ಮೂಡಲಗಿ :ಎಲ್ಲ ಜಾತಿ- ಜನಾಂಗಗಳ ಮಹಾನ್ ಪುರುಷರ ಜಯಂತಿ ಆಚರಣೆಗಳು ಒಂದೇ ವೇದಿಕೆಯಲ್ಲಿ ಅದೂ ಸರ್ವ ಸಮಾಜಗಳ ಬಂಧುಗಳ ಉಪಸ್ಥಿತಿಯಲ್ಲಿ ಅತೀ ಅದ್ದೂರಿಯಿಂದ ನಡೆಯಲು ಕಾರಣೀಕರ್ತರಾದ ಎಲ್ಲ ಸಮಾಜಗಳ ಮುಖಂಡರಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಅಭಿನಂದನೆ ಸಲ್ಲಿಸಿ, ಪ್ರತಿ ವರ್ಷವೂ ಈ ಪರಂಪರೆಯನ್ನು ಮುಂದುವರೆಸಿಕೊಂಡು ಹೋಗುವ ಅಭಿಲಾಷೆಯನ್ನು ವ್ಯಕ್ತಪಡಿಸಿದರು ಪಟ್ಟಣದ ಬಸವ ಮಂಟಪದಲ್ಲಿ ಗುರುವಾರ ಸಂಜೆ ಜರುಗಿದ ಕನ್ನಡ ಹಬ್ಬ, ಸರ್ವ ಧರ್ಮ- ಸಮಾಜಗಳ ಸತ್ಪುರುಷರ ಜಯಂತ್ಯೋತ್ಸವದ ಭಾವೈಕ್ಯತೆಯ …
Read More »ನಿಮ್ಮೆಲ್ಲರ ಪ್ರೀತಿ, ಅಭಿಮಾನಕ್ಕೆ ನಮ್ಮ ಕುಟುಂಬ ಚಿರಋಣಿ- ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ
ಗೋಕಾಕ: ಗೋಕಾಕದ ಜಾರಕಿಹೊಳಿ ಕುಟುಂಬ ಎಂದರೆ ಇಂದು ಇಡೀ ದೇಶವೇ ತಿರುಗಿ ನೋಡುವಂತಾಗಿದೆ. ಸಾವಿರಾರು ಗುರುಹಿರಿಯರ ಆಶೀರ್ವಾದ, ಸಹಸ್ರಾರು ಅಭಿಮಾನಿಗಳ ಪ್ರೀತಿ, ಕೋಟ್ಯಂತರ ಕಾರ್ಯಕರ್ತರ ವಿಶ್ವಾಸ ಇವೆಲ್ಲವೂ ನಮ್ಮ ಕುಟುಂಬದ ಬೆಂಬಲವಾಗಿದೆ ಎಂದು ಲಕ್ಷ್ಮೀ ಎಜುಕೇಷನ್ ಟ್ರಸ್ಟ್ ನಿರ್ದೇಶಕ ಹಾಗೂ ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಅವರು ಹೇಳಿದರು. ಗೋಕಾಕದ ಮಹಾಲಕ್ಷ್ಮೀ ದೇವಾಲಯದ ಸಭಾಭವನದಲ್ಲಿ ನಡೆದ ತಮ್ಮ 25ನೇ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,ನಮ್ಮ ದೊಡ್ಡಪ್ಪ, ಚಿಕ್ಕಪ್ಪ ಹಾಗೂ ತಂದೆಯವರ …
Read More »ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿ ನಾಯಕತ್ವದಿಂದ ಭಾರತವು ಜಾಗತಿಕ ಮಟ್ಟದಲ್ಲಿ ಬಲಾಢ್ಯವಾಗುತ್ತಿದೆ : ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ- ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿ ನಾಯಕತ್ವದಿಂದ ಭಾರತವು ಜಾಗತಿಕ ಮಟ್ಟದಲ್ಲಿ ಬಲಾಢ್ಯವಾಗುತ್ತಿದೆ. ಭಾರತಕ್ಕೆ ಮೋದಿಯವರು ಅವಶ್ಯವಾಗಿದ್ದು, ಅವರ ಸೇವೆಯು ನಮ್ಮ ದೇಶಕ್ಕೆ ಇನ್ನೂ ಬೇಕಿದೆ ಎಂದು ಅರಭಾವಿ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ತಿಳಿಸಿದರು. ಇಲ್ಲಿಯ ಎನ್ಎಸ್ಎಫ್ ಕಛೇರಿಯಲ್ಲಿ ಸೋಮವಾರ ಸಂಜೆ ಅರಭಾವಿ ಮಂಡಲ ಏರ್ಪಡಿಸಿದ್ದ ಬಿಎಲ್ಎ- 2 ಕಾರ್ಯಾಗಾರ ಮತ್ತು ವಿಶೇಷ ಮತದಾರರ ಪಟ್ಟಿಯ ಪರಿಷ್ಕರಣೆ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರಂತಹ …
