೆ ಒತ್ತಾಯಿಸಿ ಡಿ.16ರಂದು ಬೆಳಗಾವಿ ಚಲೋ ನಡೆಸುವುದು ಸೇರಿದಂತೆ ವಿವಿಧ ನಿರ್ಣಯಗಳನ್ನು ಕೈಗೊಳ್ಳಲಾಯಿತು. ಕರ್ನಾಟಕ ರಾಜ್ಯ ನೋಂದಣಿ ಮತ್ತು ಮುದ್ರಾಂಕ ಇಲಾಖೆಯಿಂದ ಪರವಾನಿಗೆ ಪಡೆದ ದಸ್ತು …
Read More »
CKNEWSKANNADA / BRASTACHARDARSHAN CK NEWS KANNADA