Breaking News

Uncategorized

ಪೋಲಿಸರ ಭರ್ಜರಿ ಬೇಟೆ.! ಅಂದರ್ ಬಾಹರ್ ಆಟಗಾರರು ಅಂದರ್.!

ಗೋಕಾಕ: ಮಂಗಳವಾರ ರಾತ್ರಿ ಭರ್ಜರಿ ಬೇಟೆಯಾಡಿದ ಗೋಕಾಕ ಪೋಲಿಸರು ಸಾರ್ವಜನಿಕ ಸ್ಥಳದಲ್ಲಿ ಅಂದರ್ ಬಾಹರ್ ಜೂಜಾಟದಲ್ಲಿ ತೋಡಗಿದ್ದ ೨೬ಜನರು ಬಂಧಿಸಿ, ೧ಲಕ್ಷಕ್ಕೂ ಹೆಚ್ಚು ಹಣ ವಶಪಡಿಸಿಕೊಂಡಿದ್ದಾರೆ. ಬೆಳಗಾವಿ ಎಸ್‌ಪಿ ಲಕ್ಷ್ಮಣ ನಿಂಬರಗಿ ಮಾರ್ಗದರ್ಶನದಲ್ಲಿ ಪ್ರೋಬೇಷನರಿ ಡಿವೈಎಸ್‌ಪಿ ಡಿ ಎಚ್ ಮುಲ್ಲಾ ಮತ್ತು ಸಿಪಿಐ ಗೋಪಾಲ ರಾಠೋಡ ನೇತ್ರತ್ವದಲ್ಲಿ ದೀಪಾವಳಿ ಕಡೆಯ ಪಾಡ್ಯ ಹಬ್ಬದ ದಿನದಂದು ಏಕಕಾಲಕ್ಕೆ ನಾಲ್ಕು ಕಡೆ ದಾಳಿ ನಡೆಸಿದ್ದು, ಜೂಜಾಟದಲ್ಲಿ ತೋಡಗಿದ್ದವರನ್ನು ಬಂಧಿಸಿದ್ದಾರೆ. ನಾಲ್ವರು ಸ್ಥಳದಿಂದ ಪರಾರಿಯಾಗಿದ್ದಾರೆ. …

Read More »

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸಮಾಲೋಚನೆ

ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಬೆಂಗಳೂರಿನ ಸದಾಶಿವ ನಗರದಲ್ಲಿರುವ ಅವರ ನಿವಾಸದಲ್ಲಿ ಬುಧವಾರ ಭೇಟಿಯಾಗಿ ಸಮಾಲೋಚನೆ ನಡೆಸಿದರು. ಹಾನಗಲ್ ಹಾಗೂ ಸಿಂದಗಿ ಉಪಚುನಾವಣೆಯ ನಂತರ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿರಲಿಲ್ಲ. ಹೀಗಾಗಿ, ಸತೀಶ ಜಾರಕಿಹೊಳಿಯವರು ಇಂದು ಭೇಟಿಯಾಗಿ ವಿವಿಧ ವಿಷಯಗಳ ಕುರಿತು ಚರ್ಚಿಸಿದ್ದಾರೆ. ವಿಧಾನ ಪರಿಷತ್ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದುಕೊಂಡಿದೆ. ಮೇಲ್ಮನೆ ಚುನಾವಣೆಯನ್ನು ಯಾವ …

Read More »

ಕರ್ನಾಟಕ ವಿಧಾನಪರಿಷತ್ತಿನ ಚುನಾವಣೆಗೆ ದಿನಾಂಕ ನಿಗದಿ!

