Breaking News

Uncategorized

ಕೊಣ್ಣೂರು ನೂತನ ಪುರಸಭೆ ಉಪಾಧ್ಯಕ್ಷ , ಸ್ಥಾಯಿ ಸಮಿತಿ ಚೇರಮನ್ ರಿಂದ ಶಾಸಕ ರಮೇಶ್ ಜಾರಕಿಹೊಳಿ ಅವರಿಗೆ ಸನ್ಮಾನ!

ಗೋಕಾಕ: ತಾಲೂಕಿನ ಕೊಣ್ಣೂರ ಪುರಸಭೆ ಉಪಾಧ್ಯಕ್ಷ ರಾಜಿನಾಮೆಯಿಂದ ತೆರವಾದ ಸ್ಥಾನಕ್ಕೆ ಮತ್ತು ಸ್ಥಾಯಿ ಸಮಿತಿ ಚೇರಮನ ಸ್ಥಾನಕ್ಕೆ ಶಾಸಕ ರಮೇಶ ಜಾರಕಿಹೊಳಿ ಅವರ ಸಲಹೆಯಂತೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರ ಮಾರ್ಗರ್ಶನದಲ್ಲಿ ಅವಿರೋಧ ಆಯ್ಕೆ ಪ್ರಕ್ರೀಯೆ ಜರುಗಿದೆ. ಕೊಣ್ಣೂರು ಪುರಸಭೆ ಉಪಾಧ್ಯಕ್ಷರಾಗಿ ಅಶೋಕ ಕುಮಾರನಾಯ್ಕ, ಸ್ಥಾಯಿ ಸಮಿತಿ ಚೇರಮನ್ನರಾಗಿ ಇಮ್ರಾನ್ ಜಮಾದಾರ ಅವಿರೋಧವಾಗಿ ಆಯ್ಕೆಯಾದರು. ಶಾಸಕ ರಮೇಶ ಜಾರಕಿಹೊಳಿ ಅವರ ಕಚೇರಿಗೆ ಭೇಟಿ ನೀಡಿದ ಆಯ್ಕೆಯಾದ ಅಭ್ಯರ್ಥಿಗಳು ಶಾಸಕರನ್ನು …

Read More »

ಅಂಕಲಗಿ ಜಾತ್ರೆಯಲ್ಲಿ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಭಾಗಿ.!

ಗೋಕಾಕ: ತಾಲೂಕಿನ ಅಂಕಲಗಿ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಿ ಹಾಗೂ ಶ್ರೀ ದ್ಯಾಮವ್ವದೇವಿ ಜಾತ್ರಾಮಹೋತ್ಸವದಲ್ಲಿ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಭಾಗವಹಿಸಿ ಗ್ರಾಮದೇವತೆಗೆ ವಿಶೇಷ ಪೂಜೆ ಸಲ್ಲಿಸಿ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಅಂಕಲಗಿ ಗ್ರಾಮ ದೇವತೆಯ ಜಾತ್ರಾ ಕಮೀಟಿಯ ಸದಸ್ಯರುಗಳು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರನ್ನು ಸನ್ಮಾನಿಸಿದರು. ಶಾಸಕರ ಆಪ್ತ ಸಹಾಯಕ ಭೀಮಗೌಡ ಪೋಲಿಸಗೌಡರ, ನಿರ್ವಾಣಿ, ಪಟ್ಟಣಶೆಟ್ಟಿ, ಘೋಡಗೇರಿ ಸೇರಿದಂತೆ ಅಂಕಲಗಿ ಗ್ರಾಮಸ್ಥರು, …

Read More »

ಹಿಡಕಲ್ ಜಲಾಶಯದಿಂದ ಜಿಆರ್‌ಬಿಸಿ, ಜಿಎಲ್‌ಬಿಸಿ, ಸಿಬಿಸಿ ಕಾಲುವೆಗಳಿಗೆ ನೀರು ಬಿಡಲು ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮನವಿ

ಜನ ಹಾಗೂ ಜಾನುವಾರಿಗಳಿಗೆ ಕುಡಿಯುವ ನೀರಿಗಾಗಿ 10 ದಿನಗಳವರೆಗೆ ನೀರು ಬಿಡಲು ಪ್ರಾದೇಶಿಕ ಆಯುಕ್ತರಿಗೆ ಮನವಿ ಮಾಡಿಕೊಂಡಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ   ಜಿಆರ್‌ಬಿಸಿಗೆ 2000 ಕ್ಯೂಸೆಕ್ಸ್, ಜಿಎಲ್‌ಬಿಸಿಗೆ 2400 ಕ್ಯೂಸೆಕ್ಸ್, ಸಿಬಿಸಿಗೆ 500 ಕ್ಯೂಸೆಕ್ಸ್ ನೀರು ಬಿಡಲು ಮನವಿ   ಮೂಡಲಗಿ: ಹಿಡಕಲ್ ಜಲಾಶಯದಿಂದ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರನ್ನು ತಕ್ಷಣವೇ ಘಟಪ್ರಭಾ ಎಡದಂಡೆ, ಘಟಪ್ರಭಾ ಬಲದಂಡೆ ಮತ್ತು ಸಿಬಿಸಿ ಕಾಲುವೆಗಳಿಗೆ ನೀರನ್ನು ಬಿಡುಗಡೆ ಮಾಡುವಂತೆ ಕೆಎಮ್‌ಎಫ್ …

