ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಮೂಡಲಗಿ ತಾಲೂಕಿನ ತಿಗಡಿ ಗ್ರಾಮದಲ್ಲಿ ಶ್ರೀ ಹನುಮಾನ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ …
Read More »ರೈತರು ಕೃಷಿ ಜೊತೆಗೆ ಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡಿ ಆರ್ಥಿಕವಾಗಿ ಸಬಲರಾಗಿ : ಶಾಸಕ ರಮೇಶ ಜಾರಕಿಹೊಳಿ.
ರೈತರು ಕೃಷಿ ಜೊತೆಗೆ ಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡಿ ಆರ್ಥಿಕವಾಗಿ ಸಬಲರಾಗಿ : ಶಾಸಕ ರಮೇಶ ಜಾರಕಿಹೊಳಿ ಅವರು, ಶುಕ್ರವಾರದಂದು ತಾಲೂಕಿನ ಶಿವಾಪೂರ (ಕೊಣ್ಣೂರ) ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿ, ಹಾಲು ಉತ್ಪಾದಕರು ಉತ್ತಮ ಗುಣಮಟ್ಟದ ಹಾಲನ್ನು ಉತ್ಪಾದಿಸುವುದರ ಮೂಲಕ ಗರಿಷ್ಠ ಬೆಲೆಯನ್ನು ಪಡೆದುಕೊಳ್ಳಬೇಕು ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಹಸುಗಳ ಆರೋಗ್ಯಕ್ಕೆ ಹೆಚ್ಚಿನ ಗಮನ ನೀಡಬೇಕು. ಆರೋಗ್ಯವಂತ ಹಸುವಿನಿಂದ ಮಾತ್ರ ಉತ್ತಮ …
Read More »ವಿದ್ಯಾರ್ಥಿ ದಿಸೆಯಲ್ಲಿ ಸಮಯ ಪ್ರಜ್ಞೆ ಬಹಳ ಮುಖ್ಯ : ಬಿಇಒ ಜಿ.ಬಿ.ಬಳಗಾರ
ಗೋಕಾಕ : ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಗಾಗಿ ಸರಕಾರ ಹಲವಾರು ಯೋಜನೆಗಳನ್ನು ಕಾರ್ಯರೂಪಕ್ಕೆ ತಂದಿದೆ. ಅಂತಹ ಕಾರ್ಯಕ್ರಮಗಳಲ್ಲಿ ಪಿಕ್ನಿಕ್ ಫಜಲ್ ಬಹಳ ಉಪಯುಕ್ತ ಕಾರ್ಯಕ್ರಮವಾಗಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಮಾಡಿಕೊಂಡು ಯಶಸ್ವಿಯಾಗಬೇಕು ಎಂದು ಬಿಇಒ ಜಿ.ಬಿ.ಬಳಗಾರ ಹೇಳಿದರು. ನಗರದ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯ ಪ್ರೌಢ ವಿಭಾಗದ ಸನ್ 2022-23 ರ SSLC ವಿದ್ಯಾರ್ಥಿ ವಿದ್ಯಾರ್ಥಿನಿಯರ ಫಲಿತಾಂಶ ಸುಧಾರಣೆಗಾಗಿ ಹಮ್ಮಿಕೊಂಡ ಪಿಕ್ನಿಕ್ ಫಜಲ್ ಕಾರ್ಯಕ್ರಮವನ್ನು ಉದ್ಘಾಟಿಸಿ …
Read More »ಯುವ ನಾಯಕ ಸನತ್ ಜಾರಕಿಹೊಳಿ ಈಗ ನ್ಯಾಯವಾದಿ!