ಬೆಂಗಳೂರು: ದಿನಾಂಕ 05-01-2022ರಂದು ಕೊನೆಗೊಳ್ಳಲಿರುವಂತ ಕರ್ನಾಟಕ ವಿಧಾನಪರಿಷತ್ತಿನ 25 ಸ್ಥಾನಗಳಿಗೆ ದಿನಾಂಕ 10-12-2021ರಂದು ಚುನಾವಣೆ ನಿಗದಿ ಪಡಿಸಲಾಗಿದೆ. ದಿನಾಂಕ 14-12-2021ರಂದು ಚುನಾವಣೆಯ ಮತಎಣಿಕೆ ಕಾರ್ಯ ನಡೆಯಲಿದ್ದು, ಅಂದೇ ಫಲತಾಂಶ ಪ್ರಕಟಗೊಳ್ಳಲಿದೆ. ಈ ಕುರಿತಂತೆ ಕೇಂದ್ರ ಚುನಾವಣಾ ಆಯೋಗವು ( Election Commission of India ) ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ 16-11-2021ರಂದು ಕರ್ನಾಟಕ ವಿಧಾನ ಪರಿಷತ್ತಿನ 25 ಸ್ಥಾನಗಳಿಗೆ ಚುನಾವಣೆ ( Legislative Council Election ) …

Read More »

ವೈ.ಬಿ. ಪಾಟೀಲ್ ಅವರ ಪತ್ನಿ ನಿಧನ!

ಬೆಳಗಾವಿ: ರಾಯಚೂರು ಜಿಲ್ಲೆಯ ಮಂಚಲಾಪೂರ ಗ್ರಾಮದ ವೈ.ಬಿ. ಪಾಟೀಲ್ ಅವರ ಪತ್ನಿ ಭಾಗ್ಯಲಕ್ಷ್ಮಿ ಪಾಟೀಲ್ (70) ಅವರು ಇಂದು ಬೆಳಗಿನ ಜಾವ ನಿಧನರಾಗಿದ್ದಾರೆ. ಇವರು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಅತ್ತೆಯಾಗಿದ್ದಾರೆ. (ಶ್ರೀಮತಿ ಶಕುಂತಲಾ ಸತೀಶ ಜಾರಕಿಹೊಳಿಯವರ ತಾಯಿ). ಕೆಲದಿನಗಳಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಪಾರ್ಥಿವ ಶರೀರವನ್ನು ಬೆಂಗಳೂರಿನಿಂದ ರಾಯಚೂರು ಜಿಲ್ಲೆಯ ಮಂಚಲಾಪೂರ ಗ್ರಾಮಕ್ಕೆ ತರಲಾಗುತ್ತಿದ್ದು, ನಾಳೆ ಬೆಳಿಗ್ಗೆ …

Read More »

ಗೋ ಮಾತೆಗೆ ಪೂಜೆ ಸಲ್ಲಿಸಿದ ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ.

ಗೋಕಾಕ್- ದೀಪಾವಳಿ ಬಲಿ ಪಾಡ್ಯಮಿ ದಿನವಾದ ಇಂದು ಶುಕ್ರವಾರದಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿಯಲ್ಲಿ ಗೋ ಮಾತೆಗೆ ಪೂಜೆ ಸಲ್ಲಿಸಿದರು. ಅರಭಾವಿಯ ಬಲಭೀಮ ದೇವಸ್ಥಾನದಲ್ಲಿ ಶುಕ್ರವಾರ ಸಂಜೆ ಗೋವುಗಳಿಗೆ ಹಾರ ಹಾಕಿ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು, ಗೋವು ಹಿಂದೂ ಸನಾತನ ಧರ್ಮದಲ್ಲಿ ಕಾಮಧೇನು ದೈವಿ ಸ್ವರೂಪಿಯಾಗಿದೆ. ಅಲ್ಲದೇ ಗೋವು ತನ್ನದೇಯಾದ ವಿಶೇಷ ಇತಿಹಾಸವನ್ನು ಹೊಂದಿದೆ. ಮನೆಗೊಂದರಂತೆ …

Read More »

ಕಾರ್ಮಿಕ ಧುರೀಣರಾದ ಅಂಬಿರಾವ ಪಾಟೀಲ್ ಅವರಿಂದ ಕೂಲಿ ಕಾರ್ಮಿಕರಿಗೆ ಬಟ್ಟೆ ವಿತರಣೆ!

