Breaking News

ದಲಿತ ಸೇನೆ ಅಧ್ಯಕ್ಷರಾಗಿ ಯುವ ಮುಖಂಡ ಸಚಿನ್ ಕಾಂಬ್ಳೆ ಆಯ್ಕೆ


ಕಾಗವಾಡ:ರಾಷ್ಟ್ರೀಯ ದಲಿತ ಸೇನೆಯ ಅಥಣಿ ತಾಲ್ಲೂಕಾ ಅಧ್ಯಕ್ಷರಾಗಿ ಯುವ ಮುಖಂಡ ಸಚಿನ್ ಕಾಂಬ್ಳೆ ಆಯ್ಕೆಯಾಗಿದ್ದಾರೆ.

ಕಾಗವಾಡ ತಾಲ್ಲೂಕಿನ ಉಗಾರ ಖುರ್ದ ಪಟ್ಟಣದ ಡಾ.ಬಿ‌.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ಕಾಗವಾಡ ಹಾಗೂ ಅಥಣಿ ತಾಲೂಕಿನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.

ಈ ವೇಳೆ ದಲಿತ ಸೇನೆಯ ಜಿಲ್ಲಾಧ್ಯಕ್ಷ ಪ್ರತಾಪ ಕಾಂಬ್ಳೆ ಅವರ ನೇತೃತ್ವದಲ್ಲಿ ಜರುಗಿದ ಆಯ್ಕೆಯು ನೂತನ ತಾಲೂಕು ಅಧ್ಯಕ್ಷ ಹಾಗೂ ಉಪಾಧ್ಯಕ್ಷರುಗಳ ಸರ್ವಾನುಮತದಿಂದ ಆಯ್ಕೆ ಮಾಡಿ ಅವರಿಗೆ ಆದೇಶ ಪ್ರತಿಗಳನ್ನು ನೀಡಲಾಯಿತು.

ಈ ವೇಳೆ ದಲಿತ ಸೇನೆಯ ಅಥಣಿ ತಾಲ್ಲೂಕಾ ಅಧ್ಯಕ್ಷರನ್ನಾಗಿ ಸಚಿನ್ ಕಾಂಬ್ಳೆ,ಉಪಾಧ್ಯಕ್ಷರಾಗಿ ಸಂತೋಷ ಗಸ್ತಿ,ಪಾರೀಸ್ ಕಾಂಬ್ಳೆ, ಸಪ್ತಸಾಗರ ಗ್ರಾಮ ಶಾಖಾ ಅಧ್ಯಕ್ಷರಾಗಿ ಸಂತೋಷ ಕುರಣಿ, ಕಾಗವಾಡ ತಾಲ್ಲೂಕಾ ಅಧ್ಯಕ್ಷರನ್ನಾಗಿ ಪೀರು ಕಾಂಬ್ಳೆ, ಕಾಗವಾಡ/ಶೇಡಬಾಳ ನಗರಾಧ್ಯರನ್ನಾಗಿ ರಾಹುಲ್ ಘೊರಡೆ,ಸೇರಿದಂತೆ ಅನೇಕ ತಾಲೂಕುಗಳಿಗೆ ಅಧ್ಯಕ್ಷ,ಉಪಾಧ್ಯಕ್ಷರುಗಳನ್ನ ಆಯ್ಕೆ ಮಾಡಲಾಯಿತು.

ಈ ವೇಳೆ ಜಿಲ್ಲಾಧ್ಯಕ್ಷರಾದ ಪ್ರತಾಪ ಕಾಂಬ್ಳೆ, ಕಾರ್ಯಾಧ್ಯಕ್ಷರಾದ ಕಲಗೌಡ ವಿಟೇಕರ,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೃಷ್ಣಾ ಕಾಂಬ್ಳೆ,ಜಿಲ್ಲಾ ಉಪಾಧ್ಯಕ್ಷರಾದ ಈಶ್ವರ ಕಾಂಬ್ಳೆ ಅಜೀತ ಸಾಗರ,ಪರಮಾನಂದ ಕಾಂಬಳೆ ಸೇರಿದಂತೆ ವಿವಿಧ ತಾಲೂಕಿನ ಅಧ್ಯಕ್ಷ, ಉಪಾಧ್ಯಕ್ಷರುಗಳು ಇದ್ದರು.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ಶ್ರೀ ಹನುಮಾನ ಮತ್ತು ಶ್ರೀ ಬಸವೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ಆರಂಭ ; ಎಪಿಎಂಸಿ ಸದಸ್ಯ ಬಸವರಾಜ ಸಾಯನ್ನವರ ಅವರಿಂದ ಭೂಮಿ ಪೂಜೆ

ಗೋಕಾಕ : ಮಾರ್ಕಂಡೇಯ ನಗರದ ಶ್ರೀ ಹನುಮಾನ ಮತ್ತು ಶ್ರೀ ಬಸವೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಸಭಾ ಭವನ ಕಟ್ಟಡದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