Read More »ಜಿಲ್ಲೆಯ ಪತ್ರಕರ್ತರ ಕ್ಷೇಮಾಭಿವೃದ್ಧಿ ನಮ್ಮ ಪ್ರಮುಖ ಗುರಿ : ಜಿಲ್ಲಾಧ್ಯಕ್ಷರು ಡಾ.ಭೀಮಶಿ ಜಾರಕಿಹೊಳಿ
ಬೆಳಗಾವಿ:ಜಿಲ್ಲೆಯ ಪತ್ರಕರ್ತರ ಕ್ಷೇಮಾಭಿವೃದ್ಧಿ ನಮ್ಮ ಪ್ರಮುಖ ಗುರಿಯಾಗಿದ್ದು, ಅದರ ಭಾಗವಾಗಿ ಗುಂಪು ಆರೋಗ್ಯ ವಿಮೆ ಯೋಜನೆಯನ್ನು ಜಾರಿಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಜಿಲ್ಲಾಧ್ಯಕ್ಷ ಡಾ.ಭೀಮಶಿ ಜಾರಕಿಹೊಳಿ ಹೇಳಿದರು. ನಗರದ ವಾರ್ತಾ ಭವನದಲ್ಲಿ ಭಾನುವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2025028ನೇ ಸಾಲಿನ ಜಿಲ್ಲಾ ಘಟಕದ ಆಡಳಿತ ಮಂಡಳಿ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿ ಚುನಾವಣಾಧಿಕಾರಿಯಿಂದ ಪ್ರಮಾಣ ಪತ್ರ ಸ್ವೀಕರಿಸಿ ಅವರು ಮಾತನಾಡಿದರು. ಪತ್ರಕರ್ತರ ಸುರಕ್ಷತೆ …
Read More »*ಬೆಳಗಾವಿ ಡಿಸಿಸಿ ಬ್ಯಾಂಕಿನ ಅಧ್ಯಕ್ಷ- ಉಪಾಧ್ಯಕ್ಷರ ಚುನಾವಣೆ;ಜಾರಕಿಹೊಳಿ ಬಣ ಸಂಪೂರ್ಣ ಹಿಡಿತ; ಜೊಲ್ಲೆ, ದೊಡ್ಡಗೌಡ್ರ, ಕುಲಗೋಡೆ ಅಧ್ಯಕ್ಷ ಸ್ಥಾನದ ರೇಸಿನಲ್ಲಿ*
ಸಚಿವ ಸತೀಶ್ ಜಾರಕಿಹೊಳಿ ಅಂಪೈರ್ ಇಂದು ರಾತ್ರಿ ಜಾರಕಿಹೊಳಿಯವರ ಅಧ್ಯಕ್ಷತೆಯಲ್ಲಿ ಜರುಗುವ ಸಭೆಯಲ್ಲಿ ಸ್ಪರ್ಧಾಕಾಂಕ್ಷಿಗಳ ಹೆಸರು ಫೈನಲ್ ಬೆಳಗಾವಿ:ತೀವ್ರ ಕುತೂಹಲ ಕೆರಳಿಸಿರುವ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ- ಉಪಾಧ್ಯಕ್ಷರ ಚುನಾವಣೆಯು ನಾಳೆ ಸೋಮವಾರ ಜರುಗಲಿದೆ. ಈ ಸಂಬಂಧ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಬೆಳಗಾವಿಯ ಖಾಸಗಿ ಹೋಟೆಲಿನಲ್ಲಿ ಶನಿವಾರ ರಾತ್ರಿ ನಿರ್ದೇಶಕರ ಸಭೆ ನಡೆಸಿದರು. ನಾಳಿನ ಚುನಾವಣೆಯಲ್ಲಿ ನಮ್ಮ ಬಣದವರೇ ಎರಡೂ ಸ್ಥಾನಗಳನ್ನು ಅಲಂಕರಿಸಲಿದ್ದು, …
Read More »ಗೋಕಾಕ ನ್ಯಾಯವಾದಿಗಳ ಸಂಘದಿಂದ ಕನ್ನಡ ರಾಜ್ಯೋತ್ಸವ ಆಚರಣೆ
