Breaking News

ನಾಡ ದ್ರೋಹಿಗಳನ್ನು ರಾಜ್ಯದ ಗಡಿ ಪ್ರವೇಶ ಮಾಡಲು ಬಿಡುವದಿಲ್ಲ : ಕರವೇ ಮುಖಂಡ ಖಾನಪ್ಪನವರ


ಗೋಕಾಕ ಜ 20 : ಕನ್ನಡಿಗರ ಸ್ವಾಭಿಮಾನ ಕೆಣಕಿ ಬಂಧನಕ್ಕೋಳಗಾಗಿರುವ ನಾಡ ದ್ರೋಹಿ ಎಂಇಎಸ್ ಮುಖಂಡ ಬಿಡುಗಡೆಗೆ ಆಗ್ರಹಿಸಿ ಜೈಲು ಬಿಡುಗಡೆ ಚಳುವಳಿ ನೆಪದಲ್ಲಿ ಕರ್ನಾಟಕ ಗಡಿ ಪ್ರವೇಶ ಮಾಡುತ್ತೇವೆಂದು ಹೇಳಿಕೆ ನೀಡಿರುವ ವಿಜಯ ದೇವಣೆ ಹಾಗೂ ಶಿವಸೇನೆ ಕಾರ್ಯಕರ್ತರನ್ನು ಅಡ್ಡಾಡಿಸಿ ಹೊಡೆಯುತ್ತೇವೆ ಎಂದು ಕರವೇ ಮುಖಂಡ ಬಸವರಾಜ ಖಾನಪ್ಪನವರ ಗುಡುಗಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೊಲ್ಹಾಪುರ ಜಿಲ್ಲೆ ಶಿವಸೇನೆ ಪ್ರಮುಖ ವಿಜಯ ದೇವಣೆ ಕನ್ನಡಿಗರ ಸ್ವಾಭಿಮಾನ ದಕ್ಕೆ ತರುವ ಕಾರ್ಯಕ್ಕೆ ಇಳಿದಿರುವದು ತರವಲ್ಲ , ಯಾವುದೇ ಕಾರಣಕ್ಕೂ ನಾಡ ದ್ರೋಹಿಗಳನ್ನು ರಾಜ್ಯದ ಗಡಿ ಪ್ರವೇಶ ಮಾಡಲು ಬಿಡುವದಿಲ್ಲ ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡುಗನಟ್ಟಿ ನೇತೃತ್ವದಲ್ಲಿ ಕರವೇ ಕಾರ್ಯಕರ್ತರು ಆ ದಿನ ಗಡಿ ಕಾಯಲಿದ್ದು, ರಾಜ್ಯ ಪ್ರವೇಶಿಸುವ ಶಿವಸೇನೆ ಕಾರ್ಯಕರ್ತರನ್ನು ಅಡ್ಡಾಡಿಸಿ ಹೊಡೆಯಲಾಗುವದು ಎಂದು ಖಾನಪ್ಪನವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ಅರಭಾವಿ ಕ್ಷೇತ್ರದಲ್ಲಿ ಶಿಕ್ಷಣಕ್ಕೆ ಪ್ರಥಮ ಪ್ರಾಶಸ್ತ್ಯ: ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ- ಅರಭಾವಿ ಕ್ಷೇತ್ರದಲ್ಲಿ ಶಿಕ್ಷಣಕ್ಕೆ ಪ್ರಥಮ ಪ್ರಾಶಸ್ತ್ಯ ನೀಡಿದ್ದು, ಅದರಲ್ಲೂ ಬಡ ವಿದ್ಯಾರ್ಥಿಗಳಿಗೆ ಅನುಕೂಲವಾಗಲು ವಸತಿ ಶಾಲೆಗಳನ್ನು ಆರಂಭಿಸಿದ್ದು, ಇದರಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