Breaking News

Uncategorized

ಚುನಾವಣೆ ಕೆಲಸ ಮುಗಿಸಿ; ಮೂಲ ಸ್ಥಾನಕ್ಕೆ ಪೋಲಿಸ್ ಇನ್‌ಸ್ಪೆಕ್ಟರ್‌ಗಳ ವರ್ಗಾವಣೆ

ಬೆಳಗಾವಿ: ಸಾರ್ವತ್ರಿಕ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ವರ್ಗಾವಣೆಗೊಂಡಿದ್ದ ಜಿಲ್ಲೆಯ ವಿವಿಧ ಪೊಲೀಸ್ ಇನ್‌ಸ್ಪೆಕ್ಟರ್‌ಗಳನ್ನು ಮರಳಿ ಅವರ ಮೂಲ ಸ್ಥಳಕ್ಕೆ ವರ್ಗಾವಣೆಗೊಳಿಸಲಾಗಿದೆ.ಹುಬ್ಬಳ್ಳಿ ಪೂರ್ವ ಸಂಚಾರ ಠಾಣೆಗೆ ವರ್ಗಾವಣೆಗೊಂಡಿದ್ದ ಶ್ರೀಶೈಲ ಗಾಭಿ ಅವರನ್ನು ಬೆಳಗಾವಿ ಉತ್ತರ ಸಂಚಾರ ಠಾಣೆಗೆ, ಉತ್ತರ ವಲಯದ ಐಜಿಪಿ ಕಚೇರಿಯ ಹಸನ್‌ಸಾಬ್ ಮುಲ್ಲಾ ಅವರನ್ನು ರಾಯಬಾಗ ಠಾಣೆಗೆ, ಮಂಜುನಾಥ ಹಿರೇಮಠ ಅವರನ್ನು ಬೆಳಗಾವಿ ಎಪಿಎಂಸಿ ಠಾಣೆಗೆ, ಶ್ರೀನಿವಾಸ ಹಂಡ ಅವರನ್ನು ಬೆಳಗಾವಿ ಗ್ರಾಮಾಂತರ …

Read More »

ಬೆಳಗಾವಿ: 2000 ನೋಟು ಬದಲಿಸಿ ವಂಚಿಸುವ ಗ್ಯಾಂಗ್‌ ಬಂಧನ

ಬೆಳಗಾವಿ: 2 ಸಾವಿರ ಮುಖ ಬೆಲೆಯ ನೋಟುಗಳನ್ನು ಬದಲಾಯಿಸಲು ಹೆಚ್ಚುವರಿ ಒಂದು ಲಕ್ಷ ರೂ. ನೀಡುವುದಾಗಿ ಆಮಿಷವೊಡ್ಡಿ ವಂಚಿಸಿದ ಪೊಲೀಸ್‌ ಪೇದೆ ಸೇರಿ ಮೂವರನ್ನು ಬಂಧಿಸುವಲ್ಲಿ ಕಾಗವಾಡ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.   ಮಹಾರಾಷ್ಟ್ರದ ಮಿರಜ್‌ ನಗರ ಠಾಣೆ ಪೊಲೀಸ್‌ ಪೇದೆ ಸಾಗರ ಸದಾಶಿವ ಜಾಧವ(31), ಆರೀಫ ಆಜಿಜ್‌ ಸಾಗರ(34) ಹಾಗೂ ಲಿಂಗನೂರನ ಲಕ್ಷ್ಮಣ ನಾಯ್ಕ(36) ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.ಘಟನೆ ನಡೆದ 24 ಗಂಟೆಯಲ್ಲೇ ಆರೋಪಿಗಳನ್ನು ಸೆರೆ ಹಿಡಿದಿದ್ದಾರೆ.   …

Read More »

*ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ*

ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲೂಕಿನ ಚಿಕ್ಕಬೂದನೂರ ಗ್ರಾಮದಲ್ಲಿ ಶ್ರೀ ಲಕ್ಷ್ಮೀದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ …

Read More »