ಗೋಕಾಕ : ನಗರದ ನ್ಯಾಯಾಲಯ ಆವರಣದಲ್ಲಿ ಗೋಕಾಕ ನ್ಯಾಯವಾದಿಗಳ ಸಂಘದಿಂದ ಕಛೇರಿಯಲ್ಲಿ ತಾಯಿ ಭುವನೇಶ್ವರಿ ದೇವಿಗೆ ಪೂಜೆ ಸಲ್ಲಿಸುವ ಮೂಲಕ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಿದರು. ಈ ಸಮಯದಲ್ಲಿ ಸಂಘದ ಅಧ್ಯಕ್ಷರಾದ ಎಸ್ ಜಿ ಪಾಟೀಲ್ ಅವರು ಮಾತನಾಡಿ ನಾವು – ನೀವು ಎಲ್ಲರೂ ಸೇರಿ ಕನ್ನಡವನ್ನು ಬಳಸುವ, ಬೆಳೆಸುವ ಸಂಕಲ್ಪವನ್ನು ಈ ದಿನ ಸ್ವೀಕರಿಸೋಣ. ನೆಲದ ಭಾಷೆ ಮನದ ಭಾಷೆಯಾಗಲಿ, ಕನ್ನಡದ ಚಿಗುರು ಎಲ್ಲರೆದೆಯೊಳಗೆ ಮೊಳಕೆಯೊಡೆಯಲಿ ಎಂದರು. ನಮ್ಮ …
Read More »ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷರಾಗಿ ಡಾ.ಭೀಮಶಿ ಜಾರಕಿಹೊಳಿ ಅವಿರೋಧ ಆಯ್ಕೆ
ಬೆಳಗಾವಿ: ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಬೆಳಗಾವಿ ಜಿಲ್ಲಾ ಘಟಕಕ್ಕೆ 2025-28 ರ ಅವಧಿಗೆ ನಡೆದ ಚುನಾವಣೆಗೆ ಎಲ್ಲ ಹುದ್ಧೆಗಳಿಗೆ ಒಂದೊಂದೆ ನಾಮಪತ್ರ ಸಲ್ಲಿಕೆಯಾಗಿದ್ದರಿಂದ ಬಹುತೇಕ ಜಿಲ್ಲೆಯ ಎಲ್ಲ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆಯಾಗಿದ್ದು, ಅಧಿಕೃತ ಘೋಷಣೆ ಆಗಬೇಕಿದೆ. ಸಂಘದ ನೂತನ ಜಿಲ್ಲಾಧ್ಯಕ್ಷರಾಗಿ ಡಾ. ಭೀಮಶಿ ಎಲ್.ಜಾರಕಿಹೊಳಿ, ಉಪಾಧ್ಯಕ್ಷರಾಗಿ ಕುಂತಿನಾಥ ಕಲಮನಿ, ತಾನಾಜಿರಾವ್ ಮುರಂಕರ, ಭೀಮಪ್ಪ ಕಿಚಡಿ, ಪ್ರಧಾನ ಕಾರ್ಯದರ್ಶಿ ಶ್ರೀಶೈಲ ಮಠದ, ಕಾರ್ಯದರ್ಶಿಯಾಗಿ ಸದಾಶಿವ ಸಂಕಪ್ಪಗೋಳ, ರವಿ ಹುಲಕುಂದ, …
Read More »ಅರಭಾವಿ ಕ್ಷೇತ್ರದಲ್ಲಿ ಶಿಕ್ಷಣಕ್ಕೆ ಪ್ರಥಮ ಪ್ರಾಶಸ್ತ್ಯ: ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ- ಅರಭಾವಿ ಕ್ಷೇತ್ರದಲ್ಲಿ ಶಿಕ್ಷಣಕ್ಕೆ ಪ್ರಥಮ ಪ್ರಾಶಸ್ತ್ಯ ನೀಡಿದ್ದು, ಅದರಲ್ಲೂ ಬಡ ವಿದ್ಯಾರ್ಥಿಗಳಿಗೆ ಅನುಕೂಲವಾಗಲು ವಸತಿ ಶಾಲೆಗಳನ್ನು ಆರಂಭಿಸಿದ್ದು, ಇದರಿಂದ ಶಿಕ್ಷಣದ ಗುಣಮಟ್ಟವು ದಿನದಿಂದ ದಿನಕ್ಕೆ ಸುಧಾರಣೆಗೊಳ್ಳುತ್ತಿದೆ ಎಂದು ಅರಭಾವಿ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಪ್ರಶಂಸೆ ವ್ಯಕ್ತಪಡಿಸಿದರು. ತಾಲ್ಲೂಕಿನ ಸುಣಧೋಳಿ (ಬಳೋಲ ಮಡ್ಡಿ) ಗ್ರಾಮದಲ್ಲಿ ಸುಮಾರು 16 ಕೋಟಿ ರೂಪಾಯಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಿರುವ ಅಲ್ಪ ಸಂಖ್ಯಾತರ ಮೋರಾರ್ಜಿ ದೇಸಾಯಿ ವಸತಿ ಶಾಲೆಗೆ ಭೂಮಿ ಪೂಜೆಯನ್ನು ನೆರವೇರಿಸಿ …
