Breaking News

*ಕುಡಿತದ ಮತ್ತಿನಲ್ಲಿ ಭೀಕರ ಕೃತ್ಯ: ಅಣ್ಣನನ್ನೇ ಚಾಕುವಿನಿಂದ ಇರಿದು ಕೊಂದ ತಮ್ಮ*


ಗೋಕಾಕ : ಕುಡಿದ ಮತ್ತಿನಲ್ಲಿದ್ದ ತಮ್ಮನೊಬ್ಬ ತನ್ನ ಅಣ್ಣನನ್ನೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ವಾಲ್ಮೀಕಿ ನಗರದಲ್ಲಿ ನಡೆದ ಈ ಘಟನೆಯಲ್ಲಿ ಕೊಲೆಯಾದವನನ್ನು ಚೇತನ ರಮೇಶ್ ಪರಮಾರ್ (25) ಎಂದು ಗುರುತಿಸಲಾಗಿದೆ.

ಚೇತನ ರಮೇಶ್‌ ದೊಡ್ಡಪ್ಪನ ಮಗ ತಿಲಕ ರೂಪೇಶ ಪರಮಾರ್‌ (19) ಎಂಬಾತನೇ ಕೊಲೆಗಾರ.

ಚೇತನ ಪರಮಾರ್‌ ಮತ್ತು ತಿಲಕ ಪರಮಾರ್‌ ವಾಲ್ಮೀಕಿ ನಗರದ ಒಂದೇ ಮನೆಯಲ್ಲಿ ವಾಸವಿದ್ದರು. ಆತ್ಮೀಯತೆಯೂ ಇತ್ತು. ಅದರೆ, ಕುಡಿದ ಮತ್ತಿನಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ‌ಇಬ್ಬರ ಮಧ್ಯೆ ವಾಗ್ವಾದ ಶುರುವಾಗಿತ್ತು. ಅದು ವಿಕೋಪಕ್ಕೆ ಹೋಗಿ ಕೊಲೆಯಲ್ಲಿ ಅಂತ್ಯವಾಗಿದೆ.

ಮಾತಿಗೆ ಮಾತು ಜೋರಾಗಿ ತಮ್ಮ ತಿಲಕ್‌ ಅಣ್ಣ ಚೇತನ್‌ ಲೆ ಚಾಕುವಿನಿಂದ ಇರಿದಿದ್ದಾನೆ. ಕೂಡಲೇ ಅಕ್ಕಪಕ್ಕದವರು ಚೇತನ್‌ನನ್ನು ಆಸ್ಪತ್ರೆಗೆ ಸೇರಿಸಿದರೂ ಅವನು ಬದುಕುಳಿಯಲಿಲ್ಲ. ಗೋಕಾಕ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ಜನರೇ ನನ್ನಾಸ್ತಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ :ಎಲ್ಲ ಜಾತಿ- ಜನಾಂಗಗಳ ಮಹಾನ್ ಪುರುಷರ ಜಯಂತಿ ಆಚರಣೆಗಳು ಒಂದೇ ವೇದಿಕೆಯಲ್ಲಿ ಅದೂ ಸರ್ವ ಸಮಾಜಗಳ ಬಂಧುಗಳ ಉಪಸ್ಥಿತಿಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