ಮೂರು ರೈಲುಗಳ ನಡುವೆ ಅಪಘಾತ: ಹಳಿಗಳ ಮೇಲೆ ಹೆಣಗಳ ರಾಶಿ

ಬಾಲಸೋರ್‌: ‘ರೈಲು ಹಳಿ ತಪ್ಪಿದಾಗ ಎಚ್ಚರಗೊಂಡೆ. ನನ್ನ ಮೇಲೆ ಏಕಾಏಕಿ 10-15 ಮಂದಿ ಬಿದ್ದರು. ಹೊರಗೆ ಬಂದು ನೋಡಿದರೆ ಜನರು ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಕೈಕಾಲುಗಳು ಚೆಲ್ಲಾಪಿಲ್ಲಿಯಾಗಿದ್ದವು, ಇಡೀ ಸ್ಥಳವೇ ರಕ್ತಸಿಕ್ತವಾಗಿತ್ತು.   ಒಡಿಶಾದ ಬಾಲಸೋರ್‌ನಲ್ಲಿ ನಡೆದ ಭೀಕರ ರೈಲು ದುರಂತದಲ್ಲಿ ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರೊಬ್ಬರು ಘಟನೆಯನ್ನು ಎನ್‌ಡಿಟಿವಿಗೆ ವಿವರಿಸಿದ್ದು ಹೀಗೆ.   ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮತ್ತೊಬ್ಬ ಪ್ರಯಾಣಿಕ ರೂಪಂ ಬ್ಯಾನರ್ಜಿ ಅವರು, ‘ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳೀಯರು ನೆರವಿಗೆ ಧಾವಿಸಿದರು. …

Read More »

*ಜಾರಕಿಹೊಳಿ ಬ್ರದರ್ಸ್ ಹಿರಿಯ ಸಹೋದರಿ ಲಗಮವ್ವಾ ಸುಲಧಾಳ ನಿಧನ*

ಗೋಕಾಕ: ಜಾರಕಿಹೊಳಿಯವರ ಹಿರಿಯ ಸಹೋದರಿ, ಗೋಕಾಕ ನಗರಸಭೆ ಮಾಜಿ ಅಧ್ಯಕ್ಷೆ ಲಗಮವ್ವಾ ನಿಂಗಪ್ಪಾ ಸುಲಧಾಳ (67) ಹೃದಯಾಘಾತದಿಂದ ಇಂದು ಬೆಳಗ್ಗೆ 8:00 ಗಂಟೆಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತಿ, ಇಬ್ಬರು ಪುತ್ರರು, ಓರ್ವ ಸುಪುತ್ರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತ ಲಗಮವ್ವಾ ನಿಂಗಪ್ಪಾ ಸುಲಧಾಳ ಅವರು ಗೋಕಾಕ ನಗರಸಭೆ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಮೃತರ ಅಂತ್ಯಕ್ರಿಯೆ ನಗರದ ಕುಂಬಾರ ಗಲ್ಲಿಯ ರುಧ್ರಭೂಮಿಯಲ್ಲಿ ಮಧ್ಯಾಹ್ನ 12 …

Read More »

*ಹಿಡಕಲ್ ಜಲಾಶಯದಿಂದ ಜಿಎಲ್‍ಬಿಸಿ, ಜಿಆರ್‍ಬಿಸಿ, ಸಿಬಿಸಿ ಕಾಲುವೆಗಳಿಗೆ ಕುಡಿಯುವ ನೀರಿಗಾಗಿ ನಾಳೆಯಿಂದ 5 ದಿನಗಳವರೆಗೆ 2.17 ಟಿಎಮ್‍ಸಿ ನೀರು ಬಿಡುಗಡೆ-ಶಾಸಕ ಬಾಲಚಂದ್ರ ಜಾರಕಿಹೊಳಿ*.

ಗೋಕಾಕ: ಹಿಡಕಲ್ ಜಲಾಶಯದಿಂದ ಘಟಪ್ರಭಾ ಎಡದಂಡೆ, ಬಲದಂಡೆ ಮತ್ತು ಸಿಬಿಸಿ ಕಾಲುವೆಗಳಿಗೆ ಜನ ಹಾಗೂ ಜಾನುವಾರಗಳಿಗೆ ಕುಡಿಯುವ ನೀರಿನ ಉದ್ದೇಶಕ್ಕಾಗಿ ನಾಳೆಯಿಂದ 5 ದಿನಗಳವರೆಗೆ ಒಟ್ಟು 2.17 ಟಿಎಮ್‍ಸಿ ನೀರನ್ನು ಹರಿಸಲಾಗುತ್ತಿದೆ ಎಂದು ಅರಭಾವಿ ಶಾಸಕ ಮತ್ತು ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಈ ಬಗ್ಗೆ ಗುರುವಾರ ಸಂಜೆ ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು, ಮೂಡಲಗಿ, ಗೋಕಾಕ, ಹುಕ್ಕೇರಿ, ಚಿಕ್ಕೋಡಿ, ರಾಯಬಾಗ ತಾಲೂಕುಗಳ ಬಹುಗ್ರಾಮ ಕುಡಿಯುವ ನೀರು ಸರಬುರಾಜು …

Read More »

*ಯುಪಿಎಸ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಶೃತಿ – ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ*