ಗೋಕಾಕ: ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಗೋಕಾಕ ತಾಲೂಕಿನ ಕೂಲಿ ಕಾರ್ಮಿಕರ ಹಮಾಲರ ಕ್ಷೇಮಾವೃದ್ದಿ ವಿವಿದೋದ್ದೇಶಗಳ ಸಂಘ,ಗೋಕಾಕ ಮತ್ತು ಗೋಕಾಕ ತಾಲೂಕಾ ಹಮಾಲಿ ಕಾರ್ಮಿಕರ ಯೂನಿಯನ್ ವಾಲ್ಮೀಕಿ ವೃತ್ತ ಗೋಕಾಕ ಇವರಿಂದ ದೀಪಾವಳಿ ನಿಮಿತ್ಯ ಎಲ್ಲ ಹಮಾಲರಿಗೆ ತಮ್ಮ ಹಣದಲ್ಲಿ ಕೂಡಿಟ್ಟ ಹಣದಿಂದ ಸಂಘದ ಅದ್ಯಕ್ಷರಾದ ಬಸವರಾಜ ಆರೆನ್ನವರ ಇವರ ನೇತೃತ್ವದಲ್ಲಿ ಗೋಕಾಕದ ಕಾರ್ಮಿಕ ದುರೀಣರಾದ ಅಂಬಿರಾವ ಪಾಟೀಲ ಇವರ ಅಮೃತ ಹಸ್ತದಿಂದ ಸುಮಾರು 150 ಕುಟುಂಬಗಳಿಗೆ ಹಮಾಲರಿಗೆ …

Read More »

ಹಾನಗಲ್ ನಲ್ಲಿ ಕಾಂಗ್ರೆಸ್ ಗೆಲುವು : ಕಾಂಗ್ರೆಸ್ ಕಾರ್ಯಕರ್ತರಿಂದ ಸತೀಶ್ ಜಾರಕಿಹೊಳಿಗೆ ಸನ್ಮಾನ

ಗೋಕಾಕ : ಹಾನಗಲ್ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರು ಮಂಗಳವಾರ ಸನ್ಮಾನಿಸಿದರು. ಹಾನಗಲ್ ಕಾಂಗ್ರೆಸ್ ಗೆಲುವು ಸಾಧಿಸುತ್ತಿದ್ದಂತೆ ಕೈ ಕಾರ್ಯಕರ್ತರು ಗೋಕಾಕನ ಹಿಲ್ ಗಾರ್ಡನ್ ಕಚೇರಿಗೆ ಆಗಮಿಸಿ ಶಾಸಕ ಸತೀಶ್ ಜಾರಕಿಹೊಳಿ ಅವರಿಗೆ ಸತ್ಕರಿಸಿದರು. ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಹಾನಗಲ್ ಕ್ಷೇತ್ರದಲ್ಲಿ ಬಿಡುಬಿಟ್ಟು ಕೈ ಅಭ್ಯರ್ಥಿ ಪರ ನಿರಂತರ ಪ್ರಚಾರ ನಡೆಸಿದ ಹಿನ್ನಲೆ ಕಾಂಗ್ರೆಸ್ …

Read More »

66ನೇ ಕನ್ನಡ ರಾಜ್ಯೋತ್ಸವ ಆಚರಿಸಿದ ರಾಹುಲ್ ಜಾರಕಿಹೊಳಿ

ಗೋಕಾಕ : ಕಾಂಗ್ರೆಸ್ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು 66 ನೇ ಕರ್ನಾಟಕ ರಾಜ್ಯೋತ್ಸವವನ್ನು ಅತ್ಯಂತ ಸರಳವಾಗಿ ಆಚರಿಸಿದರು. ಇಲ್ಲಿನ ಹಿಲ್ ಗಾರ್ಡನ್ ಕಚೇರಿಯಲ್ಲಿ ಸೋಮವಾರ ಕಾರ್ಯಕರ್ತರೊಂದಿಗೆ ಭುವನೇಶ್ವರಿ ದೇವಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಬಳಿಕ ರಾಹುಲ್ ಮಾತನಾಡಿ, ನಾವೆಲ್ಲರೂ ಒಂದಾಗಿ ಕನ್ನಡದ ತೇರನ್ನು ಮುನ್ನಡೆಸೋಣ. ಕರ್ನಾಟಕವನ್ನು ಪ್ರಗತಿಯ ಪಥದಲ್ಲಿ ಮುನ್ನಡೆಸೋಣ  ಎಂದರು. ಕರ್ನಾಟಕವನ್ನು ಪ್ರಗತಿಪರ ರಾಜ್ಯವನ್ನಾಗಿ ಕಟ್ಟಲು ಎಲ್ಲರೂ ಕೈ ಜೋಡಿಸೋಣ. ಕನ್ನಡ ನಾಡು-ನುಡಿ , ನೆಲ-ಜಲ …