ಗೋಕಾಕ : ರಾಜ್ಯದಲ್ಲಿ ತನ್ನದೇ ಆದ ಬ್ರ್ಯಾಂಡ್ ಸೃಷ್ಟಿಸಿರುವ ಜಾರಕಿಹೊಳಿ ಕುಟುಂಬ ರಾಜ್ಯ ರಾಜಕೀಯದಲ್ಲಿ ಚರ್ಚೆಯಲ್ಲಿರುವ ಕುಟುಂಬ. ಈ ಕುಟುಂಬದ ರಮೇಶ ಜಾರಕಿಹೊಳಿ , ಸತೀಶ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ ಹಾಗೂ ಲಖನ್ ಜಾರಕಿಹೊಳಿ ಶಾಸನ ಸಭೆಯ ಸದಸ್ಯರಾಗಿ ಒಂದೇ ಕುಟುಂಬದ ನಾಲ್ಕು ಜನ ಶಾಸಕರಾಗಿ ರಾಜ್ಯ ಮತ್ತು ರಾಷ್ಟ್ರದಲ್ಲಿ ಇತಿಹಾಸ ಸೃಷ್ಟಿಸಿದ್ದಾರೆ. ಈ ಕುಟುಂಬದ ಮೂರನೇ ತಲೆಮಾರಿನ ಕುಡಿಗಳು ಸಹ ಜಾರಕಿಹೊಳಿ ಸಹೋದರರ ಮಾರ್ಗದರ್ಶನದಲ್ಲಿ ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಬಡವರ …
Read More »ಕಾರುಗಳ ಮಧ್ಯೆ ಮುಖಾ ಮುಖಿ ಡಿಕ್ಕಿ ಇಬ್ಬರು ಸ್ಥಳದಲ್ಲಿಯೇ ಸಾವು,
ಕಾರುಗಳ ಮಧ್ಯೆ ಮುಖಾ ಮುಖಿ ಡಿಕ್ಕಿ ಇಬ್ಬರು ಸ್ಥಳದಲ್ಲಿಯೇ ಸಾವು, ಒಂದು ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದ ಅಣ್ಣ ತಂಗಿ ಸ್ಥಳದಲ್ಲಿಯೇ ಸಾವು, ಗುರ್ಲಾಪುರ ಗ್ರಾಮದ ಬಳಿ ನಿಪ್ಪಾಣಿ ಮುಧೋಳ ರಾಜ್ಯ ಹೆದ್ದಾರಿ ಮೇಲೆ ಬೆಳಗಿನ ಜಾವ ನಡೆದ ಘಟನೆ, ರಾಯಭಾಗ ತಾಲೂಕಿನ ಕಪ್ಪಲಗುದ್ದಿ ಗ್ರಾಮದ ನಿವಾಸಿ ದುಂಡಪ್ಪ ಬಡಿಗೇರ,(೩೪) ಭಾಗ್ಯಶ್ರೀ ಕಂಬಾರ((೨೨) ಮೃತರು, ಧಾರವಾಡದಿಂದ ಸ್ವ ಗ್ರಾಮ ಕಪ್ಪಲಗುದ್ದಿಗೆ ವಾಪಸಾಗುತ್ತಿದ್ದ ಅಣ್ಣ ತಂಗಿ ಈ ವೇಳೆ ಲೋಕಾಪುರದಿಂದ ಪುಣೆಗೆ ತೆರಳುತ್ತಿದ್ದ …
Read More »ರಕ್ತದಾನ ಮಾಡಿ ಜೀವ ಉಳಿಸುವ ಪವಿತ್ರ ಕಾರ್ಯದಲ್ಲಿ ವಿದ್ಯಾರ್ಥಿಗಳು ಪಾಲ್ಗೋಳಬೇಕು : ಸನತ ಜಾರಕಿಹೊಳಿ
ಎಲ್ಲಾ ದಾನಗಳಲ್ಲಿ ರಕ್ತದಾನ ಶ್ರೇಷ್ಠವಾಗಿದ್ದು, ರಕ್ತದಾನ ಮಾಡಿ ಜೀವ ಉಳಿಸುವ ಪವಿತ್ರ ಕಾರ್ಯದಲ್ಲಿ ವಿದ್ಯಾರ್ಥಿಗಳು ಪಾಲ್ಗೋಳುವಂತೆ ಲಕ್ಷ್ಮೀ ಎಜ್ಯುಕೇಷನ್ ಟ್ರಸ್ಟ್ ನ ವ್ಯವಸ್ಥಾಪಕ ನಿರ್ದೇಶಕ ಸನತ ಜಾರಕಿಹೊಳಿ ಹೇಳಿದರು. ಬುಧವಾರದಂದು ನಗರದ ಲಕ್ಷ್ಮೀ ಎಜ್ಯುಕೇಷನ್ ಸಭಾಂಗಣದಲ್ಲಿ ಎಚ್.ಡಿ.ಎಫ್.ಸಿ ಬ್ಯಾಂಕ್ , ರೋಟರಿ ಸಂಸ್ಥೆ ಹಾಗೂ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪದವಿ ಮಹಾವಿದ್ಯಾಲಯದ ಎನ್.ಎಸ್.ಎಸ್ ಘಟಕದ ಇವುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ರಕ್ತವನ್ನು ಉತ್ಪಾದಿಸಲು …