Read More »

ಲಂಚ ಪಡೆಯುತ್ತಿದ್ದ ಟ್ರಾಫಿಕ್ ಮಹಿಳಾ ಇನ್ಸ್‌ಪೆಕ್ಟರ್ ಎಸಿಬಿ ಬಲೆಗೆ!

ಬೆಂಗಳೂರು: 20 ಸಾವಿರ ಲಂಚ ಪಡೆಯುತ್ತಿದ್ದ ಟ್ರಾಫಿಕ್ ಮಹಿಳಾ ಇನ್ಸ್‌ಪೆಕ್ಟರ್ ಎಸಿಬಿ ಬಲೆಗೆ ಬಿದ್ದಿದ್ದಾರೆ‌. ಚಿಕ್ಕಜಾಲ ಟ್ರಾಫಿಕ್‌ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಹಂಸವೇಣಿ ಎಸಿಬಿ ಅಧಿಕಾರಿಗಳ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು, ವಶಕ್ಕೆ‌ ಪಡೆದುಕೊಂಡು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.ಚಿಕ್ಕಜಾಲ‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗೇಲ್‌ ಗ್ಯಾಸ್ ಕಂಪನಿ ವತಿಯಿಂದ ನೈಸರ್ಗಿಕ ಅನಿಲ ಪೈಪ್ ಅಳವಡಿಕೆಗೆ ರಸ್ತೆ ಬದಿ ನೆಲ ಅಗೆಯಲು ಮುಂದಾಗಿದ್ದರು‌. ಈ ಬಗ್ಗೆ ಅನುಮತಿ ಪಡೆಯಲು ಸಂಚಾರಿ …

Read More »

ಮಠಗಳಿಗೆ ಪರ್ಸೇಂಟೇಜ್ ಬೇಡಿಕೆಯನ್ನು ಯಾರು ಇಟ್ಟಿಲ್ಲ : ಹಿಂದುಳಿದ ವರ್ಗಗಳ ಮಠಾಧೀಶರು!

ಚಿತ್ರದುರ್ಗ: ಕರ್ನಾಟಕದ ಮಟ್ಟಿಗೆ ದಲಿತ ಮಠಗಳ ಪರಂಪರೆಯಲ್ಲಿ ದಲಿತ, ಹಿಂದುಳಿದ ಮಠಮಾನ್ಯಗಳು ಕೇವಲ ೨-೩ ದಶಕಗಳ ಇತ್ತೀಚಿನ ಇತಿಹಾಸ ಹೊಂದಿರುವುದು ನಾಡಿಗೆ ತಿಳಿದ ವಿಚಾರ. ಅಂತಹ ಸಂದರ್ಭದಲ್ಲಿ ಆರ್ಥಿಕವಾಗಿ, ಸ್ಥಿತಿವಂತ ಸಮುದಾಯಗಳು ಮಠಮಾನ್ಯಗಳ ಕಟ್ಟುವ ಪ್ರಕ್ರಿಯೆಯಲ್ಲಿ ತೊಡಗಿಕೊಂಡ ಸಂದರ್ಭದಲ್ಲಿ ನಿರೀಕ್ಷೆಯಂತೆ ಮುನ್ನಡೆ ಆಗಲಿಲ್ಲ. ಇಂತಹ ಸಂದರ್ಭದಲ್ಲಿ ಶೋಷಿತ ಸಮುದಾಯಗಳು ಮಠಮಾನ್ಯಗಳ ಮೂಲಕ ಶೈಕ್ಷಣಿಕ, ಧಾರ್ಮಿಕ, ಸಾಮಾಜಿಕ ಮತ್ತು ಆರ್ಥಿಕ ಪ್ರಗತಿಯಲ್ಲಿ ಸಮಾಜವನ್ನು ಮುಖ್ಯವಾಹಿನಿಗೆ ತರಲು ಸಂಕಲ್ಪತೊಟ್ಟಿದ್ದರು ಕೂಡ ಆರ್ಥಿಕವಾದ ಬೆಂಬಲ …

Read More »