Read More »

ಶೀಘ್ರ ಮಹಾನ್ ವ್ಯಕ್ತಿಗಳ ಕಿರುಹೊತ್ತಿಗೆಗಳ ಬಿಡುಗಡೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

ಯಮಕನಮರಡಿ: ಬುದ್ಧ, ಬಸವಣ್ಣ, ಡಾ.ಬಿ.ಆರ್. ಅಂಬೇಡ್ಕರ್ ಸೇರಿ ಇನ್ನಿತರ ಮಹಾನ್ ವ್ಯಕ್ತಿಗಳ ಕಿರುಹೊತ್ತಿಗೆಗಳನ್ನು ಶೀಘ್ರ ಬಿಡುಗಡೆ ಮಾಡಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕರಾದ ಸತೀಶ ಜಾರಕಿಹೊಳಿ ಹೇಳಿದರು. ಮತಕ್ಷೇತ್ರದ ಇಸ್ಲಾಂಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ನೂತನವಾಗಿ ನಿರ್ಮಿಸಿದ ಮೂರು ಕೊಠಡಿಗಳನ್ನು ಶನಿವಾರ ಉದ್ಘಾಟಿಸಿ, ಮಕ್ಕಳಿಗೆ ನೋಟ್ ಬುಕ್ ಗಳನ್ನು ವಿತರಿಸಿ ಅವರು ಮಾತನಾಡಿದರು. ಮಕ್ಕಳು ಹಾಗೂ ಯುವಕರಿಗೆ ಮಹಾನ್ ವ್ಯಕ್ತಿಗಳ ಬದುಕು ಹಾಗೂ ಹೋರಾಟವನ್ನು ತಿಳಿಸಬೇಕಾದ ಅಗತ್ಯವಿದೆ. ಈ ನಿಟ್ಟಿನಲ್ಲಿ …

Read More »

ಮತದಾರರು ಹಣದ ಆಮಿಷಕ್ಕೆ ಮರುಳಾಗದೇ, ಅಭಿವೃದ್ಧಿಗಾಗಿ ಕಾಂಗ್ರೆಸ್ ಗೆ ಮತ ನೀಡಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

ಹಾನಗಲ್: ಬಿಜೆಪಿಯವರು ನೀಡುತ್ತಿರುವ ಹಣ ಒಂದು ದಿನದ ಖರ್ಚಿಗೆ ಮಾತ್ರ ಸಾಲುತ್ತದೆ. ಹೀಗಾಗಿ, ಹಣ ಹಾಗೂ ಇನ್ನಿತರ ಆಮಿಷಗಳಿಗೆ ಮತದಾರರು ಮರುಳಾಗದೇ ರಾಜ್ಯ ಹಾಗೂ ದೇಶದ ಅಭಿವೃದ್ಧಿಗಾಗಿ ಕಾಂಗ್ರೆಸ್ ಗೆ ಮತ ನೀಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಮನವಿ ಮಾಡಿದರು. ಮತಕ್ಷೇತ್ರದ ಮತ್ತಂಗ, ಸಮ್ಮಸಗಿ ಸೇರಿ ವಿವಿಧ ಗ್ರಾಮಗಳಲ್ಲಿ ಪಕ್ಷದ ಅಭ್ಯರ್ಥಿ ಶ್ರೀನಿವಾಸ್ ಮಾನೆ ಅವರ ಪರ ಇಂದು ಪ್ರಚಾರ ನಡೆಸಿ ಅವರು ಮಾತನಾಡಿದರು. ದೇಶದ ಜನರು …

Read More »