Read More »ನಗರದಲ್ಲಿ ಹೆಚ್ಚುತ್ತಿರುವ ಬಿಡಾಡಿ ದನಗಳ ಮತ್ತು ಬೀದಿ ನಾಯಿಗಳ ಹಾವಳಿ ತಡೆಯಲು ಸೂಕ್ತ ಕ್ರಮ ಕೈಗೊಳ್ಳಿ : ಶಾಸಕ ರಮೇಶ ಜಾರಕಿಹೊಳಿ ಸೂಚನೆ
ಗೋಕಾಕ ಡಿ 3 : ಕ್ಷೇತ್ರದ ಜನರ ಸಮಸ್ಯೆಗಳಿಗೆ ಸ್ವಂದಿಸಿ ಸರಕಾರಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರುವಂತೆ ಶಾಸಕ ರಮೇಶ ಜಾರಕಿಹೊಳಿ ಅವರು ಹೇಳಿದರು ಶನಿವಾರದಂದು ನಗರದ ಶಾಸಕರ ಕಛೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಸರಕಾರ ಜನರ ಹಿತಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿಗೊಳಿಸುತ್ತಿದ್ದು, ಅವುಗಳನ್ನು ಗುಣಮಟ್ಟದೊಂದಿಗೆ ತ್ವರಿತಗತಿಯಲ್ಲಿ ಅಧಿಕಾರಗಳು ಅನುಷ್ಠಾನಗೊಳಿಸಬೇಕು ಎಂದ ಅವರು ನಗರದಲ್ಲಿ ಹೆಚ್ಚುತ್ತಿರುವ ಬಿಡಾಡಿ ದನಗಳ ಮತ್ತು ಬೀದಿ ನಾಯಿಗಳ ಹಾವಳಿಯನ್ನು …
Read More »ಮಹಾರಾಷ್ಟ್ರ ಗಡಿಬಾಗದ ಕನ್ನಡಿಗರಿಗೆ ಕರವೇ ಆಹ್ವಾನ: ಮುಖ್ಯಮಂತ್ರಿ ಬೇಟಿಗೆ ಮುಂದಿನ ವಾರ ಬೆಂಗಳೂರಿಗೆ ಮಹಾ ಕನ್ನಡಿಗರ ನಿಯೋಗ : ಮಹಾದೇವ ಅಂಕಲಗಿ
ಬೆಳಗಾವಿ ನ 30 : ಗಡಿಭಾಗದ ಕನ್ನಡಿಗರ ಸಮಸ್ಯೆ ಆಲಿಸಲಿಕ್ಕೆ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಡಿಸೆಂಬರ್ ಮೊದಲನೇ ವಾರದಲ್ಲಿ ಮಹಾರಾಷ್ಟ್ರ ಕನ್ನಡರಿಗೆ ಆಹ್ವಾನ ನೀಡಿದ್ದಾರೆ ಎಂದು ಸಾಂಗ್ಲಿ ಎಪಿಎಂಸಿ ಮಾಜಿ ಉಪಾಧ್ಯಕ್ಷ ಹಾಗೂ ಕನ್ನಡ ಹೋರಾಟಗಾರ ಮಹಾದೇವ ಅಂಕಲಗಿ ಹೇಳಿದರು. ಬುಧವಾರದಂದು ಮಹಾರಾಷ್ಟ್ರ ರಾಜ್ಯದ ಜತ್ತ ತಾಲೂಕಿನ ಮಡಗ್ಯಾಳ ಗ್ರಾಮದಲ್ಲಿ ಕರವೇ ಗೋಕಾಕ ತಾಲೂಕು ಘಟಕದ ಅಧ್ಯಕ್ಷ ಬಸವರಾಜ ಖಾನಪ್ಪನವರ ಅವರಿಂದ ಸತ್ಕಾರ ಸ್ವೀಕರಿಸಿ ಅವರು …
Read More »ಕುತೂಹಲ ಮೂಡಿಸಿದ ಜೋಶಿ, ಶೆಟ್ಟರ್, ಜಾರಕಿಹೊಳಿ ಭೇಟಿ!
