Breaking News

ಕೊನೆಗೆ ಪತ್ತೆಯಾದ ರಾಜು ಝಂವರ ಮೃತದೇಹ; ಮೆಚ್ಚಲೇ ಬೇಕು ಪೋಲಿಸ್ ಕಾರ್ಯ!


ಗೋಕಾಕ: ನಗರದ ಉದ್ಯಮಿ ರಾಜು ಝಂವರ ಅವರನ್ನು ಕಳೆದ ವಾರ ಅಪಹರಿಸಿ, ಹತ್ಯೆ ಮಾಡಲಾಗಿತ್ತು, ಆದರೆ ಮೃತದೇಹ ಮಾತ್ರ ಆರು ದಿನಗಳಿಂದ ಪತ್ತೆ ಆಗಿರಲಿಲ್ಲ, ಪೋಲಿಸ್ ಇಲಾಖೆ ಹಗಲು ರಾತ್ರಿ ಎನ್ನದೆ ಸತತ ಪ್ರಯತ್ನ ಮಾಡುತ್ತಲೇ ಇತ್ತು. ನಿನ್ನೆ ದಿನ ರಾತ್ರಿ ಮೃತದೇಹ ಪತ್ತೆಯಾಗಿದೆ.

ಈ ಪ್ರಕರಣ ಸಂಬಂಧಪಟ್ಟಂತೆ ಅನೇಕ ಜನ ಅನೇಕ ತರಹ ಪ್ರಶ್ನೆ ಮಾಡುವ ಪ್ರಸಂಗ ಎದುರಾಗಿತ್ತು, ಇಂತಹ ಎಲ್ಲ ಪ್ರಶ್ನೆಗಳಿಗೆ ನಿನ್ನೆ ಉತ್ತರ ಸಿಕ್ಕಿದೆ.

ಗೋಕಾಕ ಪೋಲಿಸ್ ಇಲಾಖೆ ಹಗಲಿರುಳು ಕಠಿನ ಪರಿಶ್ರಮ ಹಾಕಿ, ಊಟ ನಿದ್ದೆ ಇಲ್ಲದ ಮೃತದೇಹ ಪತ್ತೆ ಹಚ್ಚುವಲ್ಲಿ ಶ್ರಮಿಸಿದ್ದಾರೆ.

ನಿನ್ನೆ ದಿನ ಶೋಧ ಕಾರ್ಯಾಚರಣೆ ನಡೆಸುವ ಸಂದರ್ಭದಲ್ಲಿ ರಾತ್ರಿ ಊಟದ ವೇಳೆಯಲ್ಲಿ ಡಿವಾಯ್ಎಸ್ಪಿ ಡಿ ಎಚ್ ಮುಲ್ಲಾ ಅವರಿಗೆ ಊಟಕ್ಕೆ ಕರೆದಾಗ ” ಇಲ್ಲ ಮೃತದೇಹ ಸಿಗುವವರೆಗೂ ಊಟ ಬೇಡ” ಎಂದು ಹೇಳಿರುವುದು ನಾವು ಪ್ರತ್ಯೇಕ್ಷವಾಗಿ ಕಂಡಿದ್ದೇವೆ. ಹೀಗೆ ಪೋಲಿಸ್ ಇಲಾಖೆಯ ಪ್ರತಿಯೊಬ್ಬ ಸಿಬ್ಬಂದಿಗಳು ಕೂಡ ನಿರಂತರವಾಗಿ ಶೋಧಕಾರ್ಯ ಮಾಡಿ ಮೃತದೇಹ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ , ಈ ಪೋಲಿಸ್ ಕಾರ್ಯಕ್ಕೆ ಎಲ್ಲಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

 

 


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ನಮ್ಮ ದೇಶದಲ್ಲಿರುವ ಕ್ರಿಕೆಟ್‌ ಪಂದ್ಯಕ್ಕೆ ಇರುವ ಜನಪ್ರಿಯತೆ ಬೇರೊಂದು ಕ್ರೀಡೆಗಿಲ್ಲ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ:ನಮ್ಮ ದೇಶದಲ್ಲಿರುವ ಕ್ರಿಕೆಟ್‌ ಪಂದ್ಯಕ್ಕೆ ಇರುವ ಜನಪ್ರಿಯತೆ ಬೇರೊಂದು ಕ್ರೀಡೆಗಿಲ್ಲ. ಪ್ರಪಂಚಾದ್ಯಂತ ಪಸರಿಸಿರುವ ಕ್ರಿಕೆಟ್ ಆಟವು ಪ್ರತಿ ಹಳ್ಳಿ- ಹಳ್ಳಿಗೂ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