Breaking News

*ನಾವೆಲ್ಲರೂ ಸೇರಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೆಲುವಿಗಾಗಿ ಶ್ರಮಿಸೋಣ: ಕಾಂಗ್ರೆಸ್ ಮುಖಂಡ ಚಂದ್ರಶೇಖರ ಕೊಣ್ಣೂರ*


ಗೋಕಾಕ : ನಾವೆಲ್ಲರೂ ಸೇರಿ ಕಾಂಗ್ರೆಸ್ ಪಕ್ಷ ಸೂಚಿಸಿರುವ ಅಭ್ಯರ್ಥಿ ಮಹಾಂತೇಶ ಕಡಾಡಿ ಗೆಲುವಿಗಾಗಿ ಶ್ರಮಿಸೋಣ ಎಂದು ಕಾಂಗ್ರೆಸ್ ಮುಖಂಡ ಚಂದ್ರಶೇಖರ ಕೊಣ್ಣೂರ ಅವರು ತಿಳಿಸಿದ್ದಾರೆ.

 

ದೆಹಲಿಯಿಂದ ದೂರವಾಣಿ ಮೂಲಕ ತಿಳಿಸಿದ ಅವರು ಅಶೋಕ್ ಪೂಜಾರಿ ಅವರು ಯಾವುದೇ ದುಡಿಕಿ ನಿರ್ಧಾರ ತೆಗೆದುಕೊಳ್ಳಬಾರದು ನಾನು ಸಹಿತ ಆಕಾಂಕ್ಷಿಯಾಗಿದ್ದೆ ಆದರೆ ಹೈಕಮಾಂಡ್ ಸರ್ವೆಮೂಲಕ ಟಿಕೆಟ್ ಹಂಚಿಕೆ ಮಾಡಿದೆ. ಇದರಿಂದ ಕಾಂಗ್ರೆಸ್ ಪಕ್ಷದ ನಿಲುವಿಗೆ ಬದ್ಧರಾಗಿರೋಣ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೆಲುವಿಗಾಗಿ ಶ್ರಮಿಸೋಣ, ಹಾಗೂ ಅಶೋಕ್ ಪೂಜಾರಿ ಅವರ ಬೆಂಬಲಿಗರಲ್ಲಿ ಕೂಡಾ ನಾನು ಮನವಿ ಮಾಡಿಕೊಳ್ಳುತ್ತೇನೆ ಎಂದರು.

 

ಈ ಕುರಿತು ನಾಳೆ ಮುಂಜಾನೆ 11 ಗಂಟೆಗೆ ಬಸವೇಶ್ವರ ವೃತ್ತದ ಹತ್ತಿರದಲ್ಲಿರುವ ಮಹಾಲಕ್ಷ್ಮೀ ಟ್ರಾವೆಲ್ಸ್ ಏಜೆನ್ಸಿ ಕಛೇರಿಯಲ್ಲಿ ಸುದ್ದಿಗೋಷ್ಠಿ ನಡೆಸಲಾಗುವುದು ಎಂದು ತಿಳಿಸಿದರು


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ಶ್ರೀ ಹನುಮಾನ ಮತ್ತು ಶ್ರೀ ಬಸವೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ಆರಂಭ ; ಎಪಿಎಂಸಿ ಸದಸ್ಯ ಬಸವರಾಜ ಸಾಯನ್ನವರ ಅವರಿಂದ ಭೂಮಿ ಪೂಜೆ

ಗೋಕಾಕ : ಮಾರ್ಕಂಡೇಯ ನಗರದ ಶ್ರೀ ಹನುಮಾನ ಮತ್ತು ಶ್ರೀ ಬಸವೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಸಭಾ ಭವನ ಕಟ್ಟಡದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