ಹುಬ್ಬಳ್ಳಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಭೇಟಿಯಾಗಿದ್ದು, ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ. ಹುಟ್ಟುಹಬ್ಬದ ನೆಪದಲ್ಲಿ ಭಾನುವಾರ ರಾತ್ರಿ ಕೇಂದ್ರ ಸಚಿವರನ್ನು ಭೇಟಿಯಾಗಿದ್ದಾರೆ. ಪ್ರಹ್ಲಾದ್ ಜೋಶಿ ಮತ್ತು ಜಗದೀಶ್ ಶೆಟ್ಟರ್ ಭೇಟಿಯಾದ ರಮೇಶ್ ಜಾರಕಿಹೊಳಿ ಭಾನುವಾರ ರಾತ್ರಿ ಜೋಶಿ ನಿವಾಸಕ್ಕೆ ಆಗಮಿಸಿದ ಜಾರಕಿಹೊಳಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸೇರಿದಂತೆ ಹಲವರ ಜೊತೆ ಕೆಲಹೊತ್ತು ಮಾತುಕತೆ ನಡೆಸಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಮೇಲ್ನೋಟಕ್ಕೆ …
Read More »*ರೈತರ ಪ್ರೋತ್ಸಾಹ ಧನ ಹೆಚ್ಚಳಕ್ಕೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸರ್ಕಾರಕ್ಕೆ ಮನವಿ*
*ರೈತರ ಪ್ರೋತ್ಸಾಹ ಧನ ಹೆಚ್ಚಳಕ್ಕೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸರ್ಕಾರಕ್ಕೆ ಮನವಿ* *ಡಾ.ವರ್ಗಿಸ್ ಕುರಿಯನ್ ಜನ್ಮ ದಿನಾಚರಣೆ ನಿಮಿತ್ಯ ರಾಷ್ಟ್ರೀಯ ಹಾಲು ದಿನಾಚರಣೆ ಕಾರ್ಯಕ್ರಮದಲ್ಲಿ ಈ ಹೇಳಿಕೆ ನೀಡಿದ ಬಾಲಚಂದ್ರ ಜಾರಕಿಹೊಳಿ* ಬೆಂಗಳೂರು: ಹೈನುಗಾರಿಕೆಯಲ್ಲಿ ರೈತರು ಎದುರಿಸುತ್ತಿರುವ ಸಂಕಷ್ಟಗಳನ್ನು ನಿವಾರಿಸಲು ಕೆಎಂಎಫ್ನಿಂದ ನಂದಿನಿ ಹಾಲನ್ನು ಪ್ರತಿ ಲೀಟರ್ 2 ರೂ.ಗೆ ಹೆಚ್ಚಳ ಮಾಡಲಾಗಿದ್ದು, ಈಗಾಗಲೇ ಸರ್ಕಾರ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹ ಧನವನ್ನು ಹೆಚ್ಚಿಸುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ …
Read More »
CKNEWSKANNADA / BRASTACHARDARSHAN CK NEWS KANNADA