ದಿಂಗಾಲೇಶ್ವರ ಶ್ರೀಗಳು .30 ರಷ್ಟು ಲಂಚ ಕೊಟ್ಟು ತಪ್ಪಲ್ಲವೇ :ಯತ್ನಾಳ್

ವಿಜಯಪುರ: ರಾಜ್ಯ ಸರ್ಕಾರದ ವಿರುದ್ಧ ಶೇ.30 ಕಮಿಷನ್ ಆರೋಪ ಮಾಡಿರುವ ದಿಂಗಾಲೇಶ್ವರ ಶ್ರೀಗಳು, ಯಾರಿಗೆ ಕೊಟ್ಟರು, ಎಲ್ಲಿ ಕೊಟ್ಟರು ಎಷ್ಟು ಕೊಟ್ಟರು ಎಂಬುದಕ್ಕೆ ಸಾಕ್ಷಿ ನೀಡಲಿ. ನೀವೇಕೆ ಶೇ.30 ರಷ್ಟು ಲಂಚ ಕೊಟ್ಟು ಅನುದಾನ ಪಡೆದಿರಿ. ಅದು ತಪ್ಪಲ್ಲವೇ ಎಂಬುದನ್ನು ಸಮಾಜಕ್ಕೆ ಹೇಳಬೇಕು ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹಿಸಿದ್ದಾರೆ.ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಓರ್ವ ಮಠಾಧೀಶರಾಗಿ ಸತ್ಯ, ನ್ಯಾ, ನೀತಿ, ಧರ್ಮದ ಬಗ್ಗೆ ಪ್ರವಚನ ನೀಡುವ …

Read More »

ಬೆಳಗಾವಿಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಗೆ ಬೃಹತ್ ಗಾತ್ರದ ಮರ ಧರೆಗೆ!

ಬೆಳಗಾವಿ : ಕುಂದಾನಗರಿ ಬೆಳಗಾವಿಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಗೆ ಬೃಹತ್ ಗಾತ್ರದ ಮರವೊಂದು ಧರೆಗುರುಳಿದ್ದು ಪರಿಣಾಮ ಇಬ್ಬರು ಗಂಭೀರ ಗಾಯಗೊಂಡಿದ್ದು, ರಸ್ತೆ ಬದಿ ನಿಲ್ಲಿಸಿದ್ದ ಸುಮಾರು ಐವತ್ತಕ್ಕೂ ಹೆಚ್ಚಿನ ದ್ವಿಚಕ್ರ ವಾಹನಗಳು ಜಖಂಗೊಂಡಿದೆ. ಮಂಗಳವಾರ ಆರಂಭವಾದ ಬಿರುಗಾಳಿಗೆ ಜಿಲ್ಲಾಸ್ಪತ್ರೆ ಮುಂಭಾಗದ ರಸ್ತೆ ಬದಿಯಲ್ಲಿದ್ದ ಬೃಹತ್ ಮರವೊಂದು ಬಿದ್ದಿದೆ ಪರಿಣಾಮ ರಸ್ತೆ ಬದಿ ನಿಲ್ಲಿಸಿದ್ದ ಸುಮಾರು ಐವತ್ತಕ್ಕೂ ಹೆಚ್ಚಿನ ದ್ವಿಚಕ್ರ ವಾಹನಗಳು ಮರದ ಅಡಿಯಲ್ಲಿ ಸಿಲುಕಿಕೊಂಡಿವೆ, ಅಲ್ಲದೆ ಘಟನೆಯಲ್ಲಿ ಇಬ್ಬರಿಗೆ …

Read More »

ಪ್ರಧಾನಿ ಮೋದಿಯವರ ಜನಪರ ಯೋಜನೆಗಳನ್ನು ತಲುಪಿಸಲು ಶ್ರಮಿಸಿ-ರಮೇಶ ಜಾರಕಿಹೊಳಿ.!

ಗೋಕಾಕ: ಪ್ರಧಾನಿ ಮೋದಿಯವರ ಜನಪರ ಯೋಜನೆಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗಳಿಗೆ ತಲುಪಿಸಲು ಕಾರ್ಯಕರ್ತರು ಶ್ರಮಿಸಬೇಕು ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ಭಾರತೀಯ ಜನತಾ ಪಾರ್ಟಿಯ ನಗರ ಹಾಗೂ ಗ್ರಾಮೀಣ ಮಂಡಲಗಳ ಮಹಿಳಾ ಮೋರ್ಚಾ ವತಿಯಿಂದ ಹಮ್ಮಿಕೊಂಡ ಸಾಮಾಜಿಕ ನ್ಯಾಯ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.ಸಾಮಾಜಿಕ ನ್ಯಾಯದೊಂದಿಗೆ ಬಿಜೆಪಿ ನೇತ್ರತ್ವದ ಕೇಂದ್ರ ಹಾಗೂ ರಾಜ್ಯ ಸರಕಾರ ಹಲವಾರು ಯೋಜನೆಗಳ ಜಾರಿಗೊಳಿಸುತ್ತಿದ್ದು, ಅವುಗಳನ್ನು ಜನತೆಯಲ್ಲಿ ಅರಿವು ಮೂಢಿಸಿ ಅವರಿಗೆ ತಲುಪಿಸಲು …

