Breaking News

ಕಾರ್ಮಿಕ ಇಲಾಖೆಯಿಂದ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರಿಗೆ ಈರಣ್ಣಾ ಕಡಾಡಿ ಆಹಾರ ಕಿಟ್ ವಿತರಣೆ.


ಮೂಡಲಗಿ : ಅರಭಾವಿ ವಿಧಾನಸಭಾ ಮತಕ್ಷೇತ್ರದ ನಾಗನೂರ ಪಟ್ಟಣ ಪಂಚಾಯತ ಆವರಣದಲ್ಲಿ ಇಂದು ಕೋವಿಡ್ – 19 ಪರಿಹಾರರ್ಥವಾಗಿ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಕಾರ್ಮಿಕ ಇಲಾಖೆಯಿಂದ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರಿಗೆ ಆಹಾರ ಸಾಮಗ್ರಿಗಳ ಕಿಟ್‌ ಗಳನ್ನ ರಾಜ್ಯ ಸಭಾ ಸದಸ್ಯ ಈರಣ್ಣಾ ಕಡಾಡಿ ವಿತರಿಸಿದರು.

ನಂತರ ಮಾತನಾಡಿದ ಅವರು ರಾಜ್ಯ ಕಾರ್ಮಿಕ ಇಲಾಖೆ ನೀಡುವ ಕಾರ್ಮಿಕ ಕಾರ್ಡಿನಿಂದ ಅನೇಕ ಉಪಯೋಗಗಳಿವೆ.ಎಲ್ಲ ಅಸಂಘಟಿತ ಕಾರ್ಮಿಕರು ಸಹ ಕಾರ್ಡ ಪಡೆದು ಯೋಜನೆಗಳ ಲಾಭ ಪಡೆಯಬೇಕು ಎಂದರು.

ಈ ಸಂದರ್ಭದಲ್ಲಿ ಗೋಕಾಕ ಕಾರ್ಮಿಕ ನೀರಿಕ್ಷಕ ಪಾಂಡುರಂಗ ಮಾವರಕರ,ಮುಖಂಡರಾದ ಸಿದ್ದಪ್ಪಾ ಗೋಟೂರ, ಕೆಂಚಪ್ಪಾ ಸಕ್ರೆಪ್ಪಗೋಳ, ಬಾಳೇಶ ಸಕ್ರೆಪ್ಪಗೋಳ, ಎ. ಆರ್.‌ ಪಾಟೀಲ, ಬಾಳಗೌಡ ಪಾಟೀಲ, ನರಸಪ್ಪ ನಿಡಸೋಶಿ, ಶ್ರೀಮತಿ ಮಂಗಳಾ ಕೌಜಲಗಿ, ಸುರೇಶ ಕೌಜಲಗಿ, ದುಂಡಪ್ಪಾ ನಂದಗಾಂವ, ಭೀಮಗೌಡ ಹೊಸಮನಿ, ರವಿ ರಂಗಸುಭೆ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ಶ್ರೀ ಹನುಮಾನ ಮತ್ತು ಶ್ರೀ ಬಸವೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ಆರಂಭ ; ಎಪಿಎಂಸಿ ಸದಸ್ಯ ಬಸವರಾಜ ಸಾಯನ್ನವರ ಅವರಿಂದ ಭೂಮಿ ಪೂಜೆ

ಗೋಕಾಕ : ಮಾರ್ಕಂಡೇಯ ನಗರದ ಶ್ರೀ ಹನುಮಾನ ಮತ್ತು ಶ್ರೀ ಬಸವೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಸಭಾ ಭವನ ಕಟ್ಟಡದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