Read More »*ಬೆಳಗಾವಿ ಡಿಸಿಸಿ ಬ್ಯಾಂಕಿನಲ್ಲಿ ಹಾಲುಮತ ಸಮಾಜಕ್ಕೆ ಪ್ರಾಶಸ್ತ್ಯ – ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಭರವಸೆ*
*ಗೋಕಾಕ-* ಬೆಳಗಾವಿ ಡಿಸಿಸಿ ಬ್ಯಾಂಕಿಗೆ ಅಪೆಕ್ಸ್ ಬ್ಯಾಂಕಿನಿಂದ ನಾಮ ನಿರ್ದೇಶನ ಮಾಡಿಕೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆಂದು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಹಾಲುಮತ ಸಮಾಜಕ್ಕೆ ಭರವಸೆ ನೀಡಿದರು. ಗುರುವಾರದಂದು ಇಲ್ಲಿನ ಎನ್ಎಸ್ಎಫ್ ಕಾರ್ಯಾಲಯದಲ್ಲಿ ಅರಭಾವಿ ಕ್ಷೇತ್ರದ ಹಾಲು ಮತ ಸಮಾಜ ಬಾಂಧವರು ನೀಡಿರುವ ಸತ್ಕಾರವನ್ನು ಸ್ವೀಕರಿಸಿ ಮಾತನಾಡಿದ ಅವರು, ಹಾಲುಮತ ಸಮಾಜಕ್ಕೆ ಸಿಗಬೇಕಿರುವ ಪ್ರಾಶಸ್ತ್ಯವನ್ನು ನೀಡಲು ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ತಿಳಿಸಿದರು. ದೇವರು ಮತ್ತು ಜಿಲ್ಲೆಯ ಸಹಕಾರಿ ಮತದಾರರ …
Read More »ರಮೇಶ ಕತ್ತಿ ವಿರುದ್ಧ ಜಾತಿ ನಿಂದನೆ ಪ್ರಕರಣ
ಬೆಳಗಾವಿ : ‘ವಾಲ್ಮೀಕಿ ಸಮುದಾಯಕ್ಕೆ ಅಶ್ಲೀಲ ಪದ ಬಳಸಿ ಅವಹೇಳನ ಮಾಡಿದ್ದಾರೆ’ ಎಂದು ಆರೋಪಿಸಿ ಮಾಜಿ ಸಂಸದ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ರಮೇಶ ಕತ್ತಿ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಿಸಲಾಗಿದೆ.ನಗರದಲ್ಲಿ ಭಾನುವಾರ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಗಳಿಗೆ ಮತದಾನ ನಡೆದಿತ್ತು.ತಮ್ಮ ಬೆಂಬಲಿಗರೊಂದಿಗೆ ಮಾತನಾಡುತ್ತಿದ್ದ ರಮೇಶ ಕತ್ತಿ ಅವರು, ಜಾರಕಿಹೊಳಿ ಸಹೋದರರನ್ನು ಟೀಕಿಸುವ ಭರದಲ್ಲಿ ಇಡೀ ವಾಲ್ಮೀಕಿ ಸಮುದಾಯಕ್ಕೆ ಅವಾಚ್ಯ ಪದ ಬಳಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಇದರ ವಿಡಿಯೊ …
Read More »
CKNEWSKANNADA / BRASTACHARDARSHAN CK NEWS KANNADA