ಅರಭಾವಿ ಮಠ(ತಾ.ಮೂಡಲಗಿ)-ಇಲ್ಲಿಯ ಜಕ್ಕಾನಟ್ಟಿ ಮನೆತನದ ಶೃತಿ ಶಿವಾನಂದ ಯರಗಟ್ಟಿ ಇವರು ಯುಪಿಎಸ್ಸಿ ಪರೀಕ್ಷೆಯಲ್ಲಿ ದೇಶಕ್ಕೆ ೩೬೨ ರ್ಯಾಂಕ್ ಪಡೆಯುವ ಮೂಲಕ ಅರಭಾವಿ ನಾಡಿಗೆ ಕೀರ್ತಿ ತಂದಿದ್ದಾರೆ. ಮೊದಲ ಪ್ರಯತ್ನದಲ್ಲಿಯೇ ಯುಪಿಎಸ್ಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗುವ ಮೂಲಕ ಅರಭಾವಿ ಹೆಸರನ್ನು ದೇಶದ ಭೂಪಟದಲ್ಲಿ ಬರುವಂತೆ ಮಾಡಿರುವ ಹೆಗ್ಗಳಿಕೆ ಇವರದ್ದಾಗಿದೆ. ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಸ- ೩೬೨ ನೇ ರ್ಯಾಂಕ್ ಗಳಿಸುವ ಮೂಲಕ ಯುಪಿಎಸ್ ಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಅರಭಾವಿ ನೆಲದ ಶೃತಿ ಶಿ. …

Read More »

ಚುನಾವಣೆ ನಂತರ ಮತ್ತೆ ಶ್ರೇಷ್ಠ ಫೌಂಡೇಶನ್ ವತಿಯಿಂದ ಪ್ರತಿ ಶನಿವಾರ ಮತ್ತೆ ಅನ್ನ ಸಂತರ್ಪಣೆ ಪ್ರಾರಂಭ

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ   ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ನಿಂಗಾಪುರ ಗ್ರಾಮದಲ್ಲಿ ಶ್ರೀ ವಿಠ್ಠಲ ದೇವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. …

Read More »

*ಭಗೀರಥ ಪೀಠದ ಜಗದ್ಗುರು ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ*

ಗೋಕಾಕ : ಇತ್ತೀಚೆಗೆ ಗೋಕಾಕಕ್ಕೆ ಆಗಮಿಸಿದ್ದ ಹೊಸದುರ್ಗ ಭಗೀರಥ ಪೀಠದ ಜಗದ್ಗುರು ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳನ್ನು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಭೇಟಿ ಮಾಡಿ ಆಶೀರ್ವಾದ ಪಡೆದರು. ನಗರದ ಪ್ರವಾಸಿ ಮಂದಿರದಲ್ಲಿ ಜಗದ್ಗುರುಗಳನ್ನು ಭೇಟಿ ಮಾಡಿದ ಬಾಲಚಂದ್ರ ಜಾರಕಿಹೊಳಿ ಅವರು ಸುಮಾರು 20 ನಿಮಿಷ ಮಾತುಕತೆ ನಡೆಸಿದರು.  ಅರಭಾವಿಯಿಂದ ಸತತ 6ನೇ ಬಾರಿಗೆ ವಿಧಾನಸಭೆಗೆ ಆಯ್ಕೆಯಾಗಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಸತ್ಕರಿಸಿದ ಪುರುಷೋತ್ತಮಾನಂದ ಮಹಾಸ್ವಾಮಿಗಳು, …

Read More »

ಸಾರ್ವಜನಿಕರ ಮೂಲಭೂತ ಸಮಸ್ಯೆಗಳಿಗೆ ತತ್‍ಕ್ಷಣವೇ ಸ್ಪಂದಿಸಿ; ಅಧಿಕಾರಿಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸೂಚನೆ

ಮೂಡಲಗಿ: ಸಾರ್ವಜನಿಕರ ಮೂಲಭೂತ ಸಮಸ್ಯೆಗಳಿಗೆ ತತ್‍ಕ್ಷಣವೇ ಸ್ಪಂದಿಸಬೇಕು, ಸಾರ್ವಜನಿಕರಿಗೆ ಶೌಚಾಲಯ, ಒಳಚರಂಡಿ ಹಾಗೂ ಕುಡಿಯುವ ನೀರು ಸೇರಿದಂತೆ ಅಗತ್ಯವಿರುವ ಎಲ್ಲ ಮೂಲ ಸೌಕರ್ಯಗಳನ್ನು ಒದಗಿಸುವಂತೆ ಅರಭಾವಿ ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬುಧವಾರದಂದು ಇಲ್ಲಿನ ತಹಶೀಲದಾರರ ಕಛೇರಿಯಲ್ಲಿ ಜರುಗಿದ ಗೋಕಾಕ-ಮೂಡಲಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅರಭಾವಿ ಕ್ಷೇತ್ರದ ಪ್ರತಿ ಗ್ರಾ.ಪಂ ವ್ಯಾಪ್ತಿಯ ಹಳ್ಳಿಗಳಿಗೆ ಭೇಟಿ …

Read More »