ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಪ.ಪಂ ಮುಖ್ಯಾಧಿಕಾರಿ ಮುಖ್ಯಾಧಿಕಾರಿ, ಹಾಗೂ ಅಕೌಂಟೆಂಟ್ ಎಸಿಬಿ ಬಲೆಗೆ ಬಿದ್ದಿದ್ದಾರೆ.
ನಾಯಕನಹಟ್ಟಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಭೂತಪ್ಪ ಹಾಗೂ ಅಕೌಂಟ್ಸ್ ಕನ್ಸಲ್ಟೆಂಟ್ ಸರ್ಪರಾಜ್ ಆಗಸ್ಟ್ 27 ರಂದು ಕಚೇರಿಯಲ್ಲಿ ರೂ.5000 ಲಂಚ ಸ್ವೀಕರಿಸುತ್ತಿರುವ ವೇಳೆ ಎಸಿಬಿ ಬಲೆಗೆ ಬಿದ್ದಿದ್ದಾರೆ.

ಕಾರ್ಯಾಲಯಕ್ಕೆ ಅವಶ್ಯವಿರುವ ಅಲ್ಯೂಮಿನಿಂ ಗ್ಲಾಸ್ ಪಾರ್ಟಿಶಿಯನ್ ಸಾಮಗ್ರಿಗಳನ್ನು ಪೂರೈಸಲು ಪಟ್ಟಣ ಪಂಚಾಯಿತಿಯಿಂದ ರೂ.99643 ಗಳಿಗೆ ವೈ.ಆರ್ ನಾಗೇದ್ರ ಇವರಿಗೆ ಕಾರ್ಯಾದೇಶ ನೀಡಿದ್ದು ಸಾಮಗ್ರಿಗಳನ್ನು ಸರಬರಾಜು ಮಾಡಿದ್ದು ಆ ಮೊತ್ತದಲ್ಲಿ 60000 ರೂ ಗಳನ್ನು ಜಮಾಮಾಡಲಾಗಿತ್ತು. ಉಳಿದ ಬಾಕಿ ಮೊತ್ತ 39,643 ರೂ ಗಳನ್ನು ಪಾವತಿಸಲು ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಸರ್ಫರಾಜ್ ಅವರು ಮೂಲಕ 5000 ರೂ ಗಳನ್ನು ಲಂಚಕ್ಕೆ ಬೇಡಿಕೆ ಇಟ್ಟಿದ್ದು ಅಂಗಡಿ ಮಾಲಿಕ ಆಗಸ್ಟ್ 27 ರಂದು ಎಸಿಬಿಗೆ ನೀಡಿದ್ದಾರೆ ಎನ್ನಲಾಗಿದೆ.
ಈ ಸಂಬಂಧ ಚಿತ್ರದುರ್ಗ ಜಿಲ್ಲಾ ಎಸಿಬಿ ಪೊಲೀಸ್ ಠಾಣೆಯಲ್ಲಿ ದಾಖಲಾದ ದೂರಿನನ್ವಯ ಎಸಿಬಿ ಡಿವೈಎಸ್ಪಿ ಎಚ್.ಎಸ್. ಪರಮೇಶ್ವರ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದಾಗ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ವರದಾ ಶ್ರೀ ಭೂತಪ್ಪ ಮತ್ತು ಅಕೌಂಟೆಂಟ್ ಕನ್ಸಲ್ಟಂಟ್ ಸರ್ಫರಾಜ್ ಲಂಚದ ಹಣವನ್ನು ಪಡೆಯುವಾಗ ಸಿಕ್ಕಿಬಿದ್ದಿದ್ದಾರೆ.
CKNEWSKANNADA / BRASTACHARDARSHAN CK NEWS KANNADA