Read More »

ಪಿಎಸ್​ಐ ಹುದ್ದೆಗಳ ನೇಮಕಾತಿ ಅಕ್ರಮ ಪ್ರಕರಣ ಬಗೆದಷ್ಟೂ ಆಳ!

ಬೆಂಗಳೂರು: 545 ಪಿಎಸ್​ಐ ಹುದ್ದೆಗಳ ನೇಮಕಾತಿ ಅಕ್ರಮ ಪ್ರಕರಣ ಬಗೆದಷ್ಟೂ ಆಳ ಎಂಬಂತಾಗಿದ್ದು, ಈ ಅಕ್ರಮ‌ ಬಯಲಿಗೆ ಬಂದಿದ್ದಾದ್ರು ಹೇಗೆ? ಎಂಬ ಕುತೂಹಲಕಾರಿ ಪ್ರಶ್ನೆಗೆ ಉತ್ತರ ಇಲ್ಲಿದೆ. 20 ಅಂಕಕ್ಕೆ ಉತ್ತರ ಬಿಡಿಸಿದ್ದ ಪಿಎಸ್​ಐ ಪರೀಕ್ಷಾರ್ಥಿ ವೀರೇಶ್​ನ OMR ಶೀಟ್ ಹೊರಬಂದಿದ್ದಾದ್ರು ಹೇಗೆ ಗೊತ್ತಾ?ಖುದ್ದು ವೀರೇಶ್ ಸ್ನೇಹಿತನಿಂದಲೇ ಪರೀಕ್ಷೆಯಲ್ಲಿನ ಅಕ್ರಮ ಬಯಲಾಗಿದೆ. ಎಲ್ಲರತೆ ವೀರೇಶ್ ಕೂಡ ಪಿಎಸ್‌ಐ ಪರೀಕ್ಷೆಯನ್ನ ಕಟ್ಟಿ ಎಕ್ಸಾಂಗೆ ಸಿದ್ಧತೆ ಮಾಡಿಕೊಂಡಿದ್ದ. ಕಲಬುರಗಿಯ ಜ್ಞಾನ ಜ್ಯೋತಿ ಶಾಲೆಯ …

Read More »

ಗುತ್ತಿಗೆದಾರ ಸಂತೋಷ ಪಾಟೀಲ ಆತ್ಮಹತ್ಯೆ ‌ಪ್ರಕರಣ ತನಿಖೆ ಚುರುಕು!

ಹಿಂಡಲಗಾ ಪಿಡಿಒ ವಸಂತಕುಮಾರಿ ವಿಚಾರಣೆಗೆ! ಬೆಳಗಾವಿ : ಗುತ್ತಿಗೆದಾರ ಸಂತೋಷ ಪಾಟೀಲ ಆತ್ಮಹತ್ಯೆ ‌ಪ್ರಕರಣ ತನಿಖೆ ತೀವ್ರಗೊಂಡಿದೆ. ‌ಕಳೆದ ಮೂರು ದಿನಗಳಿಂದ ಬೆಳಗಾವಿಯಲ್ಲಿ ಠಿಕಾಣಿ ಹೂಡಿರುವ ಉಡುಪಿ ಪೊಲೀಸರು ‌ತನಿಖೆ ತೀವ್ರಗೊಳಿಸಿದ್ದಾರೆ. ಇಂದು ಹಿಂಡಲಗಾ ‌ಗ್ರಾಪಂಗೆ ಭೇಟಿ ನೀಡಿರುವ ಪೊಲೀಸರು, ‌ಪಿಡಿಒ ವಸಂತಕುಮಾರಿ ವಿಚಾರಣೆ ನಡೆಸಿದ್ದಾರೆ. ಉಡುಪಿ ಟೌನ್ ಇನ್ಸ್‌ಪೆಕ್ಟರ್ ಶರಣಗೌಡ ನೇತೃತ್ವದ ತಂಡ ಪಿಡಿಒ ವಸಂತಕುಮಾರಿ ಅವರಿಂದ ಪ್ರಕರಣದ ಕುರಿತು ಹಲವು ಮಾಹಿತಿಯನ್ನು ಪಡೆಯಲಾಗಿದೆ.   ಸಂತೋಷ್ ಪಾಟೀಲ್ …

Read